ತ ಮಿಳುನಾಡು: ಇಲ್ಲಿನ ತಂಜಾವೂರಿನಲ್ಲಿ ವ್ಯಕ್ತಿಯೊಬ್ಬ ವೇಗವಾಗಿ ಬರುತ್ತಿದ್ದ ಎರಡು ಬಸ್‌ಗಳ ನಡುವೆ ಸಿಲುಕಿ ಪ್ರಾಣಾಪಾಯದಿಂದ ಜಸ್ಟ್ ಮಿಸ್ ಆಗಿದ್ದಾನೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಈ ಭಯಾನಕ ದೃಶ್ಯ ವೈರಲ್ ಆಗಿದ್ದು, ಈ ವ್ಯಕ್ತಿ ಪವಾಡ ಸದೃಶವಾಗಿ ಪಾರಾಗಿರುವ ರೀತಿ ಬೆಚ್ಚಿ ಬೀಳಿಸುವಂತಿದೆ.

ಜನವರಿ 3 ರಂದು ಥಮರನ್‌ಕೊಟ್ಟೈನಿಂದ ಪಟ್ಟುಕೊಟ್ಟೈಗೆ ಪ್ರಯಾಣಿಸುತ್ತಿದ್ದ ಭರತ್ ಖಾಸಗಿ ಬಸ್ ಹತ್ತಲು ಪ್ರಯತ್ನಿಸುತ್ತಿದ್ದರು. ಅಷ್ಟರಲ್ಲಿ ಸರ್ಕಾರಿ ಬಸ್ ಖಾಸಗಿ ಬಸ್ ಅನ್ನು ಹಿಂದಿಕ್ಕಲು ವೇಗವಾಗಿ ಬಂದು ಓವರ್ ಟೇಕ್ ಮಾಡಿದೆ.ಈ ವೇಳೆ ವೇಗವಾಗಿ ಬರುತ್ತಿದ್ದ ಎರಡು ವಾಹನಗಳ ನಡುವೆ ಭರತ್ ಸಿಕ್ಕಿಹಾಕಿಕೊಂಡಿದ್ದರು.

ಈ ಘಟನೆಯ ವೀಡಿಯೊ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ಈ ಘಟನೆ ಸಂಚಾರ ನಿಯಮಗಳ ಉಲ್ಲಂಘನೆ ಮತ್ತು ಪಾದಚಾರಿ ಸುರಕ್ಷತೆಯ ಬಗ್ಗೆ ಹೆಚ್ಚಿನ ಜಾಗೃತಿಯಾಗಬೇಕು ಎಂದು ಹಲವರು ಆಗ್ರಹಿಸಿದ್ದಾರೆ.

https://twitter.com/TeluguScribe/status/1875101597786898920?ref_src=twsrc%5Etfw%7Ctwcamp%5Etweetembed%7Ctwterm%5E1875101597786898920%7Ctwgr%5E0da977a98c7761e9a619e2e4947b516f0f79f292%7Ctwcon%5Es1_c10&ref_url=https%3A%2F%2Fapi-news.dailyhunt.in%2F

Leave a Reply

Your email address will not be published. Required fields are marked *

Join WhatsApp Group
error: Content is protected !!