ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಸುದ್ದಿಗಳು News

Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

 Share: | | | | |


ಪುತ್ತೂರು ಬಿಜೆಪಿ ಟಿಕೆಟ್‌ ತಪ್ಪಿದ ಹಿನ್ನೆಲೆ ಇಂದು ಸಂಜೆ ಅರುಣ್ ಪುತ್ತಿಲ ಬೆಂಬಲಿಗರ ತುರ್ತು ಸಭೆ

Posted by Vidyamaana on 2023-04-12 04:38:26 |

Share: | | | | |


ಪುತ್ತೂರು ಬಿಜೆಪಿ ಟಿಕೆಟ್‌ ತಪ್ಪಿದ ಹಿನ್ನೆಲೆ ಇಂದು ಸಂಜೆ ಅರುಣ್ ಪುತ್ತಿಲ ಬೆಂಬಲಿಗರ ತುರ್ತು ಸಭೆ

ಪುತ್ತೂರು: ಜಿಲ್ಲೆಯ ಪ್ರಭಾವಿ ಹಿಂದೂ ಸಂಘಟನೆಯ ಮುಂದಾಳು ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಎ.12 ರಂದು ಬೆಂಬಲಿಗರ ನೇತೃತ್ವದಲ್ಲಿ ಇಂದು ಸಂಜೆ  ಕೋಟೇಚಾ ಹಾಲ್ ನಲ್ಲಿ ತುರ್ತು ಸಭೆ ನಡೆಯಲಿದೆ.ಅಭ್ಯರ್ಥಿಯಾಗಿ ಆಯ್ಕೆ ಮಾಡುವಂತೆ ಅವರ ಬೆಂಬಲಿಗರು ಟ್ವಿಟರ್ ಅಭಿಯಾನದ ಮೂಲಕ ನರೇಂದ್ರ ಮೋದಿ, ಅಮಿತ್ ಶಾ ಅವರ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದರು. ಬಿಜೆಪಿಯ ಸರ್ವೇ ಕಾರ್ಯದಲ್ಲಿ ಕೇಳಿ ಬಂದಿದ್ದ ಆಕಾಂಕ್ಷಿತರ ಪಟ್ಟಿಯಲ್ಲಿ ಅರುಣ್ ಹೆಸರು ಕೂಡ ಇತ್ತು ಎನ್ನಲಾಗಿದ್ದು ಹೀಗಾಗಿ ಈ ಬಾರಿ ಅರುಣ್ ಅವರಿಗೆ ಟಿಕೇಟ್ ಸಿಗುವ ನಿರೀಕ್ಷೆಯನ್ನು ಬೆಂಬಲಿಗರು ಹೊಂದಿದ್ದರು.ಪಕ್ಷೇತರ ಸ್ಪರ್ದೆಗೆ ಒತ್ತಡ:

ಎ.10 ರಂದು ರಾತ್ರಿ ಪ್ರಕಟವಾದ ಬಿಜೆಪಿ ಅಭ್ಯರ್ಥಿ ಪಟ್ಟಿಯಲ್ಲಿ ಅರುಣ್ ಪುತ್ತಿಲ ಹೆಸರಿಲ್ಲದ ಹಿನ್ನೆಲೆಯಲ್ಲಿ ಅರುಣ್ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಪಕ್ಷೇತರರಾಗಿ ಕಣಕ್ಕಿಳಿಯುವಂತೆ ಒತ್ತಡ ಹೇರಲಾಗಿದೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ತುರ್ತು ಸಭೆ ಮಹತ್ವ ಪಡೆದಿದೆ.

