ಮಂಗಳೂರಿನ ಬಜಪೆ ಸಮೀಪ ಭೀಕರವಾಗಿ ಹತ್ಯೆಗೀಡಾಗಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಅಂತಿಮ ವಿಧಿವಿಧಾನಗಳನ್ನು ಪುಳಿಮಜಲಿನಲ್ಲಿರೋ ಅವರ ನಿವಾಸದ ಬಳಿ ಹಿಂದೂ ಸಂಪ್ರದಾಯದಂತೆ ನೆರವೇರಿಸಲಾಗಿದೆ.

ನ್ನೆ ರಾತ್ರಿ 8:30 ರ ಸುಮಾರಿಗೆ ಕಾರಿನಲ್ಲಿ ತೆರಳುತ್ತಿದ್ದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿಯನ್ನ ನಡುರಸ್ತೆಯಲ್ಲೇ ಅಡ್ಡಗಟ್ಟಿ ಹಂತಕರು ಬರ್ಬರವಾಗಿ ಹತುಗೈದಿದ್ದರು.ಇಂದು ಮರಣೋತ್ತರ ಪರೀಕ್ಷೆಯ ನಂತರ ಬೆಳಿಗ್ಗೆ 9:30 ರ ಸುಮಾರಿಗೆ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿತ್ತು.

ಎ.ಜೆ ಆಸ್ಪತ್ರೆಯಿಂದ ಮೃತದೇಹವನ್ನು ಕೊಂಡೊಯ್ದ ಕುಟುಂಬಸ್ಥರು ಬಂಟ್ವಾಳದ ಕಾರಿಂಜ ಪುಳಿಮಜಲಿನಲ್ಲಿರೋ ಮನೆಯ ಸಮೀಪ ತೋಟದಲ್ಲಿ ಸುಹಾಸ್‌ ಶೆಟ್ಟಿಯವರ ಅಂತ್ಯಕ್ರಿಯೆಯನ್ನು ನೆರವೇರಿಸಿದ್ದಾರೆ.ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ  ನಾಯಕರು ಭಾಗಿಯಾಗಿದ್ದು ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!