ಪುತ್ತೂರು: ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಪುತ್ತೂರಿಗೆ ಮೆಡಿಕಲ್‌ ಕಾಲೇಜ್ ಷೋಷಣೆ ಮಾಡಿರುವ ಹಿನ್ನಲೆಯಲ್ಲಿ  ಶಾಸಕರಾದ ಅಶೋಕ್‌ ಕುಮಾರ್ ರೈ ಯವರಿಗೆ ಪುತ್ತೂರಿನಲ್ಲಿ ಅದ್ದೂರಿ ಸ್ವಾಗತದೊಂದಿಗೆ, ವಾಹನ ಜಾಥ ಹಾಗೂ ಭವ್ಯ ಮೆರವಣಿಗೆ ಮಾ 08ರಂದು ನಡೆಯಲಿದೆ.

ಮಾ.8ರಂದು ಬೆಳಗ್ಗೆ 9:30 ಕ್ಕೆ ಪುತ್ತೂರಿನ ಕಬಕದಿಂದ ಬೊಳ್ವಾರಿನ ವರಗೆ ಬೃಹತ್ ವಾಹನ ಜಾಥವು ನಡೆಯಲಿದ್ದು ನಂತರ ಬೊಳ್ವಾರಿನಿಂದ ಮಹಾಲಿಂಗೇಶ್ವರ ದೇವಸ್ಥಾನದ ವರಗೆ ಬೃಹತ್ ಮೆರವಣೆಗೆಯ ಮೂಲಕ ಪುತ್ತೂರಿಗೆ ಮೆಡಿಕಲ್‌ ಕಾಲೇಜು ಮಂಜೂರು ಮಾಡಿಸಿದ ಅಶೋಕ್ ಕುಮಾರ್ ಯವರಿಗೆ ಅದ್ದೂರಿ ಸ್ವಾಗತ ಕಾರ್ಯಕ್ರಮ ನಡೆಯಲಿದೆ. ನಂತರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ, ಮಾಯಿದೇ ದೇವುಸ್ ಚರ್ಚ್ ಮತ್ತು ಪುತ್ತೂರು ಮಸೀದಿಗೆ ಶಾಸಕರು ಭೇಟಿ ನೀಡಲಿದ್ದಾರೆ
ಸಂದರ್ಭದಲ್ಲಿ ರಾಜ್ಯ, ಜಿಲ್ಲಾ ಕಾಂಗ್ರೆಸ್ ಮುಖಂಡರು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ವಲಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮುಂಚೂಣಿ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಜನಪ್ರತಿನಿಧಿಗಳು, ನಾಮನಿರ್ದೇಶಿತ ಸದಸ್ಯರು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಬೂತ್ ಅಧ್ಯಕ್ಷರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪುತ್ತೂರು ಬ್ಲಾಕ್ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ ವಿನಂತಿಸಿದ್ದಾರೆ

Leave a Reply

Your email address will not be published. Required fields are marked *

Join WhatsApp Group
error: Content is protected !!