Posted by vidyamaana on 2023-11-07 04:42:13 |
ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.
ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Posted by Vidyamaana on 2023-06-21 01:33:22 |
ಪುತ್ತೂರು: ವಿದ್ಯುತ್ ದರ ಏರಿಕೆ ಸಂಬಂಧ ನಡೆಯಲಿದೆ ಎಂದು ಸುದ್ದಿಯಾಗಿದ್ದ ಬಂದ್ ಇದೀಗ ಗೊಂದಲಕ್ಕೆ ಎಡೆ ನೀಡಿದೆ.
ಜೂನ್ 22ರಂದು ಬಂದ್ ನಡೆಯಲಿದ್ದು, ಎಫ್.ಕೆ.ಸಿ.ಸಿ.ಐ. ಕರೆ ನೀಡಿದೆ ಎಂದು ಮೊದಲಿಗೆ ಸುದ್ದಿಯಾಗಿತ್ತು. ಈ ಬಂದ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ನೈತಿಕ ಬೆಂಬಲವನ್ನು ಸೂಚಿಸಿದ್ದರು. ನಂತರದ ಬೆಳವಣಿಗೆಯಲ್ಲಿ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ, ಈ ಬಂದ್ಗೆ ತಮ್ಮ ಬೆಂಬಲವಿಲ್ಲ ಎಂದು ಘೋಷಿಸಿದರು. ಈ ಎಲ್ಲಾ ಗೊಂದಲಗಳ ನಡುವೆ ಎಚ್ಚೆತ್ತುಕೊಂಡ ಎಫ್.ಕೆ.ಸಿ.ಸಿ.ಐ. ರಾಜ್ಯಾಧ್ಯಕ್ಷರು ಬಿ.ವಿ. ಗೋಪಾಲ್ ರೆಡ್ಡಿ ಅವರು ತಾವು ಬಂದ್ಗೆ ಕರೆಯನ್ನೇ ಕೊಟ್ಟಿಲ್ಲ ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದರು.
ಹಾಗಾದರೆ ಬಂದ್ಗೆ ಕರೆ ನೀಡಿದವರು ಯಾರು? ಈ ಗೊಂದಲ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ.
ಬಿಜೆಪಿ ರಾಜ್ಯಾಧ್ಯಕ್ಷರು ಏನಂದರು?
ವಿದ್ಯುತ್ ದರ ಎರಿಕೆ ಖಂಡಿಸಿ ಎಫ್ಕೆಸಿಸಿಐ ಕರೆ ನೀಡಿರುವ ರಾಜ್ಯ ಬಂದ್ಗೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ. ರಾಜ್ಯ ಸರ್ಕಾರದ ಹಠಮಾರಿ ಧೋರಣೆ ಕೈಬಿಡಬೇಕು, ಉದ್ಯಮಶೀಲರಿಗೆ ಅವಕಾಶ ಕೊಡಬೇಕು. ವಿದ್ಯುತ್ ದರದ ಬಗ್ಗೆ ಉದ್ಯಮಿಗಳ ಸಮಸ್ಯೆ ಆಲಿಸಿ, ನ್ಯಾಯ ಕೊಡಿಸುವ ಹಾಗೂ ಉದ್ಯಮಶೀಲತೆಗೆ ಅವಕಾಶ ಮಾಡಿಕೊಡುವ ಕಾರ್ಯ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರುಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ತಿಳಿಸಿದರು.
ವರ್ತಕ ಸಂಘ
ಕರ್ನಾಟಕ ಛೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಜೂ. 22ರಂದು ಕರೆ ನೀಡಿದ ಕರ್ನಾಟಕ ಬಂದ್ ಗೆ ಬೆಂಬಲವಿಲ್ಲ. ವಿದ್ಯುತ್ ದರ ಏರಿಕೆಯಾಗಿರುವುದಕ್ಕೆ ನಮ್ಮ ವಿರೋಧವಿದೆ. ಒಂದೆಡೆ ಉಚಿತ ಇನ್ನೊಂದೆಡೆ ದರ ಏರಿಕೆ ಮಾಡಿರುವುದು ಸರಿಯಲ್ಲ. ಆದರೆ ಬಂದ್ ಮಾಡುವುದರಿಂದ ಕೈಗಾರಿಕೋದ್ಯಮಿಗಳಿಗೆ ಹಾಗೂ ವರ್ತಕರಿಗೇ ನಷ್ಟ. ಈ ನಿಟ್ಟಿನಲ್ಲಿ ಮಂಗಳೂರು ಛೇಂಬರ್ಸ್ ಆಫ್ ಕಾಮರ್ಸ್ & ಇಂಸ್ಟ್ರೀಸ್ ಸಲಹೆಯಂತೆ ಬಂದ್ ಗೆ ನಾವು ಬೆಂಬಲ ನೀಡುವುದಿಲ್ಲ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಧ್ಯಕ್ಷ ಜಾನ್ ಕುಟಿನ್ಹಾ, ಉಪಾಧ್ಯಕ್ಷ ಪಿ. ವಾಮನ್ ಪೈ, ನಿರ್ದೆಶಕ ಶ್ರೀಕಾಂತ್ ಕೊಳತ್ತಾಯ, ಪ್ರ.ಕಾರ್ಯದರ್ಶಿ ಉಲ್ಲಾಸ್ ಪೈ, ಮಾಜಿ ಅಧ್ಯಕ್ಷ ಕೇಶವ ಪೈ ತಿಳಿಸಿದ್ದಾರೆ.
ಎಫ್.ಕೆ.ಸಿ.ಸಿ.ಐ. ಸ್ಪಷ್ಟನೆ ಏನು?
ವಿದ್ಯುತ್ ದರ ಏರಿಕೆ ವಿರೋಧಿಸಿ ಜೂನ್ 22 ರಂದು ಬಂದ್ ಗೆ ಕರೆ ನೀಡಿಲ್ಲ ಎಂದು ತಿಳಿಸಿರುವ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರೀ (ಎಫ್ ಕೆಸಿಸಿಐ) ಅಧ್ಯಕ್ಷ ಬಿ.ವಿ. ಗೋಪಾಲರೆಡ್ಡಿ, ನಮಗೂ ಕರ್ನಾಟಕ ಬಂದ್ ಗೂ ಸಂಬಂಧವಿಲ್ಲ. ವಿದ್ಯುತ್ ದರ ಇಳಿಕೆ ಬಗ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದೇವೆ. ತೆರಿಗೆಯನ್ನು ಶೇ. 9ರಿಂದ ಶೇ.3ಕ್ಕೆ ಇಳಿಕೆ ಮಾಡಲು ಮನವಿ ಮಾಡಿದ್ದೇವೆ. ಸರ್ಕಾರ ಏನು ಮಾಡಲಿದೆ ಎಂಬುದನ್ನು ಕಾದು ನೋಡುತ್ತೇವೆ ಎಂದು ತಿಳಿಸಿದ್ದಾರೆ.
Posted by Vidyamaana on 2024-05-21 21:20:10 |
ಹುಬ್ಬಳ್ಳಿ; ಪೊಲೀಸ್ ಪೇದೆಯೊಬ್ಬರು ಮನೆಯೊಂದರಲ್ಲಿ ಮಹಿಳೆಯೊಬ್ಬರೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾತೆ.. ಹುಬ್ಬಳ್ಳಿಯ ನವನಗರದ ಗಾಮನಗಟ್ಟಿ ಎಂಬಲ್ಲಿ ಈ ಘಟನೆ ನಡೆದಿದೆ..ಧಾರವಾಡ ಸಂಚಾರಿ ಠಾಣೆ ಪೇದೆ ಮಹೇಶ್ ಹೆಸರೂರು ಹಾಗೂ ವಿಜಯಲಕ್ಷ್ಮಿ ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡವರು..
Posted by Vidyamaana on 2024-06-27 16:32:40 |
ಉಡುಪಿ, ಜೂ.27: ಉಡುಪಿ(Udupi) ತಾಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ 2023 ನವೆಂಬರ್ 12 ರಂದು ಗಗನಸಖಿ (Air Hostess) ಸೇರಿ ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ದಾರುಣ ಘಟನೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಜಾಮೀನು ಅರ್ಜಿಯನ್ನು ವಜಾ ಮಾಡಲಾಗಿದೆ. ಹೌದು,
ನ್ಯಾಯಮೂರ್ತಿ ಎಂ.ಜಿ ಉಮಾ ಅವರಿದ್ದ ಹೈಕೋರ್ಟ್ ಪೀಠ ಆದೇಶಿಸಿದೆ.ಮಲ್ಪೆ ಠಾಣೆಯ ನೇಜಾರು ಎಂಬಲ್ಲಿ ಒಂದೇ ಕುಟುಂಬದವರಾದ ಐನಾಜ್, ಹಸೀನಾ, ಅಫ್ನಾನ್ ಹಾಗೂ ಅಸೀಮ್ ಎಂಬುವರರನ್ನ ಹತ್ಯೆ ನಡೆಸಿದ್ದ. ಈ ಕುರಿತು ಸಾಂದರ್ಭಿಕ ಸಾಕ್ಷಿ, ಸಿಸಿಟಿವಿ ದೃಶ್ಯ, ಆರೋಪಿ ಕೂದಲಿನ DNA ಆಧರಿಸಿ
ಹೆಚ್ಚುವರಿ ಎಸ್ಪಿಪಿ ಬಿ.ಎನ್.ಜಗದೀಶ್ ಅವರು ಇಂದು(ಗುರುವಾರ) ವಾದ ಮಂಡಿಸಿದ್ದರು. ಅದರಂತೆ ಬರ್ಬರ ಹತ್ಯೆ ಆರೋಪಿಯ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
Posted by Vidyamaana on 2024-04-10 10:27:49 |
ಮಂಗಳೂರು: ಇಂದು ರಂಜಾನ್ ಹಬ್ಬ ಹಿನ್ನೆಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.
ಏ.11ರಂದು ಇದ್ದ ಸಾರ್ವತ್ರಿಕ ರಜೆಯನ್ನು ಏ.10ರಂದು ನೀಡಿ ದ.ಕ. ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಕರ್ನಾಟಕ ಸರಕಾರವು 2024ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ದಿನಾಂಕ: 11-04-2024 ರಂದು ರಂಜಾನ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿತ್ತು
Posted by Vidyamaana on 2023-12-19 21:10:16 |
ಪುತ್ತೂರು: ಹವಾಮಾನ ಆಧಾರಿತ ಬೆಳೆ ವಿಮೆ ಮಾಡಿಸಿಕೊಂಡ ಕೃಷಿಕರಿಗೆ ಮಂಗಳವಾರ ಶುಭ ದಿನ ಯಾಕೆಂದರೆ ಕೃಷಿಕರ ಖಾತೆಗೆ ನಿರೀಕ್ಷೆಗೂ ಮೀರಿ ಹಣ ಜಮೆಯಾಗಿದ್ದು ಕೃಷಿಕರ ಮೊಗದಲ್ಲಿ ಸಂತಸದ ಕಳೆ ತುಂಬಿದೆ. ಈ ಸಂತಸಕ್ಕೆ ಕಾರಣರಾದವರು ಪುತ್ತೂರು ಶಾಸಕರು. ಬೆಳೆ ವಿಮೆ ಕೃಷಿಕರಿಗೆ ಇನ್ನೂ ಸಿಕ್ಕಿಲ್ಲ, ಎಲ್ಲಾ ಜಿಲ್ಲೆಗಳಲ್ಲೂ ಈಗಾಗಲೇ ನೀಡಲಾಗಿದೆ ಎಂದು ಆರೋಪದ ಮಧ್ಯೆ ಕಳೆದ ಅಧಿವೇಶನದಲ್ಲಿ ಶಾಸಕರು ಈ ವಿಚಾರದಲ್ಲಿ ಸರಕಾರದ ಗಮನ ಸೆಳೆದಿದ್ದರು. ವಾರದೊಳಗೆ ವಿಮೆ ಪಾವತಿಯಾಗುತ್ತದೆ ಎಂದು ಸಚಿವರು ಭರವಸೆ ನೀಡಿದ್ದರು. ಮಂಗಳವಾರದಂದು ವಿಮೆ ಮಾಡಿಸಿಕೊಂಡ ಕೃಷಿಕರ ಖಾತೆಗೆ ನಿರೀಕ್ಷೆಗೂ ಮೀರಿ ಹಣ ಜಮೆಯಾಗಿದೆ.
ಹವಾಮಾನ ಆಧಾರಿತ ಮತ್ತು ಬೆಳೆ ವಿಮೆ ಈ ಎರಡೂ ವಿಮೆಯನ್ನು ಕೃಷಿಕರು ಮಾಡಿಸಿಕೊಂಡಿದ್ದರು. ಹವಾಮಾನ ಆಧಾರಿತ ವಿಮೆಗೆ ಅಡಿಕೆ ಮತ್ತು ಬೆಳೆ ವಿಮಾ ವ್ಯಾಪ್ತಿಗೆ ಕಾಳುಮೆಣಸು ಒಳಪಟ್ಟಿತ್ತು. ಹೆಕ್ಟೇರ್ಗೆ ೬ ಸಾವಿರದಂತೆ ಕೃಷಿಕರು ವಿಮಾ ಮೊತ್ತವನ್ನು ಪಾವತಿಸಿದ್ದು ಕಳೆದ ಬಾರಿಗಿಂತ ಈ ಬಾರಿ ದುಪ್ಪಟ್ಟು ವಿಮೆ ಮಂಜೂರಾಗಿದೆ.
೬ ಸಾವಿರ ವಿಮಾ ಕಂತು ಪಾವತಿಸಿದ ಕೃಷಿಕರ ಖಾತೆಗೆ ೪೦ ಸಾವಿರ ವಿಮಾ ಮೊತ್ತ ಜಮೆಯಾಗಿದ್ದು ದುಪ್ಪಟ್ಟು ಎಂದೇ ಹೇಳಲಾಗಿದೆ.
ಹವಾಮಾನ ಆಧಾರಿತ ಬೆಳೆ ವಿಮೆಯಲ್ಲಿ ಅಡಕೆ ಒಳಪಟ್ಟಿದ್ದು ರೋಗ, ಹವಾಮಾನ ವೈಪರೀತ್ಯ ಸೇರಿದಂತೆ ಇನ್ನಿತರ ಕಾರಣಗಳಿಂದಾಗಿ ಕೃಷಿಕರು ಬೆಳೆ ನಷ್ಟ ಅನುಭವಿಸಿದ್ದರೆ ಅವರಿಗೆ ಸರಕಾರದಿಂದ ಹವಾಮಾನ ಆಧರಿತ ಬೆಳೆ ವಿಮೆಯಿಂದ ಪರಿಹಾರವನ್ನು ನೀಡಲಾಗುತ್ತದೆ. ಬೆಳೆ ವಿಮಾ ವ್ಯಾಪ್ತಿಗೆ ಕರಾವಳಿ ಜಿಲ್ಲೆಗಳಲ್ಲಿ ಕಾಳುಮೆಣಸು ಒಳಪಟ್ಟಿದ್ದು ಬೆಳೆ ವಿಮೆ ಮಾಡಿಸಿಕೊಂಡವರ ಖಾತೆಗೆ ಲಕ್ಷ ಲಕ್ಷ ಹಣ ಜಮೆಯಾಗಿದ್ದು ಕೃಷಿಕರು ಫುಲ್ ಖುಷಿಯಲ್ಲಿದ್ದಾರೆ.
ಹವಾಮಾನ ಆಧಾರಿತ ಬೆಳೆ ವಿಮೆಯು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೃಷಿಕರಿಗೆ ಸಿಕ್ಕಿರಲಿಲ್ಲ. ಈ ಬಗ್ಗೆ ಈ ಭಾಗದ ಕೃಷಿಕರು ನನ್ನ ಗಮನಕ್ಕೆ ತಂದಿದ್ದರು. ಕಳೆದ ಅಧಿವೇಶನದಲ್ಲಿ ಈವಿಚಾರವನ್ನು ಸಚಿವರ ಗಮನಕ್ಕೆ ತಂದು ಕೂಡಲೇ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದೆ. ಒಂದು ವಾರದೊಳಗೆ ವಿಮಾ ಪರಿಹಾರವನ್ನು ನೀಡಲಾಗುತ್ತದೆ ಎಂದು ಸಚಿವರು ಭರವಸೆಯನ್ನು ನೀಡಿದ್ದರು. ಅದರಂತೆ ಡಿ. ೧೯ ರಂದು ಪುತ್ತೂರು ಕ್ಷೇತ್ರ ವ್ಯಾಪ್ತಿಯ ಕೃಷಿಕರ ಖಾತೆಗೆ ವಿಮಾ ಪಾವತಿಯಾಗಿದೆ. ಕೃಷಿಕರಲ್ಲಿ ಸಂತಸದ ಅಲೆ ಇದೆ, ಕೃಷಿಕರು ಸಮೃದ್ದರಾದರೆ ಎಲ್ಲರಿಗೂ ಸಂತೋಷ. ಅಡಿಕೆ ಎಲೆ ಚುಕ್ಕಿ ರೋಗಕ್ಕೂ ಸರಕಾರ ಪರಿಹಾರ ಕೊಡಬೇಕೆಂದು ಮನವಿ ಮಾಡಿದ್ದೇನೆ ಮುಂದಿನ ದಿನಗಳಲ್ಲಿ ರಾಜ್ಯ ಸರಕಾರ ಪರಿಹಾರ ನೀಡಬಹುದು ಅಥವಾ ಎಲೆ ಚುಕ್ಕಿ ರೋಗಕ್ಕೆ ಔಷಧಿಯನ್ನಾದರೂ ಕಂಡು ಹಿಡಯಬಹುದು ಎಂಬ ವಿಶ್ವಾಸ ನನಗಿದೆ.
ಅಶೋಕ್ ಕುಮಾರ್ ರೈ ಶಾಸಕರು, ಪುತ್ತೂರು
Posted by Vidyamaana on 2023-10-23 15:51:51 |
ಉಡುಪಿ, ಅ.23: ಮನೆಗೆ ಬರುತ್ತೇನೆಂದು ಹೇಳಿ ನಾಪತ್ತೆಯಾಗಿದ್ದ ಕಾರ್ಕಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಕಾರ್ಕಳ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಶೃತಿನ್ ಶೆಟ್ಟಿ (35) ಮೃತದೇಹ ಕಾರ್ಕಳ ಪುಲ್ಕೇರಿ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಅಸಹಜ ಸಾವೆಂದು ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಅಕ್ಟೋಬರ್ 19ರಂದು ಶೃತಿನ್ ಶೆಟ್ಟಿ ಕಾರ್ಕಳ ಠಾಣೆಗೆ ಕರ್ತವ್ಯಕ್ಕೆಂದು ತೆರಳಿ, ಅಲ್ಲಿ ರಜೆ ಹಾಕಿ ನಾಪತ್ತೆಯಾಗಿದ್ದರು.
ಪಡುಬಿದ್ರೆಯ ಕಾಪು ಜನಾರ್ದನ ದೇವಸ್ಥಾನ ಬಳಿಯ ಅಂಗಡಿಮನೆ ನಿವಾಸಿ ಶೃತಿನ್ ಶೆಟ್ಟಿ (35) ಎರಡು ತಿಂಗಳ ಹಿಂದೆಯಷ್ಟೆ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿ ಪಡೆದು ಕಾರ್ಕಳ ನಗರ ಠಾಣೆಗೆ ಬಂದಿದ್ದರು. 19 ರಂದು ಸಂಜೆ 7.30ಕ್ಕೆ ಪತ್ನಿಗೆ ಫೋನ್ ಮಾಡಿ, ಮನೆಗೆ ಬರುತ್ತಿದ್ದೇನೆ ಎಂದು ಶೃತಿನ್ ಹೇಳಿದ್ದರು. ಮನೆಗೂ ಬಾರದೇ ಇದ್ದುದರಿಂದ ಮತ್ತು ಪತಿಯ ಫೋನ್ ಸ್ವಿಚ್ ಆಫ್ ಆಗಿದ್ದರಿಂದ ಪತ್ನಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದೀಗ ಬಾವಿಯಲ್ಲಿ ಶವ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಸಾವಿನ ಹಿಂದೆ ಬೇರೆ ಕಾರಣ ಇದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.