ಕಾಗವಾಡ ಶಾಸಕ ರಾಜು ಕಾಗೆ ಅವರ ಹಿರಿಯ ಪುತ್ರಿ ಕೃತಿಕಾ ಭರಮಗೌಡ ಕಾಗೆ (36) ಅವರು ಶನಿವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕೆಲ ತಿಂಗಳುಗಳಿಂದ ಅವರು ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು.

ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು ಎಂದು ಕುಟುಂಬದವರು ತಿಳಿಸಿದ್ದಾರೆ.

ಕೃತಿಕಾ ಭರಮಗೌಡಗೆ ಪತಿ ಡಾ.ಅನಿಲ ಪಾಟೀಲ ಮತ್ತು ಮೂರು ವರ್ಷದ ಪುತ್ರಿ ಇದ್ದಾರೆ. ಶಾಸಕ ರಾಜು ಕಾಗೆ ಅವರಿಗೆ ಇಬ್ಬರು ಪುತ್ರಿಯರಿದ್ದು, ಕೃತಿಕಾ ಮೊದಲನೆಯವರು. ರಾಜು ಕಾಗೆ ಅವರ ಸ್ವಗ್ರಾಮವಾದ ಉಗಾರದಲ್ಲಿ ಮಾರ್ಚ್ 2ರಂದು ಅಂತ್ಯಕ್ರಿಯೆ ನಡೆಯಲಿದೆ. ಬೆಂಗಳೂರು ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ಯುವಜನತೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿರುವ ಹಠಾತ್ ಸಾವು ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ತನಿಖೆ ನಡೆಸಲು ತಜ್ಞರ ಸಮಿತಿಯೊಂದನ್ನು ರಚಿಸಲು ಮುಂದಾಗಿದೆ. ಕೋವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರ ಸಮಿತಿ ರಚನೆಗೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!