
ಇರಾನ್ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ಹಿನ್ನೆಲೆಯಲ್ಲಿ, ಭಾರತ ಸರ್ಕಾರದ ಪರವಾಗಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಇಂದು ನವದೆಹಲಿಯಲ್ಲಿರುವ ಇರಾನ್ ರಾಯಭಾರ ಕಚೇರಿಗೆ ಭೇಟಿ ನೀಡಿದರು.
ರಾಯಭಾರ ಕಚೇರಿಯಲ್ಲಿ ಇರಿಸಲಾಗಿದ್ದ ಸಂತಾಪ ಸೂಚಕ ಪುಸ್ತಕದಲ್ಲಿ (Condolence Book) ಸಂದೇಶ ಬರೆಯುವ ಮೂಲಕ ಮಿಸ್ರಿ ಅವರು ಭಾರತದ ಪರವಾಗಿ ಅಧಿಕೃತವಾಗಿ ಶ್ರದ್ಧಾಂಜಲಿ ಸಲ್ಲಿಸಿದರು.
ಇರಾನ್ನ ಈ ಸಂಕಷ್ಟದ ಸಮಯದಲ್ಲಿ ಭಾರತವು ಆ ದೇಶದೊಂದಿಗೆ ನಿಲ್ಲಲಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತದ ಪ್ರಮುಖ ನಾಯಕರು ಈಗಾಗಲೇ ವಿಷಾದ ವ್ಯಕ್ತಪಡಿಸಿದ್ದು, ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಬಾಂಧವ್ಯದ ಹಿನ್ನೆಲೆಯಲ್ಲಿ ಈ ಭೇಟಿಯು ಮಹತ್ವ ಪಡೆದುಕೊಂಡಿದೆ. ರಾಯಭಾರ ಕಚೇರಿಯ ಅಧಿಕಾರಿಗಳನ್ನು ಭೇಟಿ ಮಾಡಿದ ವಿದೇಶಾಂಗ ಕಾರ್ಯದರ್ಶಿಗಳು, ಇರಾನ್ ಸರ್ಕಾರ ಮತ್ತು ಅಲ್ಲಿನ ಜನತೆಗೆ ಭಾರತದ ಸಾಂತ್ವನವನ್ನು ತಿಳಿಸಿದರು.









