ಬೆಳ್ತಂಗಡಿ: 2012ರಲ್ಲಿ ಧರ್ಮಸ್ಥಳ ಗ್ರಾಮದ ಬೂರ್ಜೆ ಪ್ರದೇಶದಲ್ಲಿ ನಡೆದ ಆನೆ ಮಾವುತ ನಾರಾಯಣ ಮತ್ತು ಅವರ ಸಹೋದರಿ ಯಮುನಾ ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿ, ಮೃತರ ಮಕ್ಕಳಾದ ಗಣೇಶ್ ಹಾಗೂ ಭಾರತಿ ಅವರು ಆಗಸ್ಟ್ 18, 2025ರಂದು ಬೆಳ್ತಂಗಡಿಯ ಎಸ್.ಐ.ಟಿ ಕಚೇರಿಯಲ್ಲಿ ದೂರು ಸಲ್ಲಿಸಿದ್ದಾರೆ.

ಈ ಪ್ರಕರಣದ ಸಂಪೂರ್ಣ ಸತ್ಯ ಬಹಿರಂಗವಾಗಬೇಕೆಂಬ ನಂಬಿಕೆಯಿಂದ ಅವರು ಮರು ತನಿಖೆಯನ್ನು ಆಗ್ರಹಿಸಿದ್ದಾರೆ. ದೂರು ಸ್ವೀಕರಿಸಿದ ಎಸ್.ಐ.ಟಿ ಅಧಿಕಾರಿಗಳು, ಮುಂದಿನ ಕ್ರಮಕ್ಕಾಗಿ ಸ್ಥಳೀಯ ಪೊಲೀಸ್ ಠಾಣೆಗೆ ದೂರು ದಾಖಲಿಸಲು ಸೂಚನೆ ನೀಡಿದ್ದಾರೆ.

2012ರಲ್ಲಿ ನಡೆದ ಈ ದ್ವಂದ್ವ ಕೊಲೆ ಪ್ರಕರಣ ಆ ಸಮಯದಲ್ಲಿ ಹೆಚ್ಚಿನ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಮರುತನಿಖೆಯ ಹಂತ ಪ್ರವೇಶಿಸುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!