
ಪುತ್ತೂರು: ಒಬ್ಬಂಟಿ ಮಹಿಳೆಯ ಮನೆಯಲ್ಲಿದ್ದ ವ್ಯಕ್ತಿಯನ್ನು ಪೊಲೀಸರು ವಿಚಾರಣೆಗೆ ಕರೆದುಕೊಂಡು ಹೋದ ಘಟನೆ ಪುತ್ತೂರು ತಾಲೂಕಿನ ಮಂಜಲ್ಪಡು ಪರಿಸರದಲ್ಲಿ ನಡೆದಿರುವುದು ವರದಿಯಾಗಿದೆ.
ಶಿವಮೊಗ್ಗ ಮೂಲದ ಶರೀಫ್ ಎಂಬ ವ್ಯಕ್ತಿಯನ್ನು ಪೊಲೀಸರು ಠಾಣೆಗೆ ಕರೆದೊಯ್ದಿದ್ದು, ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಸ್ಕೂಟರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ.





