
ಪುತ್ತೂರು : ಸುಳ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಆಂಬ್ಯುಲೆನ್ಸ್ ಅಪಘಾತ ಸಂಭವಿಸಿದ ಘಟನೆ ಮುರ ಸಮೀಪ ನಡೆದಿದೆ.
ದೋಸ್ತ್ ವಾಹನ ಆಂಬ್ಯುಲೆನ್ಸ್ ಗೆ ಹಿಂಬದಿಯಿಂದ ಡಿಕ್ಕಿಯಾಗಿದ್ದು, ಆಂಬ್ಯುಲೆನ್ಸ್ ನಲ್ಲಿದ್ದ ಮಗುವಿಗೆ ಸಣ್ಣ-ಪುಟ್ಟ ಗಾಯಗಳಾಗಿದೆ.
ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗುತ್ತಿದೆ.
ಮಗುವಿಗೆ ಉಸಿರಾಟದ ತೊಂದರೆ ಇದ್ದು, ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅಪಘಾತ ಸಂಭವಿಸಿದೆ.
