ದಕ್ಷಿಣಕನ್ನಡ ಜಿಲ್ಲೆಯ ಗ್ರಾಮಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಚರ್ಚೆ ಮಾಡುವಾಗ ತುಳು ಭಾಷೆ ಬಳಸದಂತೆ ಸೂಚನೆ ನೀಡಿ ಸುತ್ತೋಲೆ ಹೊರಡಿಸಲಾಗಿದ್ದು, ತುಳು ಭಾಷಿಕರು ಅಸಮಾಧಾನ ಹೊರ ಹಾಕಿದ್ದಾರೆ.

ಏನಿದೆ ಸುತ್ತೋಲೆಯಲ್ಲಿ..?

ಮೇಲ್ಕಂಡ ವಿಷಯಕ, ಸಂಬಂಧಿಸಿದಂತೆ, ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಇಲಾಖೆಯ ಅಧಿಕಾರಿಯವರು ಮತ್ತು ಜನಪ್ರತಿನಿಧಿಯವರು ಚರ್ಚಿಸುವಾಗ ತುಳು ಭಾಷೆ ಬಳಕ ಮಾಡದಂತೆ ಮತ್ತು ಕನ್ನಡ ಭಾಷೆಗೆ ಪ್ರಾಮುಖ್ಯತೆ ನೀಡುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ನಿರ್ದೇಶನ ನೀಡಲು ಉಲ್ಲೇಖ (1)ರಂತೆ ಮನವಿ ಸಲ್ಲಿಸಿರುತ್ತಾರೆ. ಸದ್ದಿ_ಉಲ್ಲೇಖಿತ ಮನವಿಯನ್ನು ಈ ಪತ್ರದೊಂದಿಗೆ ಲಗತ್ತಿಸುತ್ತಾ, ಮನವಿಯ ಕುರಿತು ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಈ ಮೂಲಕ ಸೂಚಿಸಿದೆ.

ಕೋಟ ಶ್ರೀನಿವಾಸ್ ಪೂಜಾರಿ ಕಿಡಿ

ವಿಧಾನಸಭೆಯಲ್ಲಿ ಅಧ್ಯಕ್ಷರು ಸೇರಿದಂತೆ ಶಾಸಕರೆಲ್ಲ ತುಳುವಿನಲ್ಲಿ ಸಂವಹನ ಮಾಡಬಹುದಾದರೆ ಗ್ರಾಮ ಪಂಚಾಯತಿಗಳಲ್ಲಿ ತುಳು ಮಾತನಾಡಬಾರದೆಂದರೆ ಏನರ್ಥ? ಈ ಸರ್ಕಾರಕ್ಕೆ ಏನಾಗಿದೆ ಎಂಬುದೇ ಅರ್ಥ ಆಗುತ್ತಿಲ್ಲ. ಗ್ರಾಮ ಪಂಚಾಯತಿಗಳಲ್ಲಿ ಸ್ಥಳೀಯ ಭಾಷೆಯಲ್ಲೇ ವ್ಯವಹರಿಸಬೇಕೇ ಹೊರತು ಇದೇ ಭಾಷೆ ಮಾತಾಡಬೇಕು ಎಂದು ಹೇರಿಕೆ ಮಾಡುವುದು ಸರಿಯಲ್ಲ ಎಂದು ಕೋಟ ಶ್ರೀನಿವಾಸ್ ಪೂಜಾರಿ ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!