ಮಂಗಳೂರು, ಮೇ 31: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನಗರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ನಡೆಸಿ ಮಾತಾಡುವಾಗ ಮುಸ್ಲಿಂ ಯುವಕನೊಬ್ಬ ಸಚಿವರ ಮಾತಿಗೆ ಅಡ್ಡಿಪಡಿಸುವ ಪ್ರಯತ್ನ ಮಾಡಿದ ಮೇ 31 ರಂದು ನಡೆಯಿತು.
ಯುವಕನ ಅಡಚಣೆಯಿಂದ ಸಿಡಿಮಿಡಿಗೊಳ್ಳುವ ಸಚಿವ ಮೊದಲಿಗೆ ಸುಮ್ಮನಿರುವಂತೆ ಹೇಳುತಾರೆ ಯುವಕ ಮಾತಾಡುವುದು ಮುಂದುವರಿಸಿದಾಗ ತಾಳ್ಮೆ ಕಳೆದುಕೊಳ್ಳುವ ದಿನೇಶ್ ಗುಂಡೂರಾವ್ ಯುವಕನನ್ನು ಅಲ್ಲಿಂದ ಹೊರಗೆ ಹಾಕಿ ಎಂದು ಹೇಳುತ್ತಾರೆ. ಅವರ ಪಕ್ಕದಲ್ಲಿ ಕುಳಿತಿದ್ದ ಎಮ್ಎಲ್ಸಿ ಐವಾನ್ ಡಿಸೋಜಾ ಯುವಕನಿಗೆ ಸಮಾಧಾನ ಹೇಳುತ್ತಾರೆ.














