





ಪುತ್ತೂರು: ಪುತ್ತೂರಿನ ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಕಾಮಗಾರಿ ವಿಚಾರದಲ್ಲಿ ವೇಗತೆ ಹೆಚ್ಚಿಸುವುದು ಮತ್ತು ೪೫ ದಿನದೊಳಗೆ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳ ಜೊತೆ ಮಾತುಕತೆ ನಡೆಸಿ ಶೀಘ್ರವೇ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಸಹಕಾರ ನೀಡುವಂತೆ ವಿನಂತಿಸಿದರು.
ಬುಧವಾರ ಬೆಂಗಳೂರಿನಲ್ಲಿ ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಪಿ ಸಿ ಜಾಫರ್ (ಬಜೆಟ್) ಕಾರ್ಯದರ್ಶಿಗಳಾದ ಡಾ. ರಿತೇಶ್ ಸಿಂಗ್ ಡಾ. ವಿಶಾಲ್ ಅವರನ್ನು ಭೇಟಿಯಾದ ಶಾಸಕರು ಪುತ್ತೂರಿನ ಸರಕಾರಿ ಮೆಡಿಕಲ್ ಕಾಲೇಜಿಗೆ ಸಂಬಂದಿಸಿದ ಪ್ರಕ್ರಿಯೆ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಮೆಡಿಕಲ್ ಕಾಲೇಜು ಕಾಮಗಾರಿ ಪ್ರಾರಂಭ ವಿಚಾರದಲ್ಲಿ ಯಾವುದೇ ವಿಳಂಬವಾಗಬಾರದು. ಈಗಾಗಲೇ ಜಾಗದ ಸರ್ವೆ ನಡೆಸಲಾಗಿದೆ ಎಂದು ಶಾಸಕರು ಅಧಿಕಾರಿಗಳಿಗೆ ತಿಳಿಸಿದರು.
೪೫ ದಿನದೊಳಗೆ ಟೆಂಡರ್ ಪ್ರಕ್ರಿಯೆ ಮುಗಿಸಿ
೪೫ ದಿನದೊಳಗೆ ೨೫೦ ಬೆಡ್ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಯನ್ನು ಮುಗಿಸಿ ಕಾಮಗಾರಿಗೆ ವೇಗ ನಿಡುವಂತೆ ಅಧಿಕಾರಿಗಳಲ್ಲಿ ವಿನಂತಿಸಿದರು. ಟೆಂಡರ್ ಪ್ರಕ್ರಿಯೆ ವಿಳಂಬವಾದಲ್ಲಿ ಕಾಮಗಾರಿಯ ವೇಗತೆ ಕಡಿಮೆಯಾಗುತ್ತದೆ. ಮಂಗಳೂರಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಉದ್ಘಾಟನೆಯ ವೇಳೆ ಪುತ್ತೂರಿನ ಮೆಡಿಕಲ್ ಕಾಲೇಜು ವಿಷಯವನ್ನು ಮುಖ್ಯಮಂತ್ರಿಗಳು ಸಭೆಯಲ್ಲಿ ಪ್ರಸ್ತಾಪ ಮಾಡಿದ್ದರು. ಆದಷ್ಟು ಶೀಘ್ರದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ಪ್ರಕ್ರಿಯೆಗೆ ಚಾಲನೆ ನೀಡುವಲ್ಲಿ ಸಹಕಾರ ನೀಡಬೇಕು ಎಂದು ಶಾಸಕರು ವಿನಂತಿಸಿದರು. ಬನ್ನೂರಿನಲ್ಲಿ ನಿಗಧಿಮಾಡಿದ ಜಾಗದಲ್ಲೇ ಮೆಡಿಕಲ್ ಕಾಲೇಜು ನಿರ್ಮಾಣವಾಗಲಿದೆ ಎಂದು ಶಾಸಕರು ಅಧಿಕಾರಿಗಳಿಗೆ ತಿಳಿಸಿದರು.
ಮೆಡಿಕಲ್ ಕಾಲೇಜು ನಿರ್ಮಾಣ ಪ್ರಕ್ರಿಯೆ ವೇಗ ಪಡೆದುಕೊಳ್ಳುವ ನಿಟ್ಟಿನಲ್ಲಿ ಬುಧವಾರ ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗಳ ಜೊತೆ ಮಾತುಕತೆ ನಡೆಸಲಾಗಿದೆ. ಟೆಂಡರ್ ಪ್ರಕ್ರಿಯೆ ಮ್ತತು ಅನುದಾನ ಬಿಡುಗಡೆ ವಿಚಾರಕ್ಕೆ ಸಂಬಂದಿಸಿದಂತೆ ಮಾತುಕತೆ ನಡೆದಿದೆ. ೪೫ ದಿನದೊಳಗೆ ಟೆಂಡರ್ ಪ್ರಕ್ರಿಯೆ ಮುಗಿಯಲಿದೆ. ಬನ್ನೂರಿನ ನಿಗಧಿತ ಜಾಗದಲ್ಲೇ ಕಾಲೇಜು ನಿರ್ಮಾಣವಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ, ವೈಧ್ಯಕೀಯ ಸಡಚಿವರ ಜೊತೆಯೂ ಮಾತುಕತೆ ನಡೆಸಲಾಗಿದೆ. ಶೀಘ್ರದಲ್ಲೇ ಎಲ್ಲಾ ಪ್ರಕ್ರಿಯೆಗಳಿಗೂ ಚಾಲನೆ ದೊರೆಯಲಿದೆ. ಪ್ರಾರಂಭದಲ್ಲಿ ೨೫೦ ಬೆಡ್ನ ಆಸ್ಪತ್ರೆ ನಿರ್ಮಾಣ ಕಾಮಗಾರಿ ನಡೆಯಲಿದೆ.
ಅಶೋಕ್ ರೈ, ಶಾಸಕರು ಪುತ್ತೂರು

