ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ಸುದ್ದಿಗಳು News

Posted by vidyamaana on 2024-07-03 10:25:40 |

Share: | | | | |


ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.

ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಸಾವನ್ನಪ್ಪಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಂಟು ಜನ ಕೊಲ್ಹಾರ ಪಟ್ಟಣದವರಾಗಿದ್ದು, ನೀರುಪಾಲಾದವರು ದಶರಥ( 58),ಮೈಬೂಬ್ ವಾಲಿಕಾರ (35), ರಫೀಕ್ ಬಾಂಬೆ ,(40), ರಫೀಕ ಜಾಲಗಾರರಿಗಾಗಿ(48) ಹುಡುಕಾಟ ನಡೆಯುತ್ತಿದೆ.

 Share: | | | | |


ದೈಹಿಕ ಸಂಬಂಧ ಮುಂದುವರಿಸಲು ನಿರಾಕರಣೆ

Posted by Vidyamaana on 2023-08-02 08:19:43 |

Share: | | | | |


ದೈಹಿಕ ಸಂಬಂಧ ಮುಂದುವರಿಸಲು ನಿರಾಕರಣೆ

ಬೆಂಗಳೂರು: ದೈಹಿಕ ಸಂಬಂಧ ಮುಂದುವರಿಸಲು ನಿರಾಕರಿಸಿದ ಪ್ರೇಯಸಿಯ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡಿದಲ್ಲದೆ, ತನ್ನ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ ಡ್ಯಾನ್ಸ್‌ ಮಾಸ್ಟರ್‌ ಸೇರಿ ಮೂವರು ಕೊಡಿಗೇಹಳ್ಳಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.


ಡ್ಯಾನ್ಸ್‌ ಮಾಸ್ಟರ್‌ ಆ್ಯಂಡ್ರಿ ಜಾರ್ಜ್‌(25) ಮತ್ತು ಆತನ ಸ್ನೇಹಿತರಾದ ಸಂತೋಷ್‌ (29) ಹಾಗೂ ಶಶಿ (30) ಎಂಬುವರನ್ನು ಬಂಧಿಸಲಾಗಿದೆ. ಆರೋಪಿಗಳು 24 ವರ್ಷದ ಯುವತಿ ಮೇಲೆ ಕಳೆದೊಂದು ವರ್ಷದಿಂದ ಕೃತ್ಯ ಎಸಗುತ್ತಿದ್ದರು. ಆರೋಪಿಗಳ ಬಳಿಯಿದ್ದ ಲ್ಯಾಪ್‌ಟಾಪ್‌, ಮೊಬೈಲ್‌ಗ‌ಳು, ಪೆನ್‌ಡ್ರೈವ್‌, ಫೋಟೋ, ವಿಡಿಯೋಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.


ಸಂತ್ರಸ್ತೆ ಹಾಗೂ ಡ್ಯಾನ್ಸ್‌ ಮಾಸ್ಟರ್‌ ಆ್ಯಂಡ್ರಿ ಜಾರ್ಜ್‌ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿದ್ದು, ಬಳಿಕ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ. ಆಗ ಆರೋಪಿ ಆಕೆಗೆ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿದ್ದಾನೆ. ಈ ವೇಳೆ ಆಕೆಗೆ ತಿಳಿಯದಂತೆ ಮೊಬೈಲ್‌ನಲ್ಲಿ ಖಾಸಗಿ ದೃಶ್ಯಗಳನ್ನು ಸೆರೆ ಹಿಡಿದುಕೊಂಡಿದ್ದ. ಕೆಲ ದಿನಗಳ ಬಳಿಕ ಆತನ ವಿಕೃತ ವ್ಯಕ್ತಿತ್ವ ತಿಳಿದ ಸಂತ್ರಸ್ತೆ, 2021ರಿಂದ ದೂರವಾಗಿದ್ದಳು. ಆದರೆ, ಆರೋಪಿ ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಆಕೆಗೆ ಬ್ಲ್ಯಾಕ್‌ಮೇಲ್‌ ಮಾಡಿ, ಹತ್ತಾರು ಬಾರಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ, ತನಗೆ ಹಣ ಬೇಕಾದಾಗ, ಕೆಲ ಸ್ನೇಹಿತರಿಂದ ಸಾವಿರಾರು ರೂ. ಪಡೆದುಕೊಂಡಿದ್ದು, ಅವರಿಗೂ ವಿಡಿಯೋ ಕಳುಹಿಸಿದ್ದ. ಅವರು ಸಹ ಬ್ಲ್ಯಾಕ್‌ಮೇಲ್‌ ಮಾಡಿ ಅತ್ಯಾಚಾರ ಎಸಗಿದ್ದಾರೆ. ಹೀಗೆ ಐದಾರು ಮಂದಿ ಆಕೆಗೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಹೇಳಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

ಇನ್‌ಸ್ಟ್ರಾದಲ್ಲಿ ವಿಡಿಯೋ ಅಪ್‌ಲೋಡ್‌ :

 ಮಧ್ಯೆ ಆರೋಪಿ ಇನ್‌ಸ್ಟ್ರಾಗ್ರಾಂನಲ್ಲಿ ನಕಲಿ ಪೇಜ್‌ ತೆರೆದು, ಖಾಸಗಿ ವಿಡಿಯೋಗಳನ್ನು ಅಪ್‌ಲೋಡ್‌ ಮಾಡಿದ್ದಾನೆ. ಅದನ್ನು ಆಕೆಯ ಸ್ನೇಹಿತರು, ಪರಿಚಯಸ್ಥರಿಗೆ ಶೇರ್‌ ಮಾಡಿದ್ದ. ಅದರಿಂದ ಗಾಬರಿಗೊಂಡ ಸಂತ್ರಸ್ತೆ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.


ಪ್ರಮುಖ ಆರೋಪಿ ಡ್ಯಾನ್ಸ್‌ ಮಾಸ್ಟರ್‌ ಸಂತ್ರಸ್ತೆಯ ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ವೆುàಲ್‌ ಮಾಡಿ, ತನ್ನ ಸ್ನೇಹಿತರ ಜತೆ ಸೇರಿ ಅತ್ಯಾಚಾರ ಎಸಗಿದ್ದಾನೆ. ನೃತ್ಯ ಶಾಲೆಯ ವಿದ್ಯಾರ್ಥಿನಿಯರ ಮೇಲೂ ಈ ರೀತಿಯ ದೌರ್ಜನ್ಯ ಎಸಗಿದ್ದಾನೆ ಎಂಬ ಬಗ್ಗೆ ಪರಿಶೀಲಿಸಲಾಗಿದೆ.-

ಲಕ್ಷ್ಮೀ  ಪ್ರಸಾದ್‌, ಈಶಾನ್ಯ ವಿಭಾಗ ಡಿಸಿಪಿ

ಪೆರ್ಲಂಪಾಡಿ: ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

Posted by Vidyamaana on 2023-04-27 07:37:52 |

Share: | | | | |


ಪೆರ್ಲಂಪಾಡಿ: ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ಉಳುವವನೇ ಭೂಮಿಯ ಒಡೆಯ ಎಂಬ ಕಾನೂನು ಜಾರಿಗೆ ತಂದು ಭೂಮಿಯಿಲ್ಲದ ಬಡವನನ್ನು ಭೂಮಿಯ ಒಡೆಯನನ್ನಾಗಿ ಮಾಡಿದ್ದು ಕಾಂಗ್ರೆಸ್‌ನ ಇಂದಿರಾಗಾಂಧಿ ಅದೇ ರೀತಿ ಕರ್ನಾಟಕದಲ್ಲಿ ಕೃಷಿಗೆ ಉಚಿತ ವಿದ್ಯುತ್ ನೀಡುವ ಮೂಲಕ ಕೃಷಿಕರ ಬದುಕನ್ನು ಹಸನಾಗಿಸಿದ್ದೂ ಕಾಂಗ್ರೆಸ್ ಸರಕಾರವೇ ಆಗಿದೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು.

ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ನ 12

Posted by Vidyamaana on 2023-11-12 07:38:42 |

Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ನ 12

ಪುತ್ತೂರು : ಶಾಸಕ ಅಶೋಕ್ ಕುಮಾರ್ ಅವರು  ನವಂಬರ್ 12 ರಂದು

ಬೆಳಿಗ್ಗೆ 10 ಗಂಟೆಗೆ ಕೋಡಿಂಬಾಡಿ‌ಮಹಿಷಮರ್ಧಿನಿ‌ದೇವಸ್ಥಾನಕ್ಕೆ ಭೇಟಿ,ಪೂಜಾ ಕಾರ್ಯಕ್ರಮ

12._ಗಂಟೆಗೆ ಕೊಡಿಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ

1 ಗಂಟೆಗೆ ಮುಳಿಯ ಹಾಲ್ ನಲ್ಲಿ ಗೂಡುದೀಪ ಸ್ಪರ್ದೆಯಲ್ಲಿ ಭಾಗವಹಿಸುವುದು

ಸಂಜೆ 3 ಗಂಟೆಗೆ ಕೊಂಬೆಟ್ಟು ಮೈದಾನದಲ್ಲಿ‌ರೈ ಚಾರಿಟೇಬಲ್ ಟ್ರಸ್ಟ್ ಸಭೆ ಯಲ್ಲಿ  ಭಾಗವಹಿಸಲಿದ್ದಾರೆ

ಬೆಂಗಳೂರು ಕಂಬಳ ಕ್ಕೆ ನಡೀತಿದೆ ಭರ್ಜರಿ ಸಿದ್ಧತೆ - ನಟಿ ಅನುಷ್ಕಾ ಶೆಟ್ಟಿ ಮನೆಗೆ ಅಶೋಕ್ ರೈ ಭೇಟಿ

Posted by Vidyamaana on 2023-10-02 12:00:45 |

Share: | | | | |


ಬೆಂಗಳೂರು ಕಂಬಳ ಕ್ಕೆ ನಡೀತಿದೆ ಭರ್ಜರಿ ಸಿದ್ಧತೆ - ನಟಿ ಅನುಷ್ಕಾ ಶೆಟ್ಟಿ ಮನೆಗೆ ಅಶೋಕ್ ರೈ ಭೇಟಿ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ಕೂಟದ ಹಿನ್ನೆಲೆಯಲ್ಲಿ ಟಾಲಿವುಡ್ ನಟಿ ಅನುಷ್ಕಾ ಶೆಟ್ಟಿ ಅವರ ಮನೆಗೆ ಶಾಸಕ ಅಶೋಕ್ ರೈ ಭೇಟಿ ನೀಡಿದರು.

ಬೆಂಗಳೂರಿನಲ್ಲಿರುವ ಅನುಷ್ಕಾ ಶೆಟ್ಟಿ ಅವರ ಸಹೋದರ ಬಿ. ಗುಣರಂಜನ್ ಶೆಟ್ಟಿ ಅವರ ಮನೆಯಲ್ಲಿ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಭಾಗವಹಿಸಿದ ಅವರು, ಕಂಬಳ ಬಗ್ಗೆ ಚರ್ಚೆ ನಡೆಸಿದರು.

ಕರಾವಳಿ ಕ್ರೀಡೆಯಾದ ಕಂಬಳವನ್ನು ಬೆಂಗಳೂರಿನಲ್ಲಿ ಏರ್ಪಡಿಸಿರುವ ಹಿನ್ನೆಲೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರ ಭೇಟಿ ಮಹತ್ವ ಪಡೆದುಕೊಂಡಿದೆ. ಸಂಗೀತ ನಿರ್ದೇಶಕ ಗುರುಕಿರಣ್ ಅವರು ಜೊತೆಗಿದ್ದರು.

ಅನುಷ್ಕಾ ಶೆಟ್ಟಿ ಅವರ ತಂದೆ ವಿಠಲ್ ಶೆಟ್ಟಿ, ತುಳು ಕೂಟ ಅಧ್ಯಕ್ಷ ಸುಂದರ್ ರಾಜ್ ರೈ ಉಪಸ್ಥಿತರಿದ್ದರು.

ವಿಧಾನ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ

Posted by Vidyamaana on 2024-06-24 14:11:13 |

Share: | | | | |


ವಿಧಾನ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ

ಪ್ರಮಾಣ ವಚನ ಸ್ವೀಕರಿಸಿ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದ ಸಿಟಿ ರವಿ, ಕಿವಿ ಹಿಂಡಿ ಅಭಿನಂದಿಸಿದ ಸಿಎಂ!

ಬೆಂಗಳೂರು : ಕರ್ನಾಟಕದ ವಿಧಾನ ಪರಿಷತ್‌ಗೆ ನೂತನವಾಗಿ ಆಯ್ಕೆಯಾಗಿ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ವಿಧಾನಸೌಧಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಿತು. ನೂತನ ಪರಿಷತ್ ಸದಸ್ಯರಿಗೆ ಸಭಾಪತಿ ಬಸವರಾಜ್ ಹೊರಟ್ಟಿ (Basavaraj Horatti) ಪ್ರಮಾಣ ವಚನ (MLC Oath Ceremony) ಬೋಧಿಸಿದರು

ವಿಧಾನಸಭೆ, ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ನೂತನ 17 ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಸಿದ್ದರಾಮಯ್ಯ, ಕಾನೂನು ಹಾಗೂ ಸಂಸದೀಯ ಸಚಿವ ಎಚ್‌ಕೆ ಪಾಟೀಲ್ ಸೇರಿ ಹಲವರು ಭಾಗಿಯಾದರು. ಇದರೊಂದಿಗೆ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ 11 ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವೂ ನಡೆಯಿತು.

ಕಲಾಪದಲ್ಲಿ ಎಡವಟ್ಟು ಮಾಡಿದ ಪ್ರದೀಪ್ ಈಶ್ವರ್

Posted by Vidyamaana on 2023-07-06 13:46:07 |

Share: | | | | |


ಕಲಾಪದಲ್ಲಿ ಎಡವಟ್ಟು ಮಾಡಿದ ಪ್ರದೀಪ್ ಈಶ್ವರ್

ಬೆಂಗಳೂರು : ಮಂಡ್ಯ ಜಿಲ್ಲೆ ನಾಗಮಂಗಲ ಡಿಪೋ ಎದುರು ಸಾರಿಗೆ ಬಸ್ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸದನದ ಬಾವಿಗಿಳಿದು ಧರಣಿ ನಡೆಸಿದರು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಎಡವಟ್ಟು ಮಾಡಿಕೊಂಡದ್ದು ಗಮನ ಸೆಳೆಯಿತು.ಒಂದು ಸಾವಿಗೆ ಇವರು ಇಷ್ಟೆಲ್ಲಾ ಹೋರಾಟ ಮಾಡುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಸಾವಿರಾರು ಜನ ಪ್ರಾಣ ಕಳೆದುಕೊಂಡರು, ಅವರಿಗೂ ನ್ಯಾಯ ಕೊಡಿಸಲು ಹೋರಾಟ ಮಾಡಬೇಕಲ್ಲ ಎಂದರು. ಈ ವೇಳೆ ಸ್ಪೀಕರ್ ಯು.ಟಿ.ಖಾದರ್ , ಎ ..ಪ್ರದೀಪ್..ಸಾವು ಆಗಲಿಲ್ಲ ಮಾರಾಯ .ಕುತ್ಕೋ ನೀನು ಎಂದರುಸ್ಪೀಕರ್ ಯು.ಟಿ.ಖಾದರ್ ಅವರ ಮನವಿಯ ಬಳಿಕ ಪ್ರತಿಪಕ್ಷಗಳ ಶಾಸಕರು ಧರಣಿ ಕೈಬಿಟ್ಟು ತಮ್ಮ ತಮ್ಮ ಸ್ಥಾನಗಳಲ್ಲಿ ಕುಳಿತುಕೊಂಡರು. ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿ ಸಾರಿಗೆ ಬಸ್ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಶಾಸಕರು ಸಚಿವ ಚೆಲುವರಾಯ ಸ್ವಾಮಿ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.



Leave a Comment: