ದ.ಕ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಜವಾಬ್ದಾರಿ ಕೊಟ್ಟರೆ ನಿರ್ವಹಿಸುವೆ, ಆದರೆ ಅದಕ್ಕಾಗಿ ಲಾಬಿ ಮಾಡಲ್ಲ: ಎಂ.ಎಸ್. ಮುಹಮ್ಮದ್

ಸುದ್ದಿಗಳು News

Posted by vidyamaana on 2024-06-29 07:41:05 |

Share: | | | | |


ದ.ಕ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಜವಾಬ್ದಾರಿ ಕೊಟ್ಟರೆ ನಿರ್ವಹಿಸುವೆ, ಆದರೆ ಅದಕ್ಕಾಗಿ ಲಾಬಿ ಮಾಡಲ್ಲ: ಎಂ.ಎಸ್. ಮುಹಮ್ಮದ್

ಮಂಗಳೂರು , ಜೂ.29: ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಗೆ ಬಿಟ್ಟಿದ್ದು. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ನೀಡಿದ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ. ಯಾವುದೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸುತ್ತೇನೆ. ಆದರೆ ಅದಕ್ಕಾಗಿ ಲಾಬಿ ಮಾಡುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರ ಪಕ್ಷದ ಜವಾಬ್ದಾರಿ ನಿರ್ವಹಣಾ ಉಸ್ತುವಾರಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮುಹಮ್ಮದ್ ಪ್ರತಿಕ್ರಿಯಿಸಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಬಗ್ಗೆ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ತೀವ್ರಗೊಂಡಿದ್ದ ವೇಳೆ ತಮ್ಮ ಹೆಸರು ಕೇಳಿ ಬಂದಿತ್ತಲ್ಲ ಎಂಬ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದರು.

ಎಂಎಲ್‌ಎ, ಎಂಎಲ್ ಸಿ ಆಗಬೇಕು ಎನ್ನುವ ಆಕಾಂಕ್ಷೆ ಪಕ್ಷದಲ್ಲಿ ದುಡಿಯ ಎಲ್ಲರಿಗೂ ಇರುತ್ತದೆ. ಅದಕ್ಕೆ ನಮ್ಮ ಹಣೆಯಲ್ಲೂ ಬರೆದಿರಬೇಕು. ಆದರೆ ನಮಗೆ ಆ ಸ್ಥಾನವನ್ನು ತಪ್ಪಿಸಲು ಈ ಹುದ್ದೆಯನ್ನು ನೀಡಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ವಿಟ್ಲ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಹಿಡಿದು ವಿವಿಧ ಹುದ್ದೆಗಳನ್ನು ನಿರ್ವಹಿಸಿ ಜಿ.ಪಂ.ನ ಸದಸ್ಯನಾಗಿ ಮೂರು ಬಾರಿ ಆಯ್ಕೆಯಾಗಿ, ಜಿ.ಪಂ.ನ ಉಪಾಧ್ಯಕ್ಷನಾಗಿ ಕಾರ್ಯ ನಿರ್ವಹಿಸುವ ಅವಕಾಶವೂ ನನಗೆ ದೊರಕಿದೆ. ಎಲ್ಲಾ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದು, ಹೈಕಮಾಂಡ್ ಈ ಕಾರ್ಯವನ್ನು ಗುರುತಿಸಿ ಈಗ ಐದು ಜಿಲ್ಲೆಗಳನ್ನು ಒಳಗೊಂಡ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ನೀಡಿದ್ದು, ಇದನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲಿದ್ದೇನೆ. ಮುಂಬರುವ ಜಿ.ಪಂ. ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು

ಪಕ್ಷದ ಅಭ್ಯರ್ಥಿಗಳು ಗೆಲ್ಲುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಅವರು ಹೇಳಿದರು.


ರಾಹುಲ್ ಗಾಂಧಿಗೆ ಲೋಕಸಭೆಯ ವಿಪಕ್ಷ ನಾಯಕ ಸ್ಥಾನ ನೀಡಿರುವ ಬಗ್ಗೆ ಅಭಿನಂದನೆ ಸಲ್ಲಿಸಿದ ಎಂ.ಎಸ್.ಮುಹಮ್ಮದ್, ಹಲವು ಸಮಸ್ಯೆ, ಸವಾಲುಗಳ ಮೂಲಕ, ಹಲವು ರೀತಿಯ ಅವಮಾನಗಳನ್ನು ಸಮರ್ಥವಾಗಿ ಎದುರಿಸಿದ ರಾಹುಲ್ ಪಕ್ಷವನ್ನು ಮುನ್ನೆಡೆಸುವ ಸಮರ್ಥ ನಾಯಕ. ಪಾರ್ಲಿಮೆಂಟ್ನಿಂದ ಅಮಾನತು ಮಾಡಿ, ಸರಕಾರಿ ಬಂಗಲೆಯಿಂದ ಹೊರ ಹಾಕಿ ಕೌನ್ ಹೇ ರಾಹುಲ್ ಎಂದು ಅವರನ್ನು ಪ್ರಧಾನಿ ಅವಮಾನಿಸಿದ್ದರು. ಆ ಎಲ್ಲಾ ಅವಮಾನ ಸಹಿಸಿಕೊಂಡು ಇದೀಗ ಛಾಯಾ ಪ್ರಧಾನಿಯಾಗಿ ಕ್ಯಾಬಿನೆಟ್ ಸ್ಥಾನಮಾನವನ್ನು ರಾಹುಲ್ ಪಡೆದಿದ್ದು, ಅವರ ಜತೆ ನಾವಿದ್ದೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ನೀರಜ್ ಪಾಲ್, ನಝೀರ್ ಬಜಾಲ್, ಸುಭಾಶ್ ಶೆಟ್ಟಿ, ಟಿ.ಕೆ. ಸುಧೀರ್ ಉಪಸ್ಥಿತರಿದ್ದರು.

 Share: | | | | |


ಹಾಜಿ ಮುಸ್ತಫಾ ಕೆಂಪಿ ಅವರಿಗೆ ಕಾವ್ಯ ನಮನ

Posted by Vidyamaana on 2023-06-27 02:58:33 |

Share: | | | | |


ಹಾಜಿ ಮುಸ್ತಫಾ ಕೆಂಪಿ ಅವರಿಗೆ ಕಾವ್ಯ ನಮನ

*ಅಕ್ಷರ ತರ್ಪಣ*


ಸಣ್ಣ ಪ್ರಾಯ..

ಶತಾಯುಷಿಯ

ಚಿಂತನೆ ಅಭಿಪ್ರಾಯ...


ನಾವು ಮಳೆ ಕಂಡರೆ

ಅವನು ಮೋಡ ಕಾಣುವ..


ನಾಳಿನ ಸಂಗತಿ

ಅರಿಯುವ ಶೀಫ್ರಮತಿ...


ಚಂದದ ನಗು

ಕಣ್ಣೀರು ಅಡಗಿಸುವ ಮಗು...


ಮುಳ್ಳನ್ನು ಮುಳ್ಳಿಂದ 

ತೆಗೆಯುವ ಚಾಕಚಕ್ಯತೆ

ಹೂವ ಮುಡಿಗೇರಿಸುವ ನೈಪುಣ್ಯತೆ...


ಸೌಹಾರ್ದದ ತೇರು

ಕಿಂಚಿತ್ತೂ 

ಅದರಲ್ಲಿ ಇಲ್ಲ ಏರುಪೇರು....


ದುಡ್ಡಿದ್ದರೆ ರಾಜ

ದುಡ್ಡಿಲ್ಲದಿದ್ದರೆ ಮಹಾರಾಜ...


ಪರಿಹಾರವಿಲ್ಲದ ಸಮಸ್ಯೆ ಇಲ್ಲ

ಸಮಸ್ಯೆಗಳು 

ಇವನ ಬಳಿ ನಿಲ್ಲುವುದಿಲ್ಲ...


ಸಂಘರ್ಷ 

ಇವನೆದುರು ಸೋತು

ಸಂಘರ್ಷವೇ ಮರಣದ ಹೇತು...


ಒಡಹುಟ್ಟಿದವನಲ್ಲ

ಆದರೂ ಸಹೋದರ...


ಸಮವಯಸ್ಕನಲ್ಲ

ಆದರೂ ಗೆಳೆಯ...


ಹಿರಿಯನಲ್ಲ

ಆದರೂ ವಿಮರ್ಷಕ....


ಛಲ  ಹೊರತು ಹಠ ಇಲ್ಲ

ಬಲ  ಹೊರತು  ಅಹಂ ಇಲ್ಲ

ಬುದ್ಧಿವಾದ ಹೇಳುವ ಮಾತ್ರವಲ್ಲ

ಬುದ್ದಿವಾದ ಕೇಳುವವ ...


ನಾಳೆ ಕಾಣ ಸಿಗುತ್ತಿ

ಪತ್ರಿಕೆಯೊಂದರ ಒಳಪುಟದಲ್ಲಿ

ಒಂದು ಪಟ ನಾಲ್ಕುಗೆರೆ...

ತಿಂಗಳ ಬಳಿಕ ಪತ್ರಿಕೆ  ಗುಜರಿಗೆ.

ಗುಜರಿಯಿಂದ ದಿನಸಿ ಅಂಗಡಿಗೆ

ಅಲ್ಲಿಂದ ಅದೇ ಪತ್ರಿಕೆಯಲ್ಲಿ

ಕಟ್ಟಿಕೊಟ್ಟ ಸಾಮಾನು

ಪುನ ಅದೇ ಮರಣ ಮನೆಗೆ...


ಬದುಕಿಷ್ಟೇ ಗೆಳೆಯಾ

ಮರೆಯುವರು ,ಎಲ್ಲರೂ ಮರೆಯುವರು

ಎಲ್ಲರನ್ನೂ ಮರೆಯುವರು...

ಇಂದು ನೀನು ಮುಂದೆ

ಮುಂದೆ ನಾನು ನಿನ್ನ ಹಿಂದೆ

ವಿದಾಯದ ವೇಳೆಯಲ್ಲಿ 

ಇದುವೇ  ಮುಸ್ತಾ

ನಿನಗೊಂದು ಕಾವ್ಯ ನಮನ  ಕವನ!


*ಜಮುಕ್ರಿ...*

ಬೆಳ್ತಂಗಡಿ: ಅಕ್ರಮ ಮರ ಸಾಗಾಟ ಪ್ರಕರಣ; ಅರಣ್ಯಾಧಿಕಾರಿ ಅಮಾನತು

Posted by Vidyamaana on 2023-07-05 12:04:29 |

Share: | | | | |


ಬೆಳ್ತಂಗಡಿ: ಅಕ್ರಮ ಮರ ಸಾಗಾಟ ಪ್ರಕರಣ; ಅರಣ್ಯಾಧಿಕಾರಿ ಅಮಾನತು

ಬೆಳ್ತಂಗಡಿ: ಅರಣ್ಯ ಇಲಾಖೆಯ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಅವರನ್ನು ಕೆಲಸದಿಂದ ಅಮಾನತು ಗೊಳಿಸಿ ಪ್ರಧಾನ ಮುಖ್ಯವಾರಣ್ಯ ಸಾಮರಕ್ಷಣಾಧಿಕಾರಿ ಆದೇಶ ಹೊರಡಿಸಿರುವ ಬಗ್ಗೆ ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಕಲಂಜ ಗ್ರಾಮದಲ್ಲಿ ನಡೆದಿದ್ದ ಮರಗಳ ಅಕ್ರಮ ಕಳ್ಳ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆ ಕ್ರಮ ಕೈಗೊಂಡಿದೆ. ಕಲ್ಮಂಜ ಗ್ರಾಮದಲ್ಲಿ 2.5ಎಕ್ರೆ ಪ್ರದೇಶದಲ್ಲಿನ ಮರಗಳನ್ನು ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ಕಡಿಯಲಾಗಿತ್ತು ಆದರೆ ಇಲಾಖೆ ಕಾನುನಿನ ಅಡಿಯಲ್ಲಿ ಕ್ರಮ ಕೈಗೊಳ್ಳದೆ ಸೊತ್ತುಗಳನ್ನು ಸಾಗಾಟ ಮಾಡಲು ಅವಕಾಶ ಮಾಡಿಕೊಟ್ಟು ಮರಗಳ್ಳರೊಂದಿಗೆ ಶಾಮೀಲಾಗಿದ್ದಾರೆ ಎಂಬ ಆರೋಪ ತ್ಯಾಗರಾಜ್ ಅವರ ಮೇಲಿತ್ತು.ಈ ಹಿನ್ನಲೆಯಲ್ಲಿ ಇಲಾಖಾ ತನಿಖೆ ನಡೆಸಲಾಗಿತ್ತು.ಇದೀಗ ತ್ಯಾಗರಾಜ್ ಅವರನ್ನು ಅಮಾನತು ಗೊಳಿಸಿ ಆದೆಶ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.ಬೆಳ್ತಂಗಡಿ ತಾಲೂಕಿನಲ್ಲಿ ಭಾರೀ ವಿವಾದಗಳಿಗೆ ಕಾರಣವಾಗಿದ್ದ ಕಲಂಜದ ಅಕ್ರಮ ಮರ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಬ್ಬ ಅಧಿಕಾರಿಯ ತಲೆದಂಡವಾಗಿದೆ.

ಲಕ್ಷಾಂತರ ಮೌಲ್ಯದ ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಾರಿ ಅರಣ್ಯ ದಳದ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದರು. ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಹಾಗೂ ಇತರರು ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಆಗಲೇ ಇಲಾಖಾ ತನಿಖೆ ಆರಂಭವಾಗಿತ್ತು. ಆದರೆ ಅಧ ಮುಂದುವರಿದ ಭಾಗವಾಗಿ ದಾಳಿ ನಡೆಸಿದ್ದ ಸಂದ್ಯಾ ಅವರನ್ನು ಬೀದರಿಗೆ ವರಗಗಾವಣೆ ಮಾಡಿ ಆದೇಶಬಂದ ಹಿನ್ನಲೆಯಲ್ಲಿ ಭಾರೀ ರಾಜಕೀಯ ವಿವಾದಗಳು ಸೃಷ್ಟಿಯಾಗಿದ್ದವು. ಅಲ್ಲದೆ ತನಿಖೆ ನಡೆಸಿದ ಹಿರಿಯ ಅಧಿಕಾರಿಗಳು ಕೆಳ ಹಂತದ ಮೂವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದರು.

ತ್ಯಾಗರಾಜ್ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಿರಲಿಲ್ಲ. ಇದೀಗ ತ್ಯಾಗರಾಜ್ ಅವರ ವಿರುದ್ಧ ಇದೇ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲಾಗಿದೆ

ನನ್ನ ಮಗನಿಗೆ ಕೊಡೋ ಶಿಕ್ಷೆ ಹೇಗಿರ್ಬೇಕಂದ್ರೆ ಮುಂದೆ ಇಂಥ ಕೆಲ್ಸಕ್ಕೆ ಯಾರೂ ಕೈ ಹಾಕ್ಬಾರ್ದು

Posted by Vidyamaana on 2024-04-20 09:47:56 |

Share: | | | | |


ನನ್ನ ಮಗನಿಗೆ ಕೊಡೋ ಶಿಕ್ಷೆ ಹೇಗಿರ್ಬೇಕಂದ್ರೆ ಮುಂದೆ ಇಂಥ ಕೆಲ್ಸಕ್ಕೆ ಯಾರೂ ಕೈ ಹಾಕ್ಬಾರ್ದು

ಹುಬ್ಬಳಿ : ಇಡೀ ರಾಜ್ಯವನ್ನೆ ಬೆಚ್ಚಿಬೀಳಿಸಿದ್ದ ಹುಬ್ಬಳ್ಳಿ(Hubballi) ನೇಹಾ ಹತ್ಯೆ ಪ್ರಕರಣ ಜನತೆಯನ್ನು ರೊಚ್ಚಿಗೆಬ್ಬಿಸಿದೆ. ಹಂತಕನ ವಿರುದ್ಧ ಜನ ಕೊತ ಕೊತ ಕುದಿಯುತ್ಯಿದ್ದಾರೆ. ಈ ಬೆನ್ನಲ್ಲೇ ನೇಹಾ ಹಂತಕ ಪಯಾಜ್ ತಂದೆ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.

ನನ್ನ ಮಗನಿಗೆ ಯಾವುದೇ ಶಿಕ್ಷೆ ನೀಡಿದರೂ ಸ್ವಾಗತಿಸುತ್ತೇನೆ. ಅವನಿಗೆ ಅತ್ಯಂತ ಕಠಿಣ ಶಿಕ್ಷೆಯಾಗಲಿ. ಆ ಶಿಕ್ಷೆ ಹೇಗಿರಬೇಕು ಅಂದ್ರೆ ಮುಂದೆ ಇಂಥ ಕ್ರೂರ ಕೆಲಸಕ್ಕೆ ಯಾರೂ ಕೈ ಹಾಕಬಾರದು. ಅಂಥ ಶಿಕ್ಷೆ ನನ್ನ ಮಗನಿಗೆ ಆಗಬೇಕು ಎಂದು ನೇಹಾ ಹಿರೇಮಠ (Neha Hiremath Murder Case) ಕೊಲೆ ಪ್ರಕರಣದ ಆರೋಪಿ ಫಯಾಜ್ (Fayaz) ತಂದೆ‌ ಬಾಬಾ ಸಾಹೇಬ್‌ ಸುಬಾನಿ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ್ದಾರೆ.

ವಿದ್ಯುತ್ ಶಾಕ್ ಹೊಡೆದು ನವವಿವಾಹಿತ ಲೈನ್ ಮ್ಯಾನ್ ದುರಂತ ಸಾವು! ಪತಿಯ ಸಾವು ಕಂಡು ಅಘಾತಕ್ಕೊಳಗಾದ ಪತ್ನಿ

Posted by Vidyamaana on 2023-10-04 12:00:24 |

Share: | | | | |


ವಿದ್ಯುತ್ ಶಾಕ್ ಹೊಡೆದು ನವವಿವಾಹಿತ ಲೈನ್ ಮ್ಯಾನ್ ದುರಂತ ಸಾವು! ಪತಿಯ ಸಾವು ಕಂಡು ಅಘಾತಕ್ಕೊಳಗಾದ ಪತ್ನಿ

ಚಿಕ್ಕಬಳ್ಳಾಪುರ: ಬೆಸ್ಕಾಂನಲ್ಲಿ ಕರ್ತವ್ಯನಿರತ ಲೈನ್ ಮ್ಯಾನ್ ವಿದ್ಯುತ್ ಜಂಪ್ ಕಟ್ ಆಗಿರುವುನ್ನು ಸರಿಪಡಿಸಲು ಹೋಗಿ ವಿದ್ಯುತ್ ಶಾಕ್ ನಿಂದ ದುರಂತ ಸಾವು ಕಂಡಿರುವ ಘಟನೆ ನಡೆದಿದೆ. ಪತಿಯ ಸಾವು ಕಂಡ ಆತನ ಪತ್ನಿ ನವವಿವಾಹಿತೆ ಅಘಾತಕ್ಕೊಳಗಾಗಿದ್ದಾರೆ. ಆತನ ಹೆಸರು ವಿವೇಕ್ ಪಾಟೀಲ್, ಬೆಳಗಾವಿ ಜಿಲ್ಲೆ ರಾಯಬಾಗ್ ತಾಲೂಕಿನ ಉಬ್ಬರವಾಡಿ ನಿವಾಸಿ. ಚಿಕ್ಕಬಳ್ಳಾಪುರ ಜಿಲ್ಲಾ ಬೆಸ್ಕಾಂ ವಿಭಾಗದಲ್ಲಿ ಲೈನ್ ಮ್ಯಾನ್ ಆಗಿ ಕೆಲಸ ಮಾಡ್ತಿದ್ದ. ನಿನ್ನೆ ನಂದಿ ವಿಭಾಗದ ಕೋಳವನಹಳ್ಳಿ ಬೊಮ್ಮನಹಳ್ಳಿ ಮಾರ್ಗದಲ್ಲಿ ತ್ರೀ ಫೇಸ್ ಮಾರ್ಗದಲ್ಲಿ ಜಂಪ್ ಕಟ್ ಆಗಿದೆ ಅಂತ ಜಂಪ್ ಹಾಕಲು ವಿದ್ಯುತ್ ಕಂಬ ಹತ್ತಿದ್ದಾನೆ. ಆಗ ವಿದ್ಯುತ್ ಶಾಕ್ ಹೊಡೆದು ಸ್ಥಳದಲ್ಲಿ ಮೃತಪಟ್ಟಿದ್ದಾನೆ ಎಂದು ಆನಂದಕುಮಾರ್. ಕೆ ಕಾರ್ಯಪಾಲಕ ಇಂಜಿನಿಯರ್, ಚಿಕ್ಕಬಳ್ಳಾಪುರ ಬೆಸ್ಕಾಂ ಮಾಹಿತಿ ನೀಡಿದ್ದಾರೆ.ವಿವೇಕ್ ಪಾಟೀಲ್ ಮಾರ್ಗದಾಳಾಗಿದ್ದು ನಿನ್ನೆ ಸಂಜೆ ಜಂಪ್ ಹಾಕುವಾಗ ಸೂಕ್ತ ಮುಂಜಾಗ್ರತೆ ಕ್ರಮ ಕೈಗೊಂಡಿಲ್ಲ. ಮಾರ್ಗದಲ್ಲಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿಲ್ಲ. ಆದರೂ ಜಂಪ್ ಹಾಕಲು ಮುಂದಾದಾಗ ಘಟನೆ ನಡೆದಿದೆ. ವಿವೇಕ್ ಪಾಟೀಲ್ ಇತ್ತಿಚಿಗೆ ಮದುವೆಯಾಗಿದ್ದು ಪತ್ನಿಯನ್ನು ಚಿಕ್ಕಬಳ್ಳಾಪುರದ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡಿಸುತ್ತಿದ್ದಾರೆ. ಮದುವೆಯಾಗಿ ವರ್ಷದೊಳಗೆ ಪತಿ ಕಳೆದುಕೊಂಡಿರುವ ವಿವೇಕ್ ಪತ್ನಿ ವರ್ಷಾ, ಗಂಡನನ್ನು ನೆನೆದು ಆಘಾತಕ್ಕೊಳಗಾಗಿದ್ದಾರೆ.


ಅಸಲಿಗೆ ಜಂಪ್ ಕಟ್ ಆಗಿರುವ ಸ್ಥಳ ಬೇರೊಬ್ಬ ಮಾರ್ಗದಾಳುವಿಗೆ ಸಂಬಂಧಿಸಿದ್ದು. ಆತ ಅನಾರೋಗ್ಯದಿಂದಿರುವ ಹಿನ್ನೆಲೆ ಮಾರ್ಗದಾಳು ವಿವೇಕ್ ಸಂಬಂಧಿಸಿದ ಮಾರ್ಗದ ವಿದ್ಯುತ್ ಸ್ಥಗಿತಗೊಳಿಸದೆ ಹಾಗೂ ಮುಂಜಾಗ್ರತೆ ಕೈಗೊಳ್ಳದೆ ಕರ್ತವ್ಯ ನಿರ್ವಹಣೆಗೆ ಮುಂದಾಗಿದ್ದೇ ಆತನ ಸಾವಿಗೆ ಕಾರಣ ಎನ್ನಲಾಗಿದೆ. ನಂದಿಗಿರಿಧಾಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಬೆಸ್ಕಾಂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ತನಿಖೆ ಕೈಗೊಂಡಿದ್ದಾರೆ.ಕೋಲಾರದ ಇಟಿಸಿಎಂ ವೃತ್ತದಲ್ಲಿ ಸಾರ್ವಜನಿಕವಾಗಿ ಕತ್ತು ಕೊಯ್ದುಕೊಂಡು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ರೆಹಮತ್ ಉಲ್ಲಾ ಬೇಗ್ (35) ಕತ್ತು ಕೊಯ್ದುಕೊಂಡು ಮೃತಪಟ್ಟ ವ್ಯಕ್ತಿ. ರೆಹಮತ್, ಕೋಲಾರ ಜಿಲ್ಲೆ ಕೆಜಿಎಫ್​ ತಾಲೂಕಿನ ಬೇತಮಂಗಲ ನಿವಾಸಿಯಾಗಿದ್ದು, ಗ್ಯಾಸ್ ಸ್ಟವ್ ರಿಪೇರಿ ಕೆಲಸ ಮಾಡಿಕೊಂಡಿದ್ದ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರಿಂದ ಕತ್ತು ಕೊಯ್ದುಕೊಂಡಿದ್ದ ರೆಹಮತ್ ಉಲ್ಲಾ ಬೇಗ್ ನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ. ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ: ಹಿಮ್ಮುಖವಾಗಿ ಚಲಿಸಿದ ಪಿಕಪ್ ಡಿಕ್ಕಿ ಹೊಡೆದು ವ್ಯಕ್ತಿ ಸಾವು

Posted by Vidyamaana on 2024-04-18 09:48:31 |

Share: | | | | |


ಬೆಳ್ತಂಗಡಿ: ಹಿಮ್ಮುಖವಾಗಿ ಚಲಿಸಿದ ಪಿಕಪ್ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಚಾಲಕನ ಅಜಾಗರೂಕತೆಯಿಂದಾಗಿ ಪಿಕಪ್‌ ವಾಹನ ಹಿಮ್ಮುಖವಾಗಿ ಚಲಿಸಿ ವ್ಯಕ್ತಿಗೆ ಡಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ರುಕ್ಮ ಮುಗೇರ ಮೃತ ವ್ಯಕ್ತಿ. ಶಿಬಾಜೆ ಬಳಿ ಪಿಕಪ್ ನಿಲ್ಲಿಸಿದಾಗ ರುಕ್ಮ ಮುಗೇರ ರಸ್ತೆಯ ಬದಿಯಲ್ಲಿ ನಿಂತುಕೊಂಡಿದ್ದರು. ಅದರ ಚಾಲಕ ಜಯೇಶ್‌ ಅವರು ದುಡುಕುತನದಿಂದ ಹಿಮ್ಮುಖವಾಗಿ ಚಲಾಯಿಸಿ, ರಸ್ತೆಯ ಬದಿಯಲ್ಲಿ ನಿಂತುಕೊಂಡಿದ್ದ ರುಕ್ಮ ಮುಗೇರ ಅವರಿಗೆ ಢಿಕ್ಕಿ ಹೊಡೆದಿದೆ.

ಕಡಬದಲ್ಲಿ ವಿದ್ಯಾರ್ಥಿನಿಯರ ಮೇಲೆ ಆಸಿಡ್‌ ದಾಳಿ ಪ್ರಕರಣ

Posted by Vidyamaana on 2024-03-12 11:25:53 |

Share: | | | | |


ಕಡಬದಲ್ಲಿ ವಿದ್ಯಾರ್ಥಿನಿಯರ ಮೇಲೆ ಆಸಿಡ್‌ ದಾಳಿ ಪ್ರಕರಣ

ಕಡಬ : ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಇನ್ನಿಬ್ಬರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪ್ರಧಾನ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಭಿನ್ ನನ್ನು ಮಾ.5 ರಂದು ಬಂಧಿಸಲಾಗಿತ್ತು. ಉಪ್ಪಿನಂಗಡಿ ವೃತ್ತ ನಿರೀಕ್ಷಕರ ನೇತೃತ್ವದ ತಂಡ ಪ್ರಧಾನ ಆರೋಪಿ ಜೊತೆ ಕೇರಳದ ಎರ್ನಾಕುಲಂ ಮತ್ತು ತಮಿಳುನಾಡಿನ ಕೊಯಮತ್ತೂರಿನ ಪ್ರದೇಶಕ್ಕೆ ತೆರಳಿ ತನಿಖೆ ನಡೆಸಿದ್ದು, ಇದೀಗ ಕೇರಳದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ಕಡಬಕ್ಕೆ ಕರೆತಂದಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿ ಅಬಿನ್ ಆ್ಯಸಿಡ್ ದಾಳಿ ನಡೆಸಿದ ದಿನ ಕಾಲೇಜಿನ ಸಮವಸ್ತ್ರ ಹೋಲುವ ಡ್ರೆಸ್ ಹಾಕಿದ್ದು, ಇದನ್ನು ಹೊಲಿದುಕೊಟ್ಟ ವ್ಯಕ್ತಿ ಹಾಗೂ ಆ್ಯಸಿಡ್ ನೀಡಿದ ವ್ಯಕ್ತಿಗಳಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.




Leave a Comment: