ರಸ್ತೆಯಲ್ಲಿ (Road) ನಮಾಜ್‌ (Namaz) ಮಾಡಲು ಕೂಡ ಅನುಮತಿ (Permission) ಕಡ್ಡಾಯ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದರು.

ರಸ್ತೆ ಮೇಲೆ ಪೂರ್ವಾನುಮತಿ ಇಲ್ಲದೇ ನಮಾಜ್ ಮಾಡಲು ಮಾಡಲು ಮುಸ್ಲಿಮರಿಗೆ ಅವಕಾಶ ನೀಡಬಾರದು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರು ಈ ಹಿಂದೆ ಪತ್ರ ಬರೆದಿದ್ದರು.

ಸಂಬಂಧ ಪ್ರತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ರಸ್ತೆಯಲ್ಲಿ ಪ್ರಾರ್ಥನೆ ಮಾಡಲು ಅರ್ಜಿ ಹಾಕಿ ಅನುಮತಿ ಪಡೆದುಕೊಳ್ಳಬೇಕು ಎಂದರು.

ಯತ್ನಾಳ್ ಅವರು ಇಂಗ್ಲಿಷ್‌ನಲ್ಲಿ ಪತ್ರ ಬರೆದಿರುವುದು ವಿಶೇಷ. ಯಾರಿಗೆ ಸಂದೇಶ ಕೊಡಲು ಇಂಗ್ಲಿಷ್‌ನಲ್ಲಿ ಪತ್ರ ಬರೆದಿದ್ದಾರೆಯೋ ಗೊತ್ತಿಲ್ಲ. ಮುಖ್ಯಮಂತ್ರಿಗೆ ಗೊತ್ತಾಗಲಿ ಎಂದೋ, ಅಮಿತ್ ಶಾ ಅವರಿಗೆ ಗೊತ್ತಾಗಲಿ ಎಂದೋ ಅಥವಾ ಬೇರೆ ಯಾರಿಗೆ ಗೊತ್ತಾಗಲಿ ಎಂದು ಬರೆದಿದ್ದಾರೊ ಗೊತ್ತಿಲ್ಲ ಎಂದು ಹೇಳಿದರು.

ನಮ್ಮದು ಒಕ್ಕೂಟ ವ್ಯವಸ್ಥೆ. ಕೇಂದ್ರ ಸರ್ಕಾರದ ಎಲ್ಲ ನಿಯಮಗಳನ್ನು ನಾವು ಅಳವಡಿಸಿಕೊಳ್ಳಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರಿ ನೌಕರರು ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗವಹಿಸಬಹುದು ಎಂದು ಕಾನೂನು ತಿದ್ದುಪಡಿ ತಂದಿದೆ. ಆದರೆ ರಾಜ್ಯ ಸರ್ಕಾರಿ ನೌಕರರು ಆರ್‌ಎಸ್‌ಎಸ್ ಕಾರ್ಯಕ್ರಮ, ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶ ಇಲ್ಲ ಎಂದು ತಿಳಿಸಿದರು.

ಇನ್ನು ಪಥ ಸಂಚಲನ ನಡೆಸಲು ಹೈಕೋರ್ಟ್‌ ಆದೇಶದಂತೆ ಆರ್‌ಎಸ್‌ಎಸ್‌ ಹೊಸದಾಗಿ ಅರ್ಜಿ ಸಲ್ಲಿಸಲಿ. ಅನುಮತಿ ನೀಡುವ ಕುರಿತು ಜಿಲ್ಲಾಡಳಿತ ತೀರ್ಮಾನ ಮಾಡಲಿದೆ. ನಾವು ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದರು.

ಸಿದ್ದರಾಮಯ್ಯ ಹೇಳಿದ್ದೇನು..?: ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸರ್ಕಾರ ರಾಷ್ಟ್ರೀಯ ಸೇವಾ ಸಂಘ (RSS) ನಿಷೇಧ ಮಾಡಿಲ್ಲ. ಶಾಲಾ-ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್‌ಎಸ್‌ಎಸ್ ಅಂತಾ ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಹೇಳಿದರು.

ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ ಅಷ್ಟೇ. ಅವರು ಮಾಡಬಹುದು, ನಾವು ಮಾಡಬಾರದೇ ಎಂದು ಪ್ರಶ್ನಿಸಿದರು. 2013 ರಲ್ಲಿ ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಗಳಿದ್ದ ಸಂದರ್ಭದಲ್ಲಿ ಸಂಘ ಸಂಸ್ಥೆಗಳು ಶಾಲಾ-ಕಾಲೇಜು ಆವರಣದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದನ್ನು ನಿಷೇಧಿಸಿದ್ದರು. ಜಗದೀಶ್ ಶೆಟ್ಟರ್ ಅವರು ಶಿಕ್ಷಣ ಇಲಾಖೆ ಮಾಡಿರುವುದು ನಾನಲ್ಲ ಎಂದಿದ್ದಾರೆ. ಇವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಆದೇಶ ಹೊರಡಿಸಿದ್ದಾರೆ ಎಂದು ಹೇಳಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!