
ಪುತ್ತೂರು : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಮೃತಪಟ್ಟ ಘಟನೆ ಫೆ 24ರಂದು ಕಬಕದಲ್ಲಿ ನಡೆದಿದೆ
ಇಕ್ಕಿದು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಂಡಡ್ಕ ಕಂಪ ನಿವಾಸಿ ಜನಾರ್ಧನ (40 ವರ್ಷ) ಮೃತಪಟ್ಟವರು.
ಕಬಕದಿಂದ ವಿದ್ಯಾಪುರಕ್ಕೆ ತೆರಳುತ್ತಿದ್ದ ಆಕ್ಟಿವಾ ಹಾಗೂ ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ನಡುವೆ ಈ ಅಪಘಾತ ಸಂಭವಿಸಿದೆ
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಸವಾರ ಜನಾರ್ಧನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
