ಬೆಂಗಳೂರು : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ (84) ಅವರು ಗುರುವಾರ ನಿಧನರಾಗಿದ್ದಾರೆ.ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಹಿಂದೆ ಡಿ.ಕೆಂಪಣ್ಣ ಅವರು ಬಸರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರದ ವಿರುದ್ಧ ಶೇ.40 ಕಮಿಷನ್‌ ಆರೋಪ ಮಾಡಿ ಸುದ್ದಿಯಾಗಿದ್ದರು.

ಬಳಿಕ ರಾಜ್ಯಾದ್ಯಂತ ಈ ವಿಚಾರ ಭಾರೀ ರಾಜಕೀಯ ಚರ್ಚೆಗೆ ಕಾರಣವಾಗಿತ್ತು.

ಸಿಎಂ ಸಿದ್ದರಾಮಯ್ಯ ಸಂತಾಪ :

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ ಶೇ.40 ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು. ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ನಾಡು ಇಂದು ಕಳೆದುಕೊಂಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ

Leave a Reply

Your email address will not be published. Required fields are marked *

Join WhatsApp Group
error: Content is protected !!