ಪುತ್ತೂರು: ವಾಟ್ಸಾಪ್ ಮೂಲಕ ಪ್ರಚೋದನಕಾರಿ ಪೋಸ್ಟ್ಗಳನ್ನು ಪ್ರಸಾರ ಮಾಡಿ, ಸಾರ್ವಜನಿಕ ನೆಮ್ಮದಿಗೆ ಭಂಗ ತರುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಸಾಧ್ಯತೆಗಳಿದ್ದ ಆರೋಪದ ಮೇಲೆ ಕಾಸರಗೋಡು ಜಿಲ್ಲೆಯ ಅಡೂರ್ ನಿವಾಸಿ ಒರ್ವರ ವಿರುದ್ಧ  ಜೂ.5 ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) 2023  353(2) ಸಾರ್ವಜನಿಕ ಶಾಂತಿಗೆ ಭಂಗ ತರುವ ಅಥವಾ ವಿವಿಧ ವರ್ಗಗಳ ನಡುವೆ ದ್ವೇಷ, ವೈಷಮ್ಯವನ್ನು ಉತ್ತೇಜಿಸುವ ಹೇಳಿಕೆಗಳು ಮತ್ತು 196(1)(a)  ವಿವಿಧ ಗುಂಪುಗಳ ನಡುವೆ ಧರ್ಮ, ಜನಾಂಗ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸಾಮರಸ್ಯಕ್ಕೆ ಹಾನಿಕಾರಕ ಕೃತ್ಯಗಳನ್ನು ಮಾಡುವುದು ಇತ್ಯಾದಿ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೀಗ ಆರೋಪಿಗೆ 5 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿ ಪರ ನ್ಯಾಯವಾದಿ ಚಾಣಕ್ಯ ಲಾ ಚೇಂಬರ್ಸ್ ನ ಶ್ಯಾಮ್ ಪ್ರಸಾದ್ ಕೈಲಾರ್ ವಾದಿಸಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!