ಬಿಜೆಪಿಯ ಬಣ ಬಡಿದಾಟಕ್ಕೆ ಮುಂದಾಗಿರುವ ಹೈಕಮಾಂಡ್ ನಾಯಕರು, ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವುದಕ್ಕೆ ಬ್ರೇಕ್ ಹಾಕಲು ಇದೀಗ ರೆಬಲ್ ನಾಯಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಹೈಕಮಾಂಡ್ ನೋಟಿಸ್ ಜಾರಿ ಮಾಡಿದೆ

ಬಿಜೆಪಿಯ ಶಿಸ್ತು ಸಮಿತಿಯಿಂದ ನೋಟಿಸ್ ಜಾರಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ವಿಜಯೇಂದ್ರ & ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಬಹಿರಂಗ ವಾಗ್ದಾಳಿ ವಿಚಾರವಾಗಿ ಯತ್ನಾಳ್ ಅವರಿಗೆ ಹೈಕಮಾಂಡ್ ನೀಡಿರುವ ಇದು ಎರಡನೇ ನೋಟಿಸ್ ಆಗಿದೆ. ಕಳೆದೆರಡು ತಿಂಗಳ ಹಿಂದೆಯೂ ನೋಟಿಸ್ ನೀಡಲಾಗಿತ್ತು.

ದೆಹಲಿಯಲ್ಲೇ ಯತ್ನಾಳ್ ಇರುವಾಗ ಖುದ್ದು ಹಾಜರಾಗಿ 72 ಗಂಟೆಯೊಳಗೆ ನೋಟಿಸ್ ಸಂಬಂಧ ವಿವರಣೆ ನೀಡಬೇಕು ಎಂದು ಶಿಸ್ತು ಸಮಿತಿ ಯತ್ನಾಳ್ ವಿರುದ್ಧ ನೋಟಿಸ್ ನೀಡಿ ಶಾಕ್ ನೀಡಿದೆ.

ರೆಬಲ್ಸ್ ಬಣ ಬಡಿದಾಟಕ್ಕೆ ಬ್ರೇಕ್ ಹಾಕಬೇಕು, ಅವರಿಗೆ ಬುದ್ದಿ ಹೇಳಿ ಎಂದು ಸಚಿವ ಸೋಮಣ್ಣ ಅವರಿಗೆ ಹೈಕಮಾಂಡ್ ಜವಾಬ್ದಾರಿ ನೀಡಿದ್ದು, ಸೋಮಣ್ಣ ಅವರ ಮಾತಿಗೂ, ರಾಜೀ ಸಂಧಾನಕ್ಕೂ ರೆಬಲ್ಸ್ ಬಗ್ಗಲಿಲ್ಲ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ ಹೈಕಮಾಂಡ್ ಈ ನೋಟಿಸ್ ನೀಡಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!