ಮಂಗಳೂರು: ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯ ಪ್ರತಿಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಆದರೆ, ಮಂಗಳೂರಿನ ಓರ್ವ ವಿದ್ಯಾರ್ಥಿನಿ ಇನ್ ಸ್ಟಾಗ್ರಾಂನಲ್ಲಿ ಹಾಕಿದ ಪೋಸ್ಟ್ ಭಾರಿ ವಿವಾದಕ್ಕೆ ಕಾರಣವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ರೇಷ್ಮಾ ಎನ್ ಬಾರಿಗ ಎಂಬ ವಿದ್ಯಾರ್ಥಿನಿ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಹ್ಯಾಷ್ ಟ್ಯಾಗ್ “ದಿಕ್ಕಾರ ಆಪರೇಷನ್ ಸಿಂಧೂರ್ ” ಎಂದು ನಿನ್ನೆ (ಗುರುವಾರ ) ಪೋಸ್ಟ್ ಹಾಕಿದ್ದರು. ಇದಕ್ಕೆ ವಿರೋಧ ವ್ಯಕ್ತವಾಗುತ್ತಿದ್ದಂತೆ ರೇಷ್ಮಾ ಪೋಸ್ಟ್ ಡಿಲೀಟ್ ಮಾಡಿದ್ದಾರೆ ಎನ್ನಲಾಗುತ್ತಿದೆ.

ರೇಷ್ಮಾ ಪ್ರಸ್ತುತ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಸ್ನಾತಕ್ಕೋತ್ತರ ಪದವಿ ವ್ಯಾಸಾಂಗ ಮಾಡುತ್ತಿದ್ದಾರೆ. “ನನ್ನ ಮನೆಯ ದೀಪಕ್ಕೆ ಅವನ ಮನೆಯ ಹಣತೆಯ ತಂದೆ, ಅಲ್ಲಿ ನಂದಿ ಹೋಯಿತು ಬೆಳಕು” “ಅವನ ಮನೆಯ ಬೆಳಕಿಗೆ ನನ್ನೊಳಗಿನ ದೀಪ… ಬೆಳಕಿನ ವಿಜೃಂಭಣೆಗಾಗಿ ಹೋರಾಟ ಜಯಿಸಿದು ಕತಲು… ಎಲ್ಲೆಲ್ಲೂ ಕತ್ತಲು…!”#dikkaraoperationsindura ಹ್ಯಾಷ್ ಟ್ಯಾಗ್ ನಡಿ ಪೋಸ್ಟ್ ಹಾಕಿದ್ದಾರೆ. ಇದಕ್ಕೆ ವಿರೋಧ ವ್ಯಕ್ತವಾಗುತ್ತಿದ್ದಂತೆ ರೇಷ್ಮಾ ಪೋಸ್ಟ್ ಡಿಲೀಟ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!