ಪುತ್ತೂರು :ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಭಾನುವಾರ ಸಂಜೆ ಹಠಾತ್ ಮಳೆಯಾಗಿದ್ದು, ಸಿಡಿಲು, ಮಿಂಚಿನ ಅಬ್ಬರಕ್ಕೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ಬಾಲಕ ಮೃತಪಟ್ಟಿದ್ದಾರೆ.

ಗಡಿಯಾರ ನಿವಾಸಿ ಸುಭೋದ್ ಸಿ (14) ಎಂಬ ಬಾಕಲನಿಗೆ ಸಿಡಿಲು ಬಡಿದು ಗಾಯಗೊಂಡಿದ್ದು, ಕೂಡಲೇ ಅತನನ್ನು ಪುತ್ತೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಅತನನ್ನು ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಗಾಗಿ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!