ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಏ.10 ರಿಂದ 20ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ಧ್ವಜಾರೋಹಣ ಮೂಲಕ ಚಾಲನೆ ನೀಡಲಾಯಿತು.

ಬೆಳಿಗ್ಗೆ ದೇವಸ್ಥಾನದಲ್ಲಿ ದೇವಳದ ತಂತ್ರಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರ ವೈದಿಕ ವಿಧಾನಗಳನ್ನು ನೇರವೆರಿಸಿದರು. ಅರ್ಚಕ ವಸಂತ ಕೆದಿಲಾಯ ಸಹಕರಿಸಿದರು.

ಈ ಸಂದರ್ಭದಲ್ಲಿ ಶಾಸಕ ಅಶೋಕ್ ರೈ ಅವರ ಮಾರ್ಗದರ್ಶನದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ, ಸದಸ್ಯರಾದ ನಳಿನಿ ಪಿ ಶೆಟ್ಟಿ, ಈಶ್ವರ ಬೆಡೇಕ‌ರ್, ವಿನಯ ಸುವರ್ಣ, ದಿನೇಶ್ ಪಿ ವಿ, ಮಹಾಬಲ ರೈ ವಳತ್ತಡ್ಕ ಕೃಷ್ಣವೇಣಿ, ಸುಭಾಶ್ ರೈ ಬೆಳ್ಳಿಪ್ಪಾಡಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ್ ರೈ ಮೇಗಿನಗುತ್ತು, ಕರಸೇವಕರು, ಭಕ್ತಾದಿಗಳು ಉಪಸ್ಥಿತರಿದ್ದತರು

ಇಂದು ಸಂಜೆಯಿಂದ ಶ್ರೀ ದೇವರ ಪೇಟೆ ಸವಾರಿ ಆರಂಭಗೊಳ್ಳಲಿದೆ. ಪೇಟೆ ಸವಾರಿಯುದ್ದಕ್ಕೂ ಪ್ರತಿ ಕಟ್ಟೆಯಲ್ಲೂ ಶ್ರೀ ದೇವರು ಪೂಜೆ ಸ್ವೀಕರಿಸಲಿದ್ದಾರೆ. ರಾತ್ರಿ ಅಂಕುರಾರ್ಪಣೆ ಬಲಿ ಹೊರಟು ಉತ್ಸವ, ಬೊಳುವಾರು ಶ್ರೀರಾಮಪೇಟೆ ಕಾರ್ಜಾಲು, ರಕೇಶ್ವರಿ ದೇವಸ್ಥಾನ, ಕಲ್ಲೇಗ, ಕರ್ಮಲ ಸವಾರಿ ನಡೆಯಲಿದೆ.

೧೧ಕ್ಕೆ ಮಧ್ಯಾಹ್ನ ಕೆ.ಎಸ್.ಆರ್.ಟಿ.ಸಿ ಪುತ್ತೂರು ವಿಭಾಗದವರಿಂದ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ನೆಲ್ಲಿಕಟ್ಟೆ, ಸಾಲ್ಮರ, ಸೂತ್ರಬೆಟ್ಟು ಸವಾರಿ, ಏ.೧೨ಕ್ಕೆ ಶಿವಪೇಟೆ, ತೆಂಕಿಲ, ಕೊಟ್ಟಿಬೆಟ್ಟು ಏಳ್ಳಾಡುಗುತ್ತು, ಬೈಪಾಸ್ ಹೆದ್ದಾರಿ, ರಾಧಾಕೃಷ್ಣ ಮಂದಿರ ಸವಾರಿ.
ಏ.೧೩ರಂದು ಮೇಷ ಸಂಕ್ರಮಣ ಕೋರ್ಟ್ ರಸ್ತೆ, ಸೈನಿಕ ಭವನ ರಸ್ತೆ, ಬಪ್ಪಳಿಗೆ, ಉರ್ಲಾಂಡಿ, ಬೊಳುವಾರುಬೈಲು ಸವಾರಿ, ಏ.೧೪ರಂದು ಸೌರಮಾನ ಯುಗಾದಿ(ವಿಷು)ಬೆಳಿಗ್ಗೆ ಉತ್ಸವ, ವಸಂತಕಟ್ಟೆಪೂಜೆ, ರಾತ್ರಿ ಉತ್ಸವ, ಬಂಡಿ ಉತ್ಸವ, ಕೊಂಬೆಟ್ಟು, ಬೊಳುವಾರು, ಹಾರಾಡಿ, ತಾಳೆಪ್ಪಾಡಿ, ದ್ರಾವಿಡ ಬ್ರಾಹ್ಮಣ ಹಾಸ್ಟೇಲ್, ಸಕ್ಕೆರೆಕಟ್ಟೆ ಸವಾರಿ, ಏ.೧೫ಕ್ಕೆ ಬನ್ನೂರು, ಅಶೋಕನಗರ, ರೈಲ್ವೇ ಮಾರ್ಗ ಸವಾರಿ, ಏ.೧೬ಕ್ಕೆ ಬೆಳಿಗ್ಗೆ ತುಲಾಭಾರ ಸೇವೆ, ರಾತ್ರಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಮಾಮೂಲು ಪ್ರಕಾರ ಬರುವ ಕಿರುವಾಳು, ಪಾಲಕಿ ಉತ್ಸವ, ಸಣ್ಣರಥೋತ್ಸವ, ಕೆರೆ ಉತ್ಸವ, ತೆಪ್ಪೋತ್ಸವ ನಡೆಯಲಿದೆ.


ಏ.೧೭ರಂದು ಬೆಳಿಗ್ಗೆ ಉತ್ಸವ ವಸಂತಕಟ್ಟೆಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ಬ್ರಹ್ಮರಥ ದಾನಿ ದಿ.ನೆಟ್ಟಾಳ ಮುತ್ತಪ್ಪ ರೈ ದೇರ್ಲ ಇವರ ಸ್ಮರಣಾರ್ಥ ಮಧ್ಯಾಹ್ನ ಅನ್ನಸಂತರ್ಪಣೆ, ರಾತ್ರಿ ಗಂಟೆ ೭.೩೦ರಿಂದ ಉತ್ಸವ, ಸಿಡಿಮದ್ದು ಪ್ರದರ್ಶನ(ಪುತ್ತೂರು ಬೆಡಿ), ಬ್ರಹ್ಮರಥೋತ್ಸವ ನಡೆಯಲಿದೆ. ಬಳಿಕ ಬಂಗಾರ್ ಕಾಯರ್‌ಕಟ್ಟೆ ಸವಾರಿ, ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಬೀಳ್ಕೊಡುಗೆ, ಶ್ರೀ ಭೂತಬಲಿ, ಶಯನ ನಡೆಯಲಿದೆ. ಏ.೧೮ಕ್ಕೆ ಬೆಳಿಗ್ಗೆ ಗಂಟೆ ೭.೩೦ಕ್ಕೆ ಬಾಗಿಲು ತೆರೆಯುವ ಮುಹೂರ್ತ, ತುಲಾಭಾರ ಸೇವೆ, ಸಂಜೆ ಗಂಟೆ ೩.೩೦ರಿಂದ ವೀರಮಂಗಲ ಅವನೃತ ಸ್ನಾನಕ್ಕೆ ಸವಾರಿ ನಡೆಯಲಿದೆ.
ಏ.೧೯ಕ್ಕೆ ಬೆಳಗ್ಗೆ ಧ್ವಜಾವರೋಹಣ, ರಾತ್ರಿ ಚೂರ್ಣೋತ್ಸವ ವಸಂತ ಪೂಜೆ ಪ್ರಾರಂಭಗೊಳ್ಳಲಿದೆ. ಹುಲಿ ಭೂತ, ರಕೇಶ್ವರಿ ನೇಮ ನಡೆಯಲಿದೆ. ಏ.೨೦ಕ್ಕೆ ಸಂಪ್ರೋಕ್ಷಣೆ, ರಾತ್ರಿ ಮಂತ್ರಾಕ್ಷತೆ, ಅಂಣತ್ತಾಯ, ಪಂಜುರ್ಲಿ, ವಗೈರೆ ದೈವಗಳ ನೇಮ ನಡೆಯಲಿದೆ.

ಜಾತ್ರೆಯ ಸಲುವಾಗಿ ಏ.೧೭ರ ಬ್ರಹ್ಮರಥೋತ್ಸವದ ಸಂದರ್ಭ ಬಿಟ್ಟು ಉಳಿದ ದಿನ ಏ.೧೦ರಿಂದ ಪ್ರತಿ ದಿನ ಸಂಜೆಯಿಂದ ರಾತ್ರಿವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ದೇವಳದ ನಟರಾಜ ವೇದಿಕೆಯಲ್ಲಿ ನಡೆಯಲಿದೆ. ಸಂಜೆ ಗಂಟೆ ೫ರಿಂದ ರಾತ್ರಿ ಗಂಟೆ ೧೦ರ ಒಳಗೆ ಸಾಂಸ್ಕೃತಿಕ ಕಾರ್ಯಕ್ರಮ ಮುಗಿಯಲಿದೆ ಎಂದು ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!