Posted by vidyamaana on 2024-07-08 20:09:58 |
ಮಂಗಳೂರು: ದ.ಕ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆ ಯ ಶಾಲಾ, ಪಿಯು ಕಾಲೇಜಿಗೆ ಜುಲೈ 09ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.
ದ. ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ. ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ದಿನಾಂಕ: 09/07/224 ರಂದು ರಜೆಯನ್ನು ಘೋಷಿಸಲಾಗಿದೆ.
Posted by Vidyamaana on 2023-04-05 08:26:14 |
ಕನಕಪುರ: ಸಾತನೂರು ಸಮೀಪ ಗೋ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಇದ್ರೀಸ್ ಪಾಷಾ ಎಂಬವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದೊಂದು ವಾರದಿಂದ ತಲೆಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಒಟ್ಟು ಐವರನ್ನು ಸಾತನೂರು ಠಾಣೆ ಪೊಲೀಸರು ಬುಧವಾರ ರಾಜಸ್ಥಾನದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಾಲ್ಲೂಕಿನ ಸಾತನೂರು ಬಳಿ ಶುಕ್ರವಾರ ಮಧ್ಯರಾತ್ರಿ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ ಮಂಡ್ಯ ಮೂಲದ ಇದ್ರೀಸ್ ಪಾಷಾ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಕುಟುಂಬ ಆರೋಪಿಸಿದೆ
ಕಳೆದೊಂದು ವಾರದಿಂದ ತಲೆಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಒಟ್ಟು ಐವರರನ್ನು ಸಾತನೂರು ಠಾಣೆ ಪೊಲೀಸರನ್ನೊಳಗೊಂಡ ರಾಮನಗರ ಪೊಲೀಸರ ವಿಶೇಷ ತಂಡಗಳು ಇಂದು ರಾಜಸ್ಥಾನದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿವೆ.
ಕಳೆದ ಮಾ.31ರ ಮಧ್ಯರಾತ್ರಿ ಸಾತನೂರು ಪೊಲೀಸ್ ಠಾಣೆ ಮುಂಭಾಗ ಜಾನುವಾರುಗಳನ್ನು ತುಂಬಿದ್ದ ಕ್ಯಾಂಟರ್ ವಾಹನವನ್ನು ಅಡ್ಡಗಟ್ಟಿದ್ದ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ, ಇತರೆ ನಾಲ್ವರು ಆರೋಪಿಗಳೊಂದಿಗೆ ತಲೆಮರೆಸಿಕೊಂಡಿದ್ದ. ಏ.2 ರಾತ್ರಿ ವಿಡಿಯೊವೊಂದನ್ನು ಹರಿಬಿಟ್ಟಿದ್ದ ಪುನೀತ್, ‘ನಾನೇ ವಿಚಾರಣೆಗೆ ಹಾಜರಾಗುತ್ತೇನೆ’ ಎಂದು ಹೇಳಿಕೊಂಡು ನಾಪತ್ತೆ ಆಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ತಂಡಗಳು ಯಶಸ್ವಿಯಾಗಿವೆ.
ಇದ್ರೀಷ್ ಪಾಷ ಸಾವಿಗೆ ನಿಖರ ಕಾರಣ ಏನೆಂಬುದು ಮರಣೋತ್ತರ ಪರೀಕ್ಷೆ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್ ಎಸ್ ಎಲ್) ವರದಿ ಬಂದ ಬಳಿಕವಷ್ಟೇ ತಿಳಿಯಲಿದೆ. ಕನಕಪುರದ ವೈದ್ಯರ ತಂಡವು ಇದ್ರೀಷ್ ಅವರ ಮರಣೋತ್ತರ ಪರೀಕ್ಷೆ ನಡೆಸಿದೆ. ಎಫ್ ಎಸ್ ಎಲ್ ವರದಿಯನ್ನೂ ಪಡೆಯಲಾಗುತ್ತದೆ.
ಮೂರು ಎಫ್ಐಆರ್: ಪ್ರಕರಣ ಸಂಬಂಧ ಸಾತನೂರು ಠಾಣೆಯಲ್ಲಿ ಮೂರು ಎಫ್ ಐಆರ್ ಗಳು ದಾಖಲಾಗಿವೆ. ಮೊದಲಿಗೆ ಅಕ್ರಮ ಗೋವು ಸಾಗಣೆಗೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ದೂರು ನೀಡಿದ್ದ. ಗೋವು ಸಂರಕ್ಷಣೆ ನೆಪದಲ್ಲಿ ನಮ್ಮ ಮೇಲೆ ದಾಳಿ ಮಾಡಿದ್ದಾರೆ ಎಂದು ಕ್ಯಾಂಟರ್ ಚಾಲಕ ಪ್ರತಿ ದೂರು ನೀಡಿದ್ದರು. ಮರು ದಿನ ಬೆಳಿಗ್ಗೆ 8ರ ಸುಮಾರಿಗೆ ಘಟನೆ ನಡೆದ ಸ್ಥಳದ 100 ಮೀಟರ್ ದೂರದಲ್ಲಿ ಇದ್ರೀಷ್ ಅವರ ಶವ ಪತ್ತೆ ಆಗಿದ್ದು, ಅವರ ಸಹೋದರ ಯೂನುಸ್ ಪಾಷ ನೀಡಿದ ದೂರಿನ ಅನ್ವಯ ಮತ್ತೊಂದು ಎಫ್ ಐಆರ್ ದಾಖಲಿಸಿದ್ದೇವೆ ಎಂದು ಎಸ್ ಪಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.
Posted by Vidyamaana on 2023-11-25 11:44:53 |
ಬೆಳ್ತಂಗಡಿ : ಮನೆಯ ಶೆಡ್ಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರನ್ನು ಕಳ್ಳತನ ಮಾಡಿದ ಪ್ರಕರಣವನ್ನು ಕೆಲವ 14 ದಿನದಲ್ಲಿ ಭೇದಿಸಿ ನಾಲ್ಕು ಜನರನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.
*ಘಟನೆ ವಿವರ:* ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಎಂಬಲ್ಲಿ ನವೆಂಬರ್ 9 ರಂದು ರಾತ್ರಿ 10 ಗಂಟೆ ಸಮಯಕ್ಕೆ ಇಸಾಕ್ ಎಂಬವರ ಅಕ್ಕನ ಮಗ ನೌಫಲ್ ಎಂಬವರು ತಮ್ಮ ಕಾರ್ ಶೆಡ್ಡಿನಲ್ಲಿ KA-02-MD-9042 ನೇ ಸಂಖ್ಯೆಯ ಇನ್ನೋವಾ ಕಾರನ್ನು ನಿಲ್ಲಿಸಿದ್ದು. ನವೆಂಬರ್ 10 ರಂದು ಬೆಳಿಗ್ಗೆ 6:30 ಗಂಟೆಗೆ ನೋಡಿದಾಗ ಕಾರು ಶೆಡ್ಡಿನಲ್ಲಿ ಕಾಣದೇ ಇರುವುದರಿಂದ ಈ ಬಗ್ಗೆ ಆಸುಪಾಸುಗಳಲ್ಲಿ ಹುಡುಕಾಡಿದರೂ ಪತ್ತೆಯಾಗದೇ ಇದ್ದು ಈ ಮೊದಲು ನೌಫಾಲ್ ನ ಗೆಳೆಯ ಸೈಪುದ್ದಿನ್ ಎಂಬಾತನ ಗೆಳೆಯರಾದ ಸೂರಜ್ ಶೆಟ್ಟಿ ಮತ್ತು ಅಜಯ್ ಶೆಟ್ಟಿಯವರು ಸದ್ರಿ ಕಾರನ್ನು ಬಾಡಿಗೆಗೆ ನೀಡುವಂತೆ ಕೇಳಿದಾಗ ನೀಡದೇ ಇದ್ದುದ್ದರಿಂದ ಸದ್ರಿ ಕಾರನ್ನು ಸೂರಜ್ ಶೆಟ್ಟಿ ಮತ್ತು ಅಜಯ್ ಶೆಟ್ಟಿ ಯವರು ಕಳವು ಮಾಡಿ ತೆಗೆದುಕೊಂಡು ಹೋಗಿರುವ ಬಗ್ಗೆ ಸಂಶಯ ಇರುತ್ತದೆ. ಕಳವಾದ ಇನ್ನೋವಾ ಕಾರಿನ ಈಗಿನ ಮೌಲ್ಯ ರೂಪಾಯಿ 2,25,000/- ಆಗಬಹುದು ಎಂಬುವುದಾಗಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ 379 IPC ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರ ತಂಡ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿ ನ.24 ರಂದು ಕಳ್ಳತನವಾದ ಇನೋವಾ ಕಾರು ಸಮೇತ ಪ್ರಕರಣದ ನಾಲ್ಕು ಜನ ಕಳ್ಳತನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
*ಆರೋಪಿಗಳ ವಿವರ:* ಆರೋಪಿಗಳಾದ ಮಂಗಳೂರು ಕಿನ್ನಿಗೋಳಿ ತಾಳಿಪ್ಪಡಿ ಗ್ರಾಮದ ಉಮಾ ನಿವಾಸಿ ಜಯರಾಮ ಶೆಟ್ಟಿ ಮಗನಾದ A-1 ಅಜಯ್ ಶೆಟ್ಟಿ(32) ,ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಗಾಣದಬೆಟ್ಟು ನಿವಾಸಿ ದಿ.ಸುರೇಶ್ ಶೆಟ್ಟಿ ಮಗನಾದ A-2 ಸೂರಜ್ ಶೆಟ್ಟಿ(23), ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಎನ್ಮಾಡಿ ನಿವಾಸಿ A-3 ಮಂಜುನಾಥ ಪೂಜಾರಿ(30), ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ಪರೆಕಲ್ ನಿವಾಸಿ ಪೂವಪ್ಪ ಪೂಜಾರಿ ಮಗನಾದ A-4 ಕಿಶೋರ್.ಟಿ(32) ಎಂಬವರನ್ನು ನ.24 ರಂದು ಬೆಳಗ್ಗೆ ವಶಕ್ಕೆ ಪಡೆದು ಅವರು ಕಳ್ಳತನ ಮಾಡಿಕೊಂಡು ಹೋಗಿದ್ದ KA-02-MD -9042 ನಂಬರಿನ ಇನ್ನೋವಾ ಕಾರನ್ನು ಸ್ವಾಧೀನಪಡಿಸಿಕೊಂಡು ನಂತರ ವಿಚಾರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಮಾನ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು.ನ್ಯಾಯಾಲಯ ನಾಲ್ಕು ಜನ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಿಷ್ಯಂತ್.ಸಿ.ಬಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಧರ್ಮಪ್ಪ ಎಂ.ಎನ್ ರವರ ನಿರ್ದೇಶನದಂತೆ ಬಂಟ್ವಾಳ ಡಿ.ವೈಎಸ್.ಪಿ ಶ್ರೀ ಪ್ರತಾಪ್ ಸಿಂಗ್ ಥೋರಾಟ್ ರವರ ಸೂಚನೆಯಂತೆ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಶ್ರೀ ನಾಗೇಶ್ ಕದ್ರಿಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ಅನೀಲ್ ಕುಮಾರ್.ಡಿ (ಕಾ&ಸು) ಮತ್ತು ಸಬ್ ಇನ್ಸ್ಪೆಕ್ಟರ್ ಸಮರ್ಥ ರವೀಂದ್ರ ಗಾಣಿಗೇರ (ತನಿಖೆ) ಹಾಗೂ ಸಿಬ್ಬಂದಿಗಳಾದ ಎ.ಎಸ್.ಐಗಳಾದ ಸಾಮ್ಯುವೆಲ್ ಮತ್ತು ಪೌಲೋಸ್ ಹಾಗೂ ಸಿಬ್ಬಂದಿ ರಾಜೇಶ್.ಎನ್, ಪ್ರಶಾಂತ್, ಮಂಜುನಾಥ್, ಮಲ್ಲಿಕಾರ್ಜುನ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.
Posted by Vidyamaana on 2023-06-30 23:09:08 |
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಜುಲೈ 01 ರಂದು...
ಬೆಳಿಗ್ಗೆ 10 ಗಂಟೆಗೆ ಸರ್ವೆ ವಲಯ ಕಾರ್ಯಕರ್ತರ ಸಭೆ
12.30 ತಾಲೂಕು ಕಚೇರಿ ಸಭಾಂಗಣದಲ್ಲಿ ಕಂದಾಯ ದಿನಾಚರಣೆ
ಮದ್ಯಾಹ್ನ 3 ಗಂಟೆ ನರಿಮೊಗರು ವಲಯ ಕಾರ್ಯಕರ್ತರ ಸಭೆ
ಸಂಜೆ 5 ಕುರಿಯದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ.
Posted by Vidyamaana on 2024-03-06 21:40:11 |
ಪುತ್ತೂರು: ನಯಾ ಚಪ್ಪಲ್ ಬಜಾರ್ನ ನವೀಕೃತ ಮಳಿಗೆಯ ಉದ್ಘಾಟನೆ ಮಾರ್ಚ್ 7ರಂದು ಬೆಳಿಗ್ಗೆ 10ಕ್ಕೆ ದರ್ಬೆ ಬುಶ್ರಾ ಟವರ್ನಲ್ಲಿ ನಡೆಯಲಿದೆ.
1998ರಲ್ಲಿ ಆಗಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಎದುರುಗಡೆ ಇದ್ದ ಎ.ಎಂ. ಕಾಂಪ್ಲೆಕ್ಸ್ನಲ್ಲಿ ನಯಾ ಚಪ್ಪಲ್ ಬಜಾರ್ ಕಾರ್ಯಾಚರಣೆ ಆರಂಭಿಸಿತು. ಬಳಿಕ ದರ್ಬೆಯ ಬುಶ್ರಾ ಟವರ್ಗೆ ಸ್ಥಳಾಂತರಗೊಂಡಿತು. ಸುಮಾರು 26 ವರ್ಷಗಳ ಸುದೀರ್ಘ ಪಯಣದಲ್ಲಿ ಗ್ರಾಹಕರ ಮನಸೂರೆಗೊಂಡಿರುವ ರಫೀಕ್ ಎಂ.ಜಿ. ಮಾಲಕತ್ವದ ನಯಾ ಚಪ್ಪಲ್ ಬಜಾರ್ ಇದೀಗ ಆಧುನಿಕತೆಗೆ ತಕ್ಕಂತೆ ನವೀಕೃತಗೊಂಡು ಶುಭಾರಂಭಗೊಳ್ಳುತ್ತಿದೆ.
ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಬ್ಬ ಅವರು ನವೀಕೃತ ಮಳಿಗೆಯನ್ನು ಉದ್ಘಾಟಿಸುವರು. ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿರುವರು. ದರ್ಬೆ ಬುಶ್ರಾ ಟವರ್ನ ಮಾಲಕ ಅಬ್ದುಲ್ ಅಜೀಜ್ ಅವರು ಪ್ರಥಮ ಗ್ರಾಹಕರಾಗಿ ಉಪಸ್ಥಿತರಿರುವರು.
ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ವಾಮನ್ ಪೈ, ಪುತ್ತೂರು ಸಂಯುಕ್ತ ಜಮಾಅತ್ ಕಮಿಟಿ ಅಧ್ಯಕ್ಷ ಮೊಹಮ್ಮದ್ ಹಾಜಿ ಕೆ.ಪಿ., ಮಹಾವೀರ ಮೆಡಿಕಲ್ ಸೆಂಟರಿನ ಡಾ. ಅಶೋಕ್ ಪಡಿವಾಳ್, ದರ್ಬೆ ಬಿಓಬಿಯ ಸೀನಿಯರ್ ಮ್ಯಾನೇಜರ್ ಸಾದೀಕ್ ಎಸ್.ಎಂ., ಲಿಯೋ ಜಿಲ್ಲಾ ಅಧ್ಯಕ್ಷೆ ಡಾ. ರಂಜಿತಾ ಎಚ್. ಶೆಟ್ಟಿ, ಕ್ರಿಸ್ಟೋಫರ್ ಕಾಂಪ್ಲೆಕ್ಸಿನ ವಲೇರಿಯನ್ ಡಯಾಸ್, ಡಾ. ಜಸ್ಪ್ರಿತ್ ಸಿಂಗ್ ದಿಲ್, ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ ಜಯರಾಜ್ ಭಂಡಾರಿ, ಪುತ್ತೂರು ಅಗ್ರಝೋನ್, ಸಿಝ್ಲರ್ನ ಪಿ.ಎನ್. ಪ್ರಸನ್ನ ಕುಮಾರ್ ಶೆಟ್ಟಿ, ಮದರ್ ಇಂಡಿಯಾದ ಎಂ.ಜಿ. ರಜಾಕ್ ಅತಿಥಿಗಳಾಗಿರುವರು ಎಂದು ಪ್ರಕಟಣೆ ತಿಳಿಸಿದೆ.
Posted by Vidyamaana on 2024-02-28 21:56:14 |
ನವದೆಹಲಿ :ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಂದರೆ ಫೆಬ್ರವರಿ 28 ರಂದು ಮಹಾರಾಷ್ಟ್ರದ ಯವತ್ಮಾಲ್ನಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 16ನೇ ಕಂತನ್ನ ಬಿಡುಗಡೆ ಮಾಡಿದ್ದಾರೆ. 16ನೇ ಕಂತಿನಡಿ 21 ಸಾವಿರ ಕೋಟಿಗೂ ಹೆಚ್ಚು ಸಮ್ಮಾನ್ ಮೊತ್ತವನ್ನ 9 ಕೋಟಿಗೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗಿದೆ.ಮೊತ್ತವನ್ನ ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗಿದೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ರೈತರಿಗೆ ವಾರ್ಷಿಕ 6,000 ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ. ಈ ಮೊತ್ತವನ್ನ ಪ್ರತಿ 4 ತಿಂಗಳ ಅಂತರದಲ್ಲಿ ತಲಾ 2,000 ರೂ.ಗಳಂತೆ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಕಳುಹಿಸಲಾಗುತ್ತದೆ.ಅಂತಹ ರೈತರಿಗೆ ಈ ಯೋಜನೆಯ ಲಾಭ ಸಿಗುವುದಿಲ್ಲ.!
ಕುಟುಂಬದಲ್ಲಿ ಯಾರಾದರೂ ತೆರಿಗೆ ಪಾವತಿಸಿದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಿಲ್ಲ. ಅಂದರೆ ಕಳೆದ ವರ್ಷ ಗಂಡ ಅಥವಾ ಹೆಂಡತಿ ಆದಾಯ ತೆರಿಗೆ ಪಾವತಿಸಿದ್ದರೆ ಅವರಿಗೆ ಸಿಗುವುದಿಲ್ಲ. ಈ ಯೋಜನೆಯ ಲಾಭ, ಕೃಷಿ ಭೂಮಿಯನ್ನ ಕೃಷಿ ಕೆಲಸಗಳ ಬದಲಿಗೆ ಇತರ ಉದ್ದೇಶಗಳಿಗೆ ಬಳಸುತ್ತಿರುವವರು ಅಥವಾ ಇತರರ ಹೊಲಗಳಲ್ಲಿ ಕೃಷಿ ಕೆಲಸ ಮಾಡುವಂತಹ ರೈತರು ಸಹ ಈ ಯೋಜನೆಯ ಲಾಭವನ್ನ ಪಡೆಯಲು ಸಾಧ್ಯವಿಲ್ಲ.
ಒಬ್ಬ ರೈತ ವ್ಯವಸಾಯ ಮಾಡುತ್ತಿದ್ದು, ಅವನ ಹೆಸರಿನಲ್ಲಿ ಜಮೀನು ಇಲ್ಲದಿದ್ದಲ್ಲಿ ಆತನಿಗೆ ಈ ಯೋಜನೆಯ ಲಾಭ ಸಿಗುವುದಿಲ್ಲ. ಜಮೀನು ತನ್ನ ತಂದೆ ಅಥವಾ ತಾತನ ಹೆಸರಲ್ಲಿದ್ದರೂ ಸಹ ಈ ಯೋಜನೆಯ ಲಾಭವನ್ನ ಪಡೆಯಲು ಸಾಧ್ಯವಿಲ್ಲ. ಯಾರಾದರೂ ಕೃಷಿ ಜಮೀನು ಹೊಂದಿರುವವರು ಸರ್ಕಾರಿ ನೌಕರನಾಗಿದ್ದರೆ ಅಥವಾ ನಿವೃತ್ತಿ ಹೊಂದಿದವರಾಗಿದ್ದರೆ ಅವರೂ ಈ ಯೋಜನೆಯಿಂದ ವಂಚಿತರಾಗುತ್ತಾರೆ.ಇದೇ ಸಮಯದಲ್ಲಿ ಹಾಲಿ ಅಥವಾ ಮಾಜಿ ಸಂಸದರು, ಶಾಸಕರು, ಸಚಿವರು ಕೂಡ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಪ್ರಯೋಜನ ಪಡೆಯುವುದಿಲ್ಲ.ಅನರ್ಹ ವೃತ್ತಿಪರ ನೋಂದಾಯಿತ ವೈದ್ಯರು, ಇಂಜಿನಿಯರ್ಗಳು, ವಕೀಲರು, ಚಾರ್ಟರ್ಡ್ ಅಕೌಂಟೆಂಟ್ಗಳು ಅಥವಾ ಅವರ ಕುಟುಂಬದ ಸದಸ್ಯರು ಕೂಡ ಪಟ್ಟಿಯಲ್ಲಿ ಬರುತ್ತಾರೆ. ರೈತರಾಗಿದ್ದರೂ, ಯಾರಾದರೂ ತಿಂಗಳಿಗೆ 10,000 ರೂ.ಗಿಂತ ಹೆಚ್ಚು ಪಿಂಚಣಿ ಪಡೆದರೆ, ಅವರು ಈ ಯೋಜನೆಯ ಫಲಾನುಭವಿಯಾಗಲು ಸಾಧ್ಯವಿಲ್ಲ.
ರೈತರು ಇಲ್ಲಿ ಸಂಪರ್ಕಿಸಬೇಕು : ಎಲ್ಲವೂ ಸರಿಯಾಗಿದ್ದ ನಂತರವೂ ಪಿಎಂ ಕಿಸಾನ್ ಯೋಜನೆಯ ಮೊತ್ತವು ನಿಮ್ಮ ಖಾತೆಗೆ ತಲುಪಿಲ್ಲವಾದರೆ, ಮೊದಲು ನೀವು ಅಧಿಕೃತ ಇಮೇಲ್ ಐಡಿ pmkisan-ict@gov.in ನಲ್ಲಿ ಸಂಪರ್ಕಿಸಬಹುದು. ನೀವು ಪಿಎಂ ಕಿಸಾನ್ ಯೋಜನೆಯ ಸಹಾಯವಾಣಿ ಸಂಖ್ಯೆ - 155261 ಅಥವಾ 1800115526 (ಟೋಲ್ ಫ್ರೀ) ಅಥವಾ 011-23381092 ಅನ್ನು ಸಂಪರ್ಕಿಸಬಹುದು. ಇಲ್ಲಿಯೂ ನಿಮ್ಮ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ.
Posted by Vidyamaana on 2023-07-15 14:36:39 |
ಅಬುಧಾಬಿ: ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಇನ್ನು ಮುಂದೆ ರೂಪಾಯಿ – ದಿರ್ಹಮ್ನಲ್ಲಿ ವ್ಯವಹಾರ ನಡೆಸಲು ಪರಸ್ಪರ ಸಹಿ ಹಾಕಿವೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರ ಸಮ್ಮುಖದಲ್ಲಿ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಮತ್ತು ಯುಎಇಯ ಸೆಂಟ್ರಲ್ ಬ್ಯಾಂಕ್ ಗವರ್ನರ್ ಹೆಚ್ ಇ ಖಲೀದ್ ಮೊಹಮದ್ ತಿಳುವಳಿಕಾ ಒಪ್ಪಂದಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು.
ಈ ಒಪ್ಪಂದದಿಂದ ಭಾರತ ಮತ್ತು ಯುಎಇ ಇನ್ನು ಮುಂದೆ ರಫ್ತು ಮತ್ತು ಆಮದನ್ನು ದೇಶಿಯ ಕರೆನ್ಸಿಯಲ್ಲಿ ಮಾಡಬಹುದಾಗಿದೆ. ಇಷ್ಟೇ ಅಲ್ಲದೆ ಭಾರತದಲ್ಲಿ ಅತ್ಯಂತ ಯಶಸ್ವಿಯಾಗಿರುವ ಪಾವತಿ ವ್ಯವಸ್ಥೆ ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ಮತ್ತು ಯುಎಇಯ ಸುರಕ್ಷಿತ ಆನ್ಲೈನ್ ಪಾವತಿ ವ್ಯವಸ್ಥೆಯಾದ ಐಪಿಪಿ (IPP) ಇನ್ನು ಮುಂದೆ ಲಿಂಕ್ ಆಗಲಿದೆ.
UPI-IPP ಸಂಪರ್ಕವು ಎರಡೂ ದೇಶದ ಬಳಕೆದಾರರಿಗೆ ವೇಗವಾಗಿ, ಅನುಕೂಲಕರ, ಸುರಕ್ಷಿತವಾಗಿ ಪರಿಣಾಮಕಾರಿ ಎರಡು ದೇಶಗಳ ಮಧ್ಯೆ ಹಣ ವರ್ಗಾವಣೆ ಮಾಡಲು ಅನುವು ಮಾಡಿಕೊಡುತ್ತದೆ.
ಲಾಭ ಏನು?
ಎರಡು ದೇಶಗಳ ನಡುವಿನ ಚಿಲ್ಲರೆ ಪಾವತಿಗಳು ಸಾಮಾನ್ಯವಾಗಿ ಕಡಿಮೆ ಪಾರದರ್ಶಕವಾಗಿರುತ್ತವೆ ಮತ್ತು ಇದು ದೇಶೀಯ ವಹಿವಾಟುಗಳಿಗಿಂತ ಹೆಚ್ಚು ದುಬಾರಿ. UPI-IPP ಲಿಂಕ್ ಆದರೆ ಭಾರತ ಮತ್ತು ಫ್ರಾನ್ಸ್ ನಡುವಿನ ಗಡಿಯಾಚೆಗಿನ ಹಣ ವ್ಯವಹಾರ ಪಾರದರ್ಶಕವಾಗಿರುತ್ತದೆ. ಅಷ್ಟೇ ಅಲ್ಲದೇ ಅಗ್ಗ ಮತ್ತು ವೇಗವಾಗಿ ಹಣವನ್ನು ಕಳುಹಿಸಬಹುದಾಗಿದೆ. ಯುಎಇಯಲ್ಲಿರುವ ಭಾರತೀಯ ವಲಸಿಗರಿಗೆ, ವಿಶೇಷವಾಗಿ ವಲಸೆ ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಗೆ, ಪ್ರವಾಸಿಗರಿಗೆ ಲಾಭವಾಗಲಿದೆ. ಯುಪಿಐ ಮೂಲಕ ಚಿಲ್ಲರೆ ಪಾವತಿಗಳನ್ನು ಭಾರತೀಯ ರೂಪಾಯಿಗಳಲ್ಲಿ ಮಾಡಲಾಗುವುದರಿಂದ ಇದು ವಿದೇಶೀ ವಿನಿಮಯ ಮೀಸಲುಗಳನ್ನು ಉಳಿಸಲು ಸಹಾಯ ಮಾಡುತ್ತದೆ.