
ಬೆಳ್ತಂಗಡಿ: ವಾಟ್ಸಪ್ ಸ್ಟೇಟಸ್ನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವ ಮತ್ತು ಭೀತಿಯುಂಟುಮಾಡುವಂತಹ ಸಂದೇಶವನ್ನು ಹಂಚಿಕೊಂಡ ಆರೋಪದ ಮೇಲೆ ರಕ್ಷಿತ್ ಶೆಟ್ಟಿ ಎಂಬಾತನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರಮ ಸಂಖ್ಯೆ 69/2025ರಂತೆ ಬಿಎನ್ಎಸ್ 2023ರ ಸೆಕ್ಷನ್ 353(1)(ಬಿ), 353(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ.






