ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಸುದ್ದಿಗಳು News

Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

 Share: | | | | |


ಸ್ನೇಹಿತರ ಬೆಟ್ಟಿಂಗ್ - ಯುವತಿಯ ಹಿಂಭಾಗ ಟಚ್ ಮಾಡಿದ ಪೋಲಿ ಇದೀಗ ಪೊಲೀಸರ ಅತಿಥಿ!

Posted by Vidyamaana on 2024-01-31 20:32:27 |

Share: | | | | |


ಸ್ನೇಹಿತರ ಬೆಟ್ಟಿಂಗ್ - ಯುವತಿಯ ಹಿಂಭಾಗ ಟಚ್ ಮಾಡಿದ ಪೋಲಿ ಇದೀಗ ಪೊಲೀಸರ ಅತಿಥಿ!

ಬೆಂಗಳೂರು :ಇತ್ತೀಚೆಗೆ ನಮ್ಮೂರ ಹೋಟೆಲ್‌ನಲ್ಲಿ ನಿಂತಿದ್ದ ಯುವತಿಗೆ ಅಲ್ಲೇ ಇದ್ದ ಯುವಕನೋರ್ವ ಯುವತಿಯ ಹಿಂದಿನ ಭಾಗಕ್ಕೆ ಬೇಕಂತಲೇ ಟಚ್‌ ಮಾಡಿ ಕೀಟಲೆ ಮಾಡಿ ಅಲ್ಲಿಂದ ಎಸ್ಕೇಪ್‌ ಆಗಿದ್ದ. ಈ ಕುರಿತು ಯುವತಿಯ ಪೋಷಕರು ನೀಡಿದ ದೂರಿಯನನ್ವಯ ವಿಜಯನಗರ ಪೊಲೀಸರು ಕೇಸು ದಾಖಲಿಸಿದ್ದು, ಇದೀಗ ಆರೋಪಿ ಚಂದನ್‌ ಎಂಬಾತನನ್ನು ಬಂಧಿಸಿದ್ದಾರೆ.


ಡಿ.30 ರಂದು ಸಂಜೆ 7.30ರ ಸುಮಾರಿಗೆ ಸ್ನೇಹಿತೆಯೊಂದಿಗೆ ನಮ್ಮೂರ ಹೋಟೆಲ್‌ಗೆ ತಿಂಡಿ ತಿನ್ನಲೆಂದು ಯುವತಿ ಬಂದಿದ್ದು, ಆಕೆಯನ್ನು ಕಂಡ ಯುವಕ ಬೇಕೆಂತಲೇ ಆಕೆಯ ಸೊಂಟದ ಹಿಂಭಾಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ. ಕೂಡಲೇ ಯುವತಿ ತರಾಟೆ ತೆಗೆದುಕೊಂಡಾಗ ಅಲ್ಲಿಂದ ಓಡಿ ಹೋಗಿದ್ದ. ಈ ಘಟನೆ ಸಂಬಂಧ ವೀಡಿಯೋ ಜ.18 ರಂದು ವೈರಲ್‌ ಆಗಿತ್ತು. ಯುವತಿ ಪೋಷಕರು ಪೊಲೀಸರಿಗೆ ಈ ಕುರಿತು ದೂರು ನೀಡಿದ್ದು, ತನಿಖೆ ಕೈಗೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ಕಾಮುಕ ಚಂದನ್‌ನನ್ನು ಬಂಧಿಸಿದ್ದಾರೆ.


ಗ್ಯಾಸ್‌ ಸಿಲಿಂಡರ್‌ ಡೆಲಿವರಿ ಕೆಲಸ ಮಾಡುವ ವೃತ್ತಿ ಮಾಡಿಕೊಂಡಿದ್ದ ಆರೋಪಿ ಚಂದನ್‌, ಹಂಪಿನಗರ ನಿವಾಸಿ. ಘಟನೆ ನಡೆದ ದಿನ ಸ್ನೇಹಿತರೊಂದಿಗೆ ಸಿನಿಮಾ ನೋಡಿಕೊಂಡು ಬಂದ ಚಂದನ್‌ ಭರ್ಜರಿ ಪಾರ್ಟಿ, ಕಂಠ ಪೂರ್ತಿ ಕುಡಿದು ಊಟಕ್ಕೆ ಎಂದು ವಿಜಯನಗರ ಹೋಟೆಲ್‌ಗೆ ಬಂದಿದ್ದ. ಊಟ ಮುಗಿಸಿ ಹೋಟೆಲ್‌ ಹೊರಗೆ ಚಂದನ್‌ ಗ್ಯಾಂಗ್‌ ಮಾತಾಡಿಕೊಂಡು ನಿಂತಿದ್ದರು.


ಈ ಸಂದರ್ಭದಲ್ಲಿ ಯುವತಿ ಅಲ್ಲಿಗೆ ಬಂದಿದ್ದಾಳೆ. ಇದನ್ನು ಕಂಡ ಸ್ನೇಹಿತನೋರ್ವ ಆಕೆಯನ್ನು ಮುಟ್ಟಿದರೆ ಐದು ಸಾವಿರ ಕೊಡುತ್ತೀನಿ ಎಂದು ಚಂದನ್‌ಗೆ ಹೇಳಿದ್ದಾನೆ. ಅಷ್ಟಕ್ಕೇ ಚಂದನ್‌ ಕುಡಿದ ಅಮಲಿನಲ್ಲಿ ಹಿಂಬದಿಯಿಂದ ಹೋಗಿ ಯುವತಿಗೆ ಮುಟ್ಟಿ ಅನುಚಿತವಾಗಿ ವರ್ತನೆ ಮಾಡಿ ಕಾಲ್ಕಿತ್ತಿದ್ದ. ನಂತರ ಯುವತಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದು, ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಳು. ಇದೀಗ ಪೊಲೀಸರು ಆರೋಪಿ ಚಂದನ್‌ನನ್ನು ಬಂಧಿಸಿ ಜೈಲಿಗೆ ಕಳಿಸಿದ್ದಾರೆ.

ಅಂಚೆ ಮತದಾನ: ದ.ಕ ಜಿಲ್ಲೆಯಲ್ಲಿ ಬ್ರಿಜೇಶ್ ಚೌಟ ಮುನ್ನಡೆ

Posted by Vidyamaana on 2024-06-04 08:30:13 |

Share: | | | | |


ಅಂಚೆ ಮತದಾನ: ದ.ಕ ಜಿಲ್ಲೆಯಲ್ಲಿ ಬ್ರಿಜೇಶ್ ಚೌಟ ಮುನ್ನಡೆ

ಮಂಗಳೂರು: ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು ದ.ಕ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ

ಉಡುಪಿ ಜಲಪಾತ ವೀಕ್ಷಣೆಗೆ ತೆರಳಿದ ಯುವಕ ಕಾಲು ಜಾರಿ ಬಿದ್ದು ನೀರುಪಾಲು

Posted by Vidyamaana on 2023-07-24 07:23:21 |

Share: | | | | |


ಉಡುಪಿ ಜಲಪಾತ ವೀಕ್ಷಣೆಗೆ ತೆರಳಿದ ಯುವಕ ಕಾಲು ಜಾರಿ  ಬಿದ್ದು ನೀರುಪಾಲು

ಉಡುಪಿ:ಜಲಪಾತ ವೀಕ್ಷಣೆಗೆ ತೆರಳಿದ ಯುವಕ ಕಾಲು ಜಾರಿ ಬಿದ್ದು ನೀರುಪಾಲಾದ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಅರಶಿನಗುಂಡಿ ಜಲಪಾತದಲ್ಲಿ ಸಂಭವಿಸಿದೆ. ಯುವಕ ನೀರಿಗೆ ಬೀಳುತ್ತಿರುವ ಭಯಾನಕ ದೃಶ್ಯ ಸ್ನೇಹಿತನ ಮೊಬೈಲ್ ನಲ್ಲಿ ಸೆರೆಯಾಗಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ನೀರುಪಾಲಾದ ಯುವಕ.


ನಿನ್ನೆ ಭಾನುವಾರವಾದ್ದರಿಂದ ಶರತ್‌ ಮಧ್ಯಾಹ್ನ ಕೊಲ್ಲೂರಿಗೆ ತನ್ನ ಸ್ನೇಹಿತ ಗುರುರಾಜ್ ನೊಂದಿಗೆ ಕಾರಿನಲ್ಲಿ ಬಂದಿದ್ದರು. ಬಳಿಕ ಅಲ್ಲಿಂದ ಶರತ್ ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದರು. ಈ ವೇಳೆ ಬಂಡೆಕಲ್ಲಿನ ಮೇಲೆ ನಿಂತು ಜಲಪಾತದಿಂದ ನೀರು ಧುಮ್ಮಿಕ್ಕುವ ದೃಶ್ಯ ನೋಡುತ್ತಿದ್ದ ವೇಳೆ ಅನಾಹುತ ನಡೆದು ಹೋಗಿದೆ.


ಕೂಡಲೇ ಶರತ್ ಸ್ನೇಹಿತ ಗುರುರಾಜ್ ಸಮೀಪದಲ್ಲಿರುವ ಅರಣ್ಯ ಇಲಾಖೆ ಸಿಬ್ಬಂದಿಗೆ ಸುದ್ದಿ ಮುಟ್ಟಿಸಿದ್ದಾರೆ. ತಕ್ಷಣ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿ ಸ್ಥಳೀಯರ ಸಹಕಾರದಿಂದ ಕಾರ್ಯಾಚರಣೆ ನಡೆಸಿದ್ದಾರೆ .ಆದರೆ ಶರತ್ ಪತ್ತೆಯಾಗಲಿಲ್ಲ. ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಸಿಬ್ಬಂದಿಗಳು, ಕೊಲ್ಲೂರು ಪೊಲೀಸರು ಸೋಮವಾರ ಬೆಳಿಗ್ಗೆನಿಂದಲೂ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, ಈಜುಪಟು ಈಶ್ವರ್ ಮಲ್ಪೆ ಮತ್ತವರ ತಂಡವೂ ಆಗಮಿಸಿದೆ.ಶರತ್ ಸ್ವ ಉದ್ಯೋಗಿಯಾಗಿದ್ದು, ಅವರ ಸ್ನೇಹಿತ ಗುರುರಾಜ್ ಐಟಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು, ಕಳೆದ ಕೆಲ ದಿನಗಳಿಂದ ಮಳೆ ಜೋರಾಗಿ ಸುರಿಯುತ್ತಿದ್ದರಿಂದ ಅರಶಿನಗುಂಡಿ ಜಲಪಾತದಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಲಾಗಿತ್ತು. ಅರಣ್ಯ ಇಲಾಖೆಯ ಸಿಬ್ಬಂದಿ ಪ್ರವೇಶ ದ್ವಾರದಲ್ಲಿರುವುದನ್ನು ಗಮನಿಸಿದ ಶರತ್ ಹಾಗೂ ಆತನ ಸ್ನೇಹಿತ ಬೇರೊಂದು ದಾರಿಯಲ್ಲಿ ಜಲಪಾತಕ್ಕೆ ತೆರಳಿದ್ದರು ಎನ್ನಲಾಗಿದೆ.


ಇನ್ನು ಶರತ್ ಸ್ನೇಹಿತ ಗುರುರಾಜ್ ಜಲಪಾತದ ದೃಶ್ಯಗಳನ್ನು ತನ್ನ ಮೊಬೈಲ್‌ನಲ್ಲಿಸೆರೆ ಹಿಡಿಯುತ್ತಿರುವ ವೇಳೆಯಲ್ಲೇ ಶರತ್ ಕಾಲು ಜಾರಿ ಬಿದ್ದಿದ್ದು, ಆ ದೃಶ್ಯವೂ ಮೊಬೈಲ್ ನಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನೇತ್ರಾವತಿ ನದಿಯಲ್ಲಿ ಈಜಲು ಹೋದ ವಿದ್ಯಾರ್ಥಿ ಸುಹೈಲ್ ನೀರಿನಲ್ಲಿ ಮುಳುಗಿ ಮೃತ್ಯು

Posted by Vidyamaana on 2024-04-21 04:58:04 |

Share: | | | | |


ನೇತ್ರಾವತಿ ನದಿಯಲ್ಲಿ ಈಜಲು ಹೋದ ವಿದ್ಯಾರ್ಥಿ ಸುಹೈಲ್ ನೀರಿನಲ್ಲಿ ಮುಳುಗಿ ಮೃತ್ಯು

ಬಂಟ್ವಾಳ : ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರುಪಾಲಾದ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ಎಂಬಲ್ಲಿ ಶನಿವಾರ ಸಂಜೆ ವೇಳೆಗೆ ಸಂಭವಿಸಿದೆ.

ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13) ನೀರುಪಾಲಾದ ಬಾಲಕ. ಕೆಮ್ಮನ್ ಪಳಿಕೆ ಶಾಲೆಯಲ್ಲಿ ಕಲಿಯುತ್ತಿದ್ದ ಈತ 7 ನೇ ತರಗತಿ ತೇರ್ಗಡೆ ಹೊಂದಿದ್ದ.

   ನೆಚ್ಚಬೆಟ್ಟು ತನ್ನ ಮನೆ ಸಮೀಪದ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿಂದ ಸ್ನೇಹಿತರ ಜೊತೆಗೆ ಪಕ್ಕದ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದು ಆ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.

     

ಹಾಜಿ ಮುಸ್ತಫಾ ಕೆಂಪಿ ಅವರಿಗೆ ಕಾವ್ಯ ನಮನ

Posted by Vidyamaana on 2023-06-27 02:58:33 |

Share: | | | | |


ಹಾಜಿ ಮುಸ್ತಫಾ ಕೆಂಪಿ ಅವರಿಗೆ ಕಾವ್ಯ ನಮನ

*ಅಕ್ಷರ ತರ್ಪಣ*


ಸಣ್ಣ ಪ್ರಾಯ..

ಶತಾಯುಷಿಯ

ಚಿಂತನೆ ಅಭಿಪ್ರಾಯ...


ನಾವು ಮಳೆ ಕಂಡರೆ

ಅವನು ಮೋಡ ಕಾಣುವ..


ನಾಳಿನ ಸಂಗತಿ

ಅರಿಯುವ ಶೀಫ್ರಮತಿ...


ಚಂದದ ನಗು

ಕಣ್ಣೀರು ಅಡಗಿಸುವ ಮಗು...


ಮುಳ್ಳನ್ನು ಮುಳ್ಳಿಂದ 

ತೆಗೆಯುವ ಚಾಕಚಕ್ಯತೆ

ಹೂವ ಮುಡಿಗೇರಿಸುವ ನೈಪುಣ್ಯತೆ...


ಸೌಹಾರ್ದದ ತೇರು

ಕಿಂಚಿತ್ತೂ 

ಅದರಲ್ಲಿ ಇಲ್ಲ ಏರುಪೇರು....


ದುಡ್ಡಿದ್ದರೆ ರಾಜ

ದುಡ್ಡಿಲ್ಲದಿದ್ದರೆ ಮಹಾರಾಜ...


ಪರಿಹಾರವಿಲ್ಲದ ಸಮಸ್ಯೆ ಇಲ್ಲ

ಸಮಸ್ಯೆಗಳು 

ಇವನ ಬಳಿ ನಿಲ್ಲುವುದಿಲ್ಲ...


ಸಂಘರ್ಷ 

ಇವನೆದುರು ಸೋತು

ಸಂಘರ್ಷವೇ ಮರಣದ ಹೇತು...


ಒಡಹುಟ್ಟಿದವನಲ್ಲ

ಆದರೂ ಸಹೋದರ...


ಸಮವಯಸ್ಕನಲ್ಲ

ಆದರೂ ಗೆಳೆಯ...


ಹಿರಿಯನಲ್ಲ

ಆದರೂ ವಿಮರ್ಷಕ....


ಛಲ  ಹೊರತು ಹಠ ಇಲ್ಲ

ಬಲ  ಹೊರತು  ಅಹಂ ಇಲ್ಲ

ಬುದ್ಧಿವಾದ ಹೇಳುವ ಮಾತ್ರವಲ್ಲ

ಬುದ್ದಿವಾದ ಕೇಳುವವ ...


ನಾಳೆ ಕಾಣ ಸಿಗುತ್ತಿ

ಪತ್ರಿಕೆಯೊಂದರ ಒಳಪುಟದಲ್ಲಿ

ಒಂದು ಪಟ ನಾಲ್ಕುಗೆರೆ...

ತಿಂಗಳ ಬಳಿಕ ಪತ್ರಿಕೆ  ಗುಜರಿಗೆ.

ಗುಜರಿಯಿಂದ ದಿನಸಿ ಅಂಗಡಿಗೆ

ಅಲ್ಲಿಂದ ಅದೇ ಪತ್ರಿಕೆಯಲ್ಲಿ

ಕಟ್ಟಿಕೊಟ್ಟ ಸಾಮಾನು

ಪುನ ಅದೇ ಮರಣ ಮನೆಗೆ...


ಬದುಕಿಷ್ಟೇ ಗೆಳೆಯಾ

ಮರೆಯುವರು ,ಎಲ್ಲರೂ ಮರೆಯುವರು

ಎಲ್ಲರನ್ನೂ ಮರೆಯುವರು...

ಇಂದು ನೀನು ಮುಂದೆ

ಮುಂದೆ ನಾನು ನಿನ್ನ ಹಿಂದೆ

ವಿದಾಯದ ವೇಳೆಯಲ್ಲಿ 

ಇದುವೇ  ಮುಸ್ತಾ

ನಿನಗೊಂದು ಕಾವ್ಯ ನಮನ  ಕವನ!


*ಜಮುಕ್ರಿ...*

ಕೆಲಸಕ್ಕೆ ಸೇರಲು ಬಂದಿದ್ದ ಯುವತಿ ಪ್ರೇಮಾ ನಾಪತ್ತೆ

Posted by Vidyamaana on 2024-04-21 12:58:19 |

Share: | | | | |


ಕೆಲಸಕ್ಕೆ ಸೇರಲು ಬಂದಿದ್ದ ಯುವತಿ ಪ್ರೇಮಾ ನಾಪತ್ತೆ

ಉಡುಪಿ ಏಪ್ರಿಲ್ 20 : ಜಿಲ್ಲೆಯ ಉದ್ಯಾವರ ಗ್ರಾಮದ ಪಿತ್ರೋಡಿಯ ಫ್ಯಾಕ್ಟರಿ ಒಂದಕ್ಕೆ ಕೆಲಸಕ್ಕೆ ಸೇರಲು ಬಂದು ಉದ್ಯಾವರದ ರೂಮಿನಲ್ಲಿ ಉಳಿದುಕೊಂಡಿದ್ದ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕು ಕಾಸರಕೋಡ ಮಲಬಾರ ಕೇರಿ ನಿವಾಸಿ ಪ್ರೇಮಾ (25) ಎಂಬ ಯುವತಿಯು ಏಪ್ರಿಲ್ 15 ರಂದು ರೂಮಿನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.



Leave a Comment: