ಉಳ್ಳಾಲ: ಮಾರ್ಗದ ಮಧ್ಯೆ ಕೆಟ್ಟು ನಿಂತ ಕೆಎಸ್ ಆರ್ ಟಿಸಿ ಬಸ್‌ ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಧಾವಂತದಲ್ಲಿ ಟೆಂಪೋ ಚಾಲಕ ನಿಯಂತ್ರಣ ಕಳೆದು ಪಾದಚಾರಿಯೋರ್ವರ� ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲ್ಲಾಪು ಆಡಂಕುದ್ರು ನಲ್ಲಿ ಮಧ್ಯಾಹ್ನ ಸಂಭವಿಸಿದೆ.

ಬಂಟ್ವಾಳ ಮೂಲದ ಆದಂ (64) ಮೃತಪಟ್ಟವರು.

ನಿಯಂತ್ರಣ ತಪ್ಪಿದ ಟೆಂಪೋ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಾರಿಗೆ ಢಿಕ್ಕಿ ಹೊಡೆದು ಬಳಿಕ ಅಂಗಡಿಯೊಂದರ ನಾಮಫಲಕಗಳಿಗೆ ಗುದ್ದಿ ಕಂದಕಕ್ಕೆ ಉರುಳಿದೆ.

ಮಂಗಳೂರಿನಿಂದ ಹೊರಟಿದ್ದ ಸರ್ಕಾರಿ ಬಸ್ ಆಡಂಕುದ್ರು ಬಳಿ ಕೆಟ್ಟು ನಿಂತಿದ್ದು, ಅವರು ಆ ಬಸ್ ನಿಂದ ಇಳಿದು ರಸ್ತೆ ದಾಟುವಾಗ ಈ ದುರ್ಘಟನೆ ಸಂಭವಿಸಿದೆ.

ಕಾರಿನಲ್ಲಿ ಮಕ್ಕಳು ಕುಳಿತಿದ್ದು, ಕಾರು ಚಾಲಕ ಅಂಗಡಿಗೆ ತೆರಳಿದ್ದರು. ಮಕ್ಕಳು ಅಪಾಯವಿಲ್ಲದೇ ಪಾರಾಗಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!