Posted by vidyamaana on 2024-07-03 19:44:44 |
ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.
ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕುಎಂಬುದು ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸುಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.
ಕಾಲೇಜುನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.
ಹೆಚ್ಚುಅನುದಾನ ಕೊಡಿ
ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನುನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರುಮನವಿ ಸಲ್ಲಿಸಿದರು.
Posted by Vidyamaana on 2024-06-21 22:57:59 |
ಪುತ್ತೂರು: ಉಪ್ಪಿನಂಗಡಿ ಪೇಟೆಯಲ್ಲಿರುವ ಪೃಥ್ವಿ ಮಹಲ್ ನ ಫ್ಯಾನ್ಸಿ ಅಂಗಡಿಯೊಂದರಲ್ಲಿ ಶುಕ್ರವಾರ ರಾತ್ರಿ ಬೆಂಕಿ ಕಾಣಿಸಿಕೊಂಡು ಅಂಗಡಿಯನ್ನು ಸಂಪೂರ್ಣವಾಗಿ ಆವರಿಸಿ ಪಕ್ಕದಲ್ಲಿನ ಕೆಲವು ಅಂಗಡಿಗಳಿಗೆ ವ್ಯಾಪಿಸಿ ಹಾನಿಯುಂಟಾಗಿದೆ.
ಪೃಥ್ವಿ ಮಹಲ್ ನಲ್ಲಿನ ಅಂಗಡಿ ಮಾಲಕರು ರಾತ್ರಿ ತಮ್ಮ ಅಂಗಡಿಗಳನ್ನು ಮುಚ್ಚಿ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.
Posted by Vidyamaana on 2023-04-11 10:04:02 |
ಸುಳ್ಯ: ಗಡಿ ಪ್ರದೇಶ ಅಡೂರ್ ಎಂಬಲ್ಲಿ ಅಡೂರ್ ಹೊಳೆಯಲ್ಲಿ ಇಬ್ಬರು ಮಕ್ಕಳು ಮುಳುಗಿ ಮೃತಪಟ್ಟ ಘಟನೆ ನಡೆದಿದೆ.
ಕೂಡಲೇ ಸ್ಥಳೀಯರು ಅಸ್ಪತ್ರೆಗೆ ತಲುಪಿಸಿದರು ಮಕ್ಕಳ ಪ್ರಾಣ ಉಳಿಯಲ್ಲ.
ನಾಲ್ಕು ವರ್ಷದ ಮಕ್ಕಳು ಮನೆಯವರಿಗೆ ತಿಳಿಯದೆ ಹೊಳೆಗೆ ಹೋಗಿದ್ದಾರೆನ್ನಲಾಗಿದೆ
Posted by Vidyamaana on 2023-05-25 05:22:44 |
ತೈವಾನ್: ಇತ್ತೀಚೆಗಷ್ಟೇ 134 ಕೋಟಿ ರೂ.ಗಳ ಆಸ್ತಿಗೆ ಉತ್ತರಾಧಿಕಾರಿಯಾಗಿದ್ದ ತೈವಾನ್ ಮೂಲದ ಯುವಕನೊಬ್ಬ ತಾನು ಮದುವೆಯಾದ ಕೇವಲ 2 ಗಂಟೆಗಳಲ್ಲೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.ಲೈ ಎನ್ನುವ 18 ವರ್ಷದ ಯುವಕನ ತಂದೆ ಎಪ್ರಿಲ್ನಲ್ಲಿ ಮೃತಪಟ್ಟಿದ್ದು ಅವರ ಸಂಪೂರ್ಣ ಆಸ್ತಿಗೆ ಮಗನನ್ನು ಉತ್ತರಾಧಿಕಾರಿಯನ್ನಾಗಿಸಿದ್ದಾರೆ. ಬಳಿಕ ಅವರ ಆಸ್ತಿಯ ಮೇಲ್ವಿಚಾರಕರಾದ ರಿಯಲ್ ಎಸ್ಟೇಟ್ ಏಜೆಂಟ್ ಎಸ್ಸಿಯಾ ಎಂಬುವವರು 2 ಬಾರಿ ಲೈನನ್ನು ಭೇಟಿಯಾಗಿದ್ದಾರೆ. ಅನಂತರ ಇದ್ದಕ್ಕಿದ್ದಂತೆ ಮೇ 4ರಂದು ಎಸ್ಸಿಯಾ ಮನೆಯಲ್ಲಿ ಲೈ ಶವವಾಗಿ ಪತ್ತೆಯಾಗಿದ್ದು, ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಬಿಂಬಿಸಲಾಗಿದೆ. ಮತ್ತೂಂದೆಡೆ ಲೈ ಮತ್ತು ಎಸ್ಸಿಯಾ ಸಲಿಂಗಕಾಮಿಗಳಾಗಿದ್ದರು ಈ ಹಿನ್ನೆಲೆ ಲೈ ಎಸ್ಸಿಯಾ ಜತೆಗೆ ತಾನು ಸಾಯುವ 2 ಗಂಟೆಗೆ ಮೊದಲಷ್ಟೇ ವಿವಾಹ ನೋಂದಣಿ ಮಾಡಿಕೊಂಡಿದ್ದರು ಎಂಬುದು ತಿಳಿದುಬಂದಿದೆ. ಇತ್ತ ಲೈ ಅವರ ತಾಯಿ ತನ್ನ ಮಗ ಸಲಿಂಗಕಾಮಿ ಎನ್ನುವುದನ್ನು ತಳ್ಳಿ ಹಾಕಿದ್ದಾರೆ. ಅಲ್ಲದೇ ತೈವಾನ್ ಕಾನೂನಿನ ಪ್ರಕಾರ ಸಾಮಾನ್ಯ ವಿವಾಹವಾದ ದಂಪತಿಗಿರುವಂತೆಯೇ, ಸಲಿಂಗ ದಂಪತಿಗೂ ಸಂಗಾತಿಯ ಪಿತ್ರಾರ್ಜಿತ ಆಸ್ತಿಯಲ್ಲಿ ಹಕ್ಕಿರುವ ಹಿನ್ನೆಲೆ ಎಸ್ಸಿಯನೆ ಈ ಸಂಚು ರೂಪಿಸಿ ತನ್ನ ಮಗನನ್ನು ಕೊಂದಿದ್ದಾನೆಂದು ಆರೋಪಿಸಿದ್ದಾರೆ.
Posted by Vidyamaana on 2024-03-05 17:45:47 |
ಪುತ್ತೂರು: ದೇವಸ್ಥಾನದ ಜಾಗದ ವಿಚಾರದಲ್ಲಿ ಸತಾಯಿಸುತ್ತಿದ್ದ ಪುತ್ತೂರು ಸಹಾಯಕ ಆಯುಕ್ತರ ಕಚೇರಿ ಸಿಬ್ಬಂದಿಯನ್ನು ಶಾಸಕ ಅಶೋಕ್ ಕುಮಾರ್ ರೈ ತರಾಟೆಗೆತ್ತಿಕೊಂಡ ಘಟನೆ ಮಂಗಳವಾರ ನಡೆಯಿತು.
ಎಸಿ ಸಹಾಯಕ ಆಯುಕ್ತರ ಕಚೇರಿಗೆ ದಿಡೀರನೆ ಭೇಟಿ ನೀಡಿದ ಶಾಸಕರು, ಕೇಸ್ ವರ್ಕರ್ ಪೂವಪ್ಪ ಅವರನ್ನು ತರಾಟೆಗೆತ್ತಿಕೊಂಡರು.
ಕರೆ ಮಾಡಿದರೆ ಸ್ವೀಕರಿಸುವುದಿಲ್ಲ. ನಾನೇನು ನನ್ನ ಮನೆ ಕೆಲಸಕ್ಕೆ ಕರೆ ಮಾಡಿರುವುದಲ್ಲ. ಸ್ವಲ್ಪ ಜವಾಬ್ದಾರಿಯಿಂದ ವರ್ತಿಸಿ ಎಂದ ಶಾಸಕರು, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಜಾಗದ ವಿಚಾರಕ್ಕೆ ಸಂಬಂಧಿಸಿ ಫೈಲ್ ಪುಟಪ್ ಮಾಡದೆ ಸತಾಯಿಸುತ್ತಿರುವುದರ ಬಗ್ಗೆ ವಿಚಾರಿಸಿದರು.
ಶನಿವಾರದೊಳಗೆ ಫೈಲ್ ಪುಟಪ್ ಆಗಬೇಕು. ಇಲ್ಲದಿದ್ದರೆ ಶನಿವಾರ ಸಂಜೆ ಕಚೇರಿಗೆ ಆಗಮಿಸುವುದಾಗಿ ಎಚ್ಚರಿಕೆ ನೀಡಿದರು.
Posted by Vidyamaana on 2023-12-08 10:30:16 |
ಸುರತ್ಕಲ್: ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹವಾಗಿದ್ದಾರೆ ಎನ್ನುವ ಪೋಟೋ ವೈರಲ್ ಆಗಿದ್ದು ಇದರ ನಿಖರತೆ ಇನ್ನಷ್ಟೇ ತಿಳಿದುಬರಬೇಕಿದೆ.
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ 7ನೇ ಬ್ಲಾಕ್ ಕಾಟಿಪಳ್ಳದ ಯುವಕ ಪ್ರಶಾಂತ್ ಭಂಡಾರಿ (31) ಹಾಗೂ 3ನೇ ಬ್ಲಾಕ್ ಆಶ್ರಯ ಕಾಲೋನಿ ನಿವಾಸಿ ಆಯೇಷಾ (19) ಡಿ.1 ರಂದು ನಾಪತ್ತೆಯಾಗಿದ್ದರು.
ಇವರಿಬ್ಬರು ವಿವಾಹವಾಗಿದ್ದಾರೆ ಎನ್ನುವ ಪೋಟೋವನ್ನು ಅವರ ಮಿತ್ರರು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ.
ಅಯೇಷಾ ತನ್ನ ಹೆಸರನ್ನು ಅಕ್ಷತಾ ಎಂದು ಬದಲಿಸಿಕೊಂಡಿದ್ದಾರೆ. ನಾಪತ್ತೆಯಾದ ದಿನ ಆಯೇಷಾ ತಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಯುವತಿ ಕುಟೂಂಬ ಮೂಲತಃ ಕಾರವಾರದ ಮುಂಡಗೋಡದವರಾಗಿದ್ದು, ಈಕೆಯ ತಂದೆ ಸ್ಥಳೀಯದವರಾಗಿದ್ದು , ಸ್ಥಳೀಯವಾಗಿ ಉದ್ಯೋಗದಲ್ಲಿದ್ದಾರೆ. ಅವರ ಪತ್ತೆಗೆ ಪೊಲೀಸರು ಕಾರ್ಯೋನ್ಮುಖರಾಗಿದ್ದಾರೆ
Posted by Vidyamaana on 2023-12-15 15:03:14 |
ನವದೆಹಲಿ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.ಸಂಸತ್ ಭವನದಲ್ಲಿ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ದೇವೇಗೌಡ ಮತ್ತು ಖರ್ಗೆ ಅವರು ಮಾತುಕತೆ ನಡೆಸಿದರು. ಈ ಬಗ್ಗೆ ಟ್ವೀಟ್ ಮಾಡಿದ ರಾಜ್ಯಸಭಾ ಸದಸ್ಯ ರಾಜೀವ್ ಶುಕ್ಲಾ, “ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರನ್ನು ಸಂಸತ್ತಿನ ಭವನದಲ್ಲಿ ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದರು” ಎಂದರು.