
ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿದ ಪ್ರಕರಣದಲ್ಲಿ ಗರ್ಭಿಣಿ ವಿದ್ಯಾರ್ಥಿನಿ ಜೂನ್ 27 ಶುಕ್ರವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ವಿದ್ಯಾರ್ಥಿನಿ ಗರ್ಭಿಣಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಪ್ಪಳಿಗೆ ನಿವಾಸಿ ಕೃಷ್ಣ ಜೆ. ರಾವ್ (21) ವಿರುದ್ಧ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿದೆ.ಕೇಸ್ ದಾಖಲಾಗುತ್ತಲೇ ಆರೋಪಿ ತಲೆ ಮರೆಸಿಕೊಂಡಿದ್ದಾನೆ.






