ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಸೌಜನ್ಯ ಪ್ರಕರಣ: ಮರುತನಿಖೆಗೆ ಇಳಂತಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮನವಿ

Posted by Vidyamaana on 2023-08-24 07:53:44 |

Share: | | | | |


ಸೌಜನ್ಯ ಪ್ರಕರಣ: ಮರುತನಿಖೆಗೆ ಇಳಂತಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮನವಿ

ಇಳಂತಿಲ: ಸೌಜನ್ಯ ಹತ್ಯೆಯ ಮರುತನಿಖೆಗೆ ಇಳಂತಿಲ ಒಕ್ಕಲಿಗ ಗ್ರಾಮ ಸಮಿತಿಯಿಂದ ಆ.24ರಂದು ಆಡಳಿತಾಧಿಕಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಒಕ್ಕಲಿಗ ಗ್ರಾಮ ಸಮಿತಿ ಇಳಂತಿಲ ಇದರ ಅಧ್ಯಕ್ಷ ಪುರಂಧರ ಗೌಡ ತುಂಬ, ಪ್ರಧಾನ ಕಾರ್ಯದರ್ಶಿ ವಿಜೇತ್ ಕುಮಾರ್ ನೇಜಿಕಾರ್ ಹಾಗೂ ಊರ ಪ್ರಮುಖರಾದ ಜಾರಪ್ಪ ಗೌಡ ದಂಡುಗ, ಕಡಿಗೇರಿ ಬಾಲಕ್ರಷ್ಣ ಗೌಡ, ಪೂವಪ್ಪ ಗೌಡ ಅರ್ಬಿ, ನಾರಾಯಣ ಗೌಡ ಕುಮೇರ್ಜಾಲ್, ತಿಮ್ಮಪ್ಪ ಗೌಡ ಬೊಬ್ಬೆ, ದಾಸಪ್ಪ ಗೌಡ ಕೋಡಿಯಡ್ಕ ಹಾಗೂ ಸಮಿತಿಯ ಪಧಾದಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು.

WATCH VIDEO: ಮಗನ ಶವದ ಮುಂದೆ ಸಿದ್ದರಾಮಯ್ಯ ಸರ್ಕಾರದ 2 ಸಾವಿರ ರೂ. ನೆನೆದ ತಾಯಿ: ವಿಡಿಯೋ ವೈರಲ್‌!!

Posted by Vidyamaana on 2024-02-18 14:01:49 |

Share: | | | | |


WATCH VIDEO: ಮಗನ ಶವದ ಮುಂದೆ ಸಿದ್ದರಾಮಯ್ಯ ಸರ್ಕಾರದ 2 ಸಾವಿರ ರೂ. ನೆನೆದ ತಾಯಿ: ವಿಡಿಯೋ ವೈರಲ್‌!!

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಂದ ನಂತ್ರ, ಮಹಿಳೆಯರು ಪುಲ್ ಖುಷ್ ಆಗಿದ್ದಾರೆ. ಬಡತನದ ಬೇಗೆಯಲ್ಲಿ ಇದ್ದಂತ ಅದೆಷ್ಟೋ ಯಜಮಾನಿಯರಿಗೆ ಗೃಹ ಲಕ್ಷ್ಮೀ ಯೋಜನೆ ಸಂಸಾರದ ನೊಗವನ್ನೇ ಮುನ್ನೆಡೆಸೋ ಶಕ್ತಿಯನ್ನು ನೀಡಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಅನಾರೋಗ್ಯದಿಂದ ಸಾವನ್ನಪ್ಪಿದಂತ ಮಗನ ಶವದ ಮುಂದೆ ತಾಯಿಯೊಬ್ಬಳು ಕಣ್ಣೀರಿಡುತ್ತಲೇ ಗೃಹಲಕ್ಷ್ಮೀ ಯೋಜನೆ ಬಗ್ಗೆ ಆಡುವ ಮಾತು ಮನ ಮಿಡಿಸುತ್ತದೆ.ಸೋಷಿಯಲ್ ಮೀಡಿಯಾದಲ್ಲಿ ಒಂದು ವೀಡಿಯೋ ವೈರಲ್ ಆಗಿದೆ.

WATCH VIDEO: ಮಗನ ಶವದ ಮುಂದೆ ಸಿದ್ದರಾಮಯ್ಯ ಸರ್ಕಾರದ 2 ಸಾವಿರ ರೂ. ನೆನೆದ ತಾಯಿ: ವಿಡಿಯೋ ವೈರಲ್‌!!


ಸತ್ತ ಮಗನ ಶವಕ್ಕೆ ಹಾರ ಹಾಕುತ್ತ, ಆ ತಾಯಿ ಕಣ್ಣೀರು ಇಡೋದು ಎಂಥವರನ್ನು ಕಣ್ಣೀರು ತರಿಸುವಂತಿದೆ. ಮಗನ ಶವಕ್ಕೆ ಹಾರ ಹಾಕುತ್ತಲೇ, ಆಸ್ಪತ್ರೆಗೆ ತೋರಿಸಿಕೊಳ್ಳೋ ಅಂದಿದ್ದೆ. ತೋರಿಸಿಕೊಂಡಿದ್ರೇ ಹಿಂಗೆ ಆಗುತ್ತಿರಲಿಲ್ಲ. ಅಯ್ಯೋ ಮಗನೆ ಎಂಬುದಾಗಿ ದುಖ ತೋಡಿಕೋಳ್ಳೋದನ್ನು ಕಾಣ ಬಹುದಾಗಿದೆ.


ಸವದತ್ತಿ ತಾಲೂಕು ಮರಕುಂಬಿ ಗ್ರಾಮದ ವಿಶ್ವನಾಥ ಶಿವಲಿಂಗಪ್ಪ ಗುರಕ್ಕನವರ(34) ಅನಾರೋಗ್ಯದಿಂದ ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ವೇಳೆ ಮೃತ ವಿಶ್ವನಾಥನ ತಾಯಿ‌ ನೀಲವ್ವಗೆ ಯಂಗ್ ಬೆಲಗಾಮ್ ಫೌಂಡೇಶನ್. ನೇರವಿಗೆ ನಿಂತಿದೆ. ಈ ನಡುವೆ ಮೃತ ಪುತ್ರನಿಗೆ ಅಂತಿಮ‌ ನಮನ ಸಲ್ಲಿಸುವ ವೇಳೆ ಅಜ್ಜಿ ನೀಲವ್ವ ಸಿದ್ದರಾಮಯ್ಯ ಸರ್ಕಾರದ ಗೃಹ ಲಕ್ಷ್ಮೀ ಯೋಜನೆ 2 ಸಾವಿರ ರೂ. ನೆನೆಸಿಕೊಂಡರು. ಪ್ರತಿ ತಿಂಗಳು 2 ಸಾವಿರ ರೂ. ಬರುತ್ತೆ. ಅದರಲ್ಲಿ ನಮ್ಮ ಅವ್ವನ ಹೊಟ್ಟೆ ತುಂಬುತ್ತೆ ಎಂದು ಮಗ ಹೇಳಿದ್ದ ಎಂದು ಕಣ್ಣೀರು ಹಾಕಿದ್ದಾರೆ.ಮಗನೇ ನಿನ್ನನ್ನೇ ನಾನು ಸಾಕುತ್ತಿದ್ದೆ. ನೀನು ನನ್ನ ಚೆನ್ನಾಗಿ ನೋಡಿಕೊಳ್ಳೋದು ಏನು. ನನಗೆ ಗೃಹಲಕ್ಷ್ಮೀ ಯೋಜನೆಯ 2000 ಹಣ ಬರ್ತಿದೆ. ಅದು ನಮ್ಮ ಜೀವನ ನಿರ್ವಹಣೆಗೆ ಸಾಕಾಗಿತ್ತು. ಅಯ್ಯೋ ಮಗ ಸತ್ತೋಗಿ ಬಿಟ್ಟೆಯಲ್ಲೋ. ನೀನು ಚೆನ್ನಾಗಿರಬೇಕು. ಚೆನ್ನಾಗಿ ಇರು ಎನ್ನುತ್ತಲೇ ಶವದ ಮುಂದೆ ಕಣ್ಣೀರಿಡುವ ತಾಯಿ, ತನಗೆ ಗೃಹಲಕ್ಷ್ಮೀ ಯೋಜನೆ 2000 ಹಣ ಜೀವನ ನಿರ್ವಹಣೆಗೆ ಸಾಕಾಗುತ್ತಿದೆ ಎಂಬುದನ್ನು ಬಿಚ್ಚಿಡುತ್ತಾಳೆ.


ಒಟ್ಟಾರೆಯಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ಶಕ್ತಿ ಯೋಜನೆ ಮಹಿಳೆಯರಿಗೆ ಹೊದೊಂದು ಚೈತನ್ನಯವನ್ನು ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸೋದಕ್ಕೆ ತುಂಬಿದೆ. ಇನ್ನೂ ಗೃಹಲಕ್ಷ್ಮೀ ಯೋಜನೆಯಿಂದ ಯಜಮಾನಿಯರಿಗೆ ಪ್ರತಿ ತಿಂಗಳು ಸಿಗುವಂತ 2000 ಹಣ ಸಂಸಾರವನ್ನೇ ಮುನ್ನೆಡೆಸೋ ಶಕ್ತಿಯನ್ನೇ ನೀಡಿದೆ ಎನ್ನಬಹುದು.

ಪುತ್ತೂರು : ನಿಷೇದಿತ ಕೇರಳ ಲಾಟರಿ ಮಾರಾಟ : ಪಾನ್ ವಾಲ ಪೊಲೀಸ್ ವಶಕ್ಕೆ

Posted by Vidyamaana on 2024-04-02 14:45:03 |

Share: | | | | |


ಪುತ್ತೂರು : ನಿಷೇದಿತ ಕೇರಳ ಲಾಟರಿ ಮಾರಾಟ : ಪಾನ್ ವಾಲ ಪೊಲೀಸ್ ವಶಕ್ಕೆ

ಪುತ್ತೂರು : ನಿಷೇದಿತ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಪುತ್ತೂರಿನಲ್ಲಿ ನಡೆದಿದೆ ಪಡ್ನೂರು ನಿವಾಸಿ ಲಕ್ಷ್ಮಣ ಬಂಧಿತ ವ್ಯಕ್ತಿ.

ಏ.1 ರಂದು ಮಧ್ಯಾಹ್ನ ವೇಳೆ ಪುತ್ತೂರು ತಾಲೂಕು ಲಿನೆಟ್‌ ಜಂಕ್ಷನ್‌‌ನ ಬಾರ್‌ &

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ: ಸೌದಿ ಅರೇಬಿಯಾದಲ್ಲಿ ಮಂಗಳೂರು ಮೂಲದ ಸಿರಾಜುದ್ದೀನ್ ಮೃತ್ಯು

Posted by Vidyamaana on 2023-04-21 11:46:41 |

Share: | | | | |


ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ: ಸೌದಿ ಅರೇಬಿಯಾದಲ್ಲಿ ಮಂಗಳೂರು ಮೂಲದ ಸಿರಾಜುದ್ದೀನ್ ಮೃತ್ಯು

ರಿಯಾದ್: ಸೌದಿ ಅರೇಬಿಯಾದಲ್ಲಿ ಮಸೀದಿಗೆ ತೆರಳಲು ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ಮಂಗಳೂರಿನ ಯುವಕ ಮೃತಪಟ್ಟಿರೋ ಘಟನೆ ನಡೆದಿದೆ.

ಸಜಿಪದ ಕೋಣೆಕಣಿ ಮೂಲದ ಖಾಸಿಮ್ ಮತ್ತು ಮೈನಬಾ ದಂಪತಿ ಪುತ್ರ ಸಿರಾಜುದ್ದೀನ್ ಮೃತಪಟ್ಟ ಯುವಕ. ಈತ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಅಕ್ಷಯ ಕಾಲೇಜಿನಲ್ಲಿ ಅಕ್ಷಯ ಸಂತ ನಾರಾಯಣಗುರು ವಿಚಾರಧಾರೆ

Posted by Vidyamaana on 2021-11-10 18:50:09 |

Share: | | | | |


ಅಕ್ಷಯ ಕಾಲೇಜಿನಲ್ಲಿ ಅಕ್ಷಯ ಸಂತ ನಾರಾಯಣಗುರು ವಿಚಾರಧಾರೆ

ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಅಕ್ಷಯ ಸಂತ ನಾರಾಯಣಗುರು ವಿಚಾರಧಾರೆ ಕಾರ್ಯಕ್ರಮ ಜರಗಿತು.

ಮಂಗಳೂರು ವಿಶ್ವವಿದ್ಯಾಲಯ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠ, ಪುತ್ತೂರು ಅಕ್ಷಯ ಕಾಲೇಜಿನ ರಾಷ್ಟೀಯ ಸೇವಾ ಯೋಜನೆ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ಕಾಟಿಪಳ್ಳ ಶ್ರೀ ನಾರಾಯಣಗುರು ಶಿಕ್ಷಣ ಸಂಸ್ಥೆ ಅಧ್ಯಕ್ಷ ಪಿ. ದಯಾಕರ್ ಕಾರ್ಯಕ್ರಮ ಉದ್ಘಾಟಿಸಿದರು. ಕಾಟಿಪಳ್ಳ ಶ್ರೀ ನಾರಾಯಣಗುರು ಆಂಗ್ಲಮಾಧ್ಯಮ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗುಣವತಿ ರಮೇಶ್ ಅವರು ನಾರಾಯಣಗುರುಗಳ ಸಾಮಾಜಿಕ ಸುಧಾರಣೆ ಹಾಗೂ ಅವರ ಚಿಂತನೆಗಳ ಬಗ್ಗೆ ಉಪನ್ಯಾಸ ನೀಡಿದರು. ನಾರಾಯಣಗುರು ಅಧ್ಯಯನ ಪೀಠದ ಸಂಯೋಜಕ ಡಾ. ಗಣೇಶ್ ಅಮೀನ್ ಸಂಕಮಾರ್ ಅವರು, ನಾರಾಯಣಗುರುಗಳ ತತ್ವದ ಮಹತ್ವವನ್ನು ತಿಳಿಸಿದರು. 

ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು ಅಧ್ಯಕ್ಷತೆ ವಹಿಸಿದ್ದರು. ಕಾಟಿಪಳ್ಳ ಶ್ರೀ ನಾರಾಯಣಗುರು ಶಿಕ್ಷಣ ಸಂಸ್ಥೆಯ ಸದಸ್ಯ ಭೋಜ ಅಂಚನ್ ಮಧ್ಯ, ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕಿ ಕಲಾವತಿ, ಪ್ರಾಂಶುಪಾಲ ಸಂಪತ್ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ., ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಗನ್ ದೀಪ್ ಎ.ಬಿ. ಉಪಸ್ಥಿತರಿದ್ದರು.

ಗ್ರಂಥಾಪಾಲಕಿ ಪ್ರಭಾವತಿ ಸ್ವಾಗತಿಸಿ, ಉಪನ್ಯಾಸಕಿ ರಶ್ಮಿ ಕೆ. ವಂದಿಸಿದರು. ಉಪನ್ಯಾಸಕಿ ಆಶಿಕಾ ಫರ್ಝಾನ ಕೆ.ಎ. ಕಾರ್ಯಕ್ರಮ ನಿರೂಪಿಸಿದರು.

ಎರಡು ಸಾವಿರದ ವಿಚಾರಕ್ಕೆ ನಡೆಯಿತಾ ಕೊಲೆ? ಇಬ್ಬರ ಬಂಧನ

Posted by Vidyamaana on 2023-11-07 06:47:27 |

Share: | | | | |


ಎರಡು ಸಾವಿರದ ವಿಚಾರಕ್ಕೆ ನಡೆಯಿತಾ ಕೊಲೆ? ಇಬ್ಬರ ಬಂಧನ

ಪುತ್ತೂರು: ಕ್ಷುಲ್ಲಕ ಕಾರಣ ಮಾತುಕತೆ ನಡೆದು ಕಲ್ಲೇಗ ಟೈಲರ್ ಮುಖ್ಯಸ್ಥನನ್ನು ಮಾಣಿ ಮೈಸೂರು ಹೆದ್ದಾರಿಯ ನೆಹರು ನಗರ ಜಂಕ್ಷನ್ ನಲ್ಲಿ ಅಟ್ಟಾಡಿಸಿ ಕೊಲೆ ಮಾಡಲಾಗಿದೆ.


ಪಡ್ನೂರು ನಿವಾಸಿ ಅಕ್ಷಯ್ ಕಲ್ಲೇಗ (26) ಮೃತ ವ್ಯಕ್ತಿ. ಬನ್ನೂರು ನಿವಾಸಿ ಮನೀಷ್, ಚೇತು ಅವರು ಠಾಣೆಗೆ ಶರಣಾಗಿದ್ದು, ಓರ್ವ ತಲೆಮಲೆಸಿಕೊಂಡಿದ್ದಾನೆಂದು ಹೇಳಲಾಗಿದೆ.



ನೆಹರು ನಗರದಲ್ಲಿ ಸಾಯಂಕಾಲ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತ ವಿಚಾರದಲ್ಲಿ ಮಾತುಕತೆ ಆರಂಭವಾಗಿದೆ. ಈ ಸಂದರ್ಭ ಎರಡು ಸಾವಿರ ನೀಡುವ ವಿಚಾರದಲ್ಲಿ ಮಾತುಕತೆ ವಿಕೋಪಕ್ಕೆ ತೆರಳಿದ್ದು, ಬಸ್ ಚಾಲಕ ಚೇತು ಅವರ ಬೆಂಬಲಿಗನಿಗೆ ಹಾಗೂ ಅಕ್ಷಯ್ ನಡುವೆ ತೀವ್ರ ವಾಗ್ವಾದ ನಡೆದಿದೆ. ಇದುವೇ ವಿಕೋಪಕ್ಕೆ ಹೋಗಿ ರಾತ್ರಿ ಸುಮಾರು 11.30 ಸಮಯ ನೆಹರುನಗರದ ಕಾಲೇಜು ರಸ್ತೆಯಲ್ಲಿನ ಎಟಿಎಂ ಬಳಿಯಿಂದ ದಾಳಿ ಪ್ರಾರಂಭವಾಗಿದ್ದು, ಮುಖ್ಯ ರಸ್ತೆಯ ಇನ್ನೊಂದು ಭಾಗದ ಖಾಲಿ ಜಾಗದ ವರೆಗೆ ಅಟ್ಟಾಡಿಸಿ ತಲವಾರಿನಿಂದ ಮೂರಕ್ಕೂ ಅಧಿಕ ಮಂದಿಯ ತಂಡ ದಾಳಿ ನಡೆಸಿದೆ.


ಗಂಭೀರ ಗಾಯಗೊಂಡ ಅಕ್ಷಯ್ ಪೊದೆಗಳ ನಡುವೆ ಬಿದ್ದಿದ್ದು, 1ಗಂಟೆ ಸಮಯಕ್ಕೆ ಪೊಲೀಸರಿಗೆ ವಿಚಾರ ತೆಳಿದಿದೆ. ಸುಮಾರು 1.30ರ ಸುಮಾರಿಗೆ ವಿಚಾರ ಬಹಿರಂಗವಾಗಿದೆ. ಸ್ಥಳದಲ್ಲಿ ಪೊಲೀಸರು ಬೀಡು ಬಿಟ್ಟಿದ್ದು, ಎರಡು ಮಂದಿ ಪೋಲೀಸ್ ಠಾಣೆಗೆ ಶರಣಾಗಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಕೇವಲ ಅಪಘಾತದ ಹಣದ ವಿಚಾರಕ್ಕೆ ನಡೆಯಲು ಸಾಧ್ಯವಾ? ಇಲ್ಲಾ ಬೇರೆ ಕಾರಣಗಳು ಇದೆಯಾ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ. ಇತ್ತೀಚೆಗೆ ನಡೆದ ಹುಲಿಕುಣಿತದಲ್ಲಿ ಕಲ್ಲೇಗ ಟೈಗರ್ಸ್ ತಂಡದ ನೇತೃತ್ವ ವಹಿಸಿಕೊಂಡಿದ್ದ ಅಕ್ಷಯ್ ನಗರ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದ.



Leave a Comment: