ಪುತ್ತೂರು : 2025ರ ಡಿಸೆಂಬರ್ 27,28 ಮತ್ತು 29ರಂದು   ಪುತ್ತೂರು  ಶ್ರೀಮಹಾಲೀಂಗೇಶ್ವರ ದೇವಸ್ಥಾನದ ಎದುರು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ 29ಕ್ಕೆ ಜರಗುವ 100 ಜೋಡಿಗೆ ಸಾಮೂಹಿಕ ವಿವಾಹದ ತಯಾರಿಗೆ ಮೊದಲು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಡೆಯಲ್ಲಿ ವಿಶೇಷ ಪ್ರಾರ್ಥನೆ ಫೆ.7 ರಂದು ಬೆಳಿಗ್ಗೆ 9 ಗಂಟೆಗೆ ಜರಗಿತು.

ಮಹಾಲಿಂಗೇಶ್ವರ ದೇವರಲ್ಲಿ ಅರ್ಚಕರು ವಿಶೇಷ ಪ್ರಾರ್ಥನೆ ನೆರವೇರಿಸಿದರು.ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಕಾರ್ಯಕ್ರಮದ ಯಶಸ್ವಿಗೆ ಶುಭಹಾರೈಸಿದರು.

ಕಾರ್ಯಕ್ರಮಕ್ಕೆ ಸಾಕಷ್ಟು ತಯಾರಿ ನಡೆಸಬೇಕಾಗಿರುವುದರಿಂದ ಈಗಿನಿಂದಲೇ ಕಾರ್ಯಪ್ರವೃತ್ತರಾಗುವ ಅನಿವಾರ್ಯತೆ ಇದೆ ಎಂದು ಅರುಣ್ ಪುತ್ತಿಲ ಪ್ರಾರ್ಥನೆಯ ಸಂದರ್ಭ ತಿಳಿಸಿದರು.

ಪ್ರಾರ್ಥನೆಯ ಸಂದರ್ಭ ವ್ಯವಸ್ಥಾಪನ ಸಮಿತಿ ಸದಸ್ಯರಾದ ವಿನಯ ಸುವರ್ಣ,  ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷರಾದ ಮಹೇಂದ್ರ ವರ್ಮ ಬಜತ್ತೂರು, ಉಮೇಶ್ ಕೊಡಿಬೈಲು, ಅನಿಲ್ ತೆಂಕಿಲ, ಪ್ರವೀಣ್ ಭಂಡಾರಿ,  ರಾಜು ಶೆಟ್ಟಿ, ರವಿ ಕುಮಾರ್ ರೈ ಕೆದಂಬಾಡಿಮಠ, ಶ್ರೀಕಾಂತ್ ಆಚಾರ್ಯ, ರೂಪೇಶ್,  ಜಯಪ್ರಕಾಶ್ ಅಮೈ, ಮನೀಶ್ ಕುಲಾಲ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!