Posted by vidyamaana on 2024-07-03 11:16:18 |
ಪುತ್ತೂರು : ವಿಶ್ವ ಹಿಂದೂ ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ.ವಿಶ್ವ ಹಿಂದೂ ಪರಿಷದ್ ನ ಜಿಲ್ಲೆಯ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು.
ವಿಶ್ವ ಹಿಂದೂ ಪರಿದ್ ನ ಜಿಲ್ಲಾ ಉಪಾಧ್ಯಕ್ಷ ಸತೀಶ್ ಬಿ.ಎಸ್., ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸೇವಾ ಪ್ರಮುಖ್ ಸೀತಾರಾಮ ಭಟ್, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.
Posted by Vidyamaana on 2023-11-06 13:43:19 |
ಪುತ್ತೂರು : ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನ.13 ರಂದು ದೀಪಾವಳಿ ಪ್ರಯುಕ್ತ ನಡೆಯುವ ವಸ್ತ್ರ ವಿತರಣೆ ಹಾಗೂ ಸಹಭೋಜನಾ ಕಾರ್ಯಕ್ರಮವು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು ಇದರ ಚಪ್ಪರ ಮುಹೂರ್ತವು ನಡೆಯಿತು.
ಶಾಸಕರಾದ ಅಶೋಕ್ ರೈ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಕಾರ್ಯಕ್ರಮದಲ್ಲಿ ಟ್ರಸ್ಟ ಮುಖ್ಯಸ್ಥರಾದ ಸುಮಾ ಅಶೋಕ್ ರೈ, ಸೀತಾರಾಮ ರೈ ಹೆಗ್ಗಡೆ ಹಿತ್ತಿಲು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಟ್ರಸ್ಟ್ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ, ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು, ಮಾಜಿ ಜಿಪಂ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಂ ಕೆ ಬಿ, ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ನಿಹಾಲ್ ಶೆಟ್ಟಿ, ರಿತೇಶ್ ಶೆಟ್ಟಿ, ಮುರಳೀದರ್ ರೈ ಮಟಂತಬೆಟ್ಟು, ಕೃಷ್ಣಪ್ರಸಾದ್ ಆಳ್ವ, ಪಂಜಿಗುಡ್ಡೆ ಈಶ್ವರಭಟ್, ಶಿವರಾಮ ಆಳ್ವ,ನ್ಯಾಯವಾದಿ ಅರುಣಾ ಆಳ್ವ ಟ್ರಸ್ಟಿನ ಸದಸ್ಯ ಪ್ರಮುಖರಾದ ಕೃಷ್ಣಪ್ರಸಾದ್ ಭಟ್, ಯೋಗೀಶ್ ಸಾಮಾನಿ, ಶಿವಪ್ರಸಾದ್, ರಾಕೇಶ್ ರೈಕುದ್ಕಾಡಿ,ರಾಮಣ್ಣ ಪಿಲಿಂಜ, ಚಂದ್ರಶೇಕರ ಕಲ್ಲಗುಡ್ಡೆ,ಮೊದಲಾದವರು ಉಪಸ್ಥಿತರಿದ್ದರು.
Posted by Vidyamaana on 2023-09-11 09:47:24 |
ಬೆಂಗಳೂರು : ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡಿತ್ತು. ಈ ಬೆನ್ನಲ್ಲೇ ಸಶಸ್ತ್ರಮೀಸಲು ಪೊಲೀಸ್ ಪಡೆಯ ) ಕಾನ್ ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಯಲ್ಲೂ ಅಕ್ರಮ ಎಸಗಲಾಗಿದೆ ಎಂಬ ಆರೋಪ ಕೇಳಿಬಂದಿದೆ.ಅಕ್ರಮ ಎಸಗಲು ಕೆಲ ಅಭ್ಯರ್ಥಿಗಳನ್ನು ಸಂಪರ್ಕಿಸಿದ್ದ ಆರೋಪದಡಿ ನಾಲ್ವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕೊಪ್ಪಳ ಜಿಲ್ಲೆ ಕುಷ್ಠಗಿ ಮೂಲದ ಬಸವರಾಜ್, ದಿಲೀಪ್, ತಿಮ್ಮೇಗೌಡ ಮತ್ತು ತುಮಕೂರು ಚಿಕ್ಕನಾಯಕನಹಳ್ಳಿ ಮೂಲದ ಹರಿಪ್ರಸಾದ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.ಪರೀಕ್ಷೆಗೆ ಒಂದು ದಿನ ಮುನ್ನ ಆರೋಪಿಗಳು ಅಭ್ಯರ್ಥಿಗಳನ್ನ ಒಂದೆಡೆ ಸೇರಲು ಹೇಳಿದ್ದರು. ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆ ನೀಡಲು ಏಜೆಂಟರು ತಯಾರಾಗಿದ್ದರು. ಇದೀಗ ಸಿಸಿಬಿ ಅಧಿಕಾರಿಗಳು ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಲು ಮುಂದಾಗಿದ್ದ ನಾಲ್ವರು ಏಜೆಂಟ್ಗಳನ್ನ ಬಂಧಿಸಿದ್ದಾರೆ
ಈ ಆರೋಪಿಗಳು 2018ರಲ್ಲಿ ನಡೆದಿದ್ದ ಕಾನ್ ಸ್ಟೇಬಲ್ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿದ್ದರು. ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿತ್ತು, ನಂತರ ಜಾಮೀನು ಪಡೆದು ಬಿಡುಗಡೆಗೊಂಡಿದ್ದರು. ಬಳಿಕ ಭಾನುವಾರ ರಾಜ್ಯದಲ್ಲಿ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಎಸಗುವ ಸಂಬಂಧ ಆರೋಪಿಗಳು ಕೆಲದಿನಗಳ ಹಿಂದೆ ಕೆಲ ಅಭ್ಯರ್ಥಿಗಳನ್ನು ಸಂಪರ್ಕಿಸಿದ್ದರು ಎನ್ನಲಾಗಿದೆ
Posted by Vidyamaana on 2024-04-04 18:33:37 |
ಪುತ್ತೂರು, ಎ.4: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯ ಸರಕಾರ ಹಿಂದು ವಿರೋಧಿ ನೀತಿ ಅನುಸರಿಸುತ್ತಿದೆ. ಕಳೆದ 2-3 ತಿಂಗಳಿನಿಂದ ಹಿಂದು ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹೇರಿ ಗಡೀಪಾರು ಮಾಡುವ ಕಾರ್ಯಕ್ಕೆ ಕೈಹಾಕಿದೆ. ಇಂಥ ಕೆಲಸವನ್ನು ನಿಲ್ಲಿಸದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ಸರಕಾರ ಜವಾಬ್ದಾರಿಯಾಗಲಿದೆ ಎಂದು ಗೋರಕ್ಷಾ ಪ್ರಮುಖ್ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದ್ದಾರೆ.
ಗುರುವಾರ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದೂ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ನಿಲ್ಲಿಸದಿದ್ದರೆ ಹಿಂದೂ ಸಮಾಜ ತಕ್ಕ ಉತ್ತರ ನೀಡುವ ಪರಿಸ್ಥಿತಿ ಬರಲಿದೆ. ಈ ರೀತಿ ಧರ್ಮ ರಕ್ಷಣೆ ಜತೆ ಗೋಹತ್ಯೆ, ಲವ್ ಜಿಹಾದಿ ಮಟ್ಟ ಹಾಕುವ ಕೆಲಸವನ್ನಷ್ಟೇ ನಮ್ಮ ಕಾರ್ಯಕರ್ತರು ಮಾಡುತ್ತಿದ್ದು, ಬೇರೆ ಯಾವುದೇ ಚಟುವಟಿಕೆಗಳಲ್ಲಿ ತೊಡಗಿಕೊಂಡಿಲ್ಲ. ಹಾಗಂತ ಗಡಿಪಾರು ಆದೇಶ ಮಾಡುವುದಾದರೆ ಸಾವಿರ ಹಿಂದೂ ಕಾರ್ಯಕರ್ತರ ಪಟ್ಟಿ ನೀಡುತ್ತೇವೆ. ತಾಕತ್ತಿದ್ದರೆ ಎಲ್ಲರನ್ನೂ ಗಡಿಪಾರು ಮಾಡಲಿ ಎಂದು ಸವಾಲೆಸೆದರು.
Posted by Vidyamaana on 2023-05-10 02:11:21 |
ಮಂಗಳೂರು: ಮೊಬೈಲ್ ಫೋನ್, ಪೆನ್ ಕೆಮರಾ, ವಿವಿಧ ಬಗೆಯ ಆಯುಧ, ನೀರಿನ ಬಾಟಲ್, ಆಹಾರ ಸಾಮಗ್ರಿಗಳು ಹಾಗೂ ಸ್ಫೋಟಕ ವಸ್ತುಗಳನ್ನು ಮತಗಟ್ಟೆ ಕೇಂದ್ರಕ್ಕೆ ಕೊಂಡೊಯ್ಯಲು ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿಗಳಾದ ರವಿ ಕುಮಾರ್ ಅವರು ತಿಳಿಸಿದ್ದಾರೆ ಚುನಾವಣೆ ಯಶಸ್ವಿಯಾಗಿ ನಡೆಸಲು ಮತಗಟ್ಟೆ ಅಧಿಕಾರಿಗಳನ್ನು ಹಾಗೂ ವೀಕ್ಷಕರು, ಭದ್ರತಾ ಸಿಬಂದಿ ನೇಮಿಸಲಾಗಿದೆ. ಪ್ರಿಸೈಡಿಂಗ್ ಆಫಿಸರ್, ಅಸಿಸ್ಟೆಂಟ್ ಪ್ರಿಸೈಡಿಂಗ್ ಆಫೀಸರ್, ಮತಗಟ್ಟೆ ಅಧಿಕಾರಿ ಗಳು ಹಾಗೂ ಡಿ ದರ್ಜೆ ನೌಕರ ರನ್ನು ನೇಮಿಸಲಾಗಿದೆ.ವಿಶೇಷ ಚೇತನ ಮತದಾರರಿ ಗಾಗಿ ಗಾಲಿ ಕುರ್ಚಿ, ಭೂತ ಕನ್ನಡಿ ಬ್ರೈಲ್ ಲಿಪಿಯ ಮಾದರಿ ಮತಪತ್ರ, ಆದ್ಯತೆ ಮೇಲೆ ಪ್ರವೇಶ, ರ್ಯಾಂಪ್, ಕೋರಿಕೆ ಮೇರೆಗೆ ವಾಹನ ವ್ಯವಸ್ಥೆ ಸಿದ್ಧತೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
Posted by Vidyamaana on 2024-06-06 12:38:36 |
ಬೆಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಭೇಟಿ ಮಾಡಿದರು.
ಬೆಂಗಳೂರಿನಲ್ಲಿ ಇಂದು ವಿಜಯೇಂದ್ರ ಭೇಟಿ ಮಾಡಿದ