
ಸುಳ್ಯ :ಸುಳ್ಯ ಪೊಲೀಸ್ ಠಾಣಾ ಅ.ಕ್ರ.115/2018 ಕಲಂ 504, 354(A) ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ರವೀಂದ್ರ ಬಿ.ಎನ್ (40) ಎಂಬಾತನು ಸುಮಾರು ಏಳು ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇದರ ಹಿನ್ನೆಲೆಯಲ್ಲಿ LPC No.04/2023ರಂತೆ ನ್ಯಾಯಾಲಯದಿಂದ ವಾರೆಂಟ್ ಹೊರಡಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಪೊಲೀಸರು ಹಚ್ಚಹಾಸಿನ ಕಾರ್ಯಾಚರಣೆ ನಡೆಸಿ, 07-09-2025 ರಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವೇದಾವತಿ ನಗರದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.






