ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಸುದ್ದಿಗಳು News

Posted by vidyamaana on 2024-07-03 16:20:08 |

Share: | | | | |


ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು

ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್‌ಡಿಆರ್‌ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.

ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್   ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.

 Share: | | | | |


ಹಾಲಶ್ರೀ ಸ್ವಾಮಿಜಿ ಅರೆಸ್ಟ್ ಹಿಂದಿದೆ ಸಿಸಿಬಿ ಎಸಿಪಿ ರೀನಾ ಸುವರ್ಣ ಶ್ರಮ!

Posted by Vidyamaana on 2023-09-20 15:25:32 |

Share: | | | | |


ಹಾಲಶ್ರೀ ಸ್ವಾಮಿಜಿ ಅರೆಸ್ಟ್ ಹಿಂದಿದೆ ಸಿಸಿಬಿ ಎಸಿಪಿ ರೀನಾ ಸುವರ್ಣ ಶ್ರಮ!

ಬೆಂಗಳೂರು : ಚೈತ್ರ ಅಂಡ್ ಗ್ಯಾಂಗ್ 5 ಕೊಟ್ಟಿ ವಂಚನೆ ಸಂಬಂಧ ಹಾಲಾಶ್ರೀ ಸ್ವಾಮಿಜಿ ಸಿಸಿಬಿಗೆ ಲಾಕ್ ಆಗಿದ್ದೆ ರೋಚಕ ಸ್ವಾಮಿಜಿ ಅರೆಸ್ಟ್ ಹಿಂದಿದೆ ಎಸಿಪಿ ರೀನಾ ಸುವರ್ಣ ಟೆಕ್ನಿಕಲ್ ಎಫರ್ಟ್. ಸತತ ಐದು ದಿನಗಳಿಂದ ಸ್ವಾಮಿಜಿ ಹಿಂದೆ ಬಿದ್ದಿದ್ದ ಸಿಸಿಬಿ ತಂಡ.‌ಆದ್ರ ಮೈಸೂರಿನಿಂದ‌ ಮಿಸ್ ಆಗಿದ್ದ ಸ್ವಾಮಿಜಿ ವೇಚ ಬದಲಿಸಿ ಮೊಬೈಲ್ ಸ್ವಿಟ್ಚ್ ಆಫ್ ಮಾಡಿ ಎಸ್ಕೇಪ್ ಆಗಿದ್ರು.ಹೈದರಬಾದ್ ಮಾಹಿತಿ ಪಡೆದು ಹೈದರಬಾದ್ ಗೂ ತೆರಳಿತ್ತು ಸಿಸಿಬಿ ಟೀಮ್. ಆದ್ರೆ ಹೈದರಾಬಾದ್ ಮಠದಿಂದ ಸ್ವಾಮಿಜಿ ಟ್ರೈನ್ ಮೂಲಕ ಕಾಶಿ ಕಡೆ ಪ್ರಯಾಣ ಮಾಡಿದ್ರು.‌ ಹೈದರಬಾದ್ ಮಠವೊಂದರ ಕಾರ್ ನಲ್ಲೇ ಸ್ವಾಮಿಜಿ ರತಯಲ್ವೇ ಸ್ಟೇಷನ್ ಗೆ ಡ್ರಾಪ್ ಪಡೆದುಕೊಂಡಿದ್ರು. ಮಾರ್ಗ ಮಧ್ಯ ಹೈದರಬಾದ್ ನಲ್ಲಿ ಸ್ವಾಮಿಜಿ ಹೊಸ ಮೊಬೈಲ್ ಖರೀದಿ ಮಾಡಿದ್ರ.


ಸಿಸಿಬಿ ಪೊಲಿಲೀಸ್ರ ವಿಚಾರಣೆ ವೇಳೆ ಮಠದ ಕಾರು ಚಾಲಕ ಹೊಸ ಮೊಬೈಲ್ ಬಗ್ಗೆ ಮಾಹಿತಿ ನೀಡಿದ್ದ.‌ ನಂತರ ಶುರುವಾಗಿದ್ದೆ ಅಸಲಿ ಕಹಾನಿ.‌ ಮೊಬೈಲ್ ಐ ಎಂ ಐ ನಂಬರ್ ನಿಂದ‌ ಸ್ವಾಮಿಜಿ ಟ್ರಾಕ್ ಮಾಡಿದ ಎಸಿಪಿ ರೀನಾ ಸುವರ್ಣ ಅಂಡ್ ಟೀಮ್. ಸ್ವಾಮಿಜಿ‌ ಹೊಸ ಮೊಬೈಲ್ ನಿಂದ ತಮ್ಮ‌ಮಠ ಹಾಗೂ ಹೈದರಬಾದಗ ಮಠದ ಸ್ವಾಮಿಜಿ ಸಂಪರ್ಕ ಮಾಡಿದ್ರು. ಇದಾದ ಕೆಲವೇ ಹೊತ್ತಲ್ಲಿ ಸ್ವಾಮಿಜಿಗೆ ಪೊಲೀಸ್ರು ಹೈದರಬಾದ್ ಗೆ ಬಂದಿರೋ‌ ವಿಷಯ ಕೂಡ ತಲುಪಿತ್ತು.ಹೈದರಾಬಾದ್ ನಲ್ಲಿ ತೆಗೆದುಕೊಂಡಿದ್ದ ಮೊಬೈಲ್‌ ಸ್ವಿಟ್ಚ್ ಆಫ್ ಮಾಡಿ ಒಡಿಶಾದಲ್ಲಿ ಹೊಸ ಸಿಮ್‌ಮತ್ತು ಮೊಬೈಲ್‌ಖರೀದಿ‌ಮಾಡಿದ್ರು. ಆದ್ರೆ ಸ್ವಾಮಿಜಿ‌ ರೆಗ್ಯೂಲರ್ ಆಗಿ ಫೋನ್‌ಮಾಡಿದ್ದ ನಂಬರ್ ಮೇಲೆ‌ ಸಿಸಿಬಿ ಕಣ್ಣಿಟ್ಟಿತ್ತು.‌ ಮತ್ತೆ ಅದೇ ನಂಬರ್ ಗೆ ಸ್ವಾಮಿಜಿ ಕರೆ ಮಾಡಿದಾಗ ಸಿಸಿಬಿ ಟ್ರಾಕ್ ಗೆ ಮತ್ತೆ ಸ್ವಾಮಿಜಿ ಬಂದಿದ್ರು.


ಈ ಒಟ್ಟು ತನಿಖಾ ಸಮಯದಲ್ಲಿ ಮೊಬೈಲ್ ಐಎಂಇಐ ಸಿಡಿ ಆರ್ ಹಾಗೂ ಲೊಕೇಶ್ ಟ್ರೇಸ್ ಸೇರಿದಂತೆ ಎಲ್ಲಾ ಟೆಕ್ನಿಕಲ್ ಡಾಟವನ್ನ ಇದೇ ಎಸಿಪಿ ರೀನಾ ಸುವರ್ಣ ನಿರ್ವಹಿಸಿದ್ರು. ಸಿಸಿಬಿ ಕಚೇರಿಯಲ್ಲೇ ಕುಳಿತು ಈ ಎಲ್ಲಾ ಟೆಕ್ನಿಕಲ್ ಎವಿಡೆನ್ಸ್ ನ ಎಸಿಪಿ ರೀನಾ ಸುವರ್ಣ ಕಲೆಕ್ಟ್ ಮಾಡಿ ಸಿಸಿಬಿ ಸಿಬ್ಬಂದಿಗೆ ಕೊಟ್ಟಿದ್ರು .‌ ಇದೇ ಕಾರಣಕ್ಕೆ ಸ್ವಾಮಿಜಿಯನ್ನ ಸಿಸಿಬಿ ಪೊಲೀಸ್ರು ಈಸಿಯಾಗಿ ಕ್ಯಾಚ್ ಮಾಡಲು ಸಹಕಾರಿಯಾಗಿದೆ.

ಜಾಗದ ವಿಚಾರದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ರಾಜಕೀಯ ಬಣ್ಣ – ಪುತ್ತಿಲ ಪರಿವಾರದಿಂದ ಖಂಡನೆ

Posted by Vidyamaana on 2024-01-16 20:47:54 |

Share: | | | | |


ಜಾಗದ ವಿಚಾರದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ರಾಜಕೀಯ ಬಣ್ಣ – ಪುತ್ತಿಲ ಪರಿವಾರದಿಂದ ಖಂಡನೆ

ಪುತ್ತೂರು : ಜಾಗದ ವಿಚಾರವಾಗಿ ನಡೆದ ತಕರಾರು ಹಲ್ಲೆ ವಿಚಾರದಲ್ಲಿ ಪುತ್ತಿಲ ಪರಿವಾರದ ಹೆಸರು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು, ಈ ವಿಚಾರವನ್ನು ಪುತ್ತಿಲ ಪರಿವಾರ ಖಂಡಿಸಿದೆ.


500 ವರ್ಷಗಳಿಂದ ಹಿಂದೂ ಸಮಾಜ ಕಾತರದಿಂದ ಕಾಯುತ್ತಿರುವ ಅಮೋಘ ಕ್ಷಣ ಜ.22ರ ಅಯೋಧ್ಯೆಯ ಶ್ರೀ ರಾಮಮಂದಿರ ಪ್ರತಿಷ್ಠಾಪನೆ. ಮಂತ್ರಾಕ್ಷತೆ ವಿತರಿಸುವುದು ಸಹಿತ ರಾಮಮಂದಿರಕ್ಕೆ ಶುಭಕೋರಿ ಪುತ್ತೂರಿನಲ್ಲಿ ಪ್ರಪ್ರಥಮ 3ಡಿ ಬ್ಯಾನರ್ ಅಳವಡಿಸಿ ರಾಷ್ಟ್ರೀಯ ಹಬ್ಬದಂತೆ ಮನೆ ಮನೆಗಳಲ್ಲಿ ರಾಮಮಂದಿರ ಪ್ರತಿಷ್ಠಾಪನೆಯನ್ನು ಆಚರಿಸಲು ಪುತ್ತಿಲ ಪರಿವಾರ ಕಾಯುತ್ತಿದೆ.


ಮುಂಡೂರು ಗ್ರಾಮದಲ್ಲಿ ನಡೆದ ಜಾಗದ ತಕರಾರಿಗೆ ಪುತ್ತಿಲ ಪರಿವಾರವನ್ನು ಅದರಲ್ಲೂ ರಾಮಮಂದಿರದ ಮಂತ್ರಾಕ್ಷತೆಯನ್ನು ಬಳಸಿಕೊಂಡು ಸುಳ್ಳು ಅಪವಾದ ಮಾಡಿರುವುದು ತೀರಾ ಖಂಡನೀಯ.


ಜಾಗದ ಗಲಾಟೆಗೆ ನಡೆದ ಘಟನೆ ಎಂದು ಪೊಲೀಸ್ ಎಫ್ಐಆರ್ ನಲ್ಲೇ ಉಲ್ಲೇಖ ಆಗಿದ್ದು, ಈ ಬಗ್ಗೆ ತಕ್ಷಣ ಸ್ಪಷ್ಟಿಕರಣ ಕೊಟ್ಟು ಗೊಂದಲ ನಿವಾರಿಸಿದ ದಕ್ಷಿಣ ಕನ್ನಡ ಎಸ್ಪಿ ರಿಷ್ಶಂತ್ ಅವರಿಗೆ ಧನ್ಯವಾದ ಎಂದು ಪುತ್ತಿಲ ಪರಿವಾರ ಹೇಳಿದೆ.


ದುರುದ್ದೇಶದಿಂದ ಸಮಾಜದಲ್ಲಿ ತಪ್ಪು ಅಭಿಪ್ರಾಯ, ತೇಜೋವಧೆ, ಧಾರ್ಮಿಕ ಭಾವನೆಗೆ ಧಕ್ಕೆ ತಂದು ಪ್ರಕರಣವನ್ನು ತಿರುಚಿದವರ ವಿರುದ್ದ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಪೊಲೀಸ್ ಇಲಾಖೆಯನ್ನು ಪುತ್ತಿಲ ಪರಿವಾರ ವಿನಂತಿಸಿದೆ.

ಕೆಎಫ್‌ಡಿಸಿ ಕಾರ್ಮಿಕರಿಗೆ ಬೋನಸ್ ನೀಡಲು ಸರಕಾರದ ಒಪ್ಪಿಗೆ

Posted by Vidyamaana on 2023-08-25 14:42:10 |

Share: | | | | |


ಕೆಎಫ್‌ಡಿಸಿ ಕಾರ್ಮಿಕರಿಗೆ ಬೋನಸ್ ನೀಡಲು ಸರಕಾರದ ಒಪ್ಪಿಗೆ

ಪುತ್ತೂರು: ಕರ್ನಾಟಕ ರಬ್ಬರ್ ನಿಗಮದಲ್ಲಿ ದಿನಗೂಲಿ ಕಾರ್ಮಿಕರಿಗೆ ಬಾಕಿ ಇರುವ ಬೋನಸ್ ನ್ನು ವಾರದೊಳಗೆ ಪಾವತಿ ಮಾಡುವುದಾಗಿ ಅರಣ್ಯ ಸಚಿವ ಈಶ್ವರಖಂಡ್ರೆ ಒಪ್ಪಿಕೊಂಡಿದ್ದಾರೆ.

ಕಳೆದ ೫೦ ವರ್ಷಗಳಿಂದ ಕರ್ನಾಟಕ ರಬ್ಬರ್ ನಿಗಮದಲ್ಲಿ ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಪ್ರತೀ ದೀಪಾವಳಿ ಸಮಯದಸಲ್ಲಿ ೨೦ ಶೇ. ಬೋನಸ್ ನೀಡುವುದಾಗಿ ಸರಕಾರ ತಿಳಿಸಿತ್ತು. ಆದರೆ ಕಳೆದ ಸಾಲಿನಲ್ಲಿ ೨೦ ಶೇ. ಬೋನಸ್‌ನಲ್ಲಿ ಕೇವಲ೮.೬೭% ಮಾತ್ರ ನೀಡಲಾಗಿತ್ತು. ಉಳಿದ ೧೧.೩೩ ಬೋನಸ್ ಬಾಕಿ ಇರಿಸಲಾಗಿತ್ತು.

ಬೋನಸ್ ಬಾಕಿ ಇರಿಸಿರುವ ಬಗ್ಗೆ ಪುತ್ತೂರು, ಸುಳ್ಯ ಮತ್ತು ಕಡಬ ಭಾಗದ ಕಾರ್ಮಿಕರು ಪುತ್ತೂರು ಶಾಸಕರಾದ ಆಶೋಕ್ ರೈಯವರಲ್ಲಿ ಮನವಿ ಮಾಡಿ ಸರಕಾರದಿಂದ ಬೋನಸ್ ತೆಗೆಸಿಕೊಡುವಂತೆ ಕೇಳಿಕೊಂಡಿದ್ದರು. ಈ ಸಂದರ್ಭದಲ್ಲಿ ಭರವಸೆ ನೀಡಿದ್ದ ಶಾಸಕರು ಈ ಬಗ್ಗೆ ಅರಣ್ಯ ಸಚಿವರನ್ನು ಭೇಟಿಯಗಿ ಅವರ ಜೊತೆ ಖುದ್ದು ಮಾತುಕತೆ ನಡೆಸಿ ಬಾಕಿ ಇರುವ ಬೋನಸ್ ಪಾವತಿ ಮಾಡುವಂತೆ ಮನವಿ ಮಾಡುವುದಾಗಿಯೂ ಮತ್ತು ಈ ವಿಚಾರವನ್ನು ಸರಕಾರದ ಗಮನಕ್ಕೆ ತರುವುದಾಗಿ ಹೇಳಿದ್ದರು. ಕಾರ್ಮಿಕರ ಬೋನಸ್ ಬಾಕಿ ಇರಿಸಿರುವ ವಿಚಾರವನ್ನು ಶಾಸಕರಾದ ಅಶೋಕ್ ರೈ ಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ತಿಳಿಸಿದ್ದರು.

ಆ. ೨೫ ರಂದು ಈ ಬಗ್ಗೆ ಸಚಿವರನ್ನು ಭೇಟಿಯಾದ ಶಾಸಕ ಅಶೋಕ್ ರೈ ಬಾಕಿ ಇರುವ ಬೋನಸ್ ನ್ನು ಕಾರ್ಮಿಕರಿಗೆ ನೀಡುವ ಬಗ್ಗೆ ಅರಣ್ಯ ಸಚಿವರಾದ ಈಶ್ವರಖಂಡ್ರೆ ಜೊತೆ ಚರ್ಚೆ ನಡೆಸಿದ್ದು ಈ ವೇಳೆ ಮಾತನಾಡಿದ ಸಚಿವರು ಒಂದು ವಾರದೊಳಗೆ ಬಾಕಿ ಇರುವ ಬೋನಸನ್ನು ಕಾರ್ಮಿಕರಿಗೆ ನೀಡಲು ಹಣಕಾಸು ಇಲಾಖೆಯು ಅನುಮತಿ ನೀಡಿದ್ದು ಬೋನಸ್ ನೀಡುವುದಾಗಿ ತಿಳಿಸಿದ್ದಾರೆ.


ಎಷ್ಟು ಕಾರ್ಮಿಕರು?

ಪುತ್ತೂರು, ಸುಳ್ಯ ಮತ್ತು ಕಡಬ ತಾಲೂಕು ವ್ಯಾಪ್ತಿಯಲ್ಲಿ ಕರ್ನಾಟಕ ರಬ್ಬರ್ ನಿಗಮದಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡುವ ಸುಮಾರು ೧೫ ಸಾವಿರ ಕಾರ್ಮಿಕರಿದ್ದಾರೆ. ಈ ಕಾರ್ಮಿಕರು ಹೆಚ್ಚು ದುಡಿಯಬೇಕು ಎಂಬ ಉದ್ದೇಶದಿಂದ ಸರಕಾರ ಇವರಿಗೆ ಬೋನಸ್ ನೀಡುವುದಾಗಿ ಹೇಳಿತ್ತು. ಪ್ರತೀ ದೀಪಾವಳಿ ಸಮಯದಲ್ಲಿ ಕಾರ್ಮಿಕರಿಗೆ ಅವರು ಮಾಡಿರುವ ಕೆಲಸದ ಆಧಾರದ ಮೇಲೆ ೨೦ ಶೇ ಬೋನಸ್ ನೀಡುತ್ತಿತ್ತು. ಆದರೆ ಕಳೆದ ಬಾರಿ ಪೂರ್ತಿ ಬೋನಸ್ ನೀಡಿರಲಿಲ್ಲ. ಇದೀಗ ಪುತ್ತೂರು ಶಾಸಕರಾದ ಅಶೋಕ್ ರೈಯವರ ಮುತುವರ್ಜಿಯಿಂದ ಸುಮಾರು ೧೫ ಸಾವಿರ ಕಾರ್ಮಿಕ ಕುಟುಂಬಗಳಿಗೆ ಬೋನಸ್ ಲಭಿಸುವಂತಾಗಿದೆ.


ಕೆಎಫ್‌ಡಿಸಿ ನಿಗಮದಲ್ಲಿ ದಿನಗೂಲಿ ನೌಕರರ ಬೋನಸ್ ಬಾಕಿ ಇರಿಸಿದ ಬಗ್ಗೆ ಕಾರ್ಮಿಕರು ನನ್ನ ಗಮನಕ್ಕೆ ತಂದಿದ್ದರು. ಈ ಬಗ್ಗೆ ನಾನು ಮುಖ್ಯಮಂತ್ರಿ ಮತ್ತು ಅರಣ್ಯ ಸಚಿವರಲ್ಲಿ ಮನವಿ ಮಾಡಿದ್ದೆ. ಆ. ೨೫ ರಂದು ಅರಣ್ಯ ಸಚಿವರು ಸೀಎಂ ಆದೇಶದ ಮೇರೆಗೆ ಬೋನಸ್ ನೀಡಲು ಒಪ್ಪಿಕೊಂಡಿದ್ದು ಮುಂದಿನ ವಾರ ಎಲ್ಲರಿಗೂ ಬಾಕಿ ಇರುವ ಬೋನಸ್ ಸಿಗಲಿದೆ. ಕಾರ್ಮಿಕರ ನೋವಿಗೆ ಸ್ಪಂದಿಸಿದ ಸೀಎಂ ಸಿದ್ದರಾಮಯ್ಯ ಅವರಿಗೆ ಈ ವಿಚಾರದಲ್ಲಿ ಅಭಿನಂದನೆಯನ್ನು ಸಲ್ಲಿಸುತ್ತೇನೆ

ಅಶೋಕ್‌ಕುಮಾರ್ ರೈ, ಶಾಸಕರು ಪುತ್ತೂರು

ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ ಶಿಕ್ಷಕ ಆತ್ಮಹತ್ಯೆ

Posted by Vidyamaana on 2024-05-24 08:11:35 |

Share: | | | | |


ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ ಶಿಕ್ಷಕ ಆತ್ಮಹತ್ಯೆ

ಗದಗ: ಪತ್ನಿಯನ್ನು ತವರಿಗೆ ಕರೆದುಕೊಂಡು ಹೋಗಿದ್ದಕ್ಕೆ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಶಪ್ಪ ಕಟ್ಟಿಮನಿ(40) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.ನನ್ನ ಸಾವಿಗೆ ಅಳಿಯಂದಿರು ಕಾರಣ ಎಂದು ವಿಡಿಯೋ ಮಾಡಿ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುಳ್ಯದಲ್ಲಿ ರಾಮ ಮಂದಿರ ಬ್ಯಾನರ್ ಹರಿದ ಪ್ರಕರಣ ಮಾನಸಿಕ ಅಸ್ವಸ್ಥ ವ್ಯಕ್ತಿಯ ಕೃತ್ಯ ಗೊಂದಲಕ್ಕೆ ತೆರೆ

Posted by Vidyamaana on 2024-01-07 22:15:59 |

Share: | | | | |


ಸುಳ್ಯದಲ್ಲಿ ರಾಮ ಮಂದಿರ ಬ್ಯಾನರ್ ಹರಿದ ಪ್ರಕರಣ  ಮಾನಸಿಕ ಅಸ್ವಸ್ಥ ವ್ಯಕ್ತಿಯ ಕೃತ್ಯ ಗೊಂದಲಕ್ಕೆ ತೆರೆ

ಸುಳ್ಯ , ಜ.7: ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ಅಯೋಧ್ಯೆ ಶ್ರೀರಾಮ ಮಂದಿರದ ಲೋಕಾರ್ಪಣೆ ಕುರಿತಾಗಿ ಹಾಕಲಾಗಿದ್ದ ಬ್ಯಾನರ್ ಹರಿದ ಪ್ರಕರಣವನ್ನು ಸುಳ್ಯ ಪೊಲೀಸರು ಭೇದಿಸಿದ್ದು, ಮಧ್ಯರಾತ್ರಿ ಮಾನಸಿಕ ಅಸ್ವಸ್ಥ ವ್ಯಕ್ತಿ ಎಸಗಿರುವ ಕೃತ್ಯ ಎಂದು ತನಿಖೆಯಲ್ಲಿ ತಿಳಿದುಬಂದಿರುತ್ತದೆ.


ಜ.5ರಂದು ರಾತ್ರಿ ವೇಳೆ ಬ್ಯಾನರನ್ನು ಹರಿದು ಹಾಕಿದ ಬಗ್ಗೆ ಆಟೋ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷರು ಸುಳ್ಯ ಠಾಣೆಯಲ್ಲಿ ಪೊಲೀಸ್ ದೂರು ನೀಡಿದ್ದರು. ಶ್ರೀರಾಮ ಮಂದಿರದ ಬ್ಯಾನರ್ ಹರಿದ ಬಗ್ಗೆ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಕೂಡಲೇ ಕಿಡಿಗೇಡಿಗಳನ್ನು ಬಂಧಿಸಬೇಕೆಂದು ಆಗ್ರಹ ಮಾಡಿತ್ತು.ಪೊಲೀಸರು ಸುಳ್ಯ ಪೇಟೆಯ ಆಸುಪಾಸಿನಲ್ಲಿ 40 ಕಡೆಯ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕಾಗಿ ಶೋಧ ನಡೆಸಿದ್ದಾರೆ. ಜ.5ರಂದು ಮಧ್ಯರಾತ್ರಿ ಮಾನಸಿಕ ಅಸ್ವಸ್ಥನಂತೆ ಕಂಡುಬರುವ ವಯಸ್ಸಾದ ವ್ಯಕ್ತಿಯೊಬ್ಬ ಆ ಬ್ಯಾನರನ್ನು ಹರಿದು ಸುಳ್ಯ ಪೇಟೆಯಲ್ಲಿ ಸುತ್ತಾಡಿರುವುದು ಕಂಡುಬಂದಿದೆ. ಸುಳ್ಯದ ವಿವೇಕಾನಂದ ಸರ್ಕಲ್ ಬಳಿ ಹರಿದ ಬ್ಯಾನರ್ ತುಂಡನ್ನು ಇಟ್ಟು ರಾಮನ ಜಪ ಮಾಡಿರುವುದನ್ನು ಸಾರ್ವಜನಿಕರು ನೋಡಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾರೆ.


ಹರಿದ ಬ್ಯಾನರ್ ತುಂಡನ್ನು ಪರಿಶೀಲಿಸಿದಾಗ ಶ್ರೀರಾಮನ ಫೋಟೊಗೆ ಯಾವುದೇ ಹಾನಿ ಮಾಡಿರುವುದು ಕಂಡುಬಂದಿಲ್ಲ. ಹರಿದ ಬ್ಯಾನರ್ ತುಂಡನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣದ ಬಗ್ಗೆ ತನಿಖೆ ಮುಂದುವರಿಸಿದ್ದಾರೆ. ಯಾರೋ ಕಿಡಿಗೇಡಿಗಳು ಕೋಮು ದ್ವೇಷ ಹರಡಿಸುವುದಕ್ಕಾಗಿ ಇಂತಹ ಕೃತ್ಯ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು. ಆದರೆ ತನಿಖೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಎನ್ನುವುದು ತಿಳಿಯುತ್ತಲೇ ವಾತಾವರಣ ತಿಳಿಯಾಗಿದೆ.

ಮಂಗಳೂರು ಕಪಿತಾನಿಯೋ ಶಾಲೆಯ ಮತಗಟ್ಟೆ ಹೊರಗಡೆ ಕಮಲ – ಖಾಕಿ ಜಟಾಪಟಿ!

Posted by Vidyamaana on 2024-04-26 11:11:36 |

Share: | | | | |


ಮಂಗಳೂರು ಕಪಿತಾನಿಯೋ ಶಾಲೆಯ ಮತಗಟ್ಟೆ ಹೊರಗಡೆ ಕಮಲ – ಖಾಕಿ ಜಟಾಪಟಿ!

ಮಂಗಳೂರು, ಎ.25: ಕಪಿತಾನಿಯೋ ಶಾಲೆಯ ಮತಗಟ್ಟೆ ಹೊರಗಡೆ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಜಟಾಪಟಿ ನಡೆದಿದೆ. 


ಮತಗಟ್ಟೆ ಹೊರಗೆ ಮಾಧ್ಯಮಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪ್ರತಿಕ್ರಿಯೆ ನೀಡುತ್ತಿದ್ದಾಗ, ಅಲ್ಲಿ ಒಂದಷ್ಟು ಗುಂಪು ಸೇರಿದ್ದರು. ಈ ವೇಳೆ, ಬಿಜೆಪಿ ಕಾರ್ಯಕರ್ತನೊಬ್ಬ ಪ್ರಶ್ನೆ ಮಾಡಲು ಬಂದಿದ್ದಾನೆ. ಮಂಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ಟಿಡಿ ನಾಗರಾಜ್ ಬಳಿ ವಾಯ್ಸ್ ರೈಸ್ ಮಾಡಿ ಮಾತನಾಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಇನ್ಸ್ ಪೆಕ್ಟರ್, ಬಿಜೆಪಿ ಕಾರ್ಯಕರ್ತನ ಕಾಲರ್ ಹಿಡಿದು ಎಳೆದೊಯ್ದಿದ್ದಾರೆ.



Leave a Comment: