2ನೇ ರಾಜ್ಯಭಾಷೆಯಾಗಿ ತುಳು ಘೋಷಣೆಗೆ ಯತ್ನ

ಸುದ್ದಿಗಳು News

Posted by vidyamaana on 2024-07-23 07:07:38 |

Share: | | | | |


2ನೇ ರಾಜ್ಯಭಾಷೆಯಾಗಿ ತುಳು ಘೋಷಣೆಗೆ ಯತ್ನ

ಪುತ್ತೂರು: ರಾಜ್ಯದಲ್ಲಿ ತುಳು ಭಾಷೆಯನ್ನು ೨ನೇ ಅಧಿಕೃತ ರಾಜ್ಯಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ಶೀಘ್ರದಲ್ಲೇ ಈ ಪ್ರಯತ್ನ ಕೈಗೂಡುವ ವಿಶ್ವಾಸವಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಮತ್ತು ರೋಟರಿ ಕ್ಲಬ್ ಪುತ್ತೂರು ಯುವ ಇವರ ಸಹಯೋಗದಲ್ಲಿ ಪುತ್ತೂರಿನ ರೋಟರಿ ಮನೀಷಾ ಸಭಾಂಗಣದಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆ - ಉಪನ್ಯಾಸ- ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಶ್ಚಿಮ ಬಂಗಾಳ ಸೇರಿದ ಅನೇಕ ರಾಜ್ಯಗಳಲ್ಲಿ ೨ನೇ ರಾಜ್ಯಭಾಷೆ ಘೋಷಣೆ ಸಂದರ್ಭ ಯಾವೆಲ್ಲ ಮಾನದಂಡ ಅನುಸರಿಸಲಾಗಿದೆ ಎಂಬುದರ ಅಧ್ಯಯನ ನಡೆಸಿ ವರದಿ ತಯಾರಿಸಲಾಗಿದೆ. ಇದನ್ನು ಸರಕಾರ ಪರಿಶೀಲಿಸಿ ಶೀಘ್ರದಲ್ಲೇ ತುಳು ಭಾಷೆಯನ್ನು ೨ನೇ ಅಧಿಕೃತ ರಾಜ್ಯಭಾಷೆಯನ್ನಾಗಿ ಘೋಷಣೆ ಮಾಡುವ ಸಂಬAಧ ಸಂಪುಟದಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡ ಮೇಲೆ ಗೆಜೆಟ್ ನೋಟಿಫೀಕೇಶನ್ ಹೊರಡಿಸಲಾಗುವುದು. ಅದೇ ರೀತಿ ತುಳು ಭಾಷೆಯನ್ನು ಸಂವಿಧಾನದ ೮ನೇ ಪರಿಚ್ಛೇದದಲ್ಲಿ ಸೇರಿಸುವ ವಿಚಾರದಲ್ಲೂ ಕೇಂದ್ರದ ಮೇಲೆ ರಾಜ್ಯದಿಂದ ಒತ್ತಡ ತರುವ ಕೆಲಸ ಮಾಡಲಾಗುತ್ತದೆ. ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸರಕಾರದ ಮೇಲೆ ಒತ್ತಡ ಹೇರುತ್ತಿದ್ದೇನೆ. ಮುಂದಿನ ಬಜೆಟ್‌ನಲ್ಲಿ ಘೋಷಣೆಯ ಆಶಾವಾದ ಇದೆ ಎಂದವರು ಹೇಳಿದರು.

ಸೋಷಿಯಲ್ ಮೀಡಿಯಾದ ಅಬ್ಬರದ ನಡುವೆಯೇ ಜನ ಪತ್ರಿಕೆ ಓದುವುದು ಕಡಿಮೆ ಮಾಡಿಲ್ಲ. ಪತ್ರಿಕಾ ರಂಗದಲ್ಲಿ ಪ್ರಾಮಾಣಿಕತೆ ಬೇಕು. ಅದಿರುವ ಕಾರಣವೇ ದಕ್ಷಿಣಕನ್ನಡದ ಪತ್ರಕರ್ತರು ಎಲ್ಲಿ ಹೋದರೂ ಛಾಪು ಮೂಡಿಸುತ್ತಾರೆ ಎಂದು ಹೇಳಿದರು.

ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ದೇಶದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭ ಅಭಿವ್ಯಕ್ತಿ ಸ್ವಾತಂತ್ರö್ಯ ಮತ್ತು ಪತ್ರಿಕಾ ಸ್ವಾತಂತ್ರö್ಯ ದಮನ ಮಾಡಲಾಗಿತ್ತು. ಆಗ ಧೀಮಂತ ಪತ್ರಿಕೆಗಳು ಭೂಗತರಾಗಿದ್ದುಕೊಂಡೇ ಪತ್ರಿಕೆ ನಡೆಸಿ ಜನಜಾಗೃತಿ ಮೂಡಿಸಿದ್ದರು. ದೇಶ ಕಟ್ಟುವಲ್ಲಿ ಪತ್ರಿಕೆಗಳ ಪಾತ್ರ ಬಹಳಷ್ಟು ದೊಡ್ಡದು. ಸೋಷಿಯಲ್ ಮೀಡಿಯಾದಿಂದ ಉಪಯೋಗವಿದೆಯಾದರೂ ಅಷ್ಟೇ ಕೆಟ್ಟದೂ ಇದೆ ಎಂದರು.


ಪುತ್ತೂರು ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಉಪನ್ಯಾಸ ನೀಡಿದರು. ಮಾಧ್ಯಮ ವರದಿ ಇವತ್ತು ಪ್ರತಿಯೊಬ್ಬರ ಕೈಗೂ ಬಂದಿದೆ. ಜಗತ್ತಿನಲ್ಲಿ ಜೀವರಕ್ಷಕ ಔಷಧಿ ಮೊದಲ ಸ್ಥಾನದಲ್ಲಿದ್ದರೆ, ೨ನೇ ಸ್ಥಾನದಲ್ಲಿ ಮುದ್ರಣ ಮಾಧ್ಯಮಗಳಿವೆ. ಇಷ್ಟಾದರೂ ಮಾಧ್ಯಮಗಳು ಕೆಲವೊಂದು ಅಪವಾದಗಳನ್ನು ಕೂಡ ಎದುರಿಸುತ್ತಿವೆ. ಆರೋಪಿಯೊಬ್ಬನನ್ನು ನ್ಯಾಯಾಲಯ ವಿಚಾರಣೆ ನಡೆಸುವ ಮೊದಲೇ ಮಾಧ್ಯಮಗಳು ವಿಚಾರಣೆ ನಡೆಸಿ ತಪ್ಪಿತಸ್ಥನೆಂದು ಘೋಷಿಸುವುದು ಆತಂಕಕಾರಿ ಬೆಳವಣಿಗೆ. ಅದೇ ರೀತಿ ಪೀತ ಪತ್ರಿಕೋದ್ಯಮದ ಬಗ್ಗೆಯೂ ಜಾಗೃತಿ ಅಗತ್ಯ ಎಂದರು. ಪ್ರತಿಯೊಬ್ಬ ಪತ್ರಕರ್ತರಿಗೂ ವೃತ್ತಿಪರತೆ ಮತ್ತು ನೈತಿಕತೆ ಅಗತ್ಯವಾಗಿ ಬೇಕು ಎಂದವರು ನುಡಿದರು. ಮಾಹಿತಿ ಎಂಬುದು ನೀರಿನ ಥರ. ಕಡಿಮೆಯಾದರೂ ಕಷ್ಟ, ಜಾಸ್ತಿಯಾದರೂ ಕಷ್ಟ. ಇದನ್ನು ಪತ್ರಕರ್ತರು ಅರ್ಥಮಾಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.


ಇದೇ ಸಂದರ್ಭದಲ್ಲಿ ಶೇಟ್ ಎಲೆಕ್ಟ್ರಾನಿಕ್ಸ್ ಸಂಸ್ಥೆ ಕೊಡುಗೆಯಾಗಿ ನೀಡಿದ ಸಿಸಿ ಕ್ಯಾಮೆರಾವನ್ನು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಪತ್ರಕರ್ತರಿಗೆ ಹಸ್ತಾಂತರ ಮಾಡಿದರು.


ಪತ್ರಿಕಾ ವಿತರಕರಾದ ವಿಶ್ವನಾಥ್ ಪುತ್ತೂರು ಅವರನ್ನು ಶಾಸಕರು ಪತ್ರಕರ್ತರ ಸಂಘದ ಪರವಾಗಿ ಸನ್ಮಾನಿಸಿದರು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಾದ ಹಷೇಂದ್ರ ಪ್ರಸಾದ್, ಮಹೇಶ್ ಪ್ರಸಾದ್, ದೀಪ್ತಿ ಭಟ್, ಎ.ಯು. ಅವನೀಶ್ ಕುಮಾರ್, ಸಮ್ಯಕ್, ಸಿಹಾ ಶಮ್ರಾ, ಪುಣ್ಯಶ್ರೀ ಪಿ. ಅವರನ್ನು ಸಂಘದ ಪರವಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಸನ್ಮಾನಿಸಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಸಿದ್ಧಿಕ್ ನೀರಾಜೆ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್,ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ,ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವನಿಕೃಷ್ಣ, ಎಸೋಸಿಯೇಶನ್ ಆಫ್ ಸಿವಿಲ್ ಎಂಜಿನಿರ‍್ಸ್ (ಎಸಿಸಿಇ-ಐ) ಪುತ್ತೂರು ಸೆಂಟರ್ ಅಧ್ಯಕ್ಷರಾದ ಪ್ರಮೋದ್ ಕುಮಾರ್ ಕೆ.ಕೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ, ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸುಧಾಕರ ಸುವರ್ಣ, ಕಾರ್ಯಕಾರಿ ಸಮಿತಿ ಸದಸ್ಯ ಮೇಘಾ ಪಾಲೆತ್ತಾಡಿ ಮತ್ತು ರೋಟರಿ ಯುವ ಸಂಸ್ಥೆಯ ಕಾರ್ಯದರ್ಶಿ ವಚನಾ ಜಯರಾಂ,ಪ್ರಧಾನ ಕಾರ್ಯದರ್ಶಿ ಶಶಿಧರ ರೈ ಕುತ್ಯಾಳ, ಕೋಶಾಧಿಕಾರಿ ಸಂಶುದ್ದೀನ್ ಸಂಪ್ಯ,ಕಾರ್ಯಕಾರಿ ಸಮಿತಿ ಸದಸ್ಯರಾದ ಐ. ಬಿ. ಸಂದೀಪ್,ಕುಮಾರ್,ಪ್ರಸಾದ್ ಬಲ್ನಾಡ್, ಸಂಘದ ಕಾರ್ಯದರ್ಶಿ ಅಜಿತ್ ಕುಮಾರ್, ಸದಸ್ಯರಾದ ಅನಿಶ್ ಕುಮಾರ್ ಮರೀಲ್,ಶರತ್, ರಾಜೇಶ್ ಪಟ್ಟೆ, ಪಾರೂಕ್ ಶೇಕ್ , ಮತ್ತಿತ್ತರರು ಉಪಸ್ಥಿತರಿದ್ದರು.

 Share: | | | | |


ಸಾವಿನ ಬಗ್ಗೆ ಅನುಮಾನ : ದಫನ ಮಾಡಿದ 18 ದಿನಗಳ ಬಳಿಕ ಮರಣೋತ್ತರ ಪರೀಕ್ಷೆ

Posted by Vidyamaana on 2024-05-24 11:06:49 |

Share: | | | | |


ಸಾವಿನ ಬಗ್ಗೆ ಅನುಮಾನ : ದಫನ ಮಾಡಿದ 18 ದಿನಗಳ ಬಳಿಕ ಮರಣೋತ್ತರ ಪರೀಕ್ಷೆ

ಕನ್ಯಾನ : ಸಂಶಯಾಸ್ಪದವಾಗಿ ಮೃತಪಟ್ಟ ವ್ಯಕ್ತಿಯೊಬ್ಬರ ಶವ ದಫನ ಮಾಡಿದ ಬಳಿಕ, ಸಾವಿನಲ್ಲಿ ಸಂಶಯವಿದೆ ಎಂದು ಮೃತ ವ್ಯಕ್ತಿಯ ಸಹೋದರ ಮಂಜೇಶ್ವರ ಠಾಣೆಗೆ ದೂರು ನೀಡಿದ್ದು, ನ್ಯಾಯಾಲಯದ ಆದೇಶದಂತೆ ಕನ್ಯಾನ ಬಂಡಿತ್ತಡ್ಕ ಮಸೀದಿ ಆವರಣದಲ್ಲಿ ದಫನ ಮಾಡಿದ್ದ ಶವವನ್ನು 18 ದಿನಗಳ ಬಳಿಕ ಮೇಲೆತ್ತಿ ಮರಣೋತ್ತರ ಪರೀಕ್ಷೆಯನ್ನು ಗುರುವಾರ ನಡೆಸಲಾಯಿತು.

ಕೇರಳದ ಸುಂಕದಕಟ್ಟೆ ಮಜೀರ್ಪಳ್ಳ ನಿವಾಸಿ ಅಶ್ರಫ್ (44) ಅವರ ದೇಹವನ್ನು ಕನ್ಯಾನದ ಬಂಡಿತ್ತಡ್ಕದಲ್ಲಿರುವ ರಹ್ಮಾನಿಯಾ ಜುಮಾ ಮಸೀದಿ ಆವರಣದಲ್ಲಿ ದಫನ ಮಾಡಲಾಗಿತ್ತು. ಆ ಶವವನ್ನು ಬಂಟ್ವಾಳ ತಹಶೀಲ್ದಾರ್ ಡಿ.ಅರ್ಚನಾ ಭಟ್, ಮಂಜೇಶ್ವರ ಸಿಪಿಐ ರಾಜೀವ್ ಕುಮಾರ್ ಕೆ., ಕೇರಳ ಆರೋಗ್ಯ ಇಲಾಖೆಯ ಡಾ.ಹರಿಕೃಷ್ಣ ಕಾಸರಗೋಡು, ಯೆನೆಪೋಯ ವಿಧಿವಿಜ್ಞಾನ ವಿಭಾಗ ಮುಖ್ಯಸ್ಥ ಡಾ.ಕಿಶೋರ್ ಕುಮಾರ್ ಬಿ., ವಿಟ್ಲ ಪೊಲೀಸರ ಸಮ್ಮುಖದಲ್ಲಿ ಮೇಲೆತ್ತಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ದೇಹದ ಅಂಗಾಗಳ ಮಾದರಿಯನ್ನು ವಿಧಿವಿಜ್ಞಾನ ತಂಡ ಪಡೆದುಕೊಂಡಿದ್ದು, ತನಿಖೆಗಾಗಿ ಯೆನೆಪೋಯ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದಾರೆ. ಅಧಿಕಾರಿಗಳ ಸೂಚನೆಯಂತೆ ಬಂದಿದ್ದು, ವರದಿಯನ್ನು ಕೇರಳದ ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ವಿಧಿವಿಜ್ಞಾನ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ಜನವರಿ 19 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ, ಇಲ್ಲಿದೆ ಕಾರ್ಯಕ್ರಮದ ವಿವರ

Posted by Vidyamaana on 2024-01-17 12:30:31 |

Share: | | | | |


ಜನವರಿ 19 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ, ಇಲ್ಲಿದೆ ಕಾರ್ಯಕ್ರಮದ ವಿವರ

ಬೆಂಗಳೂರು : ಜನವರಿ 19 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ಅಂದು