ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಸುದ್ದಿಗಳು News

Posted by vidyamaana on 2024-07-03 19:44:44 |

Share: | | | | |


ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂ‌ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.

   ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕು‌ಎಂಬುದು‌ ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸು‌ಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.

ಕಾಲೇಜು‌ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.

ಹೆಚ್ಚು‌ಅನುದಾನ ಕೊಡಿ

ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನು‌ನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರು‌ಮನವಿ ಸಲ್ಲಿಸಿದರು.

 Share: | | | | |


ವಿಧಾನಪರಿಷತ್​ ಚುನಾವಣೆ: ಜೆಡಿಎಸ್​ಗೆ ಶಾಕ್​ ನೀಡಿದ ಬಿಜೆಪಿ, ತುರ್ತು ಸಭೆ ಕರೆದ HDK

Posted by Vidyamaana on 2024-05-12 12:11:43 |

Share: | | | | |


ವಿಧಾನಪರಿಷತ್​ ಚುನಾವಣೆ: ಜೆಡಿಎಸ್​ಗೆ ಶಾಕ್​ ನೀಡಿದ ಬಿಜೆಪಿ, ತುರ್ತು ಸಭೆ ಕರೆದ HDK

ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಪರಿಷತ್​ ಚುನಾವಣೆಯ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ, ಮೈತ್ರಿ ಪಕ್ಷ ಜೆಡಿಎಸ್​ಗೆ ಒಂದು ಸ್ಥಾನವನ್ನಷ್ಟೆ ನೀಡಿರುವುದು ಜೆಡಿಎಸ್ ಪಕ್ಷದಲ್ಲಿ ಬಿರುಗಾಳಿಯನ್ನು ಬೀಸಿದೆ. ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಜೆಡಿಎಸ್​ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಮಂಡ್ಯ ನಾಯಕರ ಸಭೆಯನ್ನು ಕರೆದಿದ್ದಾರೆ.

ಲೋಕಸಭಾ ಚುನಾವಣೆ ಬಳಿಕ ವಿಧಾನ ಪರಿಷತ್​ ಚುನಾವಣೆಯಲ್ಲೂ ಮೈತ್ರಿ ಮುಂದಿವರೆಸಿರುವ ಜೆಡಿಎಸ್​ ಮತ್ತು ಬಿಜೆಪಿ, ಒಟ್ಟು 6 ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕ್ಷೇತ್ರ ಹಂಚಿಕೆ ಮಾಡಿಕೊಂಡಿದ್ದು ಕ್ಷೇತ್ರಗಳ ಪಟ್ಟಿಯನ್ನು ಬಿಜೆಪಿ ಚುನಾವಣಾ ಸಮಿತಿ ಬಿಡುಗಡೆ ಮಾಡಿದೆ.

ಪೊಲೀಸರು ಕಾನೂನು ಮೀರಿ ವರ್ತನೆ ತೋರಿದ್ದು ಕಂಡು ಬಂದಲ್ಲಿ ಅಂತವರ ವಿರುದ್ಧ ಕ್ರಮ- ಶಾಸಕ ಅಶೋಕ್ ಕುಮಾರ್ ರೈ

Posted by Vidyamaana on 2023-05-17 15:19:00 |

Share: | | | | |


ಪೊಲೀಸರು ಕಾನೂನು ಮೀರಿ ವರ್ತನೆ ತೋರಿದ್ದು ಕಂಡು ಬಂದಲ್ಲಿ ಅಂತವರ ವಿರುದ್ಧ ಕ್ರಮ- ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಬಿಜೆಪಿ ನಾಯಕರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣ ಹಾಗೂ ನಂತರದ ಬೆಳವಣಿಗೆಯಲ್ಲಿ ಆರೋಪಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಪ್ರಕರಣಗಳನ್ನು ಉಲ್ಲೇಖಿಸಿ ಮಾತನಾಡಿರುವ ನೂತನ ಶಾಸಕ ಅಶೋಕ್‌ ಕುಮಾರ್ ರೈ ಅವರು, ತನ್ನ‌ ಕ್ಷೇತ್ರದಲ್ಲಿ ಇಂತಹ ದೌರ್ಜನ್ಯಕ್ಕೆ ಅವಕಾಶ ನೀಡುವುದಿಲ್ಲ ಎಂಬ ಖಡಕ್ ಸಂದೇಶ ರವಾನಿಸಿದ್ದಾರೆ.

ವಿದ್ಯಮಾನದ ಜೊತೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯದ ಬಗೆಗಿನ ಪೋಟೋ, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ. ಘಟನೆಯ ಸತ್ಯಾಂಶದ ಬಗ್ಗೆ ಸಂಬಂಧಪಟ್ಟವರ ಜೊತೆ ಮಾಹಿತಿ ಪಡೆದುಕೊಳ್ಳುವೆ. ಪ್ರಕರಣದಲ್ಲಿ ಪೊಲೀಸರು ಕಾನೂನು ಮೀರಿ ವರ್ತನೆ ತೋರಿದ್ದು ಕಂಡು ಬಂದಲ್ಲಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸರ್ಕಾರಿ ಬಸ್ ನಿಲ್ದಾಣದ ಮುಂಭಾಗ ಬಿಜೆಪಿ ನಾಯಕರ ಫೋಟೋವಿದ್ದ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಒಂಭತ್ತು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು ಅವರಿಗೆ ಥಳಿಸಿ ದೌರ್ಜನ್ಯ ಎಸಗಿದ್ದಾರೆಂಬ ಆರೋಪ ಕೇಳಿ ಬರುತ್ತಿದೆ. ಇಂತಹ ಅಶಾಂತಿಯ ವಾತಾವರಣ ಕದಡುವ‌ ಪ್ರಯತ್ನದ ಪೂರ್ವದಲ್ಲೇ ಶಾಸಕ ಅಶೋಕ್ ಕುಮಾರ್ ರೈ ಅವರು ಎಚ್ಚರಿಕೆ ಸಂದೇಶ ನೀಡಿರುವುದರಿಂದ ಹೆಚ್ಚು ಮಹತ್ವ ಪಡೆದುಕೊಂಡಿದೆ.

ಪುತ್ತೂರು ಶಾಸಕರ ಜನಪರ ಕಾಳಜಿ - ಎ.23ರ ಪದ್ಮರಾಜ್ ಚುನಾವಣಾ ರೋಡ್ ಶೋ ರದ್ದು

Posted by Vidyamaana on 2024-04-22 17:13:52 |

Share: | | | | |


ಪುತ್ತೂರು ಶಾಸಕರ ಜನಪರ ಕಾಳಜಿ - ಎ.23ರ ಪದ್ಮರಾಜ್ ಚುನಾವಣಾ ರೋಡ್ ಶೋ ರದ್ದು

ಪುತ್ತೂರು: ಏ.23ರಂದು ಕಾಂಗ್ರೆಸ್ ನ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಪರ ಪುತ್ತೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ರೋಡ್ ಶೋ ಚುನಾವಣಾ ರ್ಯಾಲಿಯನ್ನು ಸಾರ್ವಜನಿಕರ ಹಿತದೃಷ್ಠಿಯಿಂದ ರದ್ದುಗೊಳಿಸಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರೋಡ್ ಶೋ ನಡೆಸುವುದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತದೆ. ಇದರಿಂದ ವಾಹನಗಳಲ್ಲಿ ವಿವಿಧ ಕಡೆ ತೆರಳುವ ಜನರಿಗೆ ತೊಂದರೆಯಾಗಲಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳಲು ತೊಂದರೆಯಾಗಲಿದ್ದು, ದೈನಂದಿನ ವ್ಯವಹಾರಕ್ಕಾಗಿ ನಗರಕ್ಕೆ ಬರುವ ಜನಸಾಮಾನ್ಯರಿಗೂ ತೊಂದರೆಯಾಗಲಿದೆ ಎಂದು ಏ.23ರಂದು ನಡೆಸಲು ಉದ್ದೇಶಿಸಿದ್ದ ರೋಡ್ ಶೋ ಪ್ಯಾಲಿಯನ್ನು ರದ್ದುಗೊಳಿಸಲಾಗಿದೆ.

ಶಾಸಕರ ಇಂದಿನ ಕಾರ್ಯಕ್ರಮ ಆ 22

Posted by Vidyamaana on 2023-08-22 02:05:43 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಆ 22

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಆಗಸ್ಟ್ 22 ರಂದು

*ಶಾಸಕರಾದ ಅಶೋಕ್ ರೈ ಯವರ ನಾಳಿನ ಕಾರ್ಯಕ್ರಮ*


ದಿನಾಂಕ 22/8/2023 ಮಂಗಳವಾರ


ಬೆಳಿಗ್ಗೆ 10 ಗಂಟೆಗೆ ಸರಕಾರಿ ಅಧಿಕಾರಿಗಳ ಜೊತೆ ಸಭೆ

11 ಗಂಟೆಗೆ ಸರ್ವೆ ಕಲ್ಪನೆಯಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸುವುದು

ಮಧ್ಯಾಹ್ನ 2 ಗಂಟೆಗೆ ಸರಕಾರಿ ಅಧಿಕಾರಿಗಳ ಜೊತೆ ಸಭೆ

ಪುರುಷರಕಟ್ಟೆ: ಕೆ ಎಸ್‌ ಆರ್ ಟಿ ಸಿ- ಬೈಕ್ ಡಿಕ್ಕಿ ಬೈಕ್‌ ಸವಾರ ಮೋಕ್ಷಿತ್ ಗೌಡ ಮೃತ್ಯು

Posted by Vidyamaana on 2024-05-15 09:52:02 |

Share: | | | | |


ಪುರುಷರಕಟ್ಟೆ: ಕೆ ಎಸ್‌ ಆರ್ ಟಿ ಸಿ- ಬೈಕ್ ಡಿಕ್ಕಿ  ಬೈಕ್‌ ಸವಾರ ಮೋಕ್ಷಿತ್ ಗೌಡ ಮೃತ್ಯು

ಪುತ್ತೂರು: ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ಪುರುಷರಕಟ್ಟೆ ಎಂಬಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ. 15ರಂದು ನಡೆದಿದೆ. 

25000 ಬೆಂಬಲಿಗರೊಂದಿಗೆ ಅಶೋಕ್ ರೈ ನಾಳೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

Posted by Vidyamaana on 2023-04-18 13:49:46 |

Share: | | | | |


25000 ಬೆಂಬಲಿಗರೊಂದಿಗೆ ಅಶೋಕ್ ರೈ ನಾಳೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ಪುತ್ತೂರು: ಈಗಾಗಲೇ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಏ. 19ರಂದು ದರ್ಬೆ ವೃತ್ತದಿಂದ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಮಪತ್ರ ಸಲ್ಲಿಸಿ, ಬಳಿಕ ದರ್ಬೆ ವೃತ್ತಕ್ಕೆ ತೆರಳಲಿದ್ದಾರೆ. ಅಲ್ಲಿ ಮೆರವಣಿಗೆಗೆ ಚಾಲನೆ ನೀಡಲಿದ್ದು, ಸುಮಾರು 25000 ಮಂದಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ಕಾಂಗ್ರೆಸ್ ಚುನಾವಣಾ ಕಚೇರಿಯನ್ನು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಉದ್ಘಾಟಿಸಿದ್ದರು.



Leave a Comment: