ಸೊಳ್ಳೆ ಕಚ್ಚಿದ ಎಷ್ಟು ದಿನದ ನಂತ್ರ ಡೆಂಗ್ಯೂ ಬರುತ್ತೆ.? ತಡೆಯುವುದು ಹೇಗೆ.? ಇಲ್ಲಿದೆ ಮಾಹಿತಿ

ಸುದ್ದಿಗಳು News

Posted by vidyamaana on 2024-07-01 19:31:51 |

Share: | | | | |


ಸೊಳ್ಳೆ ಕಚ್ಚಿದ ಎಷ್ಟು ದಿನದ ನಂತ್ರ ಡೆಂಗ್ಯೂ ಬರುತ್ತೆ.? ತಡೆಯುವುದು ಹೇಗೆ.? ಇಲ್ಲಿದೆ ಮಾಹಿತಿ

ಮಳೆಗಾಲ ಆರಂಭವಾಗಿದ್ದು, ಈ ಋತುವಿನಲ್ಲಿ ಆರೋಗ್ಯದ ಕಡೆ ಗಮನಹರಿಸುವುದು ಅಗತ್ಯವಾಗಿದೆ. ಋತುಮಾನದ ಕಾಯಿಲೆಗಳ ಜೊತೆಗೆ ಡೆಂಗ್ಯೂ ಅಪಾಯವಿದೆ. ಡೆಂಗ್ಯೂ ವಾಸ್ತವವಾಗಿ ಹೆಣ್ಣು ಈಜಿಪ್ಟಿ (ಈಡಿಸ್ ಸೊಳ್ಳೆ) ಸೊಳ್ಳೆಗಳಿಂದ ಹರಡುತ್ತದೆ.

ಈ ಸೊಳ್ಳೆಗಳ ಜೀವಿತಾವಧಿ ಕೇವಲ ಒಂದು ತಿಂಗಳು ಮಾತ್ರ. ಆದ್ರೆ, ಈ ಅವಧಿಯಲ್ಲಿ ಅವು 500 ರಿಂದ 1000 ಸೊಳ್ಳೆಗಳಿಗೆ ಜನ್ಮ ನೀಡುತ್ತವೆ. ಈ ಸೊಳ್ಳೆಗಳು ಕೇವಲ ಮೂರು ಅಡಿ ಮಾತ್ರ ಹಾರಬಲ್ಲವು. ಈ ಕಾರಣಕ್ಕಾಗಿ ಅವು ಕೇವಲ ಮನುಷ್ಯನ ಕೆಳಗಿನ ಅಂಗಗಳನ್ನ ಗುರಿಯಾಗಿಸುತ್ತಾರೆ. ಈ ಸೊಳ್ಳೆಗಳು ಕಚ್ಚಿದರೆ ತೀವ್ರ ಜ್ವರದ ಜೊತೆಗೆ ಅನೇಕ ಸಮಸ್ಯೆಗಳು ಎದುರಾಗುತ್ತವೆ.

ಡೆಂಗ್ಯೂ ಸೊಳ್ಳೆಗಳು ಕೂಲರ್‌, ಹೂವಿನ ಕುಂಡಗಳು, ಹಳೆಯ ಪಾತ್ರೆಗಳು ಅಥವಾ ಮನೆಯ ಛಾವಣಿಗಳು, ಟೈರ್‌ಗಳು, ಗುಂಡಿಗಳು ಇತ್ಯಾದಿಗಳಲ್ಲಿ ತಮ್ಮ ಮೊಟ್ಟೆಗಳನ್ನ ಇಡುತ್ತವೆ. ಡೆಂಗ್ಯೂ ಸೊಳ್ಳೆಗಳು ಒಮ್ಮೆಗೆ 100 ರಿಂದ 300 ಮೊಟ್ಟೆಗಳನ್ನ ಇಡುತ್ತವೆ. 4 ದಿನಗಳ ನಂತರ ಅವು ಸೊಳ್ಳೆಗಳಾಗಿ ರೂಪಾಂತರಗೊಳ್ಳುತ್ತವೆ. ಸೊಳ್ಳೆಗಳು ಹುಟ್ಟಿದ 2 ದಿನಗಳಲ್ಲಿ ಹಾರಲು ಪ್ರಾರಂಭಿಸುತ್ತವೆ.

ಡೆಂಗ್ಯೂ ಸೊಳ್ಳೆ ಕಚ್ಚಿದ ತಕ್ಷಣ ಡೆಂಗ್ಯೂ ಲಕ್ಷಣಗಳು ಕಾಣಿಸುವುದಿಲ್ಲ. ಆದ್ರೆ, ಕೆಲವು ದಿನಗಳ ನಂತರ ಅದರ ಪರಿಣಾಮಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ಈಡಿಸ್ ಸೊಳ್ಳೆಗಳು ಕಚ್ಚಿದ 3 ರಿಂದ 5 ದಿನಗಳ ನಂತರ ಡೆಂಗ್ಯೂ ಜ್ವರ ಬರುತ್ತದೆ. ಈ ಸೊಳ್ಳೆಗಳು ಬೆಳಗ್ಗೆ ಮತ್ತು ಸಂಜೆಯ ವೇಳೆಯಲ್ಲಿ ಮಾತ್ರ ಸಂಚರಿಸುತ್ತಿದ್ದು, ಡೆಂಗ್ಯೂ ಸೊಳ್ಳೆಗಳು ಮನೆಗಳ ಮೂಲೆಗಳಲ್ಲಿ ಪರದೆಯ ಹಿಂದೆ, ಸೊಳ್ಳೆಗಳು ಇರುವ ಸ್ಥಳಗಳಲ್ಲಿ ಅಡಗಿಕೊಳ್ಳುತ್ತವೆ.

ಡೆಂಗ್ಯೂ ಜ್ವರದ ಲಕ್ಷಣಗಳು.!

ಡೆಂಗ್ಯೂ ಈಡಿಸ್ ಸೊಳ್ಳೆಯ ಕಚ್ಚುವಿಕೆಯಿಂದ ಉಂಟಾಗುವ ಗಂಭೀರ ಕಾಯಿಲೆಯಾಗಿದ್ದು, ಇದರ ಲಕ್ಷಣಗಳು ಸಾಮಾನ್ಯವಾಗಿ ಜ್ವರದಂತಿರುತ್ತವೆ. ಆದ್ರೆ, ಇದು ತೀವ್ರವಾದ ಹೆಮರಾಜಿಕ್ ಜ್ವರಕ್ಕೆ ಕಾರಣವಾಗಬಹುದು. ಸಕಾಲದಲ್ಲಿ ಚಿಕಿತ್ಸೆ ನೀಡದಿದ್ದರೆ ಜೀವಕ್ಕೆ ಅಪಾಯವಿದೆ ಎನ್ನುತ್ತಾರೆ ವೈದ್ಯರು.

ಲಕ್ಷಣಗಳೇನು.?

ತೀವ್ರವಾದ ಜ್ವರ, ತಲೆನೋವು, ಸ್ನಾಯು ನೋವು, ಚರ್ಮದ ಮೇಲೆ ಕೆಂಪು ಗುಳ್ಳೆಗಳು, ಕಣ್ಣುಗಳ ಕೆಳಗೆ ನೋವು, ಮೊಣಕಾಲು ನೋವು, ಊತ, ಹಲ್ಲು, ಮೂಗು, ಒಸಡುಗಳಿಂದ ರಕ್ತಸ್ರಾವ ಇತ್ಯಾದಿಗಳನ್ನ ಗಮನಿಸಿದರೆ ತಕ್ಷಣವೇ ಎಚ್ಚರಗೊಳ್ಳಿ.

ಡೆಂಗ್ಯೂ ತಡೆಗಟ್ಟುವುದು ಹೇಗೆ.?

* ವಿಶೇಷವಾಗಿ ಮಳೆಗಾಲದಲ್ಲಿ ದೇಹವನ್ನ ಸಂಪೂರ್ಣವಾಗಿ ಮುಚ್ಚುವ ಬಟ್ಟೆಗಳನ್ನ ಧರಿಸಿ.

* ಮಲಗುವಾಗ ಸೊಳ್ಳೆ ಪರದೆಗಳನ್ನ ಬಳಸಿ.

* ಸೊಳ್ಳೆ ಕಡಿತವನ್ನು ತಡೆಯಲು ದೇಹಕ್ಕೆ ಎಣ್ಣೆ ಅಥವಾ ಕ್ರೀಮ್ ಹಚ್ಚಿ.

* ನಿಮ್ಮ ಮನೆ ಮತ್ತು ಸುತ್ತಮುತ್ತ ಕೊಳಕು ನೀರು ಬರುವುದನ್ನ ತಪ್ಪಿಸಿ.

* ಅನಗತ್ಯ ವಸ್ತುಗಳು ಹಾಗೂ ಕೂಲರ್ ಕಾಲಕಾಲಕ್ಕೆ ಸ್ವಚ್ಛಗೊಳಿಸುತ್ತಿರಬೇಕು.

* ಡೆಂಗ್ಯೂ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ.

 Share: | | | | |


ಸಿದ್ದರಾಮಯ್ಯನವರೇ.. ನಿಮ್ಮ ಕುರ್ಚಿಯನ್ನು ಭದ್ರವಾಗಿಸಿಕೊಳ್ಳಿ, ನಮ್ಮನ್ನು ಗಮನಿಸುವ ಭರದಲ್ಲಿ ನಿಮ್ಮ ಕಾಳಜಿ ಮರೀಬೇಡಿ: ಯತ್ನಾಳ್

Posted by Vidyamaana on 2023-12-12 12:37:53 |

Share: | | | | |


ಸಿದ್ದರಾಮಯ್ಯನವರೇ.. ನಿಮ್ಮ ಕುರ್ಚಿಯನ್ನು ಭದ್ರವಾಗಿಸಿಕೊಳ್ಳಿ, ನಮ್ಮನ್ನು ಗಮನಿಸುವ ಭರದಲ್ಲಿ ನಿಮ್ಮ ಕಾಳಜಿ ಮರೀಬೇಡಿ: ಯತ್ನಾಳ್

ಬೆಳಗಾವಿ: ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಯತ್ನಾಳ್ ವಿರುದ್ಧ ಸಿಎಂ ಟ್ವೀಟ್ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಯತ್ನಾಳ್, ಸಿಎಂ ಸಿದ್ದರಾಮಯ್ಯನವರೇ ನಿಮ್ಮ ಕುರ್ಚಿಯನ್ನು ಭದ್ರವಾಗಿಸಿಕೊಳ್ಳಿ. ನಮ್ಮನ್ನು ಗಮನಿಸುವ ಭರದಲ್ಲಿ ನಿಮ್ಮ ಕಾಳಜಿಯನ್ನು ಮಾಡದೇ ಇರಬೇಡಿ ಎಂದು ಎಚ್ಚರಿಸಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯನವರೇ.. ನಿಮ್ಮ ಕುರ್ಚಿಯನ್ನು ಭದ್ರವಾಗಿಸಿಕೊಳ್ಳಿ. ನಮ್ಮನ್ನು ಗಮನಿಸುವ ಭರದಲ್ಲಿ ನಿಮ್ಮ ಕಾಳಜಿಯನ್ನು ಮಾಡದೇ ಇರಬೇಡಿ. ಬಿ.ಕೆ.ಹರಿಪ್ರಸಾದ್ ಅವರು ಮಾಧ್ಯಮದಲ್ಲಿ ಯಾರೋ ಹೊರಗಿನಿಂದ ಬಂದವರು ಅಂತಾ ಬೈಯ್ಯುತ್ತಿದ್ದರು. ಮೂಲ ಕಾಂಗ್ರೆಸ್ಸಿಗರು ನಿಮ್ಮನ್ನು ಹೊರಗೆ ಹಾಕಲು ಸಂಚು ರೂಪಿಸುತ್ತಿರುವಂತಿದೆ. ನಿಮ್ಮ ಕುರ್ಚಿಯನ್ನು ಭದ್ರವಾಗಿಸಿಕೊಳ್ಳಿ ಎಂದು ಟ್ವೀಟ್ ಮೂಲಕ ಯತ್ನಾಳ್ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರು: ಮಂಗಳಾದೇವಿ ದಸರಾದಲ್ಲಿ ಹಿಂದೂಗಳ ಅಂಗಡಿಗಳಿಗೆ ಕೇಸರಿ ಧ್ವಜ ಕಟ್ಟಿ ವ್ಯಾಪಾರ ಮಾಡಲು ಕರೆ

Posted by Vidyamaana on 2023-10-17 07:27:31 |

Share: | | | | |


ಮಂಗಳೂರು: ಮಂಗಳಾದೇವಿ ದಸರಾದಲ್ಲಿ ಹಿಂದೂಗಳ ಅಂಗಡಿಗಳಿಗೆ ಕೇಸರಿ ಧ್ವಜ ಕಟ್ಟಿ ವ್ಯಾಪಾರ ಮಾಡಲು ಕರೆ

ಮಂಗಳೂರು: ಮಂಗಳಾದೇವಿ ದಸರಾದಲ್ಲಿ ಹಿಂದೂಗಳ ಅಂಗಡಿಗಳಿಗೆ ಕೇಸರಿ ಧ್ವಜ ಕಟ್ಟಿ ವ್ಯಾಪಾರ ಮಾಡಲು ಹಿಂದೂ ಸಂಘಟನೆಗಳು ಕರೆ ನೀಡಿವೆ. ಹಿಂದೂ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ದ.ಕ.ಜಿಲ್ಲಾಡಳಿತ ನಗರದ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಉತ್ಸವದ ಸಂತೆ ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೂ ಅವಕಾಶ ನೀಡಿದೆ.ಇದಕ್ಕೆ ತಕ್ಕ ಉತ್ತರ ನೀಡಲು ಹಿಂದೂ ಸಂಘಟನೆಗಳು ಈ ರೀತಿ ನಿರ್ಧಾರ ಕೈಗೊಂಡಿವೆ ಎನ್ನಲಾಗಿದೆ.


ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಎಚ್ ಪಿ ದಕ್ಷಿಣ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್ ದೇವಸ್ಥಾನದ ಆಸುಪಾಸಿನಲ್ಲಿ ಹಿಂದೂಗಳಿಗೆ ಅವಕಾಶ ನೀಡಬೇಕು.ಹಿಂದೂ ದೇವರನ್ನು ನಂಬದ ಮೂರ್ತಿ ಪೂಜೆ ವಿರೋಧಿಗಳಿಗೆ ನಮ್ಮ ಉತ್ಸವದಲ್ಲಿ ಯಾಕೆ ಅವಕಾಶ ಕೊಡಬೇಕು, ಜಿಲ್ಲಾಡಳಿತದ ಈ ನೀತಿ ಹಿಂದೂ ವಿರೋಧಿಯಾಗಿದೆ ಎಂದಿದ್ದಾರೆ.

ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಆರೋಪದ ಪ್ರಕರಣ : ಆರೋಪಿ ಖುಲಾಸೆ

Posted by Vidyamaana on 2023-09-24 09:31:09 |

Share: | | | | |


ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ   ಆರೋಪದ ಪ್ರಕರಣ : ಆರೋಪಿ ಖುಲಾಸೆ

ಪುತ್ತೂರು : ಆರು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ  ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪವನ್ನು ಎದುರಿಸುತ್ತಿದ್ದ  ಸುಳ್ಯ ತಾಲೂಕು ಬಾಳುಗೋಡು  ಗ್ರಾಮದ ಕೋತ್ನಡ್ಕ ನಿವಾಸಿ ಕಿಶೋರ್. ಕೆ.ರವರನ್ನು ಪುತ್ತೂರಿನ ಐದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶರಾದ   ಕಾಂತರಾಜು ಎಸ್ ವಿ ರವರು ನಿರಪರಾಧಿ ಎಂದು ಬಿಡುಗಡೆ ಗೊಳಿಸಲು ಆದೇಶಿಸಿರುತ್ತಾರೆ.


  02/08/2017 ರಂದು ಸುಳ್ಯ ತಾಲೂಕು ಸಂಪಾಜೆ ಗ್ರಾಮದ ದಂಡಕಜೆ ಎಂಬಲ್ಲಿ

 ಸಿಲ್ವೆಸ್ಟರ್ ಡಿಸೋಜರವರ ಹಳೆಯ ಮನೆಯಲ್ಲಿ, ರಾತ್ರಿ ವೇಳೆಯಲ್ಲಿ ಆರೋಪಿಯನ್ನಲಾಗಿದ್ದ ಕಿಶೋರ್. ಕೆ ರವರು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು  ನೊಂದ ಬಾಲಕಿ ಸುಳ್ಯ  ಪೊಲೀಸ್ ಠಾಣೆಗೆ ವಿಳಂಬವಾಗಿ  ದೂರನ್ನು ನೀಡಿದ್ದರು. ಈ ದೂರಿನಂತೆ ಪೊಲೀಸರು ಭಾರತೀಯ ದಂಡ ಸಂಹಿತೆಯ ಕಲಂ 376 ಮತ್ತು ಪೋಕ್ಸೋ  ಕಾಯ್ದೆಯ ಕಲಂ.5 ಮತ್ತು 6 ರ ಅನ್ವಯದಂತೆ ಪ್ರಕರಣ ದಾಖಲಿಸಿದ್ದರು. ತದನಂತರ ತನಿಖೆ ಮುಂದುವರಿಸಿ ಆರೋಪಿ ಎನ್ನಲಾಗಿದ್ದ ಕಿಶೋರ್. ಕೆ.ರವರನ್ನು ದಸ್ತಗಿರಿ ಮಾಡಿ ತನಿಖೆ ನಡೆಸಿದ್ದರು. ನಂತರ ಪೊಲೀಸರು ಆರೋಪಿಯ ವಿರುದ್ಧ ದೋಷರೋಪಣ ಪಟ್ಟಿಯನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ವೇಳೆ ಮಾನ್ಯ ಉಚ್ಚ ನ್ಯಾಯಾಲಯದ  ಆದೇಶದಂತೆ, ಮಂಗಳೂರಿನ ಎರಡನೇ  ಜಿಲ್ಲಾ  ನ್ಯಾಯಾಲಯದಲ್ಲಿದ್ದ ಪ್ರಕರಣವು  ಈ ಪುತ್ತೂರಿನ ಐದನೇ ಹೆಚ್ಚುವರಿ  ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ವರ್ಗಾವಣೆಯಾಗಿರುತ್ತದೆ.

 ಹೀಗಿರುವಲ್ಲಿ,ನ್ಯಾಯಾಲಯವು ಈ ಪ್ರಕರಣವನ್ನು ತನಿಖೆಗೆ   ಕೈಗೆತ್ತಿಕೊಂಡು ಪ್ರಾಸಿಕೂಷನ್ ತನ್ನ ಪರವಾಗಿ ಸುಮಾರು 26 ಸಾಕ್ಷಿಗಳ ಪೈಕಿ  12 ಸಾಕ್ಷಿಗಳನ್ನು ತನಿಖೆ ನಡೆಸಿತ್ತು. ತನಿಖೆ ನಂತರ ಮಾನ್ಯ ನ್ಯಾಯಾಲಯ ಪಕ್ಷಗಾರರ ವಾದ ವಿವಾದವನ್ನು ಆಲಿಸಿತ್ತು. ಈ ಹಂತದಲ್ಲಿ ಆರೋಪಿ ಪರ ವಕೀಲರಾದ  ಮಹೇಶ್ ಕಜೆಯವರು ದೂರು  ಸಲ್ಲಿಸುವಿಕೆಯಲ್ಲಿನ ವಿಳಂಬ,ಆಕೆಯ ವಯಸ್ಸನ್ನು ಸಂಶಯಾ ತೀತವಾಗಿ ಸಾಬೀತುಪಡಿಸುವಲ್ಲಿ ವಿಫಲತೆ ,ಆರೋಪಿ ಘಟನೆ ನಡೆದಿದೆ ಎನ್ನಲಾದ ಸ್ಥಳಕ್ಕೆ  ಹೋಗಬಹುದಾದ ಸಾಧ್ಯತೆ, ಸಂತ್ರಸ್ಥೆ ಘಟನೆ ನಡೆದಿದೆ ಎನ್ನಲಾದ ಎರಡು ದಿನದ ಮೊದಲು ನಾಪತ್ತೆಯಾಗಿದ್ದು, ಆ ಎರಡು ದಿವಸ ಆಕೆ ಎಲ್ಲಿದ್ದಳು, ಯಾರ ಜೊತೆ ಇದ್ದಳು ಇತ್ಯಾದಿ ವಿಚಾರಗಳ ಕುರಿತು ತನಿಖೆ ನಡೆಸಿದೆ ಇರುವುದು,ಆರೋಪಿತ  ಘಟನೆ ನಡೆದಿದೆ ಎನ್ನಲಾದ ಸಮಯದಲ್ಲಿ ಆರೋಪಿಯು ಘಟನಾ  ಸ್ಥಳದಲ್ಲಿದ್ದ ಬಗ್ಗೆ

 ದಾಖಲೆಗಳಿಲ್ಲದಿರುವುದು ,  ಸೂಕ್ತ ವೈಜ್ಞಾನಿಕ ಸಾಕ್ಷ್ಯಧಾರ ಮತ್ತು ದಾಖಲೆಗಳ ಕೊರತೆ, ಸಾಕ್ಷಿದಾರರ ವ್ಯತಿರಿಕ್ತ ಹೇಳಿಕೆಗಳು ,ಇತ್ಯಾದಿಗಳ ಹಿನ್ನೆಲೆಯಲ್ಲಿ  ಆರೋಪಿಯು ಈ ಕೃತ್ಯ ನಡೆಸಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡು ಬಂದಿರುವುದಿಲ್ಲ ಮತ್ತು ತನಿಖೆಯಲ್ಲಿನ ವಿರೋಧಾಬಾಸಗಳ ಕಾರಣ, ಪ್ರಾಸಿಕ್ಯೂಷನ್ ಈ ಪ್ರಕರಣವನ್ನು ಸಂಶಯಾತೀತವಾಗಿ ಸಾಬೀತುಪಡಿಸಲು ವಿಫಲಗೊಂಡಿದೆ ಎಂದು ವಾದಿಸಿದ್ದರು. ಅಂತಿಮವಾಗಿ, ಪುತ್ತೂರಿನ ಮಾನ್ಯ ಜಿಲ್ಲಾ ಮತ್ತು  ಸತ್ರ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶರಾದ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಕಾಂತರಾಜು ಎಸ್. ವಿ ರವರು ಪ್ರಾಸಿಕ್ಯೂಷನ್ ತನ್ನ ಕೇಸನ್ನು ಸಂಶಯಾತೀತವಾಗಿ ನಿರೂಪಿಸುವಲ್ಲಿ ವಿಫಲವಾಗಿದ್ದು ಆ ಕಾರಣ  ಆರೋಪಿಯನ್ನು ನಿರ್ದೋಷಿ ಎಂಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪದ ಪ್ರಕರಣ : ಆರೋಪಿ ಖುಲಾಸೆ


 ಪುತ್ತೂರು : ಆರು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ  ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪವನ್ನು ಎದುರಿಸುತ್ತಿದ್ದ  ಸುಳ್ಯ ತಾಲೂಕು ಬಾಳುಗೋಡು  ಗ್ರಾಮದ ಕೋತ್ನಡ್ಕ ನಿವಾಸಿ ಕಿಶೋರ್. ಕೆ.ರವರನ್ನು ಪುತ್ತೂರಿನ ಐದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶರಾದ   ಕಾಂತರಾಜು ಎಸ್ ವಿ ರವರು ನಿರಪರಾಧಿ ಎಂದು ಬಿಡುಗಡೆ ಗೊಳಿಸಲು ಆದೇಶಿಸಿರುತ್ತಾರೆ.


  02/08/2017 ರಂದು ಸುಳ್ಯ ತಾಲೂಕು ಸಂಪಾಜೆ ಗ್ರಾಮದ ದಂಡಕಜೆ ಎಂಬಲ್ಲಿ

 ಸಿಲ್ವೆಸ್ಟರ್ ಡಿಸೋಜರವರ ಹಳೆಯ ಮನೆಯಲ್ಲಿ, ರಾತ್ರಿ ವೇಳೆಯಲ್ಲಿ ಆರೋಪಿಯನ್ನಲಾಗಿದ್ದ ಕಿಶೋರ್. ಕೆ ರವರು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು  ನೊಂದ ಬಾಲಕಿ ಸುಳ್ಯ  ಪೊಲೀಸ್ ಠಾಣೆಗೆ ವಿಳಂಬವಾಗಿ  ದೂರನ್ನು ನೀಡಿದ್ದರು. ಈ ದೂರಿನಂತೆ ಪೊಲೀಸರು ಭಾರತೀಯ ದಂಡ ಸಂಹಿತೆಯ ಕಲಂ 376 ಮತ್ತು ಪೋಕ್ಸೋ  ಕಾಯ್ದೆಯ ಕಲಂ.5 ಮತ್ತು 6 ರ ಅನ್ವಯದಂತೆ ಪ್ರಕರಣ ದಾಖಲಿಸಿದ್ದರು. ತದನಂತರ ತನಿಖೆ ಮುಂದುವರಿಸಿ ಆರೋಪಿ ಎನ್ನಲಾಗಿದ್ದ ಕಿಶೋರ್. ಕೆ.ರವರನ್ನು ದಸ್ತಗಿರಿ ಮಾಡಿ ತನಿಖೆ ನಡೆಸಿದ್ದರು. ನಂತರ ಪೊಲೀಸರು ಆರೋಪಿಯ ವಿರುದ್ಧ ದೋಷರೋಪಣ ಪಟ್ಟಿಯನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ವೇಳೆ ಮಾನ್ಯ ಉಚ್ಚ ನ್ಯಾಯಾಲಯದ  ಆದೇಶದಂತೆ, ಮಂಗಳೂರಿನ ಎರಡನೇ  ಜಿಲ್ಲಾ  ನ್ಯಾಯಾಲಯದಲ್ಲಿದ್ದ ಪ್ರಕರಣವು  ಈ ಪುತ್ತೂರಿನ ಐದನೇ ಹೆಚ್ಚುವರಿ  ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ವರ್ಗಾವಣೆಯಾಗಿರುತ್ತದೆ.

 ಹೀಗಿರುವಲ್ಲಿ,ನ್ಯಾಯಾಲಯವು ಈ ಪ್ರಕರಣವನ್ನು ತನಿಖೆಗೆ   ಕೈಗೆತ್ತಿಕೊಂಡು ಪ್ರಾಸಿಕೂಷನ್ ತನ್ನ ಪರವಾಗಿ ಸುಮಾರು 26 ಸಾಕ್ಷಿಗಳ ಪೈಕಿ  12 ಸಾಕ್ಷಿಗಳನ್ನು ತನಿಖೆ ನಡೆಸಿತ್ತು. ತನಿಖೆ ನಂತರ ಮಾನ್ಯ ನ್ಯಾಯಾಲಯ ಪಕ್ಷಗಾರರ ವಾದ ವಿವಾದವನ್ನು ಆಲಿಸಿತ್ತು. ಈ ಹಂತದಲ್ಲಿ ಆರೋಪಿ ಪರ ವಕೀಲರಾದ  ಮಹೇಶ್ ಕಜೆಯವರು ದೂರು  ಸಲ್ಲಿಸುವಿಕೆಯಲ್ಲಿನ ವಿಳಂಬ,ಆಕೆಯ ವಯಸ್ಸನ್ನು ಸಂಶಯಾ ತೀತವಾಗಿ ಸಾಬೀತುಪಡಿಸುವಲ್ಲಿ ವಿಫಲತೆ ,ಆರೋಪಿ ಘಟನೆ ನಡೆದಿದೆ ಎನ್ನಲಾದ ಸ್ಥಳಕ್ಕೆ  ಹೋಗಬಹುದಾದ ಸಾಧ್ಯತೆ, ಸಂತ್ರಸ್ಥೆ ಘಟನೆ ನಡೆದಿದೆ ಎನ್ನಲಾದ ಎರಡು ದಿನದ ಮೊದಲು ನಾಪತ್ತೆಯಾಗಿದ್ದು, ಆ ಎರಡು ದಿವಸ ಆಕೆ ಎಲ್ಲಿದ್ದಳು, ಯಾರ ಜೊತೆ ಇದ್ದಳು ಇತ್ಯಾದಿ ವಿಚಾರಗಳ ಕುರಿತು ತನಿಖೆ ನಡೆಸಿದೆ ಇರುವುದು,ಆರೋಪಿತ  ಘಟನೆ ನಡೆದಿದೆ ಎನ್ನಲಾದ ಸಮಯದಲ್ಲಿ ಆರೋಪಿಯು ಘಟನಾ  ಸ್ಥಳದಲ್ಲಿದ್ದ ಬಗ್ಗೆ

 ದಾಖಲೆಗಳಿಲ್ಲದಿರುವುದು ,  ಸೂಕ್ತ ವೈಜ್ಞಾನಿಕ ಸಾಕ್ಷ್ಯಧಾರ ಮತ್ತು ದಾಖಲೆಗಳ ಕೊರತೆ, ಸಾಕ್ಷಿದಾರರ ವ್ಯತಿರಿಕ್ತ ಹೇಳಿಕೆಗಳು ,ಇತ್ಯಾದಿಗಳ ಹಿನ್ನೆಲೆಯಲ್ಲಿ  ಆರೋಪಿಯು ಈ ಕೃತ್ಯ ನಡೆಸಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡು ಬಂದಿರುವುದಿಲ್ಲ ಮತ್ತು ತನಿಖೆಯಲ್ಲಿನ ವಿರೋಧಾಬಾಸಗಳ ಕಾರಣ, ಪ್ರಾಸಿಕ್ಯೂಷನ್ ಈ ಪ್ರಕರಣವನ್ನು ಸಂಶಯಾತೀತವಾಗಿ ಸಾಬೀತುಪಡಿಸಲು ವಿಫಲಗೊಂಡಿದೆ ಎಂದು ವಾದಿಸಿದ್ದರು. ಅಂತಿಮವಾಗಿ, ಪುತ್ತೂರಿನ ಮಾನ್ಯ ಜಿಲ್ಲಾ ಮತ್ತು  ಸತ್ರ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶರಾದ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಕಾಂತರಾಜು ಎಸ್. ವಿ ರವರು ಪ್ರಾಸಿಕ್ಯೂಷನ್ ತನ್ನ ಕೇಸನ್ನು ಸಂಶಯಾತೀತವಾಗಿ ನಿರೂಪಿಸುವಲ್ಲಿ ವಿಫಲವಾಗಿದ್ದು ಆ ಕಾರಣ  ಆರೋಪಿಯನ್ನು ನಿರ್ದೋಷಿ ಎಂದು ಆದೇಶಿಸಿರುತ್ತಾರೆ. ಆರೋಪಿ ಪರ ವಕೀಲರಾದ ಪುತ್ತೂರಿನ ಕಜೆ ಲಾ ಚೇಂಬರ್ಸ್ ಮಹೇಶ್ ಕಜೆ ಮತ್ತು ಮಂಗಳೂರಿನ  ರಾಜೇಶ್ ರೈಯವರು ವಾದಿಸಿದ್ದರು.ದು ಆದೇಶಿಸಿರುತ್ತಾರೆ. ಆರೋಪಿ ಪರ ವಕೀಲರಾದ ಪುತ್ತೂರಿನ ಕಜೆ ಲಾ ಚೇಂಬರ್ಸ್ ಮಹೇಶ್ ಕಜೆ ಮತ್ತು ಮಂಗಳೂರಿನ  ರಾಜೇಶ್ ರೈಯವರು ವಾದಿಸಿದ್ದರು.

ಸಿದ್ದರಾಮಯ್ಯ ಭೇಟಿ ಮಾಡಿದ ರೇಣುಕಾಸ್ವಾಮಿ ತಂದೆ-ತಾಯಿ; ಇಟ್ಟ ಬೇಡಿಕೆ ಏನು?

Posted by Vidyamaana on 2024-06-25 21:18:36 |

Share: | | | | |


ಸಿದ್ದರಾಮಯ್ಯ ಭೇಟಿ ಮಾಡಿದ ರೇಣುಕಾಸ್ವಾಮಿ ತಂದೆ-ತಾಯಿ; ಇಟ್ಟ ಬೇಡಿಕೆ ಏನು?

ಬೆಂಗಳೂರು , ಜೂನ್‌ 25: ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರವಾಗಿ ಕೊಲೆಯಾಗಿದ್ದು, ಈ ಪ್ರಕರಣ ಕುರಿತು ಪವಿತ್ರ ಗೌಡ, ನಟ ದರ್ಶನ್ ಸೇರಿದಂತೆ 17 ಮಂದಿ ಆರೋಪಿಗಳು ಜೈಲುವಶವಾಗಿದ್ದಾರೆ. ಆದರೆ ಕುಟುಂಬದ ಆಧಾರವಾಗಿದ್ದ ರೇಣುಕಾಸ್ವಾಮಿಯನ್ನು ಕಳೆದುಕೊಂಡ ತಂದೆ ತಾಯಿ ಇಂದು (ಮಂಗಳವಾರ) ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಮಸ್ಯೆ ಹೇಳಿಕೊಂಡಿದ್ದಾರೆ.

ರೇಣುಕಾಸ್ವಾಮಿ ಅವರ ತಂದೆ , ತಾಯಿ ಇಂದು ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡಿದ್ದಾರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಪುತ್ರನಿ ಸಾವಿನ ಕುರಿತು ತಂದಿ ತಾಯಿ ಇಬ್ಬರು ಕಣ್ಣೀರು ಹಾಕಿದ್ದಾರೆ. ತಪ್ಪು ಮಾಡಿದ್ದರೆ ಕರೆದು ಬುದ್ಧಿ ಹೇಳಬಹುದಿತ್ತು, ಅಥವಾ ಪೊಲೀಸರಿಗೆ ದೂರು ಕೊಡಬಹುದಿತ್ತು ಆದರೆ ಬರ್ಬರವಾಗಿ ಕೊಂದುಬಿಡುವುದು ಯಾವ ನ್ಯಾಯ ಎಂದು ಅವಲತ್ತುಕೊಂಡಿದ್ದಾರೆ.

ಶಿವಮೊಗ್ಗ: ಮನೆಯಲ್ಲಿ ಪತಿ ಪತ್ನಿ ಮಗ ಸಜೀವ ದಹನ; ಆತ್ಮಹತ್ಯೆ ಶಂಕೆ

Posted by Vidyamaana on 2023-10-08 15:25:14 |

Share: | | | | |


ಶಿವಮೊಗ್ಗ: ಮನೆಯಲ್ಲಿ ಪತಿ ಪತ್ನಿ ಮಗ ಸಜೀವ ದಹನ; ಆತ್ಮಹತ್ಯೆ ಶಂಕೆ

ಶಿವಮೊಗ್ಗ: ಒಂದೇ ಕುಟುಂಬದ ಮೂವರು ಸಜೀವ ದಹನವಾಗಿದ್ದು, ಓರ್ವ ತೀವ್ರವಾಗಿ ಗಾಯಗೊಂಡಿರುವ ಘಟನೆ ತೀರ್ಥಹಳ್ಳಿಯ ಅರಳಸುರಳಿ ಗ್ರಾಮದ ಬಳಿ ನಡೆದಿದೆ.ಹೊಸನಗರ ರಸ್ತೆಯ ಗಣಪತಿ ಕಟ್ಟೆ ರೈಸ್‌ಮಿಲ್​ ಹತ್ತಿರದ ಮನೆಯೊಂದರಲ್ಲಿ ದುರಂತ ನಡೆದಿದೆ .


ರಾಘವೇಂದ್ರ (63), ಪತ್ನಿ ನಾಗರತ್ನ (55) ಹಾಗೂ ಪುತ್ರ ಶ್ರೀರಾಮ್ (34) ಮೃತರು. ಇನ್ನೊಬ್ಬ ಪುತ್ರ ಭರತ್ (30) ಗಂಭೀರವಾಗಿ ಗಾಯಗೊಂಡಿದ್ದು, ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ರವಾನಿಸಲಾಗಿದೆ. ಮನೆ ಭಾಗಶಃ ಸುಟ್ಟು ಹೋಗಿದೆ. ತೀರ್ಥಹಳ್ಳಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. 

ಅಸಿಡಿಟಿಯ ಎದೆ ಉರಿಯನ್ನು ಮತ್ತು ಎದೆ ನೋವಿನ ಉರಿಯನ್ನು ಐಡೆಂಟಿಫೈ ಮಾಡೋದು ತುಂಬಾ ಸುಲಭ: ಡಾ. ಜೆ ಸಿ ಅಡಿಗ


ಆತ್ಮಹತ್ಯೆ ಶಂಕೆ: ರಾಘವೇಂದ್ರಗ್ರಾಮದಲ್ಲಿ ಅರ್ಚಕ ವೃತ್ತಿ ಮಾಡುತ್ತಿದ್ದರು. ಮನೆಯ ಹಾಲ್​ನಲ್ಲಿಯೇ ಕಟ್ಟಿಗೆ ಜೋಡಿಸಿಟ್ಟು ಬೆಂಕಿ ಹಚ್ಚಿಕೊಂಡಿರುವ ಕುರುಹುಗಳು ಪತ್ತೆಯಾಗಿವೆ. ಗ್ರಾಮಸ್ಥರು ಹೊಗೆ ಗಮನಿಸಿ ಮನೆಯಲ್ಲಿದ್ದವರನ್ನು ರಕ್ಷಿಸಲು ಯತ್ನಿಸಿದ್ದಾರೆ. ಓರ್ವನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ತೀರ್ಥಹಳ್ಳಿಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಟುಂಬ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ.


ಆರಗ ಜ್ಞಾನೇಂದ್ರ ಪ್ರತಿಕ್ರಿಯೆ: "ಘಟನೆ ತೀವ್ರ ನೋವುಂಟು ಮಾಡಿದೆ" ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಅರಳಸುರಳಿ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿದ ಅವರು, "ಕೆಕೋಡು ರಾಘವೇಂದ್ರ ಅವರ ಕುಟುಂಬ ನನಗೆ ತುಂಬ ಹತ್ತಿರವಾದ ಕುಟುಂಬ. ಮೂವರು ಸಾವನ್ನಪ್ಪಿದ್ದಾರೆ. ಇನ್ನೊಬ್ಬ ಪುತ್ರ ಭರತ್ ಗಾಯಗೊಂಡಿದ್ದಾನೆ. ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ" ಎಂದರು.


"ಇವರ ಕುಟುಂಬದ ಬ.ರಾ.ಕೃಷ್ಣಮೂರ್ತಿ ಎಂಬವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರಾಗಿ ದೆಹಲಿಯಲ್ಲಿದ್ದರು. ಈಗ ಬೆಂಗಳೂರಿಗೆ ಬಂದಿದ್ದಾರೆ. ನನಗೆ ಕಳೆದ 40 ವರ್ಷಗಳಿಂದ ಪರಿಚಯ. ಆರ್ಥಿಕವಾಗಿಅನುಕೂಲಸ್ಥರು. ಇವರಿಗೆ 10 ಎಕರೆ ಅಡಿಕೆ ತೋಟವಿದೆ. ಸಹೋದರರ ಪೈಕಿ ಒಬ್ಬ ವೈದ್ಯ, ಒಬ್ಬರು ಟೆಲಿಪೋನ್ ಇಲಾಖೆಯಲ್ಲಿದ್ದಾರೆ. ರಾಘವೇಂದ್ರರ ಮಗ ಭರತ್ ಅಡಿಕೆ ವ್ಯಾಪಾರ ಮಾಡಿಕೊಂಡು ಇದ್ದಾರೆ. ಸ್ಥಳಕ್ಕೆ ಎಸ್ಪಿ ಭೇಟಿ ನೀಡಲಿದ್ದು, ಎಫ್‌ಎಸ್‌ಎಲ್ ತಂಡ ಆಗಮಿಸಲಿದೆ. ತನಿಖೆಯ ನಂತರ ಆತ್ಮಹತ್ಯೆಗೆ ಕಾರಣ ತಿಳಿದುಬರಲಿದೆ" ಎಂದು ಹೇಳಿದರು.

ಬೆಳ್ತಂಗಡಿ : ಚಾರ್ಮಾಡಿ ಯುವಕರಿಂದ ಸರಕಾರಿ ಬಸ್ ನಿಲ್ಲಿಸಿ ಹಲ್ಲೆ ಪ್ರಕರಣ

Posted by Vidyamaana on 2023-06-19 01:55:50 |

Share: | | | | |


ಬೆಳ್ತಂಗಡಿ : ಚಾರ್ಮಾಡಿ ಯುವಕರಿಂದ ಸರಕಾರಿ ಬಸ್ ನಿಲ್ಲಿಸಿ ಹಲ್ಲೆ ಪ್ರಕರಣ

ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಬಸ್ಸಿನಲ್ಲಿ ಮುಂದೆ ಹೋಗಿ ಎಂದು ಕಂಡೆಕ್ಟರ್ ಮುಂದೆ ತಳ್ಳಿದ ಎಂಬ ಕಾರಣಕ್ಕಾಗಿ ಬಸ್ ನಿಲ್ಲಿಸಿ ದಾಂಧಲೆ ಮಾಡಿದ ಘಟನೆ ಜೂ 17 ರಂದು ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ನಡೆದಿದ್ದು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂನ್ 18 ರಂದು ಕಂಡಕ್ಟರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.


ಮಂಗಳೂರಿನಿಂದ ಮೂಡಿಗೆರೆಗೆ ಸಂಚಾರಿಸುವ ಸರ್ಕಾರಿ ಬಸ್ಸಿಗೆ ಉಜಿರೆಯಲ್ಲಿ ವಿದ್ಯಾರ್ಥಿಗಳು ಹತ್ತಿದ್ದು ಈ ವೇಳೆ ನಿರ್ವಾಹಕ ಬಸ್ ಒಳಗೆ ಮುಂದೆ ಹೋಗಲು ಕೈ ಹಿಡಿದು ಮುಂದೆ ಕಳುಹಿಸುವ ಸಂದರ್ಭ ಬಸ್ ಕಂಡಕ್ಟರ್ ಹಾಗೂ ಕೆಲವು ವಿದ್ಯಾರ್ಥಿಗಳ ನಡುವೆ ಮಾತಿನ ನಡೆದಿದೆ.ಅದಲ್ಲದೇ ಈ ವಿಚಾರವನ್ನು ವಿದ್ಯಾರ್ಥಿಗಳು ಚಾರ್ಮಾಡಿಯ ಯುವಕರಿಗೆ ತಿಳಿಸಿ ಬಸ್ ಅಡ್ಡ ಹಾಕುವಂತೆ ಸೂಚಿಸಿದ್ದಾರೆ.ಈ ವಿಚಾರವನ್ನು ಬಸ್ಸಿನಲ್ಲಿದ್ದವರು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ತಿಳಿಸಿದ್ದು ತಕ್ಷಣ ಧರ್ಮಸ್ಥಳ ಠಾಣಾ ಇನ್ಸ್ ಪೆಕ್ಟರ್ ಅನಿಲ್ ಕುಮಾರ್ ಡಿ ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ಬಸ್ ನಿಲ್ಲಿಸುವಂತೆ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗಳಿಗೆ ಸೂಚಿಸಿದ್ದಾರೆ.ಅದರೆ ಚೆಕ್ ಪೋಸ್ಟ್ ನಲ್ಲಿ ಬಸ್ ತಡೆದು ಹೆಚ್ಚಿನ ಗಲಾಟೆ ಅಗದಂತೆ ನೋಡಿಕೊಂಡಿದ್ದರು.ಈ ವೇಳೆ ಅಲ್ಲಿಗೆ ಆಗಮಿಸಿದ ಯುವಕರ ತಂಡ ಕಂಡೆಕ್ಟರ್ ನಲ್ಲಿ ಗಲಾಟೆ ಮಾಡಿದೆ. ಈ ವೇಳೆ ಕಂಡೆಕ್ಟರ್ ಪರವಾಗಿ ಮಾತನಾಡಿದ ಬಸ್ ಪ್ರಯಾಣಿಕರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಮುಂದಾಗಿದ್ದು. ಅದಲ್ಲದೇ ವಿಡಿಯೋ ಮಾಡುತಿದ್ದ ವ್ಯಕ್ತಿಯೊಬ್ಬರಿಗೆ ಹಲ್ಲೆಗೈದಿದ್ದರು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಚಿಕ್ಕಮಗಳೂರು ವಿಭಾಗದ ಮೂಡಿಗೆರೆ ಘಟಕದ ಡಿಪೋ ಗೆ ಸೇರಿದ ಸರಕಾರಿ ಬಸ್ ಕಂಡಕ್ಟರ್ ಶಿವಕುಮಾರ್.ಕೆ.ಎಮ್ ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದು ದುರ್ವತ್ರನೆ ಹಾಗೂ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಸಂಬಂಧ ಪ್ರಕರಣ ದಾಖಲಾಯಿಸಿದ್ದು.ಅದರಂತೆ ಅಪರಿಚಿತರ ಮೇಲೆ ಧರ್ಮಸ್ಥಳ ಠಾಣೆಯಲ್ಲಿ 143.147.353.341.504.506 149 i ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು

ಪ್ರಕರಣದಲ್ಲಿ ಭಾಗಿಯಾದ ಮೂರು ಜನ ಆರೋಪಿಗಳಾದ  ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಮೇಗಿನ ಮನೆ ನಿವಾಸಿ ಅಬೂಬಕ್ಕರ್ ಅವರ ಮಗ ಮಹಮ್ಮದ್ ಶಬೀರ್(21) ,ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಮೇಗಿನ ಮನೆ ನಿವಾಸಿ ಅಬೂಬಕ್ಕರ್ ಅವರ ಮಗ ಮಹಮ್ಮದ್ ಮಹಾರೂಫ್(22), ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಪಾಂಡಿಕಟ್ಟೆ ನಿವಾಸಿ ಮೊಹಮ್ಮದ್ ಅವರ ಮಗ ಮಹಮ್ಮದ್ ಮುಬಶೀರ್ (23) ಎಂಬವರನ್ನು ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ನೇತೃತ್ವದ ತಂಡ ಜೂನ್ 18 ರಂದು ರಾತ್ರಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನು ಪ್ರಕರಣದಲ್ಲಿ ಉಳಿದ ಆರೋಪಿಗಳಿಗಾಗಿ ಧರ್ಮಸ್ಥಳ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.



Leave a Comment: