ಪುತ್ತೂರು: ಪುತ್ತೂರು ಪರಿಸರದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಅಪಘಾತಗಳ ಹಿನ್ನೆಲೆಯಲ್ಲಿ ಲೋಕಕಲ್ಯಾಣಾರ್ಥವಾಗಿ ಮೇ.12 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಮೃತ್ಯುಂಜಯ ಸೂಕ್ತ ಜಪ ನಡೆಯಲಿದೆ.

ಶಾಸಕ ಅಶೋಕ್ ಕುಮಾರ್ ರೈ ಅವರ ಸೂಚನೆಯಂತೆ ಬೆಳಿಗ್ಗೆ 9.30ರಿಂದ11.30ರವರೆಗೆ ದೇವಸ್ಥಾನದ ಸನ್ನಿಧಾನದಲ್ಲಿ 1008 ಸಂಖ್ಯೆಯ ಮೃತ್ಯುಂಜಯ ಸೂಕ್ತ ಜಪವನ್ನು ಅನೇಕ ವೈದಿಕರು ಪಠಿಸಲಿದ್ದಾರೆ.

ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಮತ್ತು ಅರ್ಚಕ ವೇ ಮೂ ಜಯರಾಮ ಜೋಯಿಸರ ನೇತೃತ್ವದಲ್ಲಿ ಈ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!