ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕ ಆರಂಭ: ಸಿಎಂ ಸಿದ್ದರಾಮಯ್ಯ

ಸುದ್ದಿಗಳು News

Posted by vidyamaana on 2024-07-01 19:16:06 |

Share: | | | | |


ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕ ಆರಂಭ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಬೆಂಗಳೂರು ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು.

ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು.

ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್ ಅವರು ಪ್ರಧಾನ ಭಾಷಣದಲ್ಲಿ ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.

 Share: | | | | |


ಕುಮಾರ ಪರ್ವತದ ಗಿರಿಗದ್ದೆ ಭಟ್ರು ಇನ್ನಿಲ್ಲ: ಕಾಡಿನ ಮಧ್ಯ ಮನೆಯೂಟ ನೀಡ್ತಿದ್ದ ಮಹಾಲಿಂಗ ಭಟ್ರು

Posted by Vidyamaana on 2023-12-21 11:56:10 |

Share: | | | | |


ಕುಮಾರ ಪರ್ವತದ ಗಿರಿಗದ್ದೆ ಭಟ್ರು ಇನ್ನಿಲ್ಲ: ಕಾಡಿನ ಮಧ್ಯ ಮನೆಯೂಟ ನೀಡ್ತಿದ್ದ ಮಹಾಲಿಂಗ ಭಟ್ರು

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಸಮೀಪದ ಕುಮಾರಪರ್ವತ ಗಿರಿಗದ್ದೆ ನಿವಾಸಿ ಮಹಾಲಿಂಗ ಭಟ್ (67) ಅವರು ಅಲ್ಪಕಾಲದ ಅಸೌಖ್ಯದಿಂದ ಡಿ.20ರ ಬುಧವಾರ ಇಂದು ಮಂಗಳೂರು ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಮೃತರು ಒರ್ವ ಪುತ್ರ, ಮೂವರು ಪುತ್ರಿಯರನ್ನು ಅಗಲಿದ್ದಾರೆ.ಕುಮಾರಪರ್ವತ ದಾರಿಯ ಗಿರಿಗದ್ದೆಯಲ್ಲಿ ಮನೆ ಹೊಂದಿದ್ದ ಮಹಾಲಿಂಗ ಭಟ್ ಅವರು ಗಿರಿಗದ್ದೆ ಭಟ್ಟರು ಎಂದೇ ಖ್ಯಾತರಾಗಿದ್ದರು. ಇವರು ಕುಮಾರಪರ್ವತ ಚಾರಣಿಗರಿಗೆ ಉಪಚಾರ, ಮಾರ್ಗದರ್ಶನ, ಆಹಾರ ತಯಾರಿಸಿ ನೀಡುವ, ಆಶ್ರಯ ನೀಡುವ ಮೂಲಕ ಚಿರಪರಿಚಿತರಾಗಿದ್ದು, ಚಾರಣಿಗರ ಅಚ್ಚುಮೆಚ್ಚಿನ ವ್ಯಕ್ತಿಯಾಗಿದ್ದರು.


ಕುಮಾರಪರ್ವತ ಚಾರಣಕ್ಕೆ ತೆರಳುವ ಹೆಚ್ಚಿನವರು ಇವರನ್ನು ಸಂಪರ್ಕಿಸಿಯೇ ಆಗಮಿಸುತ್ತಿದ್ದರು. ಮಹಾಲಿಂಗ ಭಟ್ ಅವರ ಮನೆಗೆ ಆಹಾರ ಸಾಮಾಗ್ರಿಗಳನ್ನು ಹಾಗೂ ಮತ್ತಿತರ ಸಾಮಾಗ್ರಿಗಳನ್ನು ಹೊತ್ತುಕೊಂಡೇ ಸಾಗಬೇಕಾಗಿತ್ತು. ಮಹಾಲಿಂಗ ಭಟ್ ಅವರು ಗಿರಿಗದ್ದೆಯಲ್ಲಿ ಕೃಷಿ ಕೆಲಸ ನಿರ್ವಹಿಸಿತ್ತಿದ್ದರು

ಕಾನೂನಿನ ಕಣ್ಣಿಗೆ ಮಣ್ಣೆರಚಿ ರಿಕ್ಷಾ ಗಾಜಿಗೆ ಟಿಂಟ್

Posted by Vidyamaana on 2023-07-27 03:25:10 |

Share: | | | | |


ಕಾನೂನಿನ ಕಣ್ಣಿಗೆ ಮಣ್ಣೆರಚಿ ರಿಕ್ಷಾ ಗಾಜಿಗೆ ಟಿಂಟ್

ಪುತ್ತೂರು: ರಿಕ್ಷಾ ಗಾಜಿಗೆ ಟಿಂಟ್ ಹಾಕಿ ಓಡಾಡುತ್ತಿರುವ ರಿಕ್ಷಾಗಳನ್ನು ನಿಲ್ಲಿಸಿ, ಅವುಗಳ ಟಿಂಟ್ ತೆಗೆಸುವ ಕಾರ್ಯಾಚರಣೆಗೆ ಪುತ್ತೂರು ಆರ್.ಟಿ.ಓ. ಅಧಿಕಾರಿಗಳು ಮುಂದಾಗುತ್ತಿದ್ದಾರೆ.

