ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಸುದ್ದಿಗಳು News

Posted by vidyamaana on 2024-07-03 08:24:56 |

Share: | | | | |


ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.

ವರ್ಗಾವಣೆಗೊಂಡ ಕೆಎಎಸ್‌ ಅಧಿಕಾರಿಗಳು

ಡಾ. ಜಗದೀಶ್‌ ಕೆ. ನಾಯಕ್‌

ರಘುನಂದನ್‌ ಎ.ಎನ್‌

ಪ್ರಸನ್ನ ಕುಮಾರ್‌ ವಿ.ಕೆ

ಹುಲ್ಲುಮನಿ ತಿಮ್ಮಣ್ಣ

ವರ್ಗಾವಣೆಗೊಂಡ ಐಪಿಎಸ್‌ ಅಧಿಕಾರಿಗಳು

ಬಿ. ರಮೇಶ -ಡಿಐಜಿಪಿ, ಪೂರ್ವ ವಲಯ, ದಾವಣಗೆರೆ

ಎನ್. ವಿಷ್ಣು ವರ್ಧನ್ -ಎಸ್.ಪಿ. ಮೈಸೂರು ಜಿಲ್ಲೆ

ಸೀಮಾ ಲಾಟ್ಕರ್ -ಪೊಲೀಸ್ ಆಯುಕ್ತರು, ಮೈಸೂರು ನಗರ

ರೇಣುಕಾ ಸುಕುಮಾರ -ಎಐಜಿಪಿ ಬೆಂಗಳೂರು ಡಿಜಿ ಕಚೇರಿ

ಸಿ.ಕೆ. ಬಾಬಾ -ಎಸ್.ಪಿ. ಬೆಂಗಳೂರು ಗ್ರಾಮಾಂತರ

ಸುಮನ್ ಡಿ. ಪೆನ್ನೇಕರ್ -ಎಸ್‌ ಪಿ, ಬಿಎಂಟಿಎಫ್

ಸಿ.ಬಿ. ರಿಷ್ಯಂತ್ -ಎಸ್.ಪಿ

ಚನ್ನಬಸವಣ್ಣ - ಎಐಜಿಪಿ, ಆಡಳಿತ, ಡಿಜಿ ಕಚೇರಿ

ಲಾಬೂ ರಾಮ್ -ಐಜಿಪಿ ಕೇಂದ್ರ ವಲಯ

ರವಿಕಾಂತೇಗೌಡ -ಐಜಿಪಿ ಕೇಂದ್ರ ಕಚೇರಿ- ಒಂದು ಬೆಂಗಳೂರು ಡಿಜಿ ಕಚೇರಿ

ಕೆ. ತ್ಯಾಗರಾಜನ್ -ಐಜಿಪಿ, ಐ.ಎಸ್.ಡಿ.

ಎನ್. ಶಶಿಕುಮಾರ್ -ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್

ಪ್ರದೀಪ್‌ ಗುಂಡಿ - ಎಸ್‌ ಪಿ. ಬೀದರ್‌ ಜಿಲ್ಲೆ

ಯತೀಶ್‌ ಎನ್. - ಎಸ್‌ ಪಿ ದಕ್ಷಿಣ ಕನ್ನಡ ಜಿಲ್ಲೆ

ಮಲ್ಲಿಕಾರ್ಜುನ ಬಾಲದಂಡ ಎಸ್‌ ಪಿ ಮಂಡ್ಯ ಜಿಲ್ಲೆ

ಡಾ.ಟಿ. ಕವಿತಾ ಎಸ್.ಪಿ. ಚಾಮರಾಜನಗರ ಜಿಲ್ಲೆ

ಬಿ. ನಿಖಿಲ್‌ ಎಸ್‌ ಪಿ ಕೋಲಾರ ಜಿಲ್ಲೆ

 Share: | | | | |


ಭಾರತದ ಕನಸಿನ ತೇರು: ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

Posted by Vidyamaana on 2023-07-14 09:47:39 |

Share: | | | | |


ಭಾರತದ ಕನಸಿನ ತೇರು: ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

ಶ್ರೀಹರಿಕೋಟಾ: 9.8.7.6.5.4.3…2…1..0 ಅಗ್ನಿ ಜ್ವಾಲೆಯನ್ನು ಉಗುಳುತ್ತಾ ಕೋಟಿ ಕೋಟಿ ಭಾರತೀಯರ ಕನಸಾದ ಚಂದ್ರಯಾನ -3 ಉಪಗ್ರಹವನ್ನು ಹೊತ್ತ ಮಾರ್ಕ್ 3 ನೌಕೆ ನಭಕ್ಕೆ ಹಾರಿದೆ. ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ ಮಹಾತ್ವಕಾಂಕ್ಷೆಯ ಚಂದ್ರಯಾನ -3 ಶಶಾಂಕ ದಕ್ಷಿಣ ಧ್ರುವದತ್ತ ಪ್ರಯಾಣ ಬೆಳೆಸಿದೆಚಂದ್ರಯಾನ-3 ಗಗನನೌಕೆಯು ಪ್ರೊಪಲ್ಷನ್‌ ಮಾಡ್ಯೂಲ್‌, ಲ್ಯಾಂಡರ್‌, ರೋವರ್‌ ಹೊತ್ತೊಯ್ದಿದೆ. ಇದರ ಒಟ್ಟು ತೂಕ 3,926 ಕೆಜಿ. ಪ್ರೊಪಲ್ಷನ್‌ ಮಾಡ್ಯೂಲ್‌ ತೂಕವು 2,148 ಕೆಜಿ, ಲ್ಯಾಂಡರ್‌ (ರೋವರ್‌ ಸಹಿತ) 1,752 ಕೆಜಿ, ರೋವರ್‌ 26 ಕೆಜಿ ತೂಕವಿದೆ. ಪ್ರೊಪಲ್ಷನ್‌ ಮಾಡ್ಯೂಲ್‌ 3 ರಿಂದ 6 ತಿಂಗಳ ಜೀವಿತಾವಧಿ ಹೊಂದಿದೆ. ಲ್ಯಾಂಡರ್‌, ರೋವರ್‌ ಜೀವಿತಾವಧಿ 1 ಚಂದ್ರನ ದಿನ (14 ಭೂಮಿ ದಿನಗಳು) ಇರಲಿದೆ (ಚಂದ್ರನ ಹಗಲಿನಲ್ಲಿ ಚಾರ್ಜ್‌ ಆಗಲಿದೆ). ಈ ನೌಕೆ ಚಂದ್ರನಲ್ಲಿ ತಲುಪಲು 42 ದಿನಗಳನ್ನು ತೆಗೆದುಕೊಳ್ಳಲಿದೆ. ಅಂದರೆ ಆಗಸ್ಟ್ 23 ಅಥವಾ 24ರಂದು ಚಂದ್ರನಲ್ಲಿ ಇಳಿಯಲಿದೆ.


ಈವರೆಗೆ ಯಾವುದೇ ಉಪಕರಣಗಳು ಹೋಗದ ಚಂದ್ರನ ದಕ್ಷಿಣ ಧ್ರುವದಲ್ಲಿ ಇಸ್ರೋ ತನ್ನ ನೌಕೆಯನ್ನು ಇಳಿಸುವ ಸಾಹಸಕ್ಕೆ ಮುಂದಾಗಿದೆ. ಚಂದ್ರನ ಅಧ್ಯಯನಕ್ಕೆ 2019ರ ಜು.22ರಂದು ಇಸ್ರೋ ಕೈಗೊಂಡಿದ್ದ ಚಂದ್ರಯಾನ-2 ಯೋಜನೆ ವಿಫಲವಾದ ಕಾರಣ ಮತ್ತೊಂದು ಚಂದ್ರಯಾನ ಯೋಜನೆಯನ್ನು ಇಸ್ರೋ ಕೈಗೆತ್ತಿಕೊಂಡಿದೆ. ಈ ಬಾರಿ ನೌಕೆ ಇಳಿಸಲು 4 ಕಿ.ಮೀ. X 2.5 ಕಿ.ಮೀ.ನ ವಿಶಾಲ ಸ್ಥಳವನ್ನು ಗುರುತಿಸಲಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಉಷ್ಣಾಂಶ -230 ಡಿ.ಸೆ. ಗಿಂತ ಕಡಿಮೆ ಇದ್ದು, ಇಲ್ಲಿ ಬಹುಕಾಲದವರಗೆ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಪಳೆಯುಳಿಕೆಗಳು ಇರುವ ಅಂದಾಜಿದೆ. ಅಲ್ಲದೆ, 2008ರಲ್ಲಿ ಕೈಗೊಂಡ ಚಂದ್ರಯಾನ-1 ಚಂದ್ರನ ದಕ್ಷಿಣ ಧ್ರುವದಲ್ಲಿ ನೀರಿದೆ ಎಂಬುದು ಪತ್ತೆ ಹಚ್ಚಿದ ಹಿನ್ನೆಲೆಯಲ್ಲಿ ದಕ್ಷಿಣ ಧ್ರುವವನ್ನೇ ಆಯ್ಕೆ ಮಾಡಿಕೊಳ್ಳಲಾಗಿದೆ. ಅಲ್ಲದೆ, ದಕ್ಷಿಣ ಧ್ರುವದಲ್ಲಿ ಈ ವರೆಗೂ ಬೆಳಕನ್ನೇ ಕಾಣದ ಹಲವು ಪ್ರದೇಶಗಳಿರುವ ಕಾರಣ ಇದು ವಿಜ್ಞಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.

ರಿವೀಲ್ ಆಯ್ತು ಐಫೋನ್ 15ರಲ್ಲಿರುವ ಸ್ಪೆಷಲ್ ಫೀಚರ್ಸ್!

Posted by Vidyamaana on 2023-09-13 12:11:21 |

Share: | | | | |


ರಿವೀಲ್ ಆಯ್ತು ಐಫೋನ್ 15ರಲ್ಲಿರುವ ಸ್ಪೆಷಲ್ ಫೀಚರ್ಸ್!

ನವದೆಹಲಿ :ಆಪಲ್ ಅಧಿಕೃತವಾಗಿ 48 ಎಂಪಿ ಮುಖ್ಯ ಕ್ಯಾಮೆರಾ, 26 ಎಂಎಂ ಫೋಕಲ್ ಉದ್ದ, 2 ಮೈಕ್ರಾನ್ ಕ್ವಾಡ್ ಪಿಕ್ಸೆಲ್ ಸೆನ್ಸಾರ್ ಮತ್ತು 100 ಪ್ರತಿಶತ ಫೋಕಸ್ ಪಿಕ್ಸೆಲ್ಗಳೊಂದಿಗೆ ಬಹುನಿರೀಕ್ಷಿತ ಐಫೋನ್ 15 ಅನ್ನು ಅನಾವರಣಗೊಳಿಸಿದೆ.ಐಫೋನ್ 15 ಹೊಸ ಕ್ಯಾಮೆರಾ ವ್ಯವಸ್ಥೆಯೊಂದಿಗೆ ಬರುತ್ತದೆ ಎಂದು ಆಪಲ್ ಹೇಳಿದೆ.ಐಫೋನ್ 15 ನಲ್ಲಿ ನೈಟ್ ಮೋಡ್ ಕೂಡ ಉತ್ತಮಗೊಳ್ಳುತ್ತಿದೆ. ಐಫೋನ್ 14 ಪ್ರೊಗೆ ಶಕ್ತಿ ನೀಡಿದ ಬಯೋನಿಕ್ ಎ 16 ಚಿಪ್ ಅನ್ನು ಐಫೋನ್ 15 ನಲ್ಲಿ ಅಳವಡಿಸಲಾಗಿದೆ. ಇದು ಎ 15 ಬಯೋನಿಕ್ ಚಿಪ್ ಸೆಟ್ ಗಿಂತ ಕಡಿಮೆ ಶಕ್ತಿಯನ್ನು ಬಳಸುತ್ತದೆ. ಇದರರ್ಥ ಐಫೋನ್ 15 ಪ್ರೊ ಮಾದರಿಗಳು ಹೆಚ್ಚು ಶಕ್ತಿಯುತ ಚಿಪ್ ಅನ್ನು ಹೊಂದಿರುತ್ತವೆ. ಐಫೋನ್ 15 ಬಣ್ಣ-ತುಂಬಿದ ಬ್ಯಾಕ್ ಗ್ಲಾಸ್ ಮತ್ತು ಹೊಸ ಬಾಹ್ಯರೇಖೆಯ ಅಂಚನ್ನು ಹೊಂದಿದೆ. ಡೈನಾಮಿಕ್ ಐಲ್ಯಾಂಡ್ ಅನ್ನು ಈ ವರ್ಷದ ಪ್ರೊ ಅಲ್ಲದ ಐಫೋನ್ ಮಾದರಿಗಳಲ್ಲಿಯೂ ಸೇರಿಸಲಾಗಿದೆ.ಐಫೋನ್ 15 ಸುಧಾರಿತ ಬೊಕೆ ಪರಿಣಾಮಕ್ಕಾಗಿ ಸುಧಾರಿತ ಪೋರ್ಟ್ರೇಟ್ ಮೋಡ್ ನೊಂದಿಗೆ ಬರುತ್ತದೆ, ಇದು ಪ್ರಾಣಿಗಳು ಮತ್ತು ಮಾನವ ವಿಷಯಗಳ ಚಿತ್ರಗಳನ್ನು ಕ್ಲಿಕ್ ಮಾಡುವಾಗ ಸ್ವಯಂಚಾಲಿತವಾಗಿ ಪೋರ್ಟ್ರೇಟ್ ಮೋಡ್ ಗೆ ಬದಲಾಯಿಸಲು ಯಂತ್ರ ಕಲಿಕೆ (ಎಂಎಲ್) ಅನ್ನು ಬಳಸುತ್ತದೆ. ಐಫೋನ್ 15 ಅನ್ನು ಯುಎಸ್ನಲ್ಲಿ 799 ಡಾಲರ್ ಆರಂಭಿಕ ಬೆಲೆಗೆ ಬಿಡುಗಡೆ ಮಾಡಲಾಗಿದೆ.


ಇದು ಕಳೆದ ವರ್ಷದ ಐಫೋನ್ 14 ಮೂಲ ಮಾದರಿಯಂತೆಯೇ ಇದೆ. ಆಪಲ್ ಪ್ರಕಾರ, ಐಫೋನ್ 15 ಪ್ಲಸ್ ಮಾದರಿಯ ಬೆಲೆ 899 ಡಾಲರ್. ಐಫೋನ್ 15 ಯುಎಸ್ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ನೊಂದಿಗೆ ಬಂದ ಮೊದಲ ಐಫೋನ್ ಮಾದರಿಯಾಗಿದೆ. ಐಫೋನ್ ಮಾದರಿಗಳನ್ನು ಚಾರ್ಜ್ ಮಾಡಲು ಆಪಲ್ ಯಾವಾಗಲೂ ಮಿಂಚಿನ ಕೇಬಲ್ ಗಳನ್ನು ಬಳಸುತ್ತಿತ್ತು ಆದರೆ ಐಫೋನ್ 15 ಸರಣಿಯೊಂದಿಗೆ ಅದು ಬದಲಾಗಿದೆ. ಯುಎಸ್ಬಿ-ಸಿ ಚಾರ್ಜಿಂಗ್ "ಸಾರ್ವತ್ರಿಕವಾಗಿದೆ" ಎಂದು ಆಪಲ್ ಹೇಳಿದೆ.ವೀಡಿಯೊಗಳನ್ನು ಸ್ಟ್ರೀಮಿಂಗ್ ಮಾಡುವಾಗ ಮತ್ತು ಆಟಗಳನ್ನು ಆಡುವಾಗ ಸುಗಮ ಗ್ರಾಫಿಕ್ಸ್ಗಾಗಿ 5-ಕೋರ್ ಜಿಪಿಯು ಶೇಕಡಾ 50 ರಷ್ಟು ಹೆಚ್ಚು ಮೆಮೊರಿ ಬ್ಯಾಂಡ್ವಿಡ್ತ್ ಹೊಂದಿದೆ. ಹೊಸ 16-ಕೋರ್ ನ್ಯೂರಲ್ ಎಂಜಿನ್ ಪ್ರತಿ ಸೆಕೆಂಡಿಗೆ ಸುಮಾರು 17 ಟ್ರಿಲಿಯನ್ ಕಾರ್ಯಾಚರಣೆಗಳನ್ನು ಮಾಡುವ ಸಾಮರ್ಥ್ಯವನ್ನು ಹೊಂದಿದೆ.


ಐಒಎಸ್ 17 ನಲ್ಲಿ ಲೈವ್ ವಾಯ್ಸ್ಮೇಲ್ ಟ್ರಾನ್ಸ್ಕ್ರಿಪ್ಷನ್ಗಳು ಮತ್ತು ಥರ್ಡ್-ಪಾರ್ಟಿ ಅಪ್ಲಿಕೇಶನ್ ಅನುಭವಗಳಂತಹ ವೈಶಿಷ್ಟ್ಯಗಳಿಗಾಗಿ ಇನ್ನೂ ವೇಗವಾಗಿ ಯಂತ್ರ ಕಲಿಕೆ ಗಣನೆಗಳನ್ನು ಸಕ್ರಿಯಗೊಳಿಸುತ್ತದೆ - ಇವೆಲ್ಲವೂ ಸುರಕ್ಷಿತ ಎನ್ಕ್ಲೇವ್ ಬಳಸಿ ನಿರ್ಣಾಯಕ ಗೌಪ್ಯತೆ ಮತ್ತು ಭದ್ರತಾ ವೈಶಿಷ್ಟ್ಯಗಳನ್ನು ರಕ್ಷಿಸುತ್ತವೆ.ಭಾರತದಲ್ಲಿ ಐಫೋನ್ 15 ಬೆಲೆ, ಲಭ್ಯತೆ ಮತ್ತು ಬಣ್ಣಗಳು


ಐಫೋನ್ 15 ಮತ್ತು ಐಫೋನ್ 15 ಪ್ಲಸ್ ಗುಲಾಬಿ, ಹಳದಿ, ಹಸಿರು, ನೀಲಿ ಮತ್ತು ಕಪ್ಪು ಬಣ್ಣಗಳಲ್ಲಿ 128 ಜಿಬಿ, 256 ಜಿಬಿ ಮತ್ತು 512 ಜಿಬಿ ಕಾನ್ಫಿಗರೇಶನ್ ಗಳಲ್ಲಿ ಕ್ರಮವಾಗಿ 79,900 ಮತ್ತು 89,900 ರೂ.ಗಳಿಂದ ಪ್ರಾರಂಭವಾಗುತ್ತದೆ.


ಆಸ್ಟ್ರೇಲಿಯಾ, ಕೆನಡಾ, ಚೀನಾ, ಫ್ರಾನ್ಸ್, ಜರ್ಮನಿ, ಭಾರತ, ಜಪಾನ್, ಮೆಕ್ಸಿಕೊ, ಯುಎಇ, ಯುಕೆ ಮತ್ತು ಯುಎಸ್ ಸೇರಿದಂತೆ 40 ಕ್ಕೂ ಹೆಚ್ಚು ದೇಶಗಳು ಮತ್ತು ಪ್ರದೇಶಗಳಲ್ಲಿನ ಖರೀದಿದಾರರು ಸೆಪ್ಟೆಂಬರ್ 15 ರಿಂದ ಬೆಳಿಗ್ಗೆ 5 ಗಂಟೆಗೆ ಐಫೋನ್ 15 ಮತ್ತು ಐಫೋನ್ 15 ಪ್ಲಸ್ ಅನ್ನು ಪೂರ್ವ-ಆರ್ಡರ್ ಮಾಡಲು ಸಾಧ್ಯವಾಗುತ್ತದೆ.ಐಫೋನ್ 15 ಮತ್ತು ಐಫೋನ್ 15 ಪ್ಲಸ್ ಸೆಪ್ಟೆಂಬರ್ 29 ರ ಶುಕ್ರವಾರದಿಂದ ಮಕಾವೊ, ಮಲೇಷ್ಯಾ, ಟರ್ಕಿಯೆ, ವಿಯೆಟ್ನಾಂ ಮತ್ತು 17 ಇತರ ದೇಶಗಳು ಮತ್ತು ಪ್ರದೇಶಗಳಲ್ಲಿ ಲಭ್ಯವಿರುತ್ತದೆ.


"ಐಫೋನ್ 15 ಮತ್ತು ಐಫೋನ್ 15 ಪ್ಲಸ್ ಸೃಜನಶೀಲತೆಯನ್ನು ಪ್ರೇರೇಪಿಸುವ ಅತ್ಯಾಕರ್ಷಕ ಕ್ಯಾಮೆರಾ ಆವಿಷ್ಕಾರಗಳು, ಅರ್ಥಗರ್ಭಿತ ಡೈನಾಮಿಕ್ ದ್ವೀಪ ಮತ್ತು ಸಾಬೀತುಪಡಿಸಿದ ಶಕ್ತಿಯುತ ಕಾರ್ಯಕ್ಷಮತೆಗಾಗಿ ಎ 16 ಬಯೋನಿಕ್ ಚಿಪ್ನೊಂದಿಗೆ ದೊಡ್ಡ ಮುನ್ನಡೆಯನ್ನು ಪ್ರತಿನಿಧಿಸುತ್ತದೆ" ಎಂದು ಆಪಲ್ನ ವಿಶ್ವವ್ಯಾಪಿ ಐಫೋನ್ ಉತ್ಪನ್ನ ಮಾರ್ಕೆಟಿಂಗ್ ಉಪಾಧ್ಯಕ್ಷ ಕೈಯಾನ್ ಡ್ರಾನ್ಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಸೂಪರ್-ಹೈ-ರೆಸಲ್ಯೂಶನ್ ಫೋಟೋಗಳಿಗಾಗಿ ಹೊಸ 24 ಎಂಪಿ ಡೀಫಾಲ್ಟ್, ಹೊಸ 2 ಎಕ್ಸ್ ಟೆಲಿಫೋಟೋ ಆಯ್ಕೆ ಮತ್ತು ಮುಂದಿನ ಪೀಳಿಗೆಯ ಭಾವಚಿತ್ರಗಳನ್ನು ಒಳಗೊಂಡಿರುವ 48 ಎಂಪಿ ಮುಖ್ಯ ಕ್ಯಾಮೆರಾದೊಂದಿಗೆ ನಾವು ಈ ವರ್ಷ ಕಂಪ್ಯೂಟೇಶನಲ್ ಫೋಟೋಗ್ರಫಿಯ ಶಕ್ತಿಯನ್ನು ಹೊಸ ಫೀಚರ್ ಹೊಂದಿದೆ.

ಮಂಗಳೂರು : ಕುದ್ರೋಳಿಯಲ್ಲಿ ಇನಾರ ಮೆಡಿಕಲ್ ಶುಭಾರಂಭ

Posted by Vidyamaana on 2023-07-21 01:42:10 |

Share: | | | | |


ಮಂಗಳೂರು : ಕುದ್ರೋಳಿಯಲ್ಲಿ  ಇನಾರ ಮೆಡಿಕಲ್ ಶುಭಾರಂಭ

 ಮಂಗಳೂರಿನ ಹೃದಯ ಭಾಗದಲ್ಲಿರುವ ಕುದ್ರೋಳಿಯ ಜಿ ಟಿ ರಸ್ತೆಯಲ್ಲಿ ನೂತನವಾಗಿ ಆರಂಭಗೊಂಡ ಇನಾರ ಮೆಡಿಕಲ್ ಇದರ ಉದ್ಘಾಟನೆಯನ್ನು ಜು.17 ರಂದು ನಡುಪಳ್ಳಿ ಜುಮಾ ಮಸೀದಿಯ ಖತೀಬರಾದ ಮೌಲಾನ ರಿಯಾಝ್ ಫೈಝಿ ಕಕ್ಕಿಂಜೆ ನೆರವೇರಿಸಿದರು.


ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸ್ಥಳೀಯ ಮ.ನ.ಪಾ ಸದಸ್ಯರಾದ ಶಂಶುದ್ದೀನ್ ಹೆಚ್.ಬಿ.ಟಿ ,ಎಸ್.ಡಿ.ಪಿ.ಐ ಕುದ್ರೋಳಿ ವಾರ್ಡ್ ಅಧ್ಯಕ್ಷರಾದ ಮುಝೈರ್ ಕುದ್ರೋಳಿ ,ಸಾಮಾಜಿಕ ಕಾರ್ಯಕರ್ತರಾದ ಖಾದರ್ ಇಡ್ಯ ಮತ್ತಿತರರು ಭಾಗವಹಿಸಿ ಶುಭ ಹಾರೈಸಿದರು.


ಇನಾರ ಮೆಡಿಕಲ್ ಮಾಲಕರಾದ ಮುಹಮ್ಮದ್ ಸಮೀರ್ ಸರ್ವರನ್ನು ಸ್ವಾಗತಿಸಿ ನಮ್ಮಲ್ಲಿ ವೈದ್ಯಕೀಯ ವಿಭಾಗಕ್ಕೆ ಸಂಬಂಧಿಸಿದ ಎಲ್ಲಾ ಔಷಧಿಗಳು,ಸುಸಜ್ಜಿತ ವೈದ್ಯಕೀಯ ಸಲಕರಣೆಗಳು ಹಾಗೂ ಇನ್ನಿತರ ವೈದ್ಯಕೀಯ ರಂಗಕ್ಕೆ ಸಂಬಂಧಿಸಿದ  ವಿವಿಧ ಉಪಕರಣಗಳು ನಮ್ಮಲ್ಲಿ ಲಭ್ಯವಿದ್ದು 2 ಕಿ.ಮೀ ಅಂತರದ ಒಳಗೆ ಗ್ರಾಹಕರ ಮನೆ ಬಾಗಿಲಿಗೆ ಉತ್ಪನ್ನಗಳನ್ನು ತಲುಪಿಸುವ ಸೇವೆಯು ನೀಡಲಿದ್ದೇವೆ ಎಂದು ತಿಳಿಸಿ ಎಲ್ಲರ ಸಹಕಾರ ಕೋರಿದರು.

ಜಿ.ಎಲ್.ಆಚಾರ್ಯ ಜ್ಯುವೆಲ್ಸ್ ನಲ್ಲಿ ಫ್ಲ್ಯಾಶ್ ಸೇಲ್

Posted by Vidyamaana on 2024-02-19 14:04:00 |

Share: | | | | |


ಜಿ.ಎಲ್.ಆಚಾರ್ಯ ಜ್ಯುವೆಲ್ಸ್ ನಲ್ಲಿ ಫ್ಲ್ಯಾಶ್ ಸೇಲ್

ಪುತ್ತೂರು: ವೈವಿಧ್ಯ ಹಾಗೂ ಪಾರಂಪರಿಕ ಚಿನ್ನಾಭರಣಗಳಿಗೆ ಹೆಸರುವಾಸಿಯಾಗಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಸ್ ಇದೀಗ ಫ್ಲ್ಯಾಶ್ ಸೇಲ್ ಮೂಲಕ ಗ್ರಾಹಕರ ಮುಂದೆ ಬಂದಿದೆ.


ಚಿನ್ನಾಭರಣ ಹಾಗೂ ವಜ್ರಾಭರಣಗಳ ಮೇಲೆ ಈ ಫ್ಲ್ಯಾಶ್ ಸೇಲ್ ನಡೆಯಲಿದ್ದು, ಫೆ.19 ರಿಂದ 25ರವರೆಗೆ ಈ ಕೊಡುಗೆ ಲಭ್ಯವಿರಲಿದೆ. 


ಚಿನ್ನಾಭರಣ ಖರೀದಿಗೆ ಪ್ರತಿ ಗ್ರಾಂಗೆ ರೂ. 150ರವೆರೆಗೆ ರಿಯಾಯಿತಿ, ವಜ್ರಾಭರಣಗಳ ಮೇಲೆ ರೂ.7000ದವರೆಗೆ ಪ್ರತಿ ಕ್ಯಾರೆಟ್ ಮೇಲೆ ರಿಯಾಯಿತಿ ದೊರಕಲಿದೆ.


2 000ಕ್ಕೂ ಮಿಕ್ಕಿದ ಡಿಸೈನ್ ಗಳಲ್ಲಿ ಕಣ್ಮನ ಸೆಳೆಯುವ ಗ್ಲೋ ಆಭರಣಗಳು, ಎಲ್ಲಾ ವಯೋಮಿತಿಯ ಗ್ರಾಹಕರಿಗೆ ತಕ್ಕಂತೆ ವಜ್ರಾಭರಣಗಳ ಆಯ್ಕೆ ಲಭ್ಯವಿದೆ.


ಮಕ್ಕಳ, ಮಹಿಳೆಯರ ಹಾಗೂ ಪುರುಷರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿರುವ, ಕಡಿಮೆ ಬೆಲೆಯಲ್ಲಿ ಪ್ರೀಮಿಯಂ ಗುಣಮಟ್ಟದ ವಜ್ರಾಭರಣಗಳು ಲಭ್ಯವಿದ್ದು, ಗ್ರಾಹಕರಿಗೆ ಆಹ್ಲಾದಕರ ಖರೀದಿಯ ವಾತಾವರಣ ಕಲ್ಪಿಸಲಾಗಿದೆ.


ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಸುಳ್ಯ, ಮೂಡಬಿದ್ರೆ, ಹಾಸನ ಹಾಗೂ ಕುಶಾಲನಗರದಲ್ಲಿ ಮಳಿಗೆಗಳನ್ನು ಹೊಂದಿದೆ.


ಷರತ್ತುಗಳ ಅನ್ವಯದೊಂದಿಗೆ ‘ಫ್ಲ್ಯಾಶ್ ಸೇಲ್’ ಪುತ್ತೂರು, ಸುಳ್ಯ, ಮೂಡಬಿದ್ರೆ ಮಳಿಗೆಗಳಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಕಾರ್ಕಳ : ಜ.21 ರಿಂದ 26 ರ ವರೆಗೆ ಅತ್ತೂರು ಜಾತ್ರೆ

Posted by Vidyamaana on 2024-01-16 04:43:48 |

Share: | | | | |


ಕಾರ್ಕಳ : ಜ.21 ರಿಂದ 26 ರ ವರೆಗೆ ಅತ್ತೂರು ಜಾತ್ರೆ

ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಬಸಿಲಿಕದ ವಾರ್ಷಿಕ ಮಹೋತ್ಸವ 2024 ಜನವರಿ 21, 22, 23, 24, 25 ಹಾಗೂ 26 ರಂದು ಜರಗಲಿರುವುದು. ಈ ಬಗ್ಗೆ ಎಲ್ಲಾ ಪೂರ್ವಭಾವಿ ಸಿದ್ದತೆಗಳು ನಡೆದಿದ್ದು, ಬಸಿಲಿಕದ ವತಿಯಿಂದ ವಾರ್ಷಿಕ ಮಹೋತ್ಸವದ ಆಚರಣೆಗೆ ಸನ್ನದ್ದರಾಗಿದ್ದೇವೆ ಎಂದು ಕ್ಷೇತ್ರದ ನಿರ್ದೇಶಕರಾದ ವಂ| ಆಲ್ಬನ್ ಡಿಸೋಜಾ ಹೇಳಿದರು.ಅವರು ಬಸಿಲಿಕಾದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ದಿನಾಂಕ 26-01-2024 ರಂದು ಶುಕ್ರವಾರ ಅಸ್ವಸ್ಥರಿಗಾಗಿ ಹಾಗೂ ಮಕ್ಕಳಿಗಾಗಿ ಬಲಿಪೂಜೆ ಹಾಗೂ ವಿಶೇಷ ಪ್ರಾರ್ಥನೆ ಇರುವುದು. ಅಸ್ವಸ್ಥರು ಅದೇ ದಿವಸದ ಬಲಿಪೂಜೆಗೆ ಬಂದು ನಮ್ಮೊಂದಿಗೆ ಸಹಕರಿಸಬೇಕಾಗಿ ವಿನಂತಿಸಿದರು


ವಾರ್ಷಿಕ ಮಹೋತ್ಸವದ ದಿನಗಳಲ್ಲಿ ಕೊಂಕಣಿ ಭಾಷೆಯಲ್ಲಿ 45 ಹಾಗೂ ಕನ್ನಡ ಭಾಷೆಯಲ್ಲಿ 3 ಹೀಗೆ ಒಟ್ಟು 48 ದಿವ್ಯ ಬಲಿ ಪೂಜೆಗಳನ್ನು ಅರ್ಪಿಸಲಾಗುವುದು. ವಾರ್ಷಿಕ ಮಹೋತ್ಸವದ ದಿನಗಳಲ್ಲಿ, ಬೆಳ್ತಂಗಡಿ, ಪುತ್ತೂರು, ಮಂಗಳೂರು, ಶಿವಮೊಗ್ಗ ಹಾಗೂ ನವಿಮೂ ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರು ಇಲ್ಲಿಗೆ ಆಗಮಿಸಿ ದಿವ್ಯ ಬಲಿಪೂಜೆಯನ್ನು ಅರ್ಪಿಸುವರು. ಭಕ್ತಾಧಿಗಳ ಸುರಕ್ಷತೆಗಾಗಿ ಬಸಿಲಿಕಾದ ಒಳಗಡೆ ಹಾಗೂ ಬಸಿಲಿಕದ ವಠಾರದಲ್ಲಿ 64 ಸಿ.ಸಿ ಕ್ಯಾಮರಗಳನ್ನು ಅಳವಡಿಸಲಾಗಿದೆ. ಬಸಿಲಿಕದ ಬಲ ಬದಿಯಲ್ಲಿ ಅಂದರೆ ಪವಾಡ ಮೂರ್ತಿ ಪ್ರತಿಷ್ಠಾಪಿಸಿದ ಪಕ್ಕದಲ್ಲಿ ಕಥೋಲಿಕ್ ಕ್ರೈಸ್ತರಿಗೆ ಪಾಪನಿವೇದನೆಗೆ ವ್ಯವಸ್ಥೆ ಮಾಡಲಾಗಿದೆ. ದೇವಾಲಯದ ಒಳಗೆ ಪ್ರಾರ್ಥನೆಗಾಗಿ ಮಾತ್ರ ಅವಕಾಶ ನೀಡಲಾಗಿದೆ ಎಂದರು.


ಭಕ್ತರು ಶ್ರೀಕ್ಷೇತ್ರಕ್ಕೆ ಹೇಳಿಕೊಂಡ ಹಣದ ರೂಪದ ಹರಕೆ, ವಸ್ತು ರೂಪದ ಹರಕೆ, ಮೊಂಬತ್ತಿಗಳ ಹರಕೆಗಳನ್ನು ದೇವಾಲಯದ ಎಡಬದಿಯಲ್ಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಭಕ್ತಾಧಿಗಳಿಗೆ ಕುಡಿಯಲು ಶುದ್ದ ಹಾಗೂ ತಂಪು ನೀರಿನ ವ್ಯವಸ್ಥೆಯನ್ನು ಬಸಿಲಿಕದ ವಠಾರದಲ್ಲಿ ಐದು ಸ್ಥಳದಲ್ಲಿ ಮಾಡಲಾಗುವುದು. ಶಾರೀರಿಕ ಅಗತ್ಯತೆ ಪೂರೈಸಲು ಬಸಿಲಿಕದ ವಠಾರದಲ್ಲಿ ಪೋಲಿಸ್ ಸೇವಾ ಕೇಂದ್ರದ ಪಕ್ಕದಲ್ಲಿ ಸುಮಾರು 40 ಆಧುನಿಕ ಸವಲತ್ತುಗಳುಳ್ಳ ಶೌಚಾಲಯಗಳು, ಗುರುನಿವಾಸದ ಎಡ ಬದಿಯಲ್ಲಿ 20 ಶೌಚಾಲಯಗಳು ಇವೆ. ಅಂಗವಿಕಲರಿಗಾಗಿ ಪ್ರತ್ಯೇಕ ಹಾಗೂ ಹಿರಿಯ ನಾಗರಿಕರಿಗಾಗಿ ಕೊಮೊಡ್ ಮಾದರಿಯ ಶೌಚಾಲಯಗಳಿವೆ. ಎಂದರು.ಕಾನೂನು ಮತ್ತು ಶಿಸ್ತು ಪಾಲನೆಗಾಗಿ ಗರಿಷ್ಟ ಸಂಖ್ಯೆಯ ಪೋಲಿಸ್ ಅಧಿಕಾರಿ ಹಾಗೂ ಪೋಲಿಸ್ ಸಿಬಂಧಿ ಕರ್ತವ್ಯ ನಿರ್ವಹಿಸಲಿದ್ದಾರೆ. ಯಾತ್ರಾರ್ಥಿಗಳ ಸುರಕ್ಷಿತೆಯ ಹೊಣೆ ನಿರ್ವಹಿಸಲಿರುವರು. ಯಾತ್ರಿರ್ಥಿಗಳ ವಾಹನಗಳ ನಿಲುಗಡೆಯ ವ್ಯವಸ್ಥೆಯ ಮೇಲ್ವಿಚಾರಣೆಯನ್ನು ನುರಿತ ಗೃಹರಕ್ಷದಳ ಹಾಗೂ ಇತರ ಸಿಬಂಧಿಗಳು ನಿರ್ವಹಿಸಲಿರುವರು. ಕಾಬೆಟ್ಟು ದ್ವಾರದ ಮೂಲಕ ಬರುವ ವಾಹನಗಳ ದಟ್ಟಣೆಯಿಂದ ಭಕ್ತಾಧಿಗಳಿಗೆ ಆಗುವ ಅಡಚಣೆಯನ್ನು ನಿವಾರಿಸಲು, ಪುಲ್ಕೇರಿಯಿಂದ ದೂಪದಕಟ್ಟೆ ಮೂಲಕ ವಾಹನಗಳನ್ನು ಕಳುಹಿಸಿ ದೂಪದಕಟ್ಟೆ ದ್ವಾರ ಪ್ರವೇಶಿಸುವಾಗ ಎಡಬದಿಗೆ ವಿಸ್ತಾರವಾದ ವಾಹನ ನಿಲುಗಡೆ ಸ್ಥಳ, ಗಾರ್ಡನ್ ಹೌಸ್ ಹತ್ತಿರ ತಿರುವಿನಲ್ಲಿ ಎಡಬದಿಯಲ್ಲಿ, ಹಾಗೂ ಗಾರ್ಡನ್ ಹೌಸ್ ದಾಟಿದ ನಂತರ ಎಡಬದಿಯಲ್ಲಿ ವಾಹನ ನಿಲುಗಡೆಗೆ ಅವಾಕಾಶ ಕಲ್ಪಿಸಲಾಗಿದೆ. ಕೊಡಂಗೆ ಶ್ರೀ ರೋಬರ್ಟ್ ನೊರೋನ್ಹರವರ ತನಕ ರಿಕ್ಷಾ ಸಂಚಾರಕ್ಕೆ ಅವಕಾಶವಿದೆ. ಅದರ ಮುಂದಕ್ಕೆ ವಾಹನಗಳಿಗೆ ಪ್ರವೇಶವಿಲ್ಲ.ಕಾಬೆಟ್ಟು ಕಡೆಯಿಂದ ಬರುವ ವಾಹನಗಳಿಗೆ ಪ್ರಸಾದ್ ಟೈಲರ್ ಜಂಕ್ಷನ್ ದಾಟಿ ಮುಂದೆ ಬರುವಾಗ ಬಲಬದಿಯಲ್ಲಿ ಸಂತ ಲಾರೆನ್ಸ್ ಧರ್ಮಕೇಂದ್ರದ ಆಡಳಿತಕ್ಕೊಳಪಟ್ಟ ಸಂತ ಲಾರೆನ್ಸ್ ಹೈಸ್ಕೊಲ್ ಶಾಲಾ ಆಟದ ವಿಶಾಲವಾದ ಮೈದಾನವನ್ನು ಸಂಪೂರ್ಣವಾಗಿ ವಾಹನ ನಿಲುಗಡೆಗಾಗಿಯೇ ಕಾದಿರಿಸಲಾಗಿದೆ.


ವೆಹಿಕಲ್ ಪಾಸ್ ಹೊಂದಿದ ವಾಹನ ಚಾಲಕರು ತಮ್ಮ ವಾಹನಗಳನ್ನು ಕಾಬೆಟ್ಟು - ಅತ್ತೂರು ಕ್ವಾನ್ವೆಂಟ್ ಮಾರ್ಗವಾಗಿ ತಂದು ಎಡಬದಿಯ ಪಂಚಾಯತ್ ಶೌಚಾಲಯದ ಬಳಿ ಎಡಕ್ಕೆ ತಿರುಗಿ ಮುಂದೆ ಸಾಗಿ ಬಲಬದಿಯ BSNL MOBILE TOWER ಬಳಿ ಮುಂದೆ ಸಾಗಿ ಎಡಕ್ಕೆ ತಿರುಗಿ V.I.P. ಹಾಗೂ ಇತರ PASS HOLDER ಗಳಿಗಾಗಿ ನಿರ್ಮಿಸಿದ ವಿಶಾಲವಾದ ಪಾರ್ಕಿಂಗ್ ವಠಾರದಲ್ಲಿ ವಾಹನಗಳನ್ನು ನಿಲ್ಲಿಸಲು ವ್ಯವಸ್ಥೆಗೊಳಿಸಲಾಗಿದೆ. ವೆಹಿಕಲ್ ಪಾಸ್ ಹೊಂದಿದ ವಾಹನಗಳು, ನಿಲುಗಡೆ ಮಾಡಿದ ವಾಹನಗಳಿಗೆನಿಲುಗಡೆ ಸ್ಥಳದಿಂದ ಮುಂದೆ ಸಾಗಿ ಏಕಮುಖ ಕಾಂಕ್ರಿಟ್ ರಸ್ತೆಯ ಮೂಲಕ ಕಾರ್ಕಳ-ಪಡುಬಿದ್ರಿ ರಸ್ತೆಗೆ ಸಂಪರ್ಕ ಕಲ್ಪಿಸಲಾಗಿದೆ. ಪೋಲಿಸ್ ಸಿಬಂದಿ ವಾಹನಗಳಿಗೆ ಹಾಗೂ ತುರ್ತು ಚಿಕ್ಸಿತ್ಸಾ ವಾಹನಗಳಿಗೆ ಬಿಟ್ಟರೆ ಬೇರೆ ಯಾವುದೇ ವಾಹನಗಳಿಗೆ ಬಸಿಲಿಕಾದ ವಠಾರಕ್ಕೆ ಪ್ರವೇಶವಿಲ್ಲ.


ಬಸಿಲಿಕದ ವಠಾರದಲ್ಲಿ ಬಸಿಲಿಕದ ಅಧಿಕೃತ ಸ್ಟಾಲ್ನಲ್ಲಿ ಮಾತ್ರ ಮೊಂಬತ್ತಿ ಮಾರಾಟ ಮಾಡಲಾಗಿದೆ. ಬಸಿಲಿಕಾದ ವಠಾರದಲ್ಲಿ ಮೊಂಬತ್ತಿ ಮಾರಟ ಸಂಪೂರ್ಣವಾಗಿ ನಿಷೇದಿಸಲಾಗಿದೆ. ಸಾರ್ವಜನಿಕರ ಹಾಗೂ ಭಕ್ತಾಧಿಗಳ ಸುಗಮ ಸಂಚಾರಕ್ಕಾಗಿ ದೂಪದಕಟ್ಟೆಯಿಂದ ಪ್ರಸಾದ್ ಟೈಲರ್ ಜಂಕ್ಷನ್ವರೆಗೆ ರಸ್ತೆಯ ಎರಡೂ ಕಡೆಯ ಅಂಚಿನಿಂದ ಕ್ರಮವಾಗಿ ಕನಿಷ್ಟ 5 ಅಡಿ ಜಾಗ ಬಿಟ್ಟು ಅಂಗಡಿ ಮುಂಗಟ್ಟು ನಿರ್ಮಿಸುವಂತೆ ಸ್ಥಳೀಯ ನಿಟ್ಟೆ ಗ್ರಾಮ ಪಂಚಾಯತ್ ಆಡಳಿತ ಮಂಡಳಿಗೆ ತಿಳಿಸಲಾಗಿದೆ. ಇದು ಸುರಕ್ಷೆಯ ದೃಷ್ಠಿಯಿಂದ ಹಾಗೂ ರಸ್ತೆಯಲ್ಲಿ ಹಾದುಹೋಗುವ ಯಾವುದೇ ವ್ಯಕ್ತಿಗೆ ದೈಹಿಕ ಕಿರುಕುಳಆಗದಂತೆ ತಡೆಯಲು ಅತೀ ಆವಶ್ಯಕವಾಗಿದೆ.


ಎಕಶಿಲಾ ಕಲ್ಲಿನಿಂದ ಕೆತ್ತಿದ ಸಂತ ಲಾರೆನ್ಸರ ಅತೀ ದೊಡ್ಡ ಹೊಸ ಮೂರ್ತಿಯನ್ನು ಬಸಿಲಿಕದ ಬಲಬದಿಯಲ್ಲಿ ಪ್ರತಿಷ್ಟಾಪಿಸಲಾಗಿದೆ. ಶಿಲಾ ಕಲ್ಲಿನಿಂದ ಕೆತ್ತಿದ ಸಂತ ಲಾರೆನ್ಸರ ಪ್ರತಿಮೆ ಇಟಲಿ ದೇಶದ ರೋಮ್ ಪ್ರಾಂತ್ಯದಲ್ಲಿ ಹಾಗೂ ಅತ್ತೂರು ಸಂತ ಲಾರೆನ್ಸ್ ಬಾಸಿಲಿಕಾದಲ್ಲಿ ಬಿಟ್ಟರೆ ಬೆರೆಲ್ಲೂ ಕಾಣಸಿಗುವುದಿಲ್ಲ. ಎಕಶಿಲಾ ಕಲ್ಲಿನಿಂದ ಕೆತ್ತಿದ ಸಂತ ಲಾರೆನ್ಸರ ಹೊಸ ಮೂರ್ತಿಯನ್ನು ನವ್ಮಿೂೀ ಸಂತ ಲಾರೆನ್ಸರ ಪುಷ್ಕರಣಿಯಲ್ಲಿ ಪ್ರತಿಷ್ಟಾಪಿಸಲಾಗಿದೆ. ಬಸಿಲಿಕದಲ್ಲಿ ಪುಷ್ಕರಣಿ ಹಾಗೂ ಪುಷ್ಕರಣಿಯಲ್ಲಿ ಸಂತ ಲಾರೆನ್ಸರ ಎಕಶಿಲಾ ಪ್ರತಿಮೆ ಇಲ್ಲಿ ನವ್ಮಿೂ ಅತ್ತೂರು ಸಂತ ಲಾರೆನ್ಸ್ ಬಸಿಲಿಕದಲ್ಲಿ ಬಿಟ್ಟರೆ ಪ್ರಪಂಚದಲ್ಲಿ ಬೇರೆಲ್ಲೂ ಕಾಣಸಿಗುವುದಿಲ್ಲ ಎಂದರು.


ಸುದ್ದಿಗೋಷ್ಠಿಯಲ್ಲಿ ಸಹಾಯಕ ಧರ್ಮಗುರು ವಂ|ಲ್ಯಾರಿ ಪಿಂಟೊ, ಆಧ್ಯಾತ್ಮಿಕ ನಿರ್ದೇಶಕ ಉಪಾಧ್ಯಕ್ಷ ವಂ|ಸಂತೋಷ್ ಡಿಸಿಲ್ವಾ, ಕಾರ್ಯದರ್ಶಿ ರೊನಾಲ್ಡ್ ನೊರೊನ್ಹಾ, ಪದಾಧಿಕಾರಿಗಳಾದವಂದೀಶ್ ಮಥಾಯಸ್, ಪ್ರಕಾಶ್ ಪಿಂಟೊ, ರಿತೇಶ್ ಪಿಂಟೊ, ರೋಶನ್ ಸಾಲಿಸ್ ಉಪಸ್ಥಿತರಿದ್ದರು.

ಬೆಳ್ಳಾರೆ ಪೊಲೀಸ್ ಠಾಣಾ ನೂತನ ಕಟ್ಟಡ ಲೋಕಾರ್ಪಣೆ

Posted by Vidyamaana on 2023-03-13 10:37:47 |

Share: | | | | |


ಬೆಳ್ಳಾರೆ ಪೊಲೀಸ್ ಠಾಣಾ ನೂತನ ಕಟ್ಟಡ ಲೋಕಾರ್ಪಣೆ

ಬೆಳ್ಳಾರೆ : ದ.ಕ.ಜಿಲ್ಲಾ ಪೊಲೀಸ್ ಘಟಕ ಬೆಳ್ಳಾರೆ ಪೊಲೀಸ್ ಠಾಣಾ ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ಮಾ.13 ರಂದು ನಡೆಯಿತು.

      ಮೀನುಗಾರಿಕೆ,ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ನೂತನ ಕಟ್ಟಡವನ್ನು ಉದ್ಘಾಟಿಸಿ ಇತ್ತೀಚಿನ ದಿನದಲ್ಲಿ ವಿದ್ಯಾವಂತರು ಜಾಸ್ತಿಯಾದಂತೆ ಅಪರಾಧ ಪ್ರಕರಣಗಳು ಜಾಸ್ತಿಯಾಗುತ್ತಿದೆ.ಪೊಲೀಸ್ ಠಾಣೆಗಳು ಕೂಡ ಜಾಸ್ತಿಯಾಗುತ್ತಿದೆ.ಪ್ರಕರಣಗಳು ಕಮ್ಮಿಯಾಗಬೇಕು.ಪ್ರತಿಯೊಬ್ಬರು ಪ್ರೀತಿ ವಿಶ್ವಾಸದಿಂದ ಬಾಳಬೇಕು.ಪ್ರೀತಿ ವಿಶ್ವಾಸ,ನಂಬಿಕೆ ಇದ್ದರೆ ಸಮಸ್ಯೆ ನಿವಾರಣೆ ಸಾಧ್ಯ ಮತ್ತು 

ಪೊಲೀಸ್ ಇಲಾಖೆ ಜನಸ್ನೇಹಿಯಾಗಿ ಜನರಿಗೆ ಉತ್ತಮ ಸೇವೆ ನೀಡುವಂತಾಗಬೇಕು ಎಂದು ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ವಿಕ್ರಂ ಅಮಟೆ IPS  ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಡಿಷನಲ್ಲಿ ಎಸ್ಪಿ ಧರ್ಮಪ್ಪ ಹೊಂದಿಸಿದರು. ನಿವೃತ್ತ ಎ ಎಸ್ ಐ ಭಾಸ್ಕರ್ ಕಾರ್ಯಕ್ರಮ ನಿರೂಪಿಸಿದರು.

ವೇದಿಕೆಯಲ್ಲಿ ಸುಳ್ಯ ತಹಶೀಲ್ದಾರ್ ಮಂಜುನಾಥ್, ಸುಳ್ಯ ಸರ್ಕಲ್ ಇನ್ಸ್ ಪೆಕ್ಟರ್ ರವೀಂದ್ರ, ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ಉಪಸ್ಥಿತರಿದ್ದರು.



Leave a Comment: