ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಮುನಿರತ್ನ ಸದ್ಯ ಎಸ್‌ಐಟಿ ವಶದಲ್ಲಿ ಇದ್ದು ವಿಚಾರಣೆಯನ್ನು ಎದುರಿಸುತ್ತಿದ್ದಾರೆ ಇದರ ಮಧ್ಯ ಈ ಒಂದು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಮುನಿರತ್ನ ಅವರ ಗನ್ ಮ್ಯಾನ್ ಶ್ರೀನಿವಾಸ್ ನಾಪತ್ತೆಯಾಗಿದ್ದಾನೆ.

ಹಾಗಾಗಿ SIT ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಇಂದು ಶ್ರೀನಿವಾಸ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.

ಹೌದು ಬೆಂಗಳೂರಿನ ಸಿಂಗನಾಯಕನಹಳ್ಳಿಯ ಗನ್ ಮ್ಯಾನ್ ಶ್ರೀನಿವಾಸ್ ಮನೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಎರಡು ವಾಹನಗಳಲ್ಲಿ ಬಂದಿರುವ ಎಸ್‌ಐಟಿಯ 8 ಅಧಿಕಾರಿಗಳ ತಂಡ ಇದೀಗ ಪರಿಶೀಲನೆ ನಡೆಸುತ್ತಿದ್ದಾರೆ. ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಇದೀಗ ತನಿಖೆ ಮುಂದುವರೆದಿದೆ. ಬೇರೆ ಬೇರೆ ಆಯಾಮಗಳಲ್ಲಿ ಎಸ್‌ಐಟಿ ತನಿಖೆ ಚುರುಗೊಳಿಸಿದೆ.ಸಂತ್ರಸ್ತ ಮಹಿಳೆ ಮತ್ತು ಆರೋಪಿ ನಡುವೆ ಗನ್ ಮ್ಯಾನ್ ಮಧ್ಯವರ್ತಿ ಆಗಿರುವಂತಹ ಶಂಕೆ ವ್ಯಕ್ತವಾಗಿದೆ.

ಸಂತ್ರಸ್ತೆಯನ್ನು ಬೈಕಿನಲ್ಲಿ ಪಿಕ್ ಅಪ್ ಮತ್ತು ಡ್ರಾಪ್ ಮಾಡಿದ ಆರೋಪ ಕೇಳಿ ಬಂದಿದೆ. ಪ್ರಕರಣದಲ್ಲಿ ಶ್ರೀನಿವಾಸ್ ಪಾತ್ರದ ಬಗ್ಗೆ SIT ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಅಲ್ಲದೇ ಶ್ರೀನಿವಾಸ್ ಕುಟುಂಬದವರಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಈ ವೇಳೆ ಶ್ರೀನಿವಾಸ್ ನಾಪತ್ತೆಯಾಗಿದ್ದಾನೆ ಎಂದು ಹೇಳಲಾಗುತ್ತಿದೆ ನಾಲ್ಕು ವರ್ಷದಿಂದ ಸಿಂಗನಾಯಕನಹಳ್ಳಿ ಯಲ್ಲಿ ಐಷಾರಾಮಿ ಮನೆಯಲ್ಲಿ ಶ್ರೀನಿವಾಸ್ ವಾಸವಾಗಿದ್ದಾನೆ.

Leave a Reply

Your email address will not be published. Required fields are marked *

Join WhatsApp Group
error: Content is protected !!