ಮಂಗಳೂರು: ಹಿಂದೂ ಸಂಘಟನೆ ಕಾರ್ಯ ಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ಅಧಿಕಾರಿಗಳು ಬಜಪೆ ಹಾಗೂ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿದೆ.

ಇಂದು (ಆ.2) ಬೆಳಿಗ್ಗೆಯೇ ಮಂಗಳೂರಿಗೆ ಆಗಮಿಸಿದ ಎನ್‌ಐಎ ಅಧಿಕಾರಿಗಳ ತಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳು ಹಾಗೂ ಸಹಕರಿಸಿದವರ ಮನೆ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ.

ಬಜಪೆಯ 10 ಕಡೆ ಮತ್ತು ಸುರತ್ಕಲ್ ನ 4 ಕಡೆಗಳಲ್ಲಿ ದಾಳಿ ನಡೆಸಿದ ಎನ್‌ಐಎ ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲಿಸಿ ಸಂಗ್ರಹಿಸುತ್ತಿದೆ.

ಮೇ ತಿಂಗಳ 1ರಂದು ಬಜಪೆಯ ಕಿನ್ನಿಪದವು ಎಂಬಲ್ಲಿ ಸುಹಾಸ್‌ ಶೆಟ್ಟಿ ಹತ್ಯೆಯಾಗಿತ್ತು ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 12 ಮಂದಿಯನ್ನು ಬಂಧಿಸಲಾಗಿದ್ದು, ಎನ್‌ಐಎ ವಶದಲ್ಲಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!