ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಸುದ್ದಿಗಳು News

Posted by vidyamaana on 2024-07-24 16:19:59 |

Share: | | | | |


ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಶಿವಮೊಗ್ಗ, ಜುಲೈ.24: ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ (Love) ಯುವಕ ತನ್ನ ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ (Murder) ಮಾಡಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯ ಕೊಲೆಯಾದವಳು. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಆರೋಪಿ ಸೃಜನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ಸೌಮ್ಯ ಮದುವೆಯಾಗುವಂತೆ ಸೃಜನ್​ನನ್ನು ಪೀಡಿಸುತ್ತಿದ್ದಳು. ಯುವತಿಯಿಂದ ಒತ್ತಡ ಹೆಚ್ಚಾದ ಹಿನ್ನೆಲೆ ಕೋಪಗೊಂಡ ಸೃಜನ್ ಪ್ರಿಯತಮೆಯ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಇನ್ನು ಸೃಜನ್ ಕೊಲೆ ಮಾಡಿ ಮೃತದೇಹವನ್ನು ಶಿವಮೊಗ್ಗದ ಮುಂಬಾಳು ಗ್ರಾಮದ ಬಳಿ ಹೂತಿಟ್ಟಿದ್ದ. ಯುವತಿಯ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದು ವಿಚಾರ ಬೆಳಕಿಗೆ ಬಂದಿದೆ.


ತೀರ್ಥಹಳ್ಳಿಯಲ್ಲಿ ಫೈನಾನ್ಸ್ ವೊಂದರಲ್ಲಿ ಕೆಲಸ ಮಾಡ್ತಿದ್ದ ಸೃಜನ್​ ಕೊಪ್ಪಗೆ ಹಣ ವಸೂಲಿಗೆ ಹೋಗುತ್ತಿದ್ದ. ಈ ವೇಳೆ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯಾಳ ಪರಿಚಯವಾಗಿತು. ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರದ್ದು ಬೇರೆ ಬೇರೆ ಸಮುದಾಯವಾಗಿದ್ದರಿಂದ ಸೃಜನ್ ಮನೆಯಲ್ಲಿ ಮದುವೆಗೆ ನಿರಾಕರಿಸಿದ್ದರು. ಇದೇ ವೇಳೆ ಯುವತಿ ಸೌಮ್ಯ ತೀರ್ಥಹಳ್ಳಿಗೆ ಹೋಗುತ್ತೇನೆ ಎಂದು ಮನೆಯಲ್ಲಿ ಹೇಳಿ ಜುಲೈ 2 ರಂದು‌ ಕೊಪ್ಪದಿಂದ ತೀರ್ಥಹಳ್ಳಿಗೆ ಬಂದಿದ್ದಳು.

ಬಳಿಕ ತನ್ನ ಪ್ರಿಯತಮನನ್ನು ಭೇಟಿ ಮಾಡಿ ಮನೆಗೆ ‌ಕರೆದುಕೊಂಡು‌ ಹೋಗುವಂತೆ ‌ಒತ್ತಡ ಹಾಕಿದ್ದಾಳೆ.


ನಮ್ಮ ಮನೆಗೆ ಈಗ ಬರಬೇಡ, ನಿಮ್ಮ ಮನೆಗೆ ವಾಪಸ್ ಹೋಗು ಎಂದು ಸೃಜನ್ ಮನವೊಲಿಸಲು ಪ್ರಯತ್ನಿಸಿದ್ದಾನೆ. ತೀರ್ಥಹಳ್ಳಿಯಿಂದ ಹೆದ್ದಾರಿಪುರಕ್ಕೆ ಕರೆದುಕೊಂಡು ಬಂದು ಸಮಾಧಾನದ ಮಾತುಗಳನ್ನಾಡಿದ್ದಾನೆ. ಇದರಿಂದ ಅನುಮಾನಗೊಂಡ ಸೌಮ್ಯ ನನ್ನನ್ನು ದೂರ ಮಾಡುತ್ತಿದ್ದಾನೆ. ಮೋಸ ಮಾಡುತ್ತಿದ್ದಾನೆ ಎಂದು ಭಾವಿಸಿ ವಾದ ಮಾಡಿದ್ದಾಳೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದ್ದು ಕೋಪಗೊಂಡ ಸೃಜನ್ ಸೌಮ್ಯ ಮೇಲೆ ಹಲ್ಲೆ ಮಾಡಿದ್ದಾನೆ. ಕತ್ತು ಹಿಸುಕಿ ಹಲ್ಲೆ ಮಾಡಿದ ಪರಿಣಾಮ ಯುವತಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾಳೆ.ಇದರಿಂದ ಗಾಬರಿಗೊಂಡ ಆರೋಪಿ ಸೃಜನ್ ಮುಂಬಾಳು ಬಳಿ ಶವವನ್ನು ಹೂತಿಟ್ಟಿದ್ದಾನೆ. ಮತ್ತೊಂದೆಡೆ ಮಗಳು ಮನೆಗೆ ಬರದಿದ್ದಕ್ಕೆ ಟೆನ್ಷನ್ ಆಗ ಪೋಷಕರು ತಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ಕೊಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಯುವಕನನ್ನು ಹುಡುಕಿಕೊಂಡು ಸಾಗರಕ್ಕೆ ‌ಬಂದಿದ್ದು ಯುವತಿಯನ್ನು ಕೊಂದು ಹೂತಿಟ್ಟ ರಹಸ್ಯವನ್ನು ಸೃಜನ್ ಪೊಲೀಸರ ಎದುರು ಬಿಚ್ಚಿಟ್ಟಿದ್ದಾನೆ. ಇಂದು ಎಸಿ ಸಮ್ಮುಖದಲ್ಲಿ ಯುವತಿಯ ಶವ ಹೊರಗೆ ತೆಗೆಯಲು ಸಿದ್ದತೆ ನಡೆಯುತ್ತಿದೆ. ಸ್ಥಳದಲ್ಲಿ ಪೊಲೀಸರು ಮೊಕ್ಕಂ ಹೂಡಿದ್ದಾರೆ.

 Share: | | | | |


ಮಾ.10 ರಿಂದ 12 : ಕಿಲ್ಲೆ ಮೈದಾನದಲ್ಲಿ ಯಂಗ್ ಬ್ರಿಗೇಡ್ ಸೇವಾದಳದಿಂದ ರಾಜೀವ್ ಗಾಂಧಿ ಟ್ರೋಫಿ ಕ್ರಿಕೆಟ್ ಪಂದ್ಯಾಟ, ರಕ್ತದಾನ ಶಿಬಿರ

Posted by Vidyamaana on 2023-03-09 16:02:43 |

Share: | | | | |


ಮಾ.10 ರಿಂದ 12 :  ಕಿಲ್ಲೆ ಮೈದಾನದಲ್ಲಿ ಯಂಗ್ ಬ್ರಿಗೇಡ್ ಸೇವಾದಳದಿಂದ  ರಾಜೀವ್ ಗಾಂಧಿ ಟ್ರೋಫಿ ಕ್ರಿಕೆಟ್ ಪಂದ್ಯಾಟ, ರಕ್ತದಾನ ಶಿಬಿರ

ಪುತ್ತೂರು: ಕಾಂಗ್ರೆಸ್‌ನ ಅಂಗ ಘಟಕವಾದ ಯಂಗ್ ಬ್ರಿಗೇಡ್ ಸೇವಾದಳವು ಮಾ.10 ರಿಂದ 12 ರವರೆಗೆ ರಾಜೀವ್ ಗಾಂಧಿ ಟ್ರೋಫಿ ಕ್ರಿಕೆಟ್ ಪಂದ್ಯಾಟ ಆಯೋಜಿಸಿದೆ. ಈ ಕ್ರೀಡಾಕೂಟದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಪ್ರತಿ ಗ್ರಾಮಗೊಂದರಂತೆ 32 ತಂಡಗಳು ಭಾಗವಹಿಸಲಿವೆ. ಮಾ.10ರಂದು 3 ಗಂಟೆಗೆ ಬೂತ್ ಮಟ್ಟದ ಕಾರ್ಯಕರ್ತರ ಅಟೋ ರಿಕ್ಷಾ ಜಾಥ ನಡೆಯಲಿದೆ ಎಂದು ಯಂಗ್ ಬ್ರಿಗೇಡ್ ಸೇವಾದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ರಿಯಾಜ್ ತಿಳಿಸಿದ್ದಾರೆ.ಭಾಗವಹಿಸುವ ಪ್ರತಿ ತಂಡವು 6 ಯುನಿಟ್ ರಕ್ತದಾನ ಮಾಡಬೇಕೇಂಬ ಷರತ್ತು ವಿಧಿಸಲಾಗಿದೆ. ಭಾಗವಹಿಸುವ ತಂಡಗಳಿಗೆ ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ. ರಕ್ತದಾನ ಶಿಬಿರ ಈಗಾಗಲೇ ಪುರಭವನದಲ್ಲಿ ಆರಂಭಗೊಂಡಿದ್ದು, ತಂಡಗಳ ದಾಖಲಾತಿಯು ನಡೆಯುತ್ತಿದೆ ಎಂದು ಅವರು ತಿಳಿಸಿದರು.ಅಟೋ ರಿಕ್ಷಾ ಜಾಥದಲ್ಲಿ ಸುಮಾರು 150 ರಿಕ್ಷಾಗಳು ಭಾಗವಹಿಸುವ ನಿರೀಕ್ಷೆಯಿದ್ದು, ಅದರ ಉದ್ಘಾಟನೆ ಧರ್ಬೆ ವೃತ್ತದಲ್ಲಿ ನಡೆಯಲಿದೆ. ಜಾಥವು ಮುಖ್ಯ ರಸ್ತೆಯ ಮೂಲಕ ಕಿಲ್ಲೆ ಮೈದಾನಕ್ಕೆ ಆಗಮಿಸಲಿದ್ದು, ಗಾಂಧಿ ಕಟ್ಟೆಯಲ್ಲಿ ಗಾಂಧಿ ಪ್ರತಿಮೆಗೆ ಹಾರಾರ್ಪಣೆ ಮಾಡಲಿದ್ದೇವೆ. ಮಾ 11 ರಂದು ಸಂಜೆ ಇದೇ ವೇದಿಕೆಯಲ್ಲಿ ನಡೆಯುವ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಲಕ್ಕಿ ಡ್ರಾ ನಡೆಸಿ, ಜಾಥದಲ್ಲಿ ಭಾಗವಹಿಸಿದ ರಿಕ್ಷಾ ಚಾಲಕರಿಗೆ ಬಹುಮಾನ ವಿತರಿಸಲಾಗುತ್ತದೆ. ಲಕ್ಕಿ ಡ್ರಾದಲ್ಲಿ ವಿಜೇತರಾದ ಚಾಲಕರಿಗೆ ಬಹುಮಾನವಾಗಿ ಎಲ್‌ಇಡಿ ಟಿವಿ, ಮಿಕ್ಸರ್ ಡ್ರೈಂಡರ್ ಹಾಗೂ ಕುಕ್ಕರ್ ನೀಡಲಾಗುತ್ತದೆ. ಅಲ್ಲದೇ ಭಾಗವಹಿಸಿದ ಹ ಎಲ್ಲ ರಿಕ್ಷಾ ಚಾಲಕರಿಗೆ ಗೌರವಾರ್ಪಣೆಯು ನಡೆಯಲಿದೆಮಾ 10 ರಂದು ಯುವ ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ಬಿ.ವಿ. ಶ್ರೀನಿವಾಸ್ ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಮಾ.12 ರಂದು ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭ ನಡೆಯಲಿದ್ದು, ಇದರಲ್ಲಿ ಭಾಗವಹಿಸಿದ ಸ್ತ್ರೀಶಕ್ತಿಗೆ ಲಕ್ಕಿ ಕೂಪನ್ ಮೂಲಕ ಬಹುಮಾನ ವಿತರಣೆ ನಡೆಯಲಿದೆ ಎಂದು ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.ಯಂಗ್ ಬ್ರಿಗೇಡ್ ಸೇವಾದಳ ಪುತ್ತೂರು ಅಧ್ಯಕ್ಷ ರಂಜಿತ್ ಬಂಗೇರ ಮಾತನಾಡಿ ಪ್ರತಿ ತಂಡದಿಂದ 6 ಯುನಿಟ್ ನಂತೆ ಒಟ್ಟು 32 ತಂಡದಿಂದ 180 ಕ್ಕೂ ಅಧಿಕ ಯುನಿಟ್ ರಕ್ತ ಸಂಗ್ರಹಿಸುವ ನಿರೀಕ್ಷೆಯಿದೆ. ಸಾರ್ವಜನಿಕರಿಗೂ ರಕ್ತದಾನದಲ್ಲಿ ಪಾಲ್ಗೊಳ್ಳುವ ಅವಕಾಶ ಕಲ್ಪಿಸಲಾಗಿದ್ದು, ಹೀಗಾಗಿ ರಕ್ತ ಸಂಗ್ರಹದ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಕ್ರಿಕೆಟ್ ಪಂದ್ಯಾಟದ ವಿಜೇತ ತಂಡಕ್ಕೆ ಪ್ರಥಮ ಬಹುಮಾನವಾಗಿ ರೂ. 50 ಸಾವಿರ ನಗದು, ಟ್ರೋಫಿ, ದ್ವಿತೀಯ ಬಹುಮಾನವಾಗಿ ರೂ. 30ಸಾವಿರ ನಗದು ಟ್ರೋಫಿ ವಿತರಿಸಲಾಗುವುದು. ಕ್ರೀಡಾಪಟುಗಳು ಕಾಂಗ್ರೆಸ್ ಪಕ್ಷದ ಚಿಹ್ನೆಯ ಜರ್ಸಿ ಧರಿಸಿ ಆಡಲಿದ್ದಾರೆ ಎಂದು ಹೇಳಿದರು.

ಪ್ರಧಾನ ಕಾರ್ಯದರ್ಶಿ ಸನತ್ ರೈ, ಕೋಶಾಧಿಕಾರಿ ಶರೀಫ್ ಬಲ್ನಾಡು, ಸದಸ್ಯ ಎಡ್ವರ್ಡ್ ಉಪಸ್ಥಿತರಿದ್ದರು.

ಆಂಟಿಯನ್ನು ಪ್ರೀತಿಸಲು ಹೋಗಿ ಯುವಕನ ಬಿತ್ತು ಹೆಣ..

Posted by Vidyamaana on 2023-11-05 21:52:52 |

Share: | | | | |


ಆಂಟಿಯನ್ನು ಪ್ರೀತಿಸಲು ಹೋಗಿ ಯುವಕನ ಬಿತ್ತು ಹೆಣ..

ಬೆಂಗಳೂರು : ಆನೇಕಲ್ ಮುಗಳೂರು ಹೊಳೆಯಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು ಪ್ರಕರಣಕ್ಕೆ ಹಿಂದೆ ಬಿದ್ದ ಖಾಕಿ ಪಡೆಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಆಂಟಿಯ ಪ್ರೀತಿಸಲು ಹೋಗಿ ಯುವಕ ಹೆಣವಾಗಿ ಹೋಗಿದ್ದಾನೆ..ಈ ಕೇಸ್​ನಲ್ಲಿ ಮೃತನ ಪ್ರೇಯಸಿಯೇ ಆತನನ್ನು ಕೊಂದಿರುವ ಮಾಹಿತಿ ಲಭ್ಯವಾಗಿದೆ.ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಮುಗಳೂರು ಹೊಳೆಯಲ್ಲಿ ಅನಾಮಿಕ ವ್ಯಕ್ತಿಯ ಶವ ಸಿಕ್ಕಿದ್ದು, ಈ ಪ್ರಕರಣ ಆಸುಪಾಸಿನ ಜನರನ್ನು ಆತಂಕಕ್ಕೀಡು ಮಾಡಿತ್ತು. ಆದರೀಗ ಪೊಲೀಸರು ಈ ಪ್ರಕರಣವನ್ನು ಬೇಧಿಸಿದ್ದು, ಮೃತ ಯುವಕನನ್ನು ಕೋಲಾರ ಮಾಲೂರು ತಾಲೂಕಿನ ಅಯ್ಯಪ್ಪನಗರದ 28 ವರ್ಷದ ಚೇತನ್ ಎಂದು ಗುರುತಿಸಲಾಗಿದೆ. ಮಾಲೂರು ಸೊನ್ನಾಪುರ ಗ್ರಾಮದ ಸತೀಶ್(30), ಶಶಿ(29), ಶೋಭಾ(28) ಕೊಲೆ ಆರೋಪಿಗಳಾಗಿದ್ದಾರೆ.


ಕಳೆದ ತಿಂಗಳು 26ನೇ ತಾರೀಖು ದಕ್ಷಿಣ ಪಿನಾಕಿನಿ ಹೊಳೆಯಲ್ಲಿ ಯುವಕನ ಶವ ಪತ್ತೆಯಾಗಿತ್ತು. ಈ ವೇಳೆ ಸಮೀಪದ ಮುಗಳೂರು ಬ್ರಿಡ್ಜ್ ತಡೆಗೋಡೆ ಮೇಲೆ ರಕ್ತದ ಕಲೆಗಳಿರುವುದು ಪತ್ತೆಯಾಗಿತ್ತು. ಆದ್ರೆ ಅಂದು ಮೃತನ ಗುರುತು ಪತ್ತೆಯಾಗಿರಲಿಲ್ಲ. ಸರ್ಜಾಪುರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಇದಾದ ಬಳಿಕವೇ ಯುವಕನ ಮರ್ಡರ್ ಕಹಾನಿ ಬಯಲಿಗೆ ಬಂದಿದೆ.ಮೃತ ಚೇತನ್ ಗಂಡ ಬಿಟ್ಟಿದ್ದ ಮಹಿಳೆ ಜೊತೆ ಸಹಜೀವನ ಆರಂಭಿಸಿದ್ದು, ಕಳೆದ ಎಂಟು ತಿಂಗಳಿಂದ ಇಬ್ಬರೂ ಒಟ್ಟಿಗಿದ್ದರೆನ್ನಲಾಗಿದೆ. ಈ ನಡುವೆ ಚೇತನ್ ಮೂಲಕ ಸತೀಶ್ ಪರಿಚಯವಾಗಿದ್ದು, ಸಿರಿವಂತ ಸತೀಶ್ ಮೇಲೆ ಶೋಭಾ ಕಣ್ಣು ಬಿದ್ದಿದೆ. ಕೆಲವೇ ದಿನಗಳಲ್ಲಿ ಶೋಭಾಗಾಗಿ ಆತ ಲಕ್ಷ ಲಕ್ಷ ಖರ್ಚು ಮಾಡಿದ್ದ. 25 ಲಕ್ಷ ಖರ್ಚು ಮಾಡಿದ್ದ ಆತ ಶೋಭಗಾಗಿ ಬ್ಯೂಟಿ ಪಾರ್ಲರ್ ಆರಂಭ ಮಾಡಿದ್ದ. ಆದರೆ ಇಬ್ಬರ ನಡುವಿನ ಈ ಆಪ್ತತೆಗೆ ಚೇತನ್ ಅಡ್ಡಿಯಾಗಿದ್ದ.


ತಮ್ಮ ಈ ಸಂಬಂಧಕ್ಕೆ ಅಡ್ಡಿಯಾದ ಚೇತನ್​ ಆಟ ಮುಗಿಸಲು ಶೋಭಾ ಪ್ಲಾನ್ ಮಾಡಿದ್ದಾಳೆ. ನಂತರ ಒಂದು ದಿನ ಎಣ್ಣೆ ಪಾರ್ಟಿ ನಡೆದಿದೆ. ಹೊಸಕೋಟೆ ಐಶ್ವರ್ಯ ಬಾರ್ ನಲ್ಲಿ ಎಣ್ಣೆ ಪಾರ್ಟಿ ಮುಗಿಸಿ ಮಧ್ಯರಾತ್ರಿ 2 ಗಂಟೆಗೆ ಚೇತನ್‍ನನ್ನು ಮಚ್ಚಿನಿಂದ ಹೊಡೆದು ಮುಗಳೂರು ಹೊಳೆಗೆ ಎಸೆದಿರುವುದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ.ಈ ಹಿಂದೆ ಅತ್ತಿಬೆಲೆ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದ ಆರೋಪಿ  ಶೋಭಾ, ಈ ಬಾರಿ ತನ್ನ ಮಾಸ್ಟರ್ ಪ್ಲಾನ್ ನಿಂದಾಗಿ ಇಬ್ಬರ ಭವಿಷ್ಯ ಹಾಳು ಮಾಡಿದ್ದಾಳೆ. ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಿಯಾ ಕಾರು ; ಚಿಕ್ಕಮಗಳೂರು ಬಟ್ಟೆ ಅಂಗಡಿ ವ್ಯಾಪಾರಿ ದಿನೇಶ್ ಮೃತ್ಯು

Posted by Vidyamaana on 2024-05-23 19:28:47 |

Share: | | | | |


ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಿಯಾ ಕಾರು ; ಚಿಕ್ಕಮಗಳೂರು ಬಟ್ಟೆ ಅಂಗಡಿ ವ್ಯಾಪಾರಿ ದಿನೇಶ್ ಮೃತ್ಯು

ಚಿಕ್ಕಮಗಳೂರು, ಮೇ 23: ಚಾಲಕನ ನಿಯಂತ್ರಣ ತಪ್ಪಿ ಕಿಯಾ ಕಾರು ಕೆರೆಗೆ ಬಿದ್ದ ಘಟನೆ ಅಂಬಳೆ ಕೆರೆಯಲ್ಲಿ ನಡೆದಿದೆ. ದಿನೇಶ್ (33) ಕಾರ್ನೊಳಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಕಾರ್ನಲ್ಲಿದ್ದ ಮತ್ತೊರ್ವ ಸಂತೋಷ್ ಪಾರಾಗಿದ್ದಾರೆ.

ಚಿಕ್ಕಮಗಳೂರಿನಿಂದ ಅಂಬಳೆ ಗ್ರಾಮಕ್ಕೆ ಇಬ್ಬರು ಕಾರಿನಲ್ಲಿ ತೆರಳುತ್ತಿದ್ದರು. ಇಂದು ಬೆಳಗ್ಗಿನ ಜಾವ ಅವರಿದ್ದ ಕಾರು ಏಕಾಏಕಿ ಕೆರೆಗೆ ಬಿದ್ದಿದೆ. ಪರಿಣಾಮ ದಿನೇಶ್ ಅಲ್ಲೇ ಸಾವನ್ನಪ್ಪಿದ್ದಾರೆ.

ಕೌಡಿಚ್ಚಾರು : ಕೃಷಿಕರಿಗೆ ಉಚಿತ ವಿದ್ಯುತ್ ಕೊಟ್ಟದ್ದು ಕಾಂಗ್ರೆಸ್ ಸರಕಾರ: ಅಶೋಕ್ ಕುಮಾರ್

Posted by Vidyamaana on 2023-04-26 06:50:07 |

Share: | | | | |


ಕೌಡಿಚ್ಚಾರು : ಕೃಷಿಕರಿಗೆ ಉಚಿತ ವಿದ್ಯುತ್ ಕೊಟ್ಟದ್ದು ಕಾಂಗ್ರೆಸ್ ಸರಕಾರ: ಅಶೋಕ್ ಕುಮಾರ್

ಪುತ್ತೂರು: ಉಳುವವನೇ ಭೂಮಿಯ ಒಡೆಯ ಎಂಬ ಕಾನೂನು ಜಾರಿಗೆ ತಂದು ಬಡವ ತಲೆ ಎತ್ತಿ ನಿಲ್ಲುವಂತೆ ಮಾಡಿದ್ದು ಕಾಂಗ್ರೆಸ್ಸಿನ ಇಂದಿರಾ ಗಾಂದಿ,ಅದೇ ರೀತಿ ರಾಜ್ಯದಲ್ಲಿ ಕೃಷಿ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ಕೊಟ್ಟದ್ದು ಕಾಂಗ್ರೆಸ್ ಸರಕಾರವಾಗಿದೆ ಎಂಬುದನ್ನು ಪ್ರತೀಯೊಬ್ಬರೂ ತಿಳಿದುಕೊಳ್ಳಬೇಕು. ಕಾಂಗ್ರೆಸ್ ದೇಶವನ್ನು ಆಳದೇ ಇರುತ್ತಿದ್ದರೆ ಇಂದು ದೇಶ ಏನಾಗುತ್ತಿತ್ತು ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಹೇಳಿದರು. ಕೌಡಿಚ್ಚಾರ್ ಜಂಕ್ಷನ್ ನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್ ಜನಪರ ಯೋಜನೆಯನ್ನೇ ಜಾರಿಗೆ ತರುತ್ತಿದೆ. ಕಾಂಗ್ರೆಸ್ ದೇಶದ ಜನರ ಜೀವನಾಡಿ. ಕಾಂಗ್ರೆಸ್ ಸರಕಾರ ಇದ್ದರೆ ಮಾತ್ರ ಜನ ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ. ಬಡಜನರಿಗಾಗಿಯೇ ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಹೇಳಿದರು.ನಾಳೆಯ ನೆಮ್ಮದಿಗಾಗಿ ಕಾಂಗ್ರೆಸ್ ಬೆಂಬಲಿಸಿ. ನಾನು ಎಂದೂ ಕೊಟ್ಟ ಮಾತನ್ನು ತಪ್ಪಿ ನಡೆಯಲಾರೆ ಕಾಂಗ್ರೆಸ್ ಗೆ ಮತ ಹಾಕುವ ಮೂಲಕ ಕ್ಷೇತ್ರದ ಅಭಿವೃದ್ದಿಗಾಗಿ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು.

ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ಕಾರು ಡಿಕ್ಕಿ

Posted by Vidyamaana on 2023-10-01 18:36:02 |

Share: | | | | |


ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ಕಾರು ಡಿಕ್ಕಿ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಇತ್ತೀಚೆಗೆ ತಮ್ಮ ಮನೋಜ್ಞ ಅಭಿನಯ ಮೂಲಕ ಪ್ರೇಕ್ಷಕರ ಮೆಚ್ಚುಗೆ ಗಳಿಸಿರುವ ನಟ ನಾಗಭೂಷಣ್ ವಿರುದ್ಧ ಹಿಟ್ ಅಂಡ್ ರನ್ ಕೇಸು ದಾಖಲಾಗಿ ಪೊಲೀಸರು ಅವರನ್ನು ಬಂಧಿಸಿದ್ದಾರೆ  ಎಂದು ತಿಳಿದುಬಂದಿದೆ.


ಕಳೆದ ರಾತ್ರಿ ಬೆಂಗಳೂರಿನಲ್ಲಿ ನಟ ನಾಗಭೂಷಣ್ ಕಾರು ಕನಕಪುರ ರಸ್ತೆಯ ವಸಂತಪುರ ರಸ್ತೆಯ ಅಪಾರ್ಟ್ ಮೆಂಟ್ ಬಳಿ ಆಪಘಾತವಾಗಿದ್ದು, ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ 48 ವರ್ಷದ ಪ್ರೇಮಾ ಎಂಬ ಮಹಿಳೆ ಮೃತಪಟ್ಟರೆ, ಅವರ ಪತಿ ಗಂಭೀರ ಗಾಯಗೊಂಡಿದ್ದಾರೆ. ಉತ್ತರ ಹಳ್ಳಿಯ ಕೆ ಎಸ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮುಂದಿನ ತನಿಖೆ ನಡೆಯುತ್ತಿದೆ.


ಖಾಸಗಿ ವಾಹಿನಿಯ ಕಾರ್ಯಕ್ರಮ ಮುಗಿಸಿ ಬರುವ ವೇಳೆ ನಾಗಭೂಷಣ ಅವರು ಕಾರು ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನು ನಾಗಭೂಷಣ ಅವರು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರೇಮ ಮೃತಪಟ್ಟಿದ್ದಾರೆ. 

ನಾಗಭೂಷಣ್ ಅವರು ಕಳೆದ ರಾತ್ರಿ ಕಾರನ್ನು ವೇಗವಾಗಿ ಚಾಲನೆ ಮಾಡಿಕೊಂಡುಬಂದು ಫುಟ್​ಪಾತ್​ನಲ್ಲಿ ನಡೆದುಹೋಗುತ್ತಿದ್ದ ಕೃಷ್ಣ ಬಿ (58) ಮತ್ತು ಅವರ ಪತ್ನಿ ಎಸ್ ಪ್ರೇಮ ಅವರಿಗೆ ಡಿಕ್ಕಿ ಹೊಡೆದಿದೆ. ಫುಟ್​ ಪಾತ್​​ಗೆ ಬಂದ ಕಾರು ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಪ್ರೇಮ ಅವರ ಮುಖ, ತಲೆಗೆ ಗಾಯವಾಗಿ ತೀವ್ರ ರಕ್ತಸ್ತ್ರಾವ ಮೂಗು ಹಾಗೂ ಬಾಯಿಯಿಂದ ರಕ್ತಬಂದು ಆಸ್ಪತ್ರೆಗೆ ಕರೆದೊಯ್ಯುವಾಗಲೇ ಮೃತಪಟ್ಟಿದ್ದಾರೆ.

ಬನ್ನೂರು: ರೈ ಚಾರಿಟೇಬಲ್‌ಟ್ರಸ್ಟ್ ಫಲಾನುಭವಿಗಳ ಸಭೆ

Posted by Vidyamaana on 2023-11-02 18:15:15 |

Share: | | | | |


ಬನ್ನೂರು: ರೈ ಚಾರಿಟೇಬಲ್‌ಟ್ರಸ್ಟ್ ಫಲಾನುಭವಿಗಳ ಸಭೆ

ಪುತ್ತೂರು: ಕಳೆದ ಹತ್ತು ವರ್ಷಗಳ ಹಿಂದೆ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟನ್ನು ಸ್ತಾಪನೆ ಮಾಡಿದ್ದೇ ಬಡವರ ಸೇವೆಗಾಗಿ, ಇದರಲ್ಲಿ ಯಾವುದೇ ರಾಜಕೀಯವಿಲ್ಲ, ಅಶೋಕ್ ರೈಯವರು ಶಾಸಕರಾಗುವ ಮೊದಲೇ ಟ್ರಸ್ಟ್‌ನಿಂದ ಸಮಾಜ ಸೇವೆ ನಡೆಯುತ್ತಲೇ ಇದೆ ಎಂದು ಟ್ರಸ್ಟ್‌ನ ಪ್ರಮುಖರಾದ ನಿಹಾಲ್ ಶೆಟ್ಟಿ ಹೇಳಿದರು.


ಅವರು ಬನ್ನೂರು ನವೋದಯ ಯುವಕ ಮಂಡಲದ ಸಭಾಂಗಣದಲ್ಲಿ ನಡೆದ ರೈ ಚಾರಿಟೇಬಲ್ ಟ್ರಸ್ಟ್ ಫಲಾನುಭವಿಗಳ ಸಭೆಯಲ್ಲಿ ಮಾತನಾಡಿದರು.


ಕಳೆದ ಹತ್ತು ವರ್ಷಗಳಿಂದ ವಿವಿಧ ಸೇವೆಗಳನ್ನು ಟ್ರಸ್ಟ್ ನೀಡುತ್ತಾ ಬಂದಿದೆ. ಬಡ ಮಹಿಳೆಯರಿಗೆ ಹೊಲಿಗೆ ತರಬೇತಿ , ಚಾಲನಾ ತರಬೇತಿ, ಮೆಡಿಕಲ್ ಕ್ಯಾಂಪ್, ಬಡವರಿಗೆ ಆರ್ಥಿಕ ನೆರವು ಸೇರಿದಂತೆ ಅನೇಕ ಬಡವರ ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ಟ್ರಸ್ಟ್ ಮೂಲಕ ತರಬೇತಿ ಪಡೆದ ಅನೇಕ ಮಂದಿ ಸ್ವ ಉದ್ಯೋಗದಲ್ಲಿ ತೊಡಗಿಸಿಕೊಂಡು ಸ್ವಾಭಿಮಾನಿಗಳಾಗಿದ್ದು ಅತ್ಯಂತ ಸಂತೋಷದ ವಿಚಾರವಾಗಿದೆ. ಬಡವರ ಮಕ್ಕಳ ವಿದ್ಯಾಬ್ಯಾಸಕ್ಕೆ ಟ್ರಸ್ಟ್‌ನಿಂದ ಆರ್ಥಿಕ ನೆರವು ನೀಡಲಾಗುತ್ತಿದೆ. ಈ ಬಾರಿಯ ದೀಪಾವಳಿಯಲ್ಲೂ ಬಡವರಿಗೆ ವಸ್ತ್ರ ವಿತರಣೆ ಹಾಗೂ ಸಹಭೋಜನ ಕಾರ್ಯಕ್ರಮ ನಡೆಯಲಿದ್ದು ಎಲ್ಲಾ ಗ್ರಾಮಸ್ಥರು ಇದರಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.


ವೇದಿಕೆಯಲ್ಲಿ ಟ್ರಸ್ಟ್‌ನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ, ಬನ್ನೂರು ನವೋದಯ ಯುವಕಮಂಡಲದ ಅಧ್ಯಕ್ಷರಾದ ರಾಧಾಕೃಷ್ಣ ರೈ, ಕಾರ್ಯದರ್ಶಿ ರೋಹಿತ್ ರೈ, ಚಂಧ್ರಾಕ್ಷ, ದಿನೇಶ್ ಸಾಲಿಯಾನ್, ಸಾಹಿರಾ ಬಾನು ಸೇರಿದಂತೆ ಟ್ರಸ್ಟ್‌ನ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ತಿತರಿದ್ದರು.

Recent News


Leave a Comment: