ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಸುದ್ದಿಗಳು News

Posted by vidyamaana on 2024-07-03 19:44:44 |

Share: | | | | |


ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂ‌ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.

   ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕು‌ಎಂಬುದು‌ ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸು‌ಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.

ಕಾಲೇಜು‌ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.

ಹೆಚ್ಚು‌ಅನುದಾನ ಕೊಡಿ

ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನು‌ನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರು‌ಮನವಿ ಸಲ್ಲಿಸಿದರು.

 Share: | | | | |


ಅಕ್ರಮ ಸಂಬಂಧ ಇದೆಯೆಂದು ಹಲ್ಲೆ

Posted by Vidyamaana on 2023-08-23 16:26:59 |

Share: | | | | |


ಅಕ್ರಮ ಸಂಬಂಧ ಇದೆಯೆಂದು ಹಲ್ಲೆ

ಮಂಗಳೂರು: ಲೈವ್ ವಿಡಿಯೋ ಮಾಡಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು ಗಂಭೀರ ಸ್ಥಿತಿಯಲ್ಲಿ ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 


ಪುತ್ತೂರಿನ ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.‌


ಆತ್ಮಹತ್ಯೆಗೆ ಯತ್ನಿಸುವ ಮುನ್ನ ಯುವಕ ಬ್ಯಾರಿ ಭಾಷೆಯಲ್ಲಿ ವಿಡಿಯೋ ಮಾಡಿದ್ದು ಕೃತ್ಯಕ್ಕೆ ಕಾರಣ ಹೇಳಿ ನೇಣಿಗೆ ಶರಣಾಗುವುದಾಗಿ ಹೇಳಿದ್ದ.‌ ನಾನು ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್. ಅದ್ರಾಮ ಎಂಬವರ ಮನೆಯಲ್ಲಿ ಕಾರು ಚಾಲಕನಾಗಿದ್ದೆ. ಈಗ ಅಲ್ಲಿನ ಕುಟುಂಬದ ಹುಡುಗಿ ಜೊತೆಗೆ ಸಂಬಂಧ ಇದೆಯೆಂದು ಹೇಳಿ ಮನೆಗೆ ಕರೆದು ಹಲ್ಲೆ ನಡೆಸಿದ್ದಾರೆ. ನನಗೆ ಯಾವುದೇ ಹುಡುಗಿ ಜೊತೆಗೆ ಸಂಬಂಧ ಇಲ್ಲ. ನಾನು ಈಗ ಪುತ್ತೂರಿಗೆ ಹೋಗಿ ಸಾವಿಗೆ ಶರಣಾಗುತ್ತೇನೆ. ನನ್ನ ಸಾವಿಗೆ ಅದ್ರಾಮ ಮತ್ತು ಅವನ ಕುಟುಂಬಸ್ಥರೇ ಕಾರಣ ಎಂದು ವಿಡಿಯೋದಲ್ಲಿ ಹೇಳಿದ್ದಾನೆ. 


ಕುಟುಂಬದ ಹೆಣ್ಣಿನ ಜೊತೆಗೆ ಸಂಬಂಧ ಇದೆಯೆಂದು ಹೇಳಿ ಹಲ್ಲೆ ನಡೆಸಿದ್ದಾರೆ. ನನಗೆ ಯಾವುದೇ ಹುಡುಗಿಯ ಸಂಬಂಧ ಇಲ್ಲ, ಆಕೆಯ ಗಂಡನೇ ಈ ಕಾರಿನಲ್ಲಿದ್ದಾನೆ ಎಂದು ಹೇಳಿ ಜೊತೆಗಿದ್ದ ನಾಲ್ವರು ಯುವಕರನ್ನು ತೋರಿಸಿದ್ದಾನೆ. ನೇಣಿಗೆ ಶರಣಾಗುತ್ತೇನೆಂದು ಹೇಳಿ ವಿಡಿಯೋ ಸ್ಟಾಪ್ ಮಾಡಿದ್ದ.‌ ಆನಂತರ ರಾತ್ರಿಯೇ ಪುತ್ತೂರಿನಲ್ಲಿ ನೇಣಿಗೇರಲು ಯತ್ನಿಸಿದ್ದು ಜೊತೆಗಿದ್ದವರು ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ಕರೆತಂದಿದ್ದಾರೆ.

ಎಸ್ಸೆಸ್ಸೆಲ್ಸಿ ಪಾಸ್ ಆದ ವಿದ್ಯಾರ್ಥಿನಿ ಶಿರಚ್ಛೇಧ - ಹತ್ಯೆಗೈದ ಆರೋಪಿ ಪ್ರಕಾಶ್ ರುಂಡದ ಜತೆ ಪರಾರಿ

Posted by Vidyamaana on 2024-05-10 15:34:06 |

Share: | | | | |


ಎಸ್ಸೆಸ್ಸೆಲ್ಸಿ ಪಾಸ್ ಆದ ವಿದ್ಯಾರ್ಥಿನಿ ಶಿರಚ್ಛೇಧ - ಹತ್ಯೆಗೈದ ಆರೋಪಿ ಪ್ರಕಾಶ್ ರುಂಡದ ಜತೆ ಪರಾರಿ

ಕೊಡಗು: ಇಡೀ ಗ್ರಾಮಸ್ಥರನ್ನೇ ಬೆಚ್ಚಿಬೀಳಿಸಿದ ಮತ್ತೊಂದು ಹತ್ಯೆ ಘಟನೆ ಇದೀಗ ಬೆಳಕಿಗೆ ಬಂದಿದ್ದು, 10ನೇ ತರಗತಿಯಲ್ಲಿ ಉತ್ತೀರ್ಣ ಆಗಿದ್ದ ವಿದ್ಯಾರ್ಥಿನಿಯ ತಲೆಕಡಿದು ವಿಕೃತ ಮೆರೆದ ವ್ಯಕ್ತಿಯೊಬ್ಬ, ಬಾಲಕಿಯ ರುಂಡದ ಜೊತೆ ಸ್ಥಳದಿಂದ ಪರಾರಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಸೂರ್ಲಬ್ಬಿಯಲ್ಲಿ ವರದಿಯಾಗಿದೆ.

ಸೂರ್ಲಬ್ಬಿ ವಿದ್ಯಾರ್ಥಿ ಮೀನಾ ಎಂಬ ವಿದ್ಯಾರ್ಥಿನಿ ಭೀಕರವಾಗಿ ಹತ್ಯೆಯಾಗಿದ್ದು, ಆರೋಪಿ ಬಾಲಕಿಯ ರುಂಡದ ಜೊತೆ ಪರಾರಿ ಆಗಿರುವುದು ತಿಳಿದುಬಂದಿದೆ. ಸದ್ಯ ಆರೋಪಿಯ ಪತ್ತೆಗೆ ಪೊಲೀಸರು ತಂಡವನ್ನು ರೂಪಿಸಿ, ಬಿರುಸಿನ ಕಾರ್ಯಾಚರಣೆ ಕೈಗೊಂಡಿದ್ದಾರೆ. ಸೂರ್ಲಬ್ಬಿ ಸರ್ಕಾರಿ ಶಾಲಾ ವಿದ್ಯಾರ್ಥಿನಿಯಾಗಿದ್ದ ಮೀನಾಗೆ 16 ವರ್ಷ ವಯಸ್ಸು ಎಂದು ವರದಿಯಾಗಿದೆ. 10ನೇ ತರಗತಿ ಫಲಿತಾಂಶದಲ್ಲಿ ಪಾಸ್​ ಆದ ಮೀನಾಗೆ ಅಂದೇ ಕುಟುಂಬಸ್ಥರು ಮದುವೆ ನಿಶ್ಚಿತಾರ್ಥ ಮಾಡಲು ಮುಂದಾಗಿದ್ದರು.

ಬೆಳ್ತಂಗಡಿ : ಬೈಕಿಗೆ ಪಿಕಪ್ ಢಿಕ್ಕಿ; ಸವಾರ ಪುರುಷೋತ್ತಮ ಸ್ಥಳದಲ್ಲೇ ಮೃತ್ಯು , ಸಹಸವಾರ ತೌಫೀಕ್ ಗಂಭೀರ

Posted by Vidyamaana on 2024-03-25 18:24:34 |

Share: | | | | |


ಬೆಳ್ತಂಗಡಿ : ಬೈಕಿಗೆ ಪಿಕಪ್ ಢಿಕ್ಕಿ; ಸವಾರ ಪುರುಷೋತ್ತಮ ಸ್ಥಳದಲ್ಲೇ ಮೃತ್ಯು , ಸಹಸವಾರ ತೌಫೀಕ್ ಗಂಭೀರ

ಬೆಳ್ತಂಗಡಿ: ಹಳೇಕೋಟೆ ಬಳಿ ದ್ವಿಚಕ್ರ ವಾಹನ ಹಾಗೂ ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ ಪೈಂಟರ್ ವೃತ್ತಿ ನಿರ್ವಹಿಸುತ್ತಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೋರ್ವ ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಾ.25ರ ಮಧ್ಯಾಹ್ನ ನಡೆದಿದೆ.ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ರಾಘವೇಂದ್ರ ನಗರ ನಿವಾಸಿ ದಿ.ಜಯರಾಮ್ ಮತ್ತು ಜಯಂತಿ ದಂಪತಿಗಳ ದ್ವಿತೀಯ ಪುತ್ರ ಪುರುಷೋತ್ತಮ (19) ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಸಹಸವಾರ ಲಾಯಿಲ ಗ್ರಾಮದ ರಾಘವೇಂದ್ರ ನಗರದ ತೌಶೀಫ್ ಮಗ ತೌಫೀಕ್ (17)  ಗಂಭೀರ ಗಾಯಗೊಂಡಿದ್ದಾನೆ.ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿಯತ್ತ ಹೋಗುತಿದ್ದ ದ್ವಿಚಕ್ರ ವಾಹನಕ್ಕೆ ಎದುರಿನಿಂದ ಬರುತಿದ್ದ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಮಗುಚಿ ಬಿದ್ದು ಸವಾರರಿಬ್ಬರೂ ರಸ್ತೆಗೆಸೆಯಲ್ಪಟ್ಟು ಪುರುಷೋತ್ತಮ ಮೃತಪಟ್ಟಿದ್ದು, ತೌಫೀಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಬೆಳ್ತಂಗಡಿ ಸಂಚಾರಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ

ಪಡ್ಡಾಯೂರು ಶ್ರೀ ಅನ್ನಪೂರ್ಣೇಶ್ವರಿ ಭಜನಾಮಂದಿರದಲ್ಲಿ ೧೯ ನೇ ವರ್ಷದ ನವರಾತ್ರಿ ಕಾರ್ಯಕ್ರಮ

Posted by Vidyamaana on 2023-10-24 09:14:52 |

Share: | | | | |


ಪಡ್ಡಾಯೂರು ಶ್ರೀ ಅನ್ನಪೂರ್ಣೇಶ್ವರಿ ಭಜನಾಮಂದಿರದಲ್ಲಿ ೧೯ ನೇ ವರ್ಷದ ನವರಾತ್ರಿ ಕಾರ್ಯಕ್ರಮ

ಪುತ್ತೂರು: ದೋಪಾವಳಿ ಸಂದರ್ಭದಲ್ಲಿ ಹಲವು ವರ್ಷಗಳಿಂದ ಮಹಿಳೆಯರಿಗೆ ಮತ್ತು ಪುರುಷರಿಗೆ ವಸ್ತ್ರ ವಿತರಣೆ ಮಾಡುತ್ತಿದ್ದೇನೆ , ನಾನೇನು ಅಹಂಕಾರದಿಂದ ಇದನ್ನು ಮಾಡುತ್ತಿಲ್ಲ ಕ್ಷೇತ್ರದ ಬಡವರ ಜೊತೆ ಒಂದು ಹೊತ್ತು ಸಹಭೋಜನ ಮಾಡಬೇಕೆಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಮಾಡುತ್ತಿದ್ದೇನೆ. ನ. ೧೩ ರಂದು ಪುತ್ತೂರಿನಲ್ಲಿ ನಡೆಯುವ ವಸ್ತ್ರ ವಿತರಣಾ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆಶೀರ್ವಾದ ಮಾಡುವಂತೆ ಶಾಸಕರಾದ ಅಶೋಕ್ ರೈ ಮನವಿ ಮಾಡಿದರು.


ಅವರು ಪಡ್ಡಾಯೂರು ಶ್ರೀ ಅನ್ನಪೂರ್ಣೇಶ್ವರಿ ಭಜನಾಮಂದಿರ ಪಡ್ಡಾಯೂರು ಇಲ್ಲಿ ನಡೆದ ೧೯ ನೇ ವರ್ಷದ ನವರಾತ್ರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಪುತ್ತೂರಿನಲ್ಲಿ ಈ ಬಾರಿ ಸುಮಾರು ೫೦ ಸಾವಿರ ಮಂದಿಗೆ ವಸ್ತ್ರ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು , ನಾನು ಕಾರ್ಯಕ್ರಮಕ್ಕೆ ಭಾಗವಹಿಸುವ ಬಡವರ ಜೊತೆ ಸಹಭೋಜನವನ್ನು ಮಾಡಲಿದ್ದೇನೆ ಎಂದು ಹೇಳಿದರು. ಇನ್ನೊಬ್ಬರ ಕಷ್ಟಕ್ಕೆ ನೆರವಾಗುವುದೇ ಧರ್ಮವಾಗಿದೆ. ಜಾತಿಮತಗಳ ಭೇದವಿಲ್ಲದೆ ಎಲ್ಲರೊಂದಿಗೆ ಸಹೋದರ ಭಾವನೆಯಿಂದ ಬದುಕುವುದು ಮತ್ತು ಧರ್ಮಗಳ ನಡುವೆ ಪರಸ್ಪರ ಸೌಹಾರ್ಧತೆಯ ವಾತಾವರಣ ಇದ್ದರೆ ಮಾತ್ರ ನಮ್ಮ ಭಾರತ ವಿಶ್ವಗುರುವಾಗಲು ಸಾಧ್ಯವಾಗಿದೆ. ಇಲ್ಲಿ ಹಿಂಸೆ, ಪ್ರಚೋಧನೆಯನ್ನು ಯಾರೂ ಮಾಡಬಾರದು. ನಮ್ಮ ನೆರೆಯ ವರ ಜೊತೆ ನಾವು ಸದಾ ಉತ್ತಮ ಬಾಂಧವ್ಯ ಹೊಂದರಬೇಕು ಅವರ ನೋವುಗಳಿಗೆ ಸಪಂದಿಸಬೇಕು ಎಂದು ಹೇಳಿದರು. ವೃದ್ದರಾದ ತಂದೆ ತಾಯಿಯನ್ನು ಆರೈಕೆ ಮಾಡುವ ಮೂಲಕ ಅವರಲ್ಲಿ ದೇವರನ್ನು ಕಾಣುವ ಮನೋಭಾವ ನಮ್ಮಲ್ಲಿರಬೇಕು ಎಂದು ಹೇಳಿದರು

ಮನೆ ಒಡತಿಯ ಕೈ ಗಟ್ಟಿಮಾಡಲು ೨೦೦೦ ಕೊಟ್ಟಿದ್ದೇವೆ ಮನೆ ಒಡತಿಯ ಕೈ ಗಟ್ಟಿಯಾದರೆ ಮಾತ್ರ ಕುಟುಂಬ ನೆಮ್ಮದಿಯಾಗಿರಲು ಸಾಧ್ಯ ಎಂಬುದನ್ನು ಮನಗಂಡು ರಾಜ್ಯದ ಕಾಂಗ್ರೆಸ್ ಸರಕಾರ ಮಹಿಳೆಯರ ಖಾತೆಗೆ ೨೦೦೦ ನೀಡುತ್ತಿದ್ದೇವೆ. ಮಹಿಳೆಯರು ಸ್ವಾವಲಂಬಿಗಳಾಗಬೇಕು, ಅವರಿಗೂ ನೆಮ್ಮದಿಯ ಜೀವನ ದೊರೆಯಬೇಕು ಎಂಬ ಉದ್ದೇಶದಿಂದ ಸರಕಾರ ಉಚಿತ ವಿದ್ಯುತ್, ಪಡಿತರ ಉಚಿತ ಬಸ್ಸಿನ ಜೊತೆಗೆ ಗೃಹಲಕ್ಷ್ಮಿಯನ್ನು ನೀಡುತ್ತಿದೆ. ಎಲ್ಲರಿಗೂ ಈ ಹಣ ಜಮೆಯಾಗಲಿದ್ದು ತಾಂತ್ರಿಕ ಕಾರಣಗಳಿಂದ ಹಣ ಜಮೆಯಾಗದೇ ಇದ್ದಲ್ಲಿ ನನ್ನ ಕಚೇರಿಯನ್ನು ಸಂಪರ್ಕಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.


ಬನ್ನೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರಭಟ್ ಮಾತನಾಡಿ ಪುತ್ತೂರಿನ ಶಾಸಕರು ನಮ್ಮೆಲ್ಲರ ಹೆಮ್ಮೆಯಾಗಿದ್ದಾರೆ. ಬಡವರ ಕಣ್ಣೀರೊರೆಸುವ ಮೂಲಕ ಅವರ ಕಷ್ಟಗಳಿಗೆ ನೆರವಾಗುತ್ತಿದ್ದಾರೆ. ಪುತ್ತೂರಿನಲ್ಲಿ ಗೆದ್ದು ಬಂದ ಯಾವುದೇ ಶಾಸಕರು ಈ ಕೆಲಸವನ್ನು ಮಾಡಿಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ. ಸರಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವುದು ಮಾತ್ರವಲ್ಲದೆ ಅದು ಇಲ್ಲಿನ ಕಟ್ಟಕಡೇಯ ವ್ಯಕ್ತಿಗೂ ಸಿಗುವಂತಾಗಬೇಕು ಎಂಬುದೇ ಶಾಸಕರ ಕನಸಾಗಿದೆ ಎಂದು ಹೇಳಿದರು.


ವೇದಿಕೆಯಲ್ಲಿ ಭಜನಾಮಂದಿರ ಅಧ್ಯಕ್ಷ ಗಣೇಶ್ ಗೌಡ, ಪಡ್ಡಾಯೂರು ಕಾಂಗ್ರೆಸ್ ಬೂತ್ ಅಧ್ಯಕ್ಷರಾದ ಲೋಕೇಶ್ ಪಡ್ಡಾಯೂರು, ಉಪಸ್ಥಿತರಿದ್ದರು. ಮೋಹನ್ ಪಡ್ಡಾಯೂರು ಸ್ವಾಗತಿಸಿ ವಂದಿಸಿದರು.

ಮಂಗಳೂರು: ಅಪಾರ್ಟ್​ ಮೆಂಟ್​ ನಿಂದ ಹಾರಿ ಬಿಲ್ಡರ್ ಮೋಹನ್​ ಅಮೀನ್ ಆತ್ಮಹತ್ಯೆ

Posted by Vidyamaana on 2023-08-06 09:05:36 |

Share: | | | | |


ಮಂಗಳೂರು: ಅಪಾರ್ಟ್​ ಮೆಂಟ್​ ನಿಂದ ಹಾರಿ ಬಿಲ್ಡರ್ ಮೋಹನ್​ ಅಮೀನ್ ಆತ್ಮಹತ್ಯೆ

ಮಂಗಳೂರು: ಬಹುಮಹಡಿ ಕಟ್ಟಡದಿಂದ ಕೆಳಗೆ ಹಾರಿ ಬಿಲ್ಡರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಬೆಂದೂರುವೆಲ್​ ನಲ್ಲಿ ನಡೆದಿದೆ.


ಮೋಹನ್​ ಅಮೀನ್ ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ.ಇವರು  ಮಂಗಳೂರಿನಲ್ಲಿ ವಿವಿಧ ಅಪಾರ್ಟ್ಮೆಂಟ್ ನಿರ್ಮಾಣ ಮಾಡಿದ್ದರು . ಅಟ್ಲಾಂಟಿಕ್ ಅಪಾರ್ಟ್ಮೆಂಟ್​ ನಿಂದ ಹಾರಿ ಸಾವಿಗೆ ಶರಣಾಗಿದ್ದಾರೆ . ಈ ಕುರಿತು ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ

ಪ್ರಸಾದ ವಿತರಣೆ ವಿಚಾರದಲ್ಲಿ ಜಗಳ ಬಿಜೆಪಿ ಯುವ ಮುಖಂಡ ಪ್ರವೀಣ್ ಕಮ್ಮಾರ ಹತ್ಯೆ.

Posted by Vidyamaana on 2023-04-19 15:55:32 |

Share: | | | | |


ಪ್ರಸಾದ ವಿತರಣೆ ವಿಚಾರದಲ್ಲಿ ಜಗಳ ಬಿಜೆಪಿ ಯುವ ಮುಖಂಡ ಪ್ರವೀಣ್  ಕಮ್ಮಾರ ಹತ್ಯೆ.

ಧಾರವಾಡ: ಗ್ರಾಮದ ಜಾತ್ರೆಯಲ್ಲಿ ಪ್ರಸಾದ ವಿತರಣೆಗೆ ನಡೆದ ಜಗಳ ಕೋಟೂರು ಗ್ರಾಮ ಪಂಚಾಯತಿ ಉಪಾಧ್ಯಕ್ಷ, ಬಿಜೆಪಿ ಯುವ ಮುಖಂಡ ಪ್ರವೀಣ ಕಮ್ಮಾರ ಹತ್ಯೆಯಲ್ಲಿ ಅಂತ್ಯ ಕಂಡಿದೆ.ಗ್ರಾಮದ ಇನ್ನೋರ್ವ ಬಿಜೆಪಿ ಕಾರ್ಯಕರ್ತ ರಾಘವೇಂದ್ರ ಪಟಾತ್ ಸೇರಿ ಆರು ಜನರ ಗುಂಪು ಈ ಕೃತ್ಯ ಎಸಗಿದೆ. ಪ್ರವೀಣ ಹತ್ಯೆಯಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಉಳಿದವರ ಬಂಧನಕ್ಕೆ ಶೋಧ ಕಾರ್ಯವೂ ನಡೆದಿದೆ. ಮಂಗಳವಾರ ಗ್ರಾಮದ ಉಡಚಮ್ಮದೇವಿ ಜಾತ್ರೆಯಲ್ಲಿ ಪ್ರಸಾದ ವಿತರಣೆಗೆ ಎರಡು ಗುಂಪುಗಳ ಮಧ್ಯೆ ನಡೆದ ಜಗಳವನ್ನು ಕೋಟೂರು ಗ್ರಾಪಂ ಉಪಾಧ್ಯಕ್ಷ ಪ್ರವೀಣ ಮದ್ಯ ಪ್ರವೇಶಿಸಿ ಬಗೆ ಹರಿಸಿದ್ದರು ಎಂದು ಪ್ರತ್ಯಕ್ಷದರ್ಶಿ ಗ್ರಾಮಸ್ಥರು ತಿಳಿಸಿದ್ದಾರೆ.ಆದರೆ ನಂತರ ಕುಡಿದ ಅಮಲಿನಲ್ಲಿದ್ದ ರಾಘವೇಂದ್ರ ಪಟಾದ್ ಮತ್ತು ಸಹಚರರು ಪ್ರವೀಣಗೆ ಚಾಕುವಿನಿಂದ ಇರಿದಿದ್ದು, ತಕ್ಷಣ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಬುಧವಾರ ಪ್ರವೀಣ ಮೃತಪಟ್ಟಿದ್ದಾನೆ ಎಂದು ಪೊಲೀಸರು ಎಫ್‌ಐಆರ್‌ನಲ್ಲಿ ದಾಖಲಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಹಾಗೂ ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಕುರಿತಂತೆ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜಕೀಯ ತಿರುವು:

ಚುನಾವಣೆಯ ಹೊತ್ತಿನಲ್ಲಿ ಪ್ರವೀಣ ಕಮ್ಮಾರ ಹತ್ಯೆ ಪ್ರಕರಣ ಇದೀಗ ರಾಜಕೀಯ ತೀರುವು ಪಡೆದಿದೆ. ಹತ್ಯೆಯ ಪ್ರಮುಖ ಆರೋಪಿ ರಾಘವೇಂದ್ರ ಪಟಾತ್ ಬಿಜೆಪಿ ಕಾರ್ಯಕರ್ತನಾಗಿದ್ದಾನೆ. ಅಲ್ಲದೇ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮತ್ತು ಶಾಸಕ ಅಮೃತ ದೇಸಾಯಿ ಅವರಿಗೆ ಆಪ್ತನಾಗಿದ್ದಾನೆ ಎನ್ನಲಾಗಿದೆ. ಆದರೆ ಇತ್ತಿಚೇಗೆ ಬಿಜೆಪಿ ಪಕ್ಷ ತೊರೆದ ರಾಘವೇಂದ್ರ, ಬಸವರಾಜ ಕೊರವರ ನೇತೃತ್ವದ ಜನಜಾಗೃತಿ ಹೋರಾಟ ವೇದಿಕೆ ಸೇರಿದ್ದ ಎನ್ನಲಾಗುತ್ತಿದೆ. ಪಟಾತ್, ಧಾರವಾಡ ಗ್ರಾಮಾಂತರ ಜಿಲ್ಲೆಯ ಬಿಜೆಪಿ ಓಬಿಸಿ ಘಟಕದ ಉಪಾಧ್ಯಕ್ಷನಾಗಿದ್ದಾನೆ. ಜಿಲ್ಲೆಯ ಎಲ್ಲಾ ಬಿಜೆಪಿ ಹಿರಿಯ ನಾಯಕರ ಜತೆ ಒಡನಾಟ ಹೊಂದಿದ್ದಾನೆ ಎನ್ನುತ್ತಿದ್ದಾರೆ ಕೋಟೂರು ಗ್ರಾಮಸ್ತರು. ಇನ್ನೊಂದೆಡೆ ಇದು ಜಾತಿ ಜಗಳ ಎಂದು ಕೂಡ ಚರ್ಚಿಸಲಾಗುತ್ತಿದೆ.

ಬಿಜೆಪಿ ಕಾರ್ಯಕರ್ತ ಪ್ರವೀಣ ಕಮ್ಮಾರ ಹತ್ಯೆ, ರಾಜಕೀಯ ಕೊಲೆ. ಸೂಕ್ತ ತನಿಖೆಗೆ ಪೊಲೀಸರಿಗೆ ಸೂಚಿಸಿದೆ. ಪ್ರವೀಣ ಕುಟುಂಬಕ್ಕೆ ಪರಿಹಾರ ನೀಡುವ ಜತೆ ನ್ಯಾಯ ಕೊಡಿಸಲಾಗುವುದು.

– ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವರು

ಕೋಟೂರು ಗ್ರಾಮದ ಜಾತ್ರೆಯಲ್ಲಿ ಕುಡಿದು ಕೆಲವರು ಗಲಾಟೆ ಮಾಡಿದ್ದು, ಗಲಾಟೆ ಬಿಡಿಸಲು ಹೋದ ಪ್ರವೀಣ ಕಮ್ಮಾರ ಅವರನ್ನೇ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಈ ಪ್ರಕರಣದಡಿ ಮೂವರನ್ನು ಬಂಧಿಸಿದ್ದು, ವಿಚಾರಣೆ ನಡೆದಿದೆ. ಇನ್ನೂ ಮೂವರ ಬಂಧನಕ್ಕೆ ಶೋಧ ನಡೆದಿದೆ.

– ಲೋಕೇಶ ಜಗಳಾಸರ, ಎಸ್ಪಿ,ಧಾರವಾಡ

ಗ್ರಾ.ಪಂ.ರಾಜಕೀಯಕ್ಕೆ ಕೊಲೆ

ಇನ್ನು ಗ್ರಾಮ ಪಂಚಾಯಿತಿ ಉಪಾಧ್ಯಕ್ಷನಾಗಿದ್ದ ಪ್ರವೀಣ ಕಮ್ಮಾರ್ ಗುತ್ತಿಗೆ ಕಾಮಗಾರಿ ಮಾಡುತ್ತಿದ್ದ ರಾಘವೇಂದ್ರ ಪಠಾತ್‌ಗೆ ಕಾಮಗಾರಿ ಸರಿಯಾಗಿ ಮಾಡುತ್ತಿಲ್ಲ ಎಂದು ನೀಡಿರಲಿಲ್ಲ ಎನ್ನಲಾಗಿದೆ. ಅದೂ ಅಲ್ಲದೇ ಈ ಹಿಂದೆ ಗ್ರಾ.ಪಂ.ಅಧ್ಯಕ್ಷನಾಗಿದ್ದ ಶಂಕರಯ್ಯ ಮಠಪತಿ ಅವರು ಗ್ರಾ.ಪಂ.ನ ಕಂಪ್ಯೂಟರ್ ಆಪರೇಟರ್ ಹುದ್ದೆಗೆ ನೇಮಿಸಿದ್ದ ಗೀತಾ ಬಾರಿಕೇರ ಎಂಬುವವರನ್ನು ಪ್ರವೀಣ ಕೆಲಸದಿಂದ ತೆಗೆದು ಹಾಕಿದ್ದ ಎನ್ನಲಾಗಿದೆ. ಇದರ ಇಂತಹ ಇನ್ನಿತರ ಗ್ರಾ.ಪಂ.ರಾಜಕೀಯ ವಿಚಾರಗಳು ಸೇಡಿನ ರೂಪತಾಳಿ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ.



Leave a Comment: