ಪತಿ ಹಾಗೂ ಕುಟುಂಬದವರು ನೀಡುತ್ತಿದ್ದ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದ ಬಂಗಾರಪೇಟೆಯಲ್ಲಿ ನಡೆದಿದೆ.

25 ವರ್ಷದ ಸೌಮ್ಯ ಮೃತ ಮಹಿಳೆ. ಕೆಜಿಎಫ್ ನ ಕಂಗನಲ್ಲೂರು ಗ್ರಾಮದವರು. ತವರು ಮನೆಗೆ ಬಂದಿದ್ದ ಸೌಮ್ಯ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಎರಡು ವರ್ಷಗಳ ಹಿಂದೆ ಸುನೀಲ್ ಕುಮಾರ್ ಎಂಬುವವರ ಜೊತೆ ಸೌಮ್ಯ ವಿವಾಹವಾಗಿತ್ತು. ಪತಿ ಹಾಗೂ ಆತನ ಕುಟುಂಬದವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಇದೇ ಕಾರಣಕ್ಕೆ ನೊಂದು ಸೌಮ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸೌಮ್ಯ ಪೋಷಕರು ಬಂಗಾರಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!