
ಸಿಇಟಿ ಪರೀಕ್ಷೆ ಸಂದರ್ಭದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ಸುದ್ದಿಯಾಗುತ್ತಿದ್ದಂತೇ ಇದೀಗ ಹಿಜಾಬ್ ಹೋರಾಟಗಾರ್ತಿ ಅಲಿಯಾ ಅಸ್ಸಾದಿ ಟ್ವೀಟ್ ಹೊಸ ಕಿಡಿ ಹೊತ್ತಿಸಿದೆ.
ಜನಿವಾರ ಹಾಕಿದ ಕಾರಣಕ್ಕೆ ಪರೀಕ್ಷೆ ಬಹಿಷ್ಕರಿಸಲ್ಪಟ್ಟ ಬ್ರಾಹ್ಮಣನ ನೋವು ಮತ್ತು ಹಿಜಾಬ್ ಕಾರಣ ಪರೀಕ್ಷೆ ಬಹಿಷ್ಕಾರಕ್ಕೊಳಗಾದ ಮುಸ್ಲಿಂ ಹೆಣ್ಮಕ್ಕಳ ನೋವು ಒಂದೇ ಅಲ್ಲವೇ?ಬ್ರಾಹ್ಮಣ ವಿದ್ಯಾರ್ಥಿಗೆ ಉಚಿತ ಇಂಜಿನಿಯರ್ ಸೀಟ್ ನೀಡುತ್ತೀರಿ, ನಮ್ಮನ್ನು ಇದುವರೆಗೂ ಪರೀಕ್ಷೆ ಬರೆದಿದ್ದೀರೋ ಇಲ್ಲವೋ ಎಂದು ಸೌಜನ್ಯಕ್ಕಾದರೂ ಕೇಳಿಲ್ಲ, ಇದು ನಮ್ಮ ವ್ಯವಸ್ಥೆ.!!
ಅವರ ಈ ಟ್ವೀಟ್ ಮತ್ತೆ ಹಿಜಾಬ್ ಕಿಡಿ ಜೋರಾಗುವಂತೆ ಮಾಡಿದೆ. ಜನಿವಾರ ತೆಗೆದ ಅಧಿಕಾರಿಯನ್ನು ತಕ್ಷಣವೇ ಸಸ್ಪೆಂಡ್ ಮಾಡುತ್ತಾರೆ. ಆದರೆ ಹಿಜಾಬಿಗಳಿಗೆ ಕಾಲೇಜು ಗೇಟ್ ಬಂದ್ ಮಾಡಿದ ಅಧಿಕಾರಿಗಳಿಗೆ ಯಾವ ಶಿಕ್ಷೆಯೂ ಇಲ್ಲ ಎಂದಿದ್ದಾರೆ.