ಅಡ್ಯಾರ್ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಮೊಹಮ್ಮದ್ ನಶಾತ್ ಸ್ಥಳದಲ್ಲೇ ಮೃತ್ಯು

Posted by Vidyamaana on 2023-07-19 10:15:21 |

Share: | | | | |


ಅಡ್ಯಾರ್ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಮೊಹಮ್ಮದ್ ನಶಾತ್ ಸ್ಥಳದಲ್ಲೇ ಮೃತ್ಯು

ಮಂಗಳೂರು, ಜುಲೈ 19: ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.‌


ವಳಚ್ಚಿಲ್ ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ, ಕೇರಳ ಮೂಲದ ಮಹಮ್ಮದ್ ನಶತ್ (21) ಮೃತ ವಿದ್ಯಾರ್ಥಿ. ಯುವಕ ಪಡೀಲ್ ಕಡೆಯಿಂದ ವಳಚ್ಚಿಲ್ ಕಾಲೇಜು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ, ಸ್ಕಿಡ್ ಆಗಿದ್ದು ಡಿವೈಡರ್ ಬಡಿದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೀವ್ರ ಗಾಯಗೊಂಡು 11.40ರ ಸುಮಾರಿಗೆ ಘಟನೆ ನಡೆದಿದ್ದು ಮಂಗಳೂರು ಸಂಚಾರಿ ದಕ್ಷಿಣ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ.‌ ಕೇರಳ ಮೂಲದ ವಿದ್ಯಾರ್ಥಿ ಎನ್ನುವ ಮಾಹಿತಿಯಿದೆ. ಹೆಚ್ಚಿನ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.


ಅತಿ ವೇಗದ ಚಾಲನೆಯಿಂದಲೇ ಅಪಘಾತ ಆಗಿದೆಯೆಂದು ಪೊಲೀಸರು ತಿಳಿಸಿದ್ದಾರೆ. ‌

ಸ್ಲೀಪರ್ ಕೋಚ್ ಬಸ್​​ನಲ್ಲೇ ವಿಷ ಸೇವಿಸಿ ನಿದ್ರಿಸಿದ ಪ್ರೇಮಿಗಳು: ಯುವತಿ ಸಾವು, ಯುವಕ ಪಾರು

Posted by Vidyamaana on 2023-06-06 23:03:01 |

Share: | | | | |


ಸ್ಲೀಪರ್ ಕೋಚ್ ಬಸ್​​ನಲ್ಲೇ ವಿಷ ಸೇವಿಸಿ ನಿದ್ರಿಸಿದ ಪ್ರೇಮಿಗಳು: ಯುವತಿ ಸಾವು, ಯುವಕ ಪಾರು

ಹಾವೇರಿ: ವಿವಾಹಕ್ಕೆ ಪೋಷಕರ ವಿರೋಧ ಹಿನ್ನೆಲೆ ಪ್ರೇಮಿಗಳು ಸ್ಲೀಪರ್ ಕೋಚ್ ಬಸ್​ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ (Suicide) ಯತ್ನಿಸಿದ್ದಾರೆ. ಹಾವೇರಿಯಲ್ಲಿ (Haveri) ನಡೆದ ಈ ಘಟನೆಯಲ್ಲಿ ಯುವತಿ ಸಾವನ್ನಪ್ಪಿದ್ದು, ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹೇಮಾ ರಾಮಕೃಷ್ಣಪ್ಪ (20) ಮೃತ ಯುವತಿಬಾಗಲಕೋಟೆ ಮೂಲದ ಅಖಿಲ್​​ ಮತ್ತು ಅಂತಿಮ ವರ್ಷದ ಬಿಕಾಂ ಓದುತ್ತಿದ್ದ ಬೆಂಗಳೂರು ಮೂಲದ ಹೇಮಾ ರಾಮಕೃಷ್ಣಪ್ಪ ಪರಸ್ಪರ ಪ್ರೀತಿಸುತ್ತಿದ್ದು, ಬಾಳುವುದಾದರೆ ಇಬ್ಬರೂ ಜೊತೆಗೆ ಬಾಳುವ ನಿರ್ಣಯ ಮಾಡಿಕೊಂಡು ಮದುವೆಯಾಗಲು ನಿರ್ಧರಿಸಿದ್ದಾರೆ. ಆದರೆ ಪ್ರೇಮ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ನೊಂದ ಅಖಿಲ್ ಮತ್ತು ಹೇಮಾ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ.

ತಮ್ಮ ಪ್ರೇಮ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ನೊಂದ ಪ್ರೇಮಿಗಳು ಸ್ಲೀಪರ್ ಕೋಚ್ ಬಸ್ ಹತ್ತಿದ್ದಾರೆ. ನಂತರ ವಿಷ ಸೇವಿಸಿಕೊಂಡ ಅಖಿಲ್ ಮತ್ತು ಹೇಮಾ ನಿದ್ರಿಸಿದ್ದಾರೆ. ಊಟಕ್ಕೆಂದು ಮಾರ್ಗಮಧ್ಯೆ ಹೋಟೆಲ್​ ಬಳಿ ಬಸ್ ನಿಲ್ಲಿಸಿದ್ದಾಗ ವಿಷದ ವಾಸನೆ ಬರುವುದನ್ನು ಗಮನಿಸಿದ ಪ್ರಯಾಣಿಕರು ಪರಿಶೀಲನೆ ನಡೆಸಿದಾಗ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ.ಕೂಡಲೇ ಎಚ್ಚೆತ್ತ ಪ್ರಯಾಣಿಕರು ಸ್ಥಳೀಯರ ಸಹಾಯದಿಂದ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದರೂ ದುರಾದೃಷ್ಟವಶಾತ್ ಹೇಮಾ ಕೊನೆಯುಸಿರೆಳೆದಿದ್ದಾಳೆ. ಪ್ರಜ್ಞೆ ಕಳೆದುಕೊಂಡಿದ್ದ ಅಖಿಲ್​ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಪಟ್ಟಣದ ಚಳಗೇರಿ ಟೋಲ್ 5 ದಿನಗಳ ಹಿಂದೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ರಾಣೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆಗೂ ಮುನ್ನ ಪೋಷಕರಿಗೆ ಹೇಮಾ ಹೇಳಿದ್ದೇನು?

ಆತ್ಮಹತ್ಯೆಗೂ ಮುನ್ನ ಹೇಮಾ ಪೋಷಕರಿಗೆ ದೂರವಾಣಿ ಕರೆ ಮಾಡಿದ್ದಾಳೆ. ನಮ್ಮ ಮದುವೆಗೆ ನೀವು ಒಪ್ಪಿಗೆ ಕೊಡಲ್ಲ ಅನ್ನೋದು ಗೊತ್ತಾಯ್ತು. ಹೀಗಾಗಿ ಬಾಂಬೆಗೆ ಹೋಗುತ್ತಾ ಇದ್ದೇವೆ ಪೋಷಕರಿಗೆ ತಿಳಿಸಿದ್ದಾಳೆ. ಇಷ್ಟು ಹೇಳಿ ಕಾಲ್ ಕಟ್ ಮಾಡಿದ್ದ ಹೇಮಾ ಮತ್ತು ಅಖಿಲ್ ಬಾಂಬೆಗೆ ಹೋಗದೆ ಬಸ್​ನಲ್ಲಿ ವಿಷ ಸೇವಿಸಿದ್ದಾರೆ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬೇಕಿದ್ರೆ ಹೀಗೆ ಮಾಡಿ!?? ವೈರಲ್ ಮೆಸೇಜ್

Posted by Vidyamaana on 2024-06-05 16:31:52 |

Share: | | | | |


ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬೇಕಿದ್ರೆ ಹೀಗೆ ಮಾಡಿ!?? ವೈರಲ್ ಮೆಸೇಜ್

ಬೆಂಗಳೂರು :- ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬೇಕಾ? ಡಿಎಂ ಮಾಡಿ. ಡಿಎಂ ಮಾಡುವುದರ ಜೊತೆಗೆ ಪೇಜ್ ಲೈಕ್ ಮಾಡಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ಲೈಕ್​ಗಳಿಗಾಗಿ ಕಿಡಿಗೇಡಿಗಳು ದಂಧೆಗಿಳಿದಿದ್ದಾರೆ.

ಇತ್ತೀಚೆಗೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಕೆಲವು ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಇಡೀ ಹಾಸನದೆಲ್ಲೆಡೆ ಹರಿದಾಡಿತ್ತು. ಕಿಡಿಗೇಡಿಗಳು ಪ್ರಜ್ವಲ್ ರೇವಣ್ಣ ಹೆಸರು ಹಾಳು ಮಾಡುವ ಉದ್ದೇಶದಿಂದ ಹಾಸನದ ಬಸ್ ನಿಲ್ದಾಣ ಸೇರಿದಂತೆ ಎಲ್ಲಾ ಕಡೆ ಪೆನ್ ಡ್ರೈವ್​ಗಳನ್ನು ಇಟ್ಟಿದ್ದರು. ಸಾಮಾಜಿಕ ಜಾಲತಾಣಗಳಲ್ಲೂ ವಿಡಿಯೋ ಹರಿಬಿಟ್ಟಿದ್ದರು. ಮಹಿಳೆಯ ಮುಖ ಕೂಡ ಬ್ಲರ್ ಮಾಡಿರಲಿಲ್ಲ. ವಿಡಿಯೋ ವೈರಲ್ ಆದ ಬಳಿಕ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಅದೆಷ್ಟೋ ಮಹಿಳೆಯರು ಸಾಯಲು ಯತ್ನಿಸಿದ್ದಾರೆ. ಕುಟುಂಬದಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ. ಮಾನನಷ್ಟ ಅನುಭವಿಸಿದ್ದಾರೆ. ಇದೆಲ್ಲ ಒಂದು ಕಡೆ ಆದ್ರೆ ಮತ್ತೊಂದೆಡೆ ಕೆಲ ಕಿಡಿಗೇಡಿಗಳು ಇದೇ ವಿಡಿಯೋಗಳನ್ನು ಇಟ್ಟುಕೊಂಡು ದಂಧೆಗೆ ಇಳಿದಿದ್ದಾರೆ.

ಕೊಳ್ತಿಗೆ : ಹಾಡಹಗಲೇ ಮಹಿಳೆಯ ಚಿನ್ನದ ಸರ ಎಗರಿಸಿದ ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು

Posted by Vidyamaana on 2024-02-03 11:15:11 |

Share: | | | | |


ಕೊಳ್ತಿಗೆ : ಹಾಡಹಗಲೇ ಮಹಿಳೆಯ ಚಿನ್ನದ ಸರ ಎಗರಿಸಿದ ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು

ಬೆಳ್ಳಾರೆ : ಮಹಿಳೆಯೊಬ್ಬರ ಚಿನ್ನದ ಸರವನ್ನು ಅಪರಿಚಿತರು ಸುಲಿಗೆ ಮಾಡಿದ ಪ್ರಕರಣವನ್ನು ಬೆಳ್ಳಾರೆ ಪೊಲೀಸರು ಭೇಧಿಸಿದ್ದು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.


ಪುತ್ತೂರು ನರಿಮೊಗರು ನಿವಾಸಿ ನೌಶಾದ್ ಬಿ.ಎ., ಕೇರಳ ನಿವಾಸಿ ಚಂದ್ರಮೋಹನ್ ಬಂಧಿತರು.



ದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ ಜ.11 ರಂದು ಮಧ್ಯಾಹ್ನ ಮಹಿಳೆಯೊಬ್ಬರ ಚಿನ್ನದ ಸರವನ್ನು ಅಪರಿಚಿತರು ಸುಲಿಗೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ. ಕ್ರ 08/2024 ಕಲಂ 392 ಜೊತೆಗೆ 34 ಐ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಶೀಘ್ರ ಪತ್ತೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಿದ್ದು, ಸದ್ರಿ ತನಿಖಾ ತಂಡವು ಪ್ರಕರಣದ ತನಿಖೆ ನಡೆಸಿ, ನೌಶಾದ್ ಬಿ ಎ (36) ಮತ್ತು ಸುಲಿಗೆಗೆ ಸಹಕರಿಸಿದ ಕಾಸರಗೋಡು ಉದ್ಯಾವರ ನಿವಾಸಿ ಚಂದ್ರಮೋಹನ್ (42) ಎಂಬವರುಗಳನ್ನು ವಶಕ್ಕೆ ಪಡೆದಿದ್ದಾರೆ.


ಸದ್ರಿ ಆರೋಪಿಗಳಿಂದ ರೂ 80,000/- ಮೌಲ್ಯದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ ರೂ 1,00,000/- ಮೌಲ್ಯದ ಸ್ಕೂಟರನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ.


ಸದ್ರಿ ಪ್ರಕರಣದ ಪತ್ತೆಗಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ. ಬಿ ರಿಷ್ಯಂತ್ ಐ ಪಿ ಎಸ್, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಧರ್ಮಪ್ಪ ಕೆ ಎಸ್ ಪಿ ಎಸ್ ಮತ್ತು ರಾಜೇಂದ್ರ ಕೆಎಸ್‌ಪಿಎಸ್ ರವರುಗಳ ಮುಂದಾಳತ್ವದಲ್ಲಿ, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಅರುಣ್ ನಾಗೇಗೌಡ ರವರ ನೇತೃತ್ವದಲ್ಲಿ, ಸುಳ್ಯ ವೃತ್ತ ನಿರೀಕ್ಷಕರಾದ ಮೋಹನ್ ಕೊಠಾರಿ , ಬೆಳ್ಳಾರೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರುಗಳಾದ ಸಂತೋಷ್ ಬಿ.ಪಿ ಮತ್ತು ಅಶೋಕ್ ಸಿಎಂ ರವರ ಎರಡು ವಿಶೇಷ ತನಿಖಾ ತಂಡಗಳು ಕಾರ್ಯಾಚರಿಸಿರುತ್ತದೆ.


ಸದ್ರಿ ತನಿಖಾ ತಂಡದಲ್ಲಿ ಎ ಎಸ್ ಐ ದಾಮೋದರ ನಾಯ್ಕ, ಸಿಬ್ಬಂದಿಗಳಾದ ನವೀನ್ ಕಟ್ಟತ್ತಾರು , ಸತೀಶ್ ಬಿ, ಕೃಷ್ಣಪ್ಪ, ಚಂದ್ರಶೇಖರಗೌಡ, ಚಂದ್ರಶೇಖರ ಗೆಜ್ಜಳ್ಳಿ, ಮಂಜುನಾಥ, ಚೇತನ, ಪ್ರವೀಣ ಬಾರ್ಕಿ, ಸಂತೋಷ ಕೆ ಜಿ, ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ, ಸಂಪತ್ ರವರುಗಳು ಕಾರ್ಯನಿರ್ವಹಿಸಿರುತ್ತಾರೆ.


ಸದ್ರಿ ತನಿಖಾ ತಂಡದ ಕಾರ್ಯಾಚರಣೆಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸಿದ್ದು, ಸಾರ್ವಜನಿಕ ವಲಯದಲ್ಲಿಯೂ ಪ್ರಶಂಸೆಯನ್ನು ವ್ಯಕ್ತವಾಗಿದೆ.

ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸಿಎ ದಿನಾಚರಣೆ

Posted by Vidyamaana on 2023-07-01 11:34:46 |

Share: | | | | |


ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸಿಎ ದಿನಾಚರಣೆ

ಪುತ್ತೂರು: ವಿದ್ಯಾರ್ಥಿಗಳ ಜೀವನದಲ್ಲಿ ನಿಶ್ಚಿತವಾದ ಗುರಿಯಿದ್ದರೆ ಮಾತ್ರ ಯಶಸ್ಸು ಸಾಧ್ಯ. ಗುರಿಯನ್ನು ಸಾಧಿಸುವ ಛಲ ಪ್ರತಿಯೊಬ್ಬರಲ್ಲೂ ಇರಬೇಕು. ನಿರಂತರ ಪ್ರಯತ್ನದಿಂದ ಗೆಲುವು  ಸಾಧ್ಯ ಎಂದು ಮಂಗಳೂರಿನ ಚಾರ್ಟೆಡ್ ಅಕೌಂಟೆಂಟ್ ಆಗಿರುವ ಎಂ ಜಗನ್ನಾಥ ಕಾಮತ್ ಅಂಡ್ ಕೋ ಇದರ ಮ್ಯಾನೇಜಿಂಗ್ ಪಾರ್ಟ್ನರ್ ಆಗಿರುವ ಸಿಎ ಎಂ ಜಗನ್ನಾಥ ಕಾಮತ್ ಹೇಳಿದರು ಅವರು ಜುಲೈ ೧ರಂದು ಸಂತ ಫಿಲೋಮಿನ ಪದವಿಪೂರ್ವ ಕಾಲೇಜಿನ ವಾಣಿಜ್ಯ ಸಂಘದ ಆಶ್ರಯದಲ್ಲಿ ನಡೆದ ವಾಣಿಜ್ಯ ಸಂಘದ ಉದ್ಘಾಟನೆ ಮತ್ತು ರಾಷ್ಟ್ರೀಯ ಸಿಎ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಸಿಎ ಮಾಡಲು ವಿದ್ಯಾರ್ಥಿಗಳಿಗೆ ಲೆಕ್ಕಪತ್ರ ನಿರ್ವಹಣೆ, ಹಣಕಾಸು, ಸಾಮಾನ್ಯ ಗಣಿತ ಇನ್ನಿತರ ಕ್ಷೇತ್ರದಲ್ಲಿ ಪದವಿ ಅಗತ್ಯವಿರುತ್ತದೆ. ಸಿಎ ಮಾಡಲು ಬೇಕಾದ ಅರ್ಹತೆ ಪರಿಶ್ರಮದ ಬಗ್ಗೆ ತಿಳಿಸಿದರು.

ಮುಖ್ಯ ಅತಿಥಿಗಳಾದ ಫೈನಾನ್ಸಿಯಲ್ ಎನಾಲಿಸ್ಟ್ ಅಟ್ ಅಮೆಜಾನ್ ನ ಸಿಎ ಕೆ ಮಹಮ್ಮದ್ ಫೈರೋಜ್ ಮಾತನಾಡಿ “ವೈಫಲ್ಯವು ಯಶಸ್ಸಿನ ಮೆಟ್ಟಿಲು ಕಷ್ಟಪಟ್ಟು”. ಓದಿ ವಿಷಯವನ್ನು ಸರಿಯಾಗಿ ಗ್ರಹಿಸಿಕೊಂಡಾಗ ವಿದ್ಯಾರ್ಥಿಗಳು ಸಿಎ ಆಗಲು ಸಾಧ್ಯವಾಗುತ್ತದೆ. ನಿರಂತರ ಪರಿಶ್ರಮ ಅತ್ಯಗತ್ಯ ಎಂದು ವಿದ್ಯಾರ್ಥಿಗಳಿಗೆ ಹೇಳಿದರು.

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ ವಾಣಿಜ್ಯಶಾಸ್ತವನ್ನು ಅಧ್ಯಯನ ಮಾಡುವುದರಿಂದ ಹಲವಾರು ಅವಕಾಶಗಳು ಸಿಗುತ್ತದೆ. ಬ್ಯಾಂಕಿAಗ್ ಕ್ಷೇತ್ರ, ಚಾರ್ಟೆಡ್ ಅಕೌಂಟೆAಟ್ ನಂತಹ ಬೇರೆ ಬೇರೆ ಕ್ಷೇತ್ರಗಳು ವಿದ್ಯಾರ್ಥಿಗಳ ಮುಂದೆ ತೆರೆದಿದ್ದು ಇದರ ಸದುಪಯೋಗವನ್ನು ಪಡೆದುಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ವಾಣಿಜ್ಯ ಸಂಘದ ನಿರ್ದೇಶಕರು ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ ವಿದ್ಯಾರ್ಥಿಗಳಾದ ನಿಧಾ ಅತಿಥಿಗಳನ್ನು ಸ್ವಾಗತಿಸಿ ಪ್ರತೀಕ್ಷಾ ಅತಿಥಿಗಳನ್ನು ಪರಿಚಯಿಸಿದರು. ಆಸ್ತಿಕ ವಂದಿಸಿ ನಿಶ್ಚಿತ ಕಾರ್ಯಕ್ರಮ ನಿರೂಪಿಸಿದರು



Leave a Comment: