ಪುತ್ತೂರು:ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.)ಪುತ್ತೂರು ಇದರ ಆಶ್ರಯದಲ್ಲಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಸೀಸನ್-2 ಕಾರ್ಯಕ್ರಮ ಅ.6ರಂದು ಸಂಜೆ 5.00 ಗಂಟೆಯ ಸಭಾ ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಲಿರುವ ಕೇಂದ್ರದ ಉಕ್ಕು ಹಾಗೂ ಬೃಹತ್ ಕೈಗಾರಿಕಾ ಸಚಿವರಾದ ಎಚ್.ಡಿ ಕುಮಾರಸ್ವಾಮಿಯವರಿಗೆ ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜರವರು ಕುಮಾರಸ್ವಾಮಿಯವರ ಸ್ವಗೃಹದಲ್ಲಿ ಆಮಂತ್ರಣ ಪತ್ರ ನೀಡಿ ಕಾರ್ಯಕ್ರಮಕ್ಕೆ ಸಚಿವರನ್ನು ಸ್ವಾಗತಿಸಿದರು

ಈ ಸಂದರ್ಭದಲ್ಲಿ ಭಾರತ ಸರಕಾರ ಹುಡೋ ಇದರ ಮಾಜಿ ನಿರ್ದೇಶಕ ಕೆ.ಆ‌ರ್ ಆಳ್ವ,ಸಿ.ಎ ಮಧುರಾಜ್ ರೈ ಹಾಗೂ ಉದ್ಯಮಿ ಚಂದ್ರವರ್ಮ ಜೈನ್ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

Join WhatsApp Group
error: Content is protected !!