
ಸುಬ್ರಮಣ್ಯ: ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಸುಬ್ರಮಣ್ಯ ಸರ್ಕಾರಿ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕ ಹೊನ್ನಪ್ಪ ಗೌಡ ದೇವರಗದ್ದೆ ಅವರ ಮೃತದೇಹ ಇಂದು ಪತ್ತೆಯಾಗಿದೆ.
ಕುಮಾರಧಾರ ಸೇತುವೆಯಿಂದ ಸುಮಾರು ಮೂರು ಕಿಲೋಮೀಟರ್ ದೂರದ ನದಿಯಲ್ಲಿ ಮೃತದೇಹವನ್ನು ಹುಡುಕಿ ಪತ್ತೆ ಹಚ್ಚಲಾಗಿದೆ. ಕಳೆದ ಮೂರು ದಿನಗಳಿಂದ ಎಸ್.ಡಿ.ಆರ್.ಎಫ್, ಮಲ್ಪೆ ಈಶ್ವರ ತಂಡ, ಅಗ್ನಿಶಾಮಕ ದಳ ಹಾಗೂ ಆಂಬ್ಯುಲೆನ್ಸ್ ಚಾಲಕರ ಮಾಲಕರ ತಂಡ ಹತ್ತುಹೆಬ್ಬಾಗಿಯಾಗಿ ಶೋಧ ಕಾರ್ಯದಲ್ಲಿ ತೊಡಗಿದ್ದರು.