ರಿಕ್ಷಾದ ಮುಂಭಾಗದ ಗಾಜಿಗೆ ಟಿಂಟ್ ಹಾಕುವಂತಿಲ್ಲ ಎನ್ನುತ್ತದೆ ಕಾನೂನು. ಕಂಪೆನಿ ನಿರ್ಮಿಸಿಕೊಡುವ ರಿಕ್ಷಾವನ್ನು ಯಥಾವತ್ತಾಗಿ ಬಳಸಬೇಕು. ಗಾಜಿಗೆ ಟಿಂಟ್ ಹಾಕುವುದಕ್ಕಾಗಲಿ ಅಥವಾ ಗಾಜು ಮುಚ್ಚಿ ಹೋಗುವಂತೆ ಅಕ್ಷರಗಳನ್ನು ಬರೆಯುವುದಾಗಲಿ ಮಾಡುವಂತಿಲ್ಲ. ಹೀಗೆ ಮಾಡುವುದರಿಂದ ರಿಕ್ಷಾ ಚಾಲಕರಿಗೆ ಅಡ್ಡಿಯಾಗಿ, ಅಪಘಾತಕ್ಕೆ ಕಾರಣವಾಗುವ ಸಂದರ್ಭಗಳು ಇವೆ. ಇದಕ್ಕೆ ಹಲವು ನಿದರ್ಶನಗಳು ಇವೆ.

ಪುತ್ತೂರಿನಲ್ಲಿ ಓಡಾಡುವ ರಿಕ್ಷಾಗಳಲ್ಲಿ ಮುಂಭಾಗದ ಗಾಜಿನಲ್ಲಿ ಸ್ವಲ್ಪ ಭಾಗವನ್ನು ಮಾತ್ರ ಬಿಟ್ಟು, ಉಳಿದ ಭಾಗಗಳಿಗೆ ಪೂರ್ತಿಯಾಗಿ ಟಿಂಟ್ ಹಾಕಿರುವುದು ಇದೆ. ರಿಕ್ಷಾದ ಒಳಗಡೆ ತಂಪಿನ ವಾತಾವರಣ ಇರಲಿ ಎಂಬ ಕಾರಣಕ್ಕೆ, ಟಿಂಟ್ ಹಾಕಲಾಗುತ್ತದೆ. ಆದರೆ ಇದುವೇ ಅಪಘಾತಕ್ಕೆ ಕಾರಣವಾಗುವ ಸಂದರ್ಭ ಹೆಚ್ಚು. ಆದ್ದರಿಂದ ಆರ್.ಟಿ.ಓ. ಅಧಿಕಾರಿಗಳು ಕಾರ್ಯಾಚರಣೆಗೆ ಮುಂದಾಗಿದ್ದಾರೆ.

ಈಗಾಗಲೇ ಹಲವು ರಿಕ್ಷಾಗಳ ಟಿಂಟ್ ಗಳನ್ನು ತೆಗೆಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ರಿಕ್ಷಾಗಳು ಸ್ವಯಂಪ್ರೇರಿತರಾಗಿ ಇಂತಹ ಟಿಂಟ್ ಅಥವಾ ಬರಹಗಳನ್ನು ತೆಗೆಯಬೇಕು ಎನ್ನುವುದು ಕಾರ್ಯಾಚರಣೆಯ ಉದ್ದೇಶ.


ಸುರಕ್ಷಿತ ಚಾಲನೆ ನಿಮ್ಮದಾಗಲಿ:

ರಿಕ್ಷಾದ ಗಾಜಿಗೆ ಟಿಂಟ್ ಹಾಕುವುದು ಅಪಾಯಕಾರಿ. ಟಿಂಟ್ ಹಾಕುವುದು ತಪ್ಪು ಕೂಡ. ಆದ್ದರಿಂದ ದೃಷ್ಟಿಗೆ ಅಡ್ಡವಾಗುವಷ್ಟು ಗಾಜಿಗೆ ಟಿಂಟ್ ಹಾಕಿರುವ ರಿಕ್ಷಾಗಳಿಗೆ ದಂಡ ವಿಧಿಸಲು ಅವಕಾಶವಿದೆ. ಆದ್ದರಿಂದ ರಿಕ್ಷಾ ಚಾಲಕರು ಸ್ವಯಂಪ್ರೇರಿತರಾಗಿ ಇಂತಹ ಟಿಂಟ್ ಗಳನ್ನು ತೆಗೆದು, ಸುರಕ್ಷಿತ ಚಾಲನೆ ನಡೆಸಬೇಕು.

ವಿಶ್ವನಾಥ ಅಜಿಲ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಪುತ್ತೂರು

ಲೋಕ ಸಮರ ಶಾಕಿಂಗ್ ನ್ಯೂಸ್ - ರಾಜ್ಯದಿಂದ ಸ್ಪರ್ಧೆಗಿಳಿತಿದ್ದಾರೆ ಸೆಂಟ್ರಲ್ ಮಿನಿಸ್ಟರ್ಸ್

Posted by Vidyamaana on 2024-01-13 04:36:09 |

Share: | | | | |


ಲೋಕ ಸಮರ ಶಾಕಿಂಗ್ ನ್ಯೂಸ್ - ರಾಜ್ಯದಿಂದ ಸ್ಪರ್ಧೆಗಿಳಿತಿದ್ದಾರೆ ಸೆಂಟ್ರಲ್ ಮಿನಿಸ್ಟರ್ಸ್

ಬೆಂಗಳೂರು ಜನವರಿ 13: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇವೆ. ಈ ಬಾರಿ ಮ್ಯಾಜಿಕ್ ಮಾಡಲು ಬಿಜೆಪಿ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕೇಂದ್ರ ನಾಯಕರನ್ನು ಕರ್ನಾಟಕದಿಂದ ಲೋಕಸಭೆ ಚುನಾವಣೆ ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ. ಹೌದು.... ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಸ್ಪರ್ಧಿಸಬಹುದು ಎಂದು ಬಿಜೆಪಿ ವಲಯದಲ್ಲಿ ಚರ್ಚೆ ನಡೆಯುತ್ತಿದೆ.ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿರುವ ಕೇಂದ್ರ ಸಚಿವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕೆಂದು ಬಿಜೆಪಿ ಬಯಸಿದೆ. ಅದರಂತೆ ನಿರ್ಮಲಾ, ಜೈಶಂಕರ್ ಅವರಂಥವರಿಗೆ ಸೂಕ್ತ ಸೀಟುಗಳನ್ನು ಹುಡುಕಲಾಗುತ್ತಿದೆ. ನಿರ್ಮಲಾ ಅವರು ಕರ್ನಾಟಕ ಮತ್ತು ಜೈಶಂಕರ್ ಬೆಂಗಳೂರು ದಕ್ಷಿಣದಿಂದ ಪ್ರತಿನಿಧಿಸುವ ಚಿಂತನೆಗಳು ನಡೆಯುತ್ತಿವೆ. ಮೂಲಗಳ ಪ್ರಕಾರ, ಪ್ರಸ್ತುತ ಕೇಸರಿ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರದಿಂದ ನಿರ್ಮಲಾ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ. ಜೊತೆಗೆ ಜೈಶಂಕರ್‌ಗೆ ಹಲವು ಆಯ್ಕೆಗಳಿವೆ. ಹಿಂದುತ್ವದ ಫೈರ್‌ಬ್ರಾಂಡ್ ಅನಂತಕುಮಾರ್ ಹೆಗಡೆ ಪ್ರಸ್ತುತ ಸಂಸದರಾಗಿರುವ ಉತ್ತರ ಕನ್ನಡ ಬಿಜೆಪಿಯ ಮತ್ತೊಂದು ಭದ್ರಕೋಟೆಯಾಗಿದ್ದು, ರಾಜತಾಂತ್ರಿಕ-ರಾಜಕಾರಣಿ ಇಲ್ಲಿ ಸ್ಪರ್ಧಿಸುವ ಸಾಧ್ಯತೆಗಳ ಬಗ್ಗೆ ಪಕ್ಷ ಚಿಂತಿಸುತ್ತಿದೆ. BJP Candidate List: ಲೋಕಸಭೆ ಚುನಾವಣೆಗೆ ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ್ಯಾರು? ಇಲ್ಲಿದೆಸಂಭವನೀಯ ಪಟ್ಟಿ ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಸೆಂಟ್ರಲ್ ಕ್ಷೇತ್ರಗಳು ಜೈಶಂಕರ್‌ಗೆ ಸುರಕ್ಷಿತವಾಗಿರುತ್ತವೆ ಎಂದು ಬಿಜೆಪಿ ಭಾವಿಸಿದೆ. ಹೀಗಾಗಿ ಜೈಶಂಕರ್ ಅವರು ಬೆಂಗಳೂರಿಗೆ ಆಗಾಗ್ಗೆ ಬರುತ್ತಿದ್ದಾರೆ. ಈ ನಗರದೊಂದಿಗೆ ಅವರು ದೀರ್ಘ ವೈಯಕ್ತಿಕ ಒಡನಾಟ ಹೊಂದಿದ್ದಾರೆಂದು ಹೇಳಲಾಗುತ್ತಿದೆ. ಅವರು ಇಲ್ಲಿನ ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ವ್ಯಾಸಂಗ ಮಾಡಿದರು. ಬಿಜೆಪಿಯ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಜೈಶಂಕರ್ ಬೆಂಗಳೂರಿಗೆ ಹಲವು ಬಾರಿ ಭೇಟಿ ನೀಡಿದ್ದರು. ಅವರು ಶಿಕ್ಷಣ ಸಂಸ್ಥೆಗಳು, ಕಬ್ಬನ್ ಪಾರ್ಕ್‌ಗಳಲ್ಲಿ ಕಾರ್ಯಕ್ರಮಗಳನ್ನು ಮಾಡಿದ್ದರು ಮತ್ತು ಪ್ರಸಿದ್ಧ ವಿವಿ ಪುರಂ ಫುಡ್ ಸ್ಟ್ರೀಟ್‌ನಲ್ಲಿಯೂ ತಿನ್ನಲು ಅವರು ಹೋಗಿರುವುದಿದೆ. ಪಿಇಎಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲು ಅವರು ಕಳೆದ ವಾರ ಇಲ್ಲಿಗೆ ಬಂದಿದ್ದರು. ಬೆಂಗಳೂರು ದಕ್ಷಿಣಕ್ಕೆ ಕರ್ನಾಟಕ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಹೆಸರು ಕೇಳಿಬರುತ್ತಿದೆ ಎಂದುಹೇಳಲಾಗುತ್ತಿದೆ. ತೇಜಸ್ವಿನಿ ದಿವಂಗತ ಎಚ್‌ಎನ್ ಅನಂತಕುಮಾರ್ ಅವರು ಪತ್ನಿ, ಅನಂತಕುಮಾರ್ 1996 ರಿಂದ ಸತತ ಆರು ಅವಧಿಗೆ ಬೆಂಗಳೂರು ದಕ್ಷಿಣವನ್ನು ಪ್ರತಿನಿಧಿಸಿದ ಬಿಜೆಪಿ ಧೀಮಂತರು. 2018 ರಲ್ಲಿ ಅವರ ಅಕಾಲಿಕ ಮರಣದ ನಂತರ, ತೇಜಸ್ವಿನಿ ಅವರು 2019 ರ ಲೋಕಸಭಾ ಅಭ್ಯರ್ಥಿಯಾಗಿ ಉತ್ತರಾಧಿಕಾರಿಯಾಗುತ್ತಾರೆ ಎಂದು ವ್ಯಾಪಕವಾಗಿ ನಿರೀಕ್ಷಿಸಲಾಗಿತ್ತು. ಆದರೆ ಬಿಜೆಪಿಯು ರಾಜಕೀಯವಾಗಿ ಹಸಿರು ನಿಶಾನೆ ತೋರಿದ್ದ ಸೂರ್ಯ ಅವರನ್ನು ಕಣಕ್ಕಿಳಿಸುವ ಮೂಲಕ ಅಚ್ಚರಿ ಮೂಡಿಸಿತು.

ಬಾಳೆಹೊನ್ನೂರು :ಅಲ್ ಬದ್ರಿಯಾ ಜುಮಾ ಮಸೀದಿ ಯಲ್ಲಿ ಸಂಭ್ರಮದ ಈದುಲ್ ಅಝಾ ಆಚರಣೆ

Posted by Vidyamaana on 2023-06-30 01:53:34 |

Share: | | | | |


ಬಾಳೆಹೊನ್ನೂರು :ಅಲ್ ಬದ್ರಿಯಾ ಜುಮಾ ಮಸೀದಿ ಯಲ್ಲಿ ಸಂಭ್ರಮದ ಈದುಲ್ ಅಝಾ ಆಚರಣೆ

ಚಿಕ್ಕಮಗಳೂರು: ಬಾಳೆಹೊನ್ನೂರಿನ ಮಸೀದಿಕೆರೆಯ ಅಲ್ ಬದ್ರಿಯಾ ಜುಮಾ ಮಸೀದಿಯಲ್ಲಿ ತ್ಯಾಗ,ಬಲಿದಾನದ ಸಂಕೇತವಾದ ಬಕ್ರೀದ್‌ ಹಬ್ಬ ಆಚರಿಸಲಾಯಿತು.ನಮಾಝ್‌ಗೆ ನೇತೃತ್ವವನ್ನು ನೀಡಿದ ಮಸೀದಿಯ ಖತೀಬರಾದ ಸ್ವಾದಿಕ್ ಸಖಾಫಿ ಕರಿಂಬಿಲ ರವರು ತ್ಯಾಗ,ಬಲಿದಾನ,ಶಾಂತಿ ಸೌಹಾರ್ದತೆಯ ಬಗ್ಗೆ ಭಾಷಣ ಮಾಡಿದರು.ನಮಾಝ್‌ನ ನಂತರ SSF ಮಸೀದಿಕೆರೆ ಯುನಿಟ್ ಇದರ ವತಿಯಿಂದ ಸೆ 10 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ವಿದ್ಯಾರ್ಥಿ ಸಮಾವೇಶ ಹಾಗೂ ನವೆಂಬರ್ ತಿಂಗಳಿನಲ್ಲಿ ಮುಂಬೈ‌ನ ಏಕತಾ ಉದ್ಯಾನದಲ್ಲಿ ನಡೆಯಲಿರುವ SSF ನ ಐವತ್ತನೇ ಸಂಭ್ರಮಾಚರಣೆಯ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಪ್ರಚಾರಾರ್ಥವಾಗಿ ಗೋಲ್ಡನ್‌ ಕಿ ಮುಹಬ್ಬತ್ ಎಂಬ ಹೆಸರಿನೊಂದಿಗೆ ಸರ್ವ ಧರ್ಮೀಯರಿಗೂ ಸಿಹಿ ವಿತರಿಸಿದರು.ಈ ವೇಳೆ SYS ಮಸೀದಿಕೆರೆ ಯುನಿಟ್‌ನ ಅಧ್ಯಕ್ಷರಾದ ಇಬ್ರಾಹಿಂ,ಕಾರ್ಯದರ್ಶಿ ಉಮರ್,SSF ಚಿಕ್ಕಮಗಳೂರು ಜಿಲ್ಲಾ ದ‌ಅವಾ ಕಾರ್ಯದರ್ಶಿ ಜಾಶಿರ್‌ ಹಿಮಮಿ ಸಖಾಫಿ,SSF ಬಾಳೆಹೊನ್ನೂರು ಡಿವಿಷನ್ ಪ್ರಧಾನ ಕಾರ್ಯದರ್ಶಿ ರಮೀಝ್ ಅಕ್ಷರನಗರ, ಮಸೀದಿಕೆರೆ ಯುನಿಟ್‌ನ ಕಾರ್ಯದರ್ಶಿಯಾದ ಖಲಂದರ್ ಮಸೀದಿಕೆರೆ ಹಾಗೂ ಕಾರ್ಯಕರ್ತರು ಹಾಜರಿದ್ದರು.

ಕ್ರಿಕೆಟರ್ ಕಾರಿಯಪ್ಪ ಪ್ರೇಮ ಪುರಾಣದಲ್ಲಿ ಬಿಗ್ ಟ್ವಿಸ್ಟ್: ಸ್ಪಿನ್ನರ್ ಗೆ ಎದುರಾಗುವ ಹೊಸ ಸಂಕಷ್ಟ ಯಾವುದು?

Posted by Vidyamaana on 2023-12-26 12:34:18 |

Share: | | | | |


ಕ್ರಿಕೆಟರ್ ಕಾರಿಯಪ್ಪ ಪ್ರೇಮ ಪುರಾಣದಲ್ಲಿ ಬಿಗ್ ಟ್ವಿಸ್ಟ್: ಸ್ಪಿನ್ನರ್ ಗೆ ಎದುರಾಗುವ ಹೊಸ ಸಂಕಷ್ಟ ಯಾವುದು?

ಬೆಂಗಳೂರು : ಕೆಲ ಸೆಲೆಬ್ರೆಟಿಗಳು ಬದುಕಲ್ಲಿ ಲವ್ , ಸೆಕ್ಸ್, ದೋಖಾ ಅನ್ನೊದು ಕಾಮನ್ ಏನೂ ಅನ್ನೋಷ್ಟರ ಮಟ್ಟಿಗೆ ಆಗಿಬಿಟ್ಟಿದೆ. ಹೌದು. ಇದೀಗ ಕರ್ನಾಟಕದ ಕ್ರಿಕೆಟಿಗರೊಬ್ಬರ ಮೇಲೆ ಇಂತಹದೇ ಆರೋಪ ಕೇಳಿ ಬಂದಿದೆ.. ಸದ್ಯ ಕ್ರಿಕೆಟರ್ ನ ಪ್ರೇಮ ಪುರಾಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಮಾಜಿ ಸೈನಿಕರೊಬ್ಬರ ಪುತ್ರಿ ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಆ ಕುರಿತ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ….


ಕೊಡಗು ಮೂಲದ ಕ್ರಿಕೆಟಿಗ ಕೆ.ಸಿ.‌ಕಾರಿಯಪ್ಪ ವಿರುದ್ದ ಗಂಭೀರ ಆರೋಪ ಕೇಳಿ‌ ಬಂದಿದೆ.‌ಇನ್ಸ್ಟಾ ಗ್ರಾಮ್ ನಲ್ಲಿ ಪರಿಚಯವಾಗಿದ್ದ ಯುವತಿಯನ್ನ ಮದ್ವೆಯಾಗೋದಾಗಿ ನಂಬಿಸಿ ವಂಚಿಸಿದ್ದಾರಂತೆ. ಇನ್ನು ಕಾರಿಯಪ್ಪನಿಂದ ವಂಚನೆಗೊಳಗಾದ ಯುವತಿಯೂ ಕೊಡಗು ಮೂಲದವರಾಗಿದ್ದು, ಎರಡು ವರ್ಷಗಳ‌ ಹಿಂದೆ ಇಬ್ಬರಿಗೂ ಇನ್ಸ್ಟಾ ದಲ್ಲಿ‌ ಪರಿಚಯವಾಗಿತ್ತಂತೆ. ನಂತರ ಪರಿಚಯ ಪ್ರೇಮಕ್ಕೆ ತಿರುಗಿದ್ದು, ದೈಹಿಕ‌ ಸಂಪರ್ಕವೂ ಬೆಳೆಸಿ ಕೊನೆಗೆ ಸದ್ಯಕ್ಕೆ ಮಗು ಬೇಡ ಅಂತ ಅಬಾರ್ಷನ್ ಮಾಡಿಸಲು ಕಾರಿಯಪ್ಪನೇ ಬಲವಂತವಾಗಿ ಯುವತಿಗೆ ಮಾತ್ರೆ ನುಂಗಿಸಿದ್ದ ಎಂದು ಆರೋಪಿಸಲಾಗಿದೆ..


ಅದಾದ ಬಳಿಕ ಕಾರಿಯಪ್ಪ ಯುವತಿಯನ್ನ ಅವೈಡ್ ಮಾಡೋದಕ್ಕೆ ಶುರು ಮಾಡಿದ್ದಾನಂತೆ. ಅದೇ ವೇಳೆ ಕಾರಿಯಪ್ಪನ ಮತ್ತೊಬ್ಬ ಗರ್ಲ್ ಫ್ರೆಂಡ್ ಈ ಯುವತಿಗೆ ಕರೆ ಮಾಡಿ ವಿಚಾರಿಸಿದ್ದಾಳೆ‌.ಈ ವೇಳೆ ನನಗೆ ಮೋಸ ಮಾಡ್ತಿದ್ದೀಯ ನನ್ನನ್ನ ಮದ್ವೆಯಾಗು ಅಂತ ಒತ್ತಾಯಿಸಿದ್ದು, ಅದಕ್ಕೆ ಕಾರಿಯಪ್ಪ ವಿರೋಧ ವ್ಯಕ್ತಪಡಿಸಿದನಂತೆ. ಈ ಸಂಬಂಧ ನೊಂದ ಯುವತಿ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.


ಬಳಿಕ ಡ್ರಾಮ‌ ಶುರು ಮಾಡಿದ ಕಾರಿಯಪ್ಪ ಐಪಿಎಲ್ ಮುಗಿದ ಬಳಿಕ ಮದುವೆ ಆಗೋದಾಗಿ ನಂಬಿಸಿ ಕೇಸ್ ವಾಪಸ್ಸು ತೆಗೆಸಿಕೊಳ್ಳುವಂತೆ ಮಾಡಿದ್ದಾನಂತೆ.‌ನಂತರ ಮನೆಗೆ ಬಂದು ಮದ್ವೆಯಾಗೋದಾಗಿ ಮಾತುಕತೆ ಮಾಡಿ, ಟೂರ್ನಮೆಂಟ್ ಅದು ಇದು ಅಂತ ಅವೈಡ್ ಮಾಡಿದ್ದಾನಂತೆ. ಹೀಗಾಗಿ ಇದೀಗ ನನಗೆ ಮೋಸ ಮಾಡಿದ್ದಾನೆಂದು ಆರ್.ಟಿ. ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದಾಳೆ. ಅತ್ತ ಕಾರಿಯಪ್ಪ ಸಹ ಯುವತಿ ವಿರುದ್ದ ಕೌಂಟರ್ ಕಂಪ್ಲೈಂಟ್ ದಾಖಲಿಸಿದ್ದು, ಯುವತಿ ನಡೆತೆ ಸರಿ ಇಲ್ಲ. ನನ್ನ ಮನೆ ಬಳಿ‌ಬಂದು ಗಲಾಟೆ ಮಾಡಿ, ಪೋಷಕರಿಗೆ ಬೆದರಿಕೆ ಹಾಕ್ತಾಳೆ ಅಂತ ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಸದ್ಯ ಇಬ್ಬರು ಒಬ್ಬರಿಗೋಬ್ಬರು ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತಿದ್ದು, ಇಬ್ಬರ ಜಗಳ ಪೊಲೀಸ್ ಠಾಣೆ ಮೆಟ್ಟಿಲೆರಿದ್ದು, ಮುಂದೆ ಇಬ್ಬರ ಪ್ರೇಮ ಪುರಾಣ ಎಲ್ಲಿಗೆ ಹೋಗಿ ನಿಲ್ಲುತ್ತೆ ಕಾದು ನೋಡಬೇಕು. ಕೆಲ ಸೆಲೆಬ್ರೆಟಿಗಳು ಬದುಕಲ್ಲಿ ಲವ್ , ಸೆಕ್ಸ್, ದೋಖಾ ಅನ್ನೊದು ಕಾಮನ್ ಏನೂ ಅನ್ನೋಷ್ಟರ ಮಟ್ಟಿಗೆ ಆಗಿಬಿಟ್ಟಿದೆ. ಹೌದು. ಇದೀಗ ಕರ್ನಾಟಕದ ಕ್ರಿಕೆಟಿಗರೊಬ್ಬರ ಮೇಲೆ ಇಂತಹದೇ ಆರೋಪ ಕೇಳಿ ಬಂದಿದೆ.. ಸದ್ಯ ಕ್ರಿಕೆಟರ್ ನ ಪ್ರೇಮ ಪುರಾಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಮಾಜಿ ಸೈನಿಕರೊಬ್ಬರ ಪುತ್ರಿ ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆ ಕುರಿತ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ…


ಸದ್ಯ ಇಬ್ಬರು ಒಬ್ಬರಿಗೋಬ್ಬರು ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತಿದ್ದು, ಇಬ್ಬರ ಜಗಳ ಪೊಲೀಸ್ ಠಾಣೆ ಮೆಟ್ಟಿಲೆರಿದ್ದು, ಮುಂದೆ ಇಬ್ಬರ ಪ್ರೇಮ ಪುರಾಣ ಎಲ್ಲಿಗೆ ಹೋಗಿ ನಿಲ್ಲುತ್ತೆ ಕಾದು ನೋಡಬೇಕು.

ಸಂಟ್ಯಾರ್: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ನಿಡ್ಪಳ್ಳಿ ಗ್ರಾ.ಪಂ. ಸದಸ್ಯ ಮುರಳಿ ಭಟ್ ಮೃತ್ಯು

Posted by Vidyamaana on 2023-02-14 23:07:36 |

Share: | | | | |


ಸಂಟ್ಯಾರ್: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ನಿಡ್ಪಳ್ಳಿ ಗ್ರಾ.ಪಂ. ಸದಸ್ಯ ಮುರಳಿ ಭಟ್ ಮೃತ್ಯು

ಪುತ್ತೂರು:ಫೋರ್ಡ್ ಕಾರೊಂದು ವಿದ್ಯುತ್‌ ಕಂಬಗಳಿಗೆ ಡಿಕ್ಕಿಯಾಗಿ ತೋಟಕ್ಕೆ ಬಿದ್ದ ಅವಘಡದಲ್ಲಿ ಕಾರಲ್ಲಿದ್ದ ನಿಡ್ನಳ್ಳಿ ಗ್ರಾಮ ಪಂಚಾಯತ್‌ ಸದಸ್ಯರೋರ್ವರು ಮೃತಪಟ್ಟು ಇತರ ಮೂವರು ಗಾಯಗೊಂಡಿರುವ ಘಟನೆ ಫೆ.14ರಂದು ರಾತ್ರಿ ನಡೆದಿದೆ.

      ನಿವೃತ್ತ ಮುಖ್ಯಶಿಕ್ಷಕ ನಿಡ್ಡಳ್ಳಿ ಗ್ರಾಮದ ಮುಂಡೂರು ದಿ.ಶ್ರೀಧರ್ ಭಟ್ ಅವರ ಮಗ, ನಿಡ್ನಳ್ಳಿ ಗ್ರಾಮ ಪಂಚಾಯತ್‌ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದ ಮುರಳೀಕೃಷ್ಣ ಭಟ್ (38ವ.) ಮೃತಪಟ್ಟವರು.ಕಾರು ಚಾಲಕ ಇರ್ದೆ ಗ್ರಾಮದ ದೂಮಡ್ಕ ಘಾಟೆ ಜಯರಾಮ ಭಟ್‌ರವರ ಪುತ್ರ ನವನೀತ್, ಕಾರಲ್ಲಿದ್ದ ಬೆಟ್ಟಂಪಾಡಿ ಗ್ರಾಮದ ಗುಂಡ್ಯಡ್ಕ ಗೋಪಾಲಕೃಷ್ಣರವರ ಮಗ ದಿಲೀಪ್‌ ಮತ್ತು ಇರ್ದೆ ಕಟೀಲಡ್ಕ ನಿವಾಸಿ, ಗುತ್ತಿಗೆದಾರ ಅಪ್ಪಣ್ಣ ನಾಯ್ ರವರ ಪುತ್ರ ಶಶಿ ಗಾಯಗೊಂಡಿದ್ದಾರೆ.ಈಪೈಕಿ ನವನೀತ್‌ ಮತ್ತು ದಿಲೀಪ್‌ ಅದರ್ಶ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪುತ್ತೂರುನಿಂದ ಬೆಟ್ಟಂಪಾಡಿ ಕಡೆಗೆ ಹೋಗುತ್ತಿದ್ದಫೋರ್ಡ್‌ ಫಿಗೋ ಕಾರು (KA 21P5049) ಪುತ್ತೂರು ಪಾಣಾಜೆ ರಸ್ತೆಯಲ್ಲಿ ಸಂಟ್ಯಾ‌ರ್ ಸಮೀಪದ ಬಳಕ್ಕ ಎಂಬಲ್ಲಿ ರಸ್ತೆ ಬದಿಯ ಎರಡು ವಿದ್ಯುತ್‌ ಕಂಬಗಳಿಗೆ ಡಿಕ್ಕಿ ಯಾಗಿ ರಸ್ತೆ ಬದಿಯಲ್ಲಿರುವ ನಿವೃತ್ತ ಎಸ್.ಐ.ದೇವೋಜಿ ರಾವ್ ಅವರ ತೋಟಕ್ಕೆ ಬಿದ್ದಿದೆ. ಕಾರಲ್ಲಿದ್ದ ನಾಲ್ವರೂ ಪುತ್ತೂರು ಹೋಗಿದ್ದವರು ರಾತ್ರಿ ಹಿಂತಿರುಗಿ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.ಚಾಲಕ ನವನೀತ್‌ ಜೊತೆಗೆ ಮುರಳೀಕೃಷ್ಣ ಭಟ್ ಅವರು ಎದುರು ಸೀಟಿನಲ್ಲಿ ಕುಳಿತುಕೊಂಡಿದ್ದರೆ, ಇತರ ಇಬ್ಬರು ಹಿಂಬದಿ ಸೀಟಿನಲ್ಲಿ ಕುಳಿತುಕೊಂಡಿದ್ದರು. ಅವಿವಾಹಿತರಾಗಿದ್ದ ಮೃತ ಮುರಳಿ ಭಟ್ ಅವರು ಪಾಣಾಜೆ ಪ್ರಾಥಮಿಕ ಕೃಷಿ ನ ಸಹಕಾರಿ ಸಂಘದ ಸಿಬ್ಬಂದಿಯಾಗಿರುವ ಸಹೋದರ ಕೃಷ್ಣಕುಮಾರ್ ಹಾಗೂ ಮೂವರು - ಸಹೋದರಿಯರನ್ನು ಅಗಲಿದ್ದಾರೆ.ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬುಡಿಯಾರು ರಾಧಾಕೃಷ್ಣ ರೈ, ಗ್ರಾಮಾಂತರ ಮ೦ಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಾಜಿ ತಾ.ಪಂ.ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ್ ರಾವ್ ಹಿಂದು ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ ಸಹಿತ ಹಲವು ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ.  ಸಂಪ್ಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.



Leave a Comment: