ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಸುದ್ದಿಗಳು News

Posted by vidyamaana on 2024-07-24 10:52:54 |

Share: | | | | |


ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಪುತ್ತೂರು : ಅಪ್ರಾಪ್ತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬೆಳಿಯೂರುಕಟ್ಟೆ ನಿವಾಸಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ.

ಬೆಳಿಯೂರುಕಟ್ಟೆ ನಿವಾಸಿ ಅಪ್ರಾಪ್ತೆಗೆ ವಿವಾಹಿತ ಪ್ರಸಾದ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

 Share: | | | | |


ಪುಣಚ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ರಸ್ತೆ ದುರಸ್ಥಿಗೆ ಶಾಸಕರಿಂದ ಶಿಲಾನ್ಯಾಸ

Posted by Vidyamaana on 2024-03-12 17:07:16 |

Share: | | | | |


ಪುಣಚ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ರಸ್ತೆ ದುರಸ್ಥಿಗೆ ಶಾಸಕರಿಂದ ಶಿಲಾನ್ಯಾಸ

ಪುತ್ತೂರು: ಪುಣಚಾ ಶ್ರೀ ಮಹಿಷಮರ್ಧಿನಿ ದೇವಸ್ಥಾನಕ್ಕೆ ತೆರಳುವ ರಸ್ತೆ ವಿವಾದಕ್ಕೆ ಅನೇಕ ವರ್ಷಗಳ ಬಳಿಕ ತೆರೆ ಎಳೆಯಲಾಗಿದ್ದು ಪುತ್ತೂರು ಶಾಸಕರಾದ ಅಶೋಕ್‌ ರೈ ಯವರ ಸಂಧಾನ ಮಾತುಕತೆ ಸಫಲವಾಗಿದ್ದು ,ಈ ರಸ್ತೆಗೆ ೫೦ ಲಕ್ಷ ರೂ ಅನುದಾನವನ್ನು ಒದಗಿಸಿ ಕಾಮಗಾರಿಗೆ ಶಾಸಕರು ಶಿಲಾನ್ಯಾಸ ನೆರವೇರಿಸಿದರು.


ದೇವಸ್ಥಾನಕ್ಕೆ ತೆರಳುವ ಪ್ರಮುಖ ಪ್ರವೇಶದ್ವಾಋದ ಬಳಿ ಜಾಗದ ತಕರಾರು ಇರುವ ಕಾರಣ ರಸ್ತೆ ಅಭಿವೃದ್ದಿಗೆ ಅಡ್ಡಿಯಾಗಿತ್ತು. ಜಾಗದ ಮಾಲಕರಾದ ಸದಾನಂದ ಎಂಬವರನ್ನು ಕರೆಸಿ ಮಾತುಕತೆ ನಡೆಸಿದ ಶಸಕರು ದೇವಸ್ಥಾನದ ರಸ್ತೆ ಅಭಿವೃದ್ದಿಗೆ ಸಹಕಾರ ಮಾಡುವಂತೆ ಮತ್ತು ಈ ಹಿಂದೆ ಇದೇ ವಿಚಾರದಲ್ಲಿ ಮಾಡಲಾಗಿರುವ ಕೇಸುಗಳನ್ನು ಹಿಂಪಡೆದು ಭಕ್ತರಿಗೆ ನೆರವಾಗಲು ರಸ್ತೆ ವಿವಾದವನ್ನು ಇತ್ಯರ್ಥ ಪಡಿಸಬೇಕು ಮತ್ತು ಈ ವಿಚಾರದಲ್ಲಿ ಸಹಕಾರ ನೀಡುವಂತೆ ಶಾಸಕರು ಕೇಳಿಕೊಂಡಿದ್ದರು. ಶಾಸಕರ ಮನವಿಗೆ ಸ್ಪಂದಿಸಿದ ಜಾಗದ ಮಾಲಿಕ ಸದಾನಂದ ರವರು ಪುತ್ತೂರು ಶಾಸಕರು ಹೇಳುವುದಾದರೆ ನಾನು ಏನು ಮಾಡಲು ಬೇಕಾದರೂ ಸಿದ್ದ ಎಂದು ಹೇಳಿ ಅನೇಕ ವರ್ಷಗಳಿಂದ ತಕರಾರಿನಿಂದ ಬಾಕಿಯಾಗಿದ್ದ ರಸ್ತೆ ಕಾಮಗಾರಿಗೆ ಚಾಲನೆ ಸಿಕ್ಕಂತಾಗಿದೆ.


ಪುಣಚಾ ಗ್ರಾಮಕ್ಕೆ ಒಟ್ಟು ೧. ೯೫ ಕೋಟಿ ರೂ ಕಾಮಗಾರಿಗೆ ಶಾಸಕರು ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕರು ದೇವಸ್ಥಾನದ ರಸ್ತೆ ಅಭಿವೃದ್ದಿಯಾಗದೆ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ವಿವಾದ ಇತ್ಯರ್ಥಪಡಿಸಿ ರಸ್ತೆ ಅಭಿವೃದ್ದಿಗೂ ಅನುದಾನ ಇರಿಸಿದ್ದೇನೆ, ಅದೇ ರೀತಿ ಪುಣಚಾ ಗ್ರಾಮದ ವಿವಿಧ ವಾರ್ಡುಗಳ ರಸ್ತೆಗೂ ಅನುದಾನವನ್ನು ನೀಡಿದ್ದೇನೆ ಎಂದು ಹೇಳಿದ ಶಾಸಕರು ಗ್ಯಾರಂಟಿ ಯೋಜನೆ ಹೇಗೆ ಜನರ ಮನೆ ಮನೆಗೆ ತಲುಪಿದೆಯೋ ಅದೇ ರೀತಿ ಅಭಿವೃದ್ದಿ ಕೆಲಸಗಳು ಪ್ರತೀ ಗ್ರಾಮಗಳಿಗೂ ತಲುಪಿದೆ ಎಂದು ಹೇಳಿದರು.

ದೇವಳದ ರಸ್ತೆಗೆ ಮೊದಲ ಬಾರಿಗೆ ಹಣ ಇಟ್ಟದ್ದು ನಾನು: ಎಂ ಎಸ್ ಮಹಮ್ಮದ್

ನಾನು ಜಿಪಂ ಉಪಾಧ್ಯಕ್ಷನಾಗಿದ್ದ ವೇಳೆ ಈ ದೇವಳದ ರಸ್ತೆ ಅಭಿವೃದ್ದಿಗೆ ಅನುದಾನವನ್ನು ಇಟ್ಟಿದ್ದೆ ಆ ಬಳಿಕ ಇಲ್ಲಿಗೆ ಯಾರೂ ಅನುದಾನವನ್ನು ನೀಡಿಲ್ಲ. ಅನುದಾನ ಕೊಟ್ಟ ನನ್ನನ್ನು ದೇವಳದ ವತಿಯಿಂದ ಸನ್ಮಾನವನ್ನು ಮಾಡಿದ್ದರು. ಇದೀಗ ಈ ರಸ್ತೆ ಸಂಪೂರ್ಣ ದುರಸ್ಥಿ ಯಾಗಲಿದ್ದು ಅತ್ಯಂತ ಸಂತೋಷದ ವಿಚಾರವಾಗಿದೆ ಎಂದು ಹೇಳಿದರು.ರಸ್ತೆ ನಿರ್ಮಾಣಕ್ಕೆ ಜಾಗ ಬಿಟ್ಟುಕೊಟ್ಟ ಸದಾನಂದ ಅವ ರಿಗೆ ಅಭಿನಂದನೆ ಸಲ್ಲಿಸುವುದಾಗಿ ಎಂ ಎಸ್ ಮಹಮ್ಮದ್ ತಿಳಿಸಿದರು.


ಕಾರ್ಯಕ್ರಮದಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ  ಡಾಟ. ರಾಜಾರಾಂ ಕೆ.ಬಿ, ಡಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಲ್ವಾ, ದೇವಸ್ಥಾನದ ಆಡಳಿತ ಸಮಿತಿ ಉಪಾಧ್ಯಕ್ಷ ಮಾರಪ್ಪ ಶೆಟ್ಟಿ  ಬೈಲುಗುತ್ತು, ಕಾರ್ಯದರ್ಶಿ ಶ್ರೀಧರ ಶೆಟ್ಟಿ ದೇವರಗುಂಡಿ, ಪರಿಯಾಲ್ತಡ್ಕ ಶಾಲಾ ನಿವೃತ್ತ ಮುಖ್ಯ ಗುರು ಹರ್ಷಶಾಸ್ತ್ರಿ ಮಣಿಲ, ರಮಾನಾಥ್ ವಿಟ್ಲ, ರಶೀದ್ ವಿಟ್ಲ, ನವೀನ್ ರೈ ಚೆಲ್ಯಡ್ಕ, ಅಶ್ರಫ್, ರೈತ ಸೇನಾ ಮುಖಂಡ ಶ್ರೀಧರ ಶೆಟ್ಟಿ ಬೈಲುಗುತ್ತು, ವಲಯ ಕಾರ್ಯದರ್ಶಿ ಮಹಮ್ಮದ್ ಸಿರಾಜ್ ಮನಿಲ, ಗ್ರಾ.ಪಂ.ಅಧ್ಯಕ್ಷೆ ಬೇಬಿ ಪಟಿಕಲ್ಲು, ಉಪಾಧ್ಯಕ್ಷ ಮಹೇಶ್ ಶೆಟ್ಟಿ ಬೈಲುಗುತ್ತು, ಸದಸ್ಯರಾದ ಲಲಿತಾ, ಗಿರಿಜ, ಹರೀಶ್, ಪ್ರಮುಖರಾದ ಪ್ರತಿಭಾ ಶ್ರೀಧರ್ ಶೆಟ್ಟಿ, ರಾಜೇಂದ್ರ ರೈ ಬೈಲುಗುತ್ತು, ನಾರಾಯಣ ಪೂಜಾರಿ ನೀರುಮಜಲು, ಜಯರಾಂ ಶಾಸ್ತ್ರೀ ಮಣಿಲ,  ನಾರಾಯಣ ನಾಯ್ಕ, ಅಲ್ಬರ್ಟ್ ಡಿಸೋಜಾ, ಕ್ಷೇವಿಯರ್ ಡಿಸೋಜಾ, ವೆಂಕಪ್ಪ ಗೌಡ ಅಜೇರು ಮಜಲು, ಕುಂಞಣ್ಣ ರೈ, ಸೀತಾರಾಮ ಪಟಿಕಲ್ಲು, ಮಹಾಲಿಂಗ ನಾಯ್ಕ, ಕರೀಂ ಕುದ್ದುಪದವು, ಮೌರಿಸ್‌ಟೆಲ್ಲಿಸ್, ದಿವಾಕರ ತೋರಣಕಟ್ಟೆ, ಮೋಹನ ಎಚ್, ಶಿವರಾಮ ನಾಯ್ಕ ಪಾವಳುಮೂಲೆ, ಪೂವಪ್ಪ ಎರ್ಮೆತೊಟ್ಟಿ, ಗೋವಿಂದ ನಾಯ್ಕ ಆಜೇರು, ಹಮೀದ್ ಎಂ.ಎಸ್, ಇಸ್ಮಾಯಿಲ್ ಪಾಲಸ್ತಡ್ಕ, ಮುಸ್ತಫ ಗರಡಿ, ಅಬ್ದುಲ್ಲ ಕೆಪಿ, ವಾಮನ ನಾಯ್ಕ, ಹರೀಶ್ ಕುಮಾರ್ ಆಜೇರುಮಜಲು, ಶರೀಫ್ ಕೊಲ್ಲಪದವು, ರಮೇಶ್ ದಂಬೆ, ಶ್ರೀನಿವಾಸ ನಾರ್ಣಡ್ಕ ಸೇರಿದಂತೆ ಹಲವು ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು. ಪುಣಚ ವಲಯಾದ್ಯಕ್ಷ ಬಾಲಕೃಷ್ಣ ಪೂಜಾರಿ ಹಿತ್ತಿಲು ಸ್ವಾಗತಿಸಿ, ವಂದಿಸಿದರು.

ಮೌಂಟನ್ ವ್ಯೂ ಅಸ್ವಾಲಿಹಾ ವುಮೆನ್ಸ್ ಕಾಲೇಜ್ ನಲ್ಲಿ ಗ್ಲೋ 2k 23 ಮೀಲಾದ್ ಆರ್ಟ್ ಫೆಸ್ಟ್ ಲೋಗೋ ಅನಾವರಣ

Posted by Vidyamaana on 2023-09-27 17:46:44 |

Share: | | | | |


ಮೌಂಟನ್ ವ್ಯೂ ಅಸ್ವಾಲಿಹಾ ವುಮೆನ್ಸ್ ಕಾಲೇಜ್ ನಲ್ಲಿ ಗ್ಲೋ 2k 23 ಮೀಲಾದ್ ಆರ್ಟ್ ಫೆಸ್ಟ್ ಲೋಗೋ ಅನಾವರಣ

ಪುತ್ತೂರು : ಸಾಲ್ಮರ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯ ಅಧೀನದ ಅಸ್ವಾಲಿಹಾ ವುಮೆನ್ಸ್ ಶರೀಅತ್,  ಪಿ.ಯು.ಕಾಲೇಜ್ ನಲ್ಲಿ ಈದ್ ಮೀಲಾದ್ ಪ್ರಯುಕ್ತ ಕಾಲೇಜ್ ವಿದ್ಯಾರ್ಥಿನಿಯರ ಮೀಲಾದ್ ಆರ್ಟ್ ಫೆಸ್ಟ್ ನ  ಗ್ಲೋ-2k 23 ಲೋಗೋವನ್ನು ಕಾಲೇಜ್ ಸಭಾಂಗಣದಲ್ಲಿ ಅನಾವರಣ ಗೊಳಿಸಲಾಯಿತು.

    ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೋಡಿಂಬಾಡಿ ಜುಮ್ಮಾ ಮಸೀದಿಯ ಅಧ್ಯಕ್ಷ ಉದ್ಯಮಿ ಯು.ಕೆ.ಉಮರ್ ಹಾಜಿ ಕೋಡಿಂಬಾಡಿ ಮತ್ತು ಕೆಮ್ಮಾಯಿ ಜುಮ್ಮಾ ಮಸೀದಿಯ ಅಧ್ಯಕ್ಷ ಉದ್ಯಮಿ ಬಶೀರ್ ಹಾಜಿ ದಾರಂದಕುಕ್ಕು ಅವರು ಲೋಗೋವನ್ನು ಅನಾವರಣ ಗೊಳಿಸಿದರು.

    ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ   ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಯು.ಮುಹಮ್ಮದ್ ಹಾಜಿ ಪಡೀಲ್ ಅವರು ಪ್ರವಾದಿಯವರು ಕಲಿಸಿ ಕೊಟ್ಟ ಮಾದರಿಯಲ್ಲಿ ಬದುಕು ಕಟ್ಟಿ ಬದುಕು ಬೆಳಗಿಸಿ ಕೊಳ್ಳಬೇಕೆಂದು ಕರೆ ನೀಡಿದರು.

‌   ಮೌಂಟನ್ ವ್ಯೂ ಸಂಸ್ಥೆಯ ಸಂಚಾಲಕ ಮುಹಮ್ಮದ್ ಸಾಬ್ ಹಾಜಿ ಮಾತನಾಡಿ ಪ್ರವಾದಿಯವರ ಸಂದೇಶವನ್ನು ಬದುಕಲ್ಲಿ ಅಳವಡಿಸಿ ಕೊಂಡರೆ ಇಹಪರ ಯಶಸ್ಸು ಸಾಧ್ಯ ಎಂದರು. 

  ದಾರುಲ್ ಫಲಾಹ್ ಮದ್ರಸ ಶಿಕ್ಷಕರಾದ ನಝೀರ್ ಅರ್ಶದಿ, ಮೌಂಟನ್ ವ್ಯೂ ಶಾಲಾ ದೈಹಿಕ ಶಿಕ್ಷಕ ಅಶ್ರಫ್ , ಕಾರ್ಯಾಲಯ ನಿರ್ವಾಹಕರಾದ ಯೂಸುಫ್ ಕೂಟತ್ತಾನ, ಹಮೀದ್   ಮೊದಲಾದವರು ಉಪಸ್ಥಿತರಿದ್ದರು. 

    ಅಸ್ವಾಲಿಹಾ ವುಮೆನ್ಸ್ ಕಾಲೇಜ್ ನ ಉಸ್ತಾದ್ ಕೆ.ಎಂ.ಎ. ಕೊಡುಂಗಾಯಿ ಫಾಝಿಲ್ ಹನೀಫಿ ಅವರು ಸ್ವಾಗತಿಸಿ ಪ್ರವಾದಿಯವರ ಬದುಕು,ಬೋಧನೆ ಯ ಬಗ್ಗೆ ವಿವರಿಸಿದರು. 

     ಶಾಲಾ ಶಿಕ್ಷಕ ರವೂಫ್ ವಿವಿಧ ಕಾರ್ಯಕ್ರಮ ನಿರ್ವಹಿಸಿ ಕೊನೆಗೆ ವಂದಿಸಿದರು. 

   ಮದ್ರಸ ವಿದ್ಯಾರ್ಥಿಗಳಿಂದ ಬುರ್ಧಾ ಮಜ್ಲಿಸ್ ನಡೆಯಿತು.

    ಕಾರ್ಯಕ್ರಮದ ಬಳಿಕ ಕಾಲೇಜ್ ಉಪಾನ್ಯಾಸಕಿಯರಾದ ಸಾಜಿದಾ, ಮಿಶ್ರಿಯಾ ಅಸ್ವಾಲಿಹಾ ಮತ್ತು ಫಾರಿಶಾ ಅಸ್ವಾಲಿಹಾ ಅವರ ನೇತೃತ್ವದಲ್ಲಿ ಕಾಲೇಜ್ ನ ಒಳಾಂಗಣದಲ್ಲಿ ವಿದ್ಯಾರ್ಥಿನಿಯರಿಂದ ವಿವಿಧ ಸಾಹಿತ್ಯ ಕಲಾ ಸ್ಪರ್ಧಾ ಕಾರ್ಯಕ್ರಮ ನಡೆಯಿತು.

ಕಾಂಗ್ರೆಸ್ ವಿಜಯೋತ್ಸವದಲ್ಲಿ ಪುತ್ತಿಲ ಅಭಿಮಾನಿಗಳು

Posted by Vidyamaana on 2023-05-14 15:17:41 |

Share: | | | | |


ಕಾಂಗ್ರೆಸ್ ವಿಜಯೋತ್ಸವದಲ್ಲಿ ಪುತ್ತಿಲ ಅಭಿಮಾನಿಗಳು

ಪುತ್ತೂರು: ಶನಿವಾರ ಸಂಜೆ ಕಾಂಗ್ರೆಸ್ ಗೆಲುವಿನ ಶೋಭಾಯಾತ್ರೆ ನಡೆಯುತ್ತಿತ್ತು. ಅಷ್ಟರಲ್ಲಿ ಎದುರಿನಿಂದ ಪಕ್ಷೇತರವಾಗಿ ಸ್ಪರ್ಧಿಸಿದ್ದ ಅರುಣ್ ಕುಮಾರ್ ಪುತ್ತಿಲ ಅವರ ಕಾರು ಆಗಮಿಸಿತು. ಹಿಂದುತ್ವ – ಕಾಂಗ್ರೆಸ್ ಕಾರ್ಯಕರ್ತರು ಎದುರು – ಬದುರಾದರೆ ಹೇಗೆ? ಆತಂಕ ಬೇಡ. ಅರುಣ್ ಕುಮಾರ್ ಪುತ್ತಿಲ ಅವರು ಜನನಾಯಕ ಎನ್ನುವುದು ಮತ್ತೊಮ್ಮೆ ಸಾಬೀತಾಗುವ ಪ್ರಸಂಗಕ್ಕೆ ಈ ಘಟನೆ ಸಾಕ್ಷಿಯಾಯಿತು.

ಕಾಂಗ್ರೆಸ್ ಕಾರ್ಯಕರ್ತರು, ಪುತ್ತಿಲ ಅವರಿಗೆ ಕೈ ಬೀಸಿ ತಮ್ಮ ಪ್ರೀತಿ ತೋರಿದರು. ಅರುಣ್ ಕುಮಾರ್ ಪುತ್ತಿಲ ಅವರು ಕೈಮುಗಿದು, ಅವರ ಪ್ರೀತಿಗೆ ತಲೆಬಾಗಿದರು. ಇನ್ನೂ ಕೆಲವರು ಪುತ್ತಿಲ ಅವರಿಗೆ ಕೈ ಕುಲುಕಿ ತಮ್ಮ ಪ್ರೀತಿಯನ್ನು ತೋರಿದರು.

ಮಹಿಳೆಯಿಂದ 3೦ ಸಾವಿರ ಲಂಚ ಪಡೆದ ಉಗ್ರಾಣಿ

Posted by Vidyamaana on 2023-09-06 18:39:08 |

Share: | | | | |


ಮಹಿಳೆಯಿಂದ 3೦ ಸಾವಿರ ಲಂಚ ಪಡೆದ ಉಗ್ರಾಣಿ

ಪುತ್ತೂರು: ಅಕ್ರಮಸಕ್ರಮ ಕಡತ ವಿಲೇವಾರಿ ಮಾಡುವುದಾಗಿ ಹೇಳಿ ಮಹಿಳೆಯಿಂದ ಪಡೆದ ಲಂಚದ ಹಣವನ್ನು ಹಿಂತಿರುಗಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ಗ್ರಾಮವೊಂದರ ಉಗ್ರಾಣಿಗೆಗೆ ಸೂಚನೆಯನ್ನು ನೀಡಿದ್ದಾರೆ.

ಕುಂಡಡ್ಕ ದಲ್ಲಿ ಶ್ರೀ ಕೃಷ್ಣಾಅಷ್ಟಮಿ ಕಾರ್ಯಕ್ರಮಕ್ಕೆ ತೆರಳಿದ ಶಾಸಕರ ಬಳಿ ಬಂದ ಚಂದ್ರಾವತಿ ಎಂಬ ಮಹಿಳೆ ನಾನು ಶಕುಂತಳಾ ಶೆಟ್ಟಿ ಶಾಸಕರಾಗಿದ್ದ ಸಂದರ್ಭದಲ್ಲಿ ಅಕ್ರಮ ಸಕ್ರಮಕ್ಕೆ ಅರ್ಜಿ ಹಾಕಿದ್ದೆ. ನನ್ನ ಮನೆ ಸರಕಾರಿ ಜಾಗದಲ್ಲಿದೆ. ನನ್ನ ಮನೆ ಇರುವ ಜಾಗವನ್ನು ಸಕ್ರಮ ಮಾಡಿಕೊಡಬೇಕೆಂದು ಅರ್ಜಿ ಸಲ್ಲಿಸಿದ್ದೇನೆ. ಸಲ್ಲಿಸಿದ ಅರ್ಜಿಯ ಎಲ್ಲಾ ದಾಖಲೆಗಳು ನನ್ನ ಬಳಿ ಇದೆ . ನಾನು ಅರ್ಜಿ ಕೊಟ್ಟಾಗ ನನ್ನಿಂದ ನನ್ನ ಗ್ರಾಮದ ಉಗ್ರಾಣಿ ಒಟ್ಟು ೩೦ ಸಾವಿರ ಹಣವನ್ನು ಲಂಚವಾಗಿ ಪಡೆದುಕೊಂಡಿದ್ದಾರೆ. ಏಳು ವರ್ಷ ಕಳೆದರೂ ನನಗೆ ಅಕ್ರಮ ಸಕ್ರಮದಲ್ಲಿ ಜಾಗ ರೆಕಾರ್ಡ್ ಆಗಲಿಲ್ಲ, ನಾನು ಬಡವೆ, ನನ್ನಲ್ಲಿ ಏನೂ ಇಲ್ಲ, ನಾನು ಬೀಡಿಕಟ್ಟಿ ಜೀವನ ಮಾಡುವುದು,  ಆದರೂ ನನ್ನಿಂದ ಹಣಪಡೆದುಕೊಂಡಿದ್ದಾರೆ. ಹಣ ಕೊಟ್ಟರೂ ಕೆಲಸ ಮಾಡಿಲ್ಲ ನನಗೆ ನ್ಯಾಯ ಕೊಡಿ ಎಂದು ಶಾಸಕರಲ್ಲಿ ಮನವಿ ಮಾಡಿದ್ದಾರೆ. ಕೂಡಲೇ ಹಣ ಪಡೆದುಕೊಂಡ ಉಗ್ರಾಣಿಗೆ ಕರೆ ಮಾಡಿದ ಶಾಸಕರು ಬಡ ಮಹಿಳೆಯಿಂದ ಲಂಚವಾಗಿ ಪಡೆದುಕೊಂಡ ೩೦ ಸಾವಿರ ಹಣವನ್ನು ವಾರದೊಳಗೆ ಮಹಿಳೆಗೆ ಪಾವತಿಸಿಬೇಕು ಇಲ್ಲವಾದರೆ ಕೆಲಸದಿಂದ ಸಸ್ಪೆಂಡ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಹಿಳೆಗೆ ಸಾಂತ್ವನ ಹೇಳಿದ ಶಾಸಕರು ನಿಮ್ಮ ಅರ್ಜಿಯನ್ನು ವಿಲೇವಾರಿ ಮಾಡುವಂತೆ ಸೂಚನೆ ಕೊಡುತ್ತೇನೆ. ಅಕ್ರಮ ಸಕ್ರಮ ಸಮಿತಿಯಾದ ತಕ್ಷಣವೇ ನಿಮ್ಮ ಜಾಗ ನಿಮಗೆ ರೆಕಾರ್ಡ್ ಆಗಲಿದೆ ಎಂದು ಹೇಳಿದಾಗ ಮಹಿಳೆ ಶಾಸಕರಿಗೆ ನಮಸ್ಕರಿಸಿದರು.

ನಟ್ಟೋಜ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ನಟ್ಟೋಜ ಶಿವಾನಂದ ರಾವ್ ನಿಧನ

Posted by Vidyamaana on 2024-03-12 10:00:00 |

Share: | | | | |


ನಟ್ಟೋಜ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ನಟ್ಟೋಜ ಶಿವಾನಂದ ರಾವ್ ನಿಧನ

ಪುತ್ತೂರು: ಅಂಬಿಕಾ ವಿದ್ಯಾ ಸಂಸ್ಥೆಗಳ ಮಾತೃಸಂಸ್ಥೆಯಾಗಿರುವ ನಟ್ಟೋಜ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷ ಶಿವಾನಂದ್ ರಾವ್ (93) ಮಂಗಳವಾರ ಬೆಳಿಗ್ಗೆ ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.ಸಾಮಾಜಿಕ ಹಾಗೂ ರಾಜಕೀಯವಾಗಿ ಸಕ್ರೀಯರಾಗಿದ್ದ ಅವರು ಪ್ರಗತಿಪರ ಕೃಷಿಕರೂ ಹೌದು.ವಿಶ್ವ ಹಿಂದೂ ಪರಿಷತ್ ನ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಅಯೋಧ್ಯೆಯ ರಾಮ ಮಂದಿರ ಹೋರಾಟದಲ್ಲೂ ಗುರುತಿಸಿಕೊಂಡಿದ್ದರು. ಮಾಜಿ ಶಾಸಕ ರಾಂ ಭಟ್ ಅವರ ಆತ್ಮೀಯರಾಗಿದ್ದು, ರಾಜಕೀಯವಾಗಿಯೂ ಸಾಕಷ್ಟು ಕೆಲಸ ನಿರ್ವಹಿಸಿದ್ದಾರೆ.


ಅವರು ಪುತ್ರ ಅಂಬಿಕಾ ವಿದ್ಯಾಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಹಾಗೂ ನಾಲ್ಕು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಮಂಗಳೂರು: ಜಲೀಲ್ ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು ಮಂಜೂರು

Posted by Vidyamaana on 2023-03-04 05:02:57 |

Share: | | | | |


ಮಂಗಳೂರು: ಜಲೀಲ್ ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು ಮಂಜೂರು

ಮಂಗಳೂರು: ಸುರತ್ಕಲ್ ಸಮೀಪದ ಕಾಟಿಪಳ್ಳ 4ನೇ ಬ್ಲಾಕ್‌ನಲ್ಲಿ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನಿಗೆ ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿದೆ.ಪ್ರಕರಣದ ತನಿಖೆ ಮುನ್ನಡೆದಿದ್ದು, ಈ ನಡುವೆ ಪ್ರಕರಣದ ಮೂರನೇ ಆರೋಪಿ ಪವನ್ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಜಾಮೀನು ಕೊರಿ ಅರ್ಜಿ ಸಲ್ಲಿಸಿದ್ದ. ಧೀರ್ಘ ವಾದ ಪ್ರತಿವಾದದ ಬಳಿಕ ಇದೀಗ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರಾದ ರವೀಂದ್ರ ಜೋಷಿ ಅವರು ಗುರುವಾರ ಶರತ್ತು ಬದ್ದ ಜಾಮೀನು ಮಂಜೂರು ಮಾಡಿದ್ದಾರೆ. ಆರೋಪಿಯ ಪರವಾಗಿ ಮಂಗಳೂರಿನ ವಕೀಲರಾದ ಶ್ರೇಯಸ್ . ಎಸ್ .ಕೆ ಮತ್ತು ಹರ್ಷಿತ್ ವಾದಿಸಿದರು.

ಘಟನೆ ಹಿನ್ನೆಲೆ

ಮಂಗಳೂರು ಹೊರವಲಯದ ಸುರತ್ಕಲ್​​ನ ಕಾಟಿಪಳ್ಳ ನಾಲ್ಕನೇ ಬ್ಲಾಕ್​ನಲ್ಲಿ ಜಲೀಲ್(45) ಎಂಬುವರಿಗೆ ದುಷ್ಕರ್ಮಿಗಳು ಡಿ. 24ರಂದು ಚಾಕು ಇರಿದಿದ್ದಾರೆ. ಜಲೀಲ್ ಕಾಟಿಪಳ್ಳದ ನೈತಂಗಡಿ ರಸ್ತೆಯಲ್ಲಿರುವ ಲತೀಫಾ ಸ್ಟೋರ್ ಮಾಲಿಕರಾಗಿದ್ದರು. ಸ್ಟೋರ್​ನಲ್ಲಿದ್ದ ಜಲೀಲ್​ಗೆ ದುಷ್ಕರ್ಮಿಗಳ ಗುಂಪು ಚಾಕು ಇರಿದು ಪರಾರಿಯಾಗಿದ್ದರು. ಇದರಿಂದ ತೀರ್ವ ಗಯಗೊಂಡಿದ್ದ ಜಲೀಲ್​ರನ್ನು ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜಲೀಲ್​ ಸಾವನ್ನಪ್ಪಿದ್ದರು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Recent News


Leave a Comment: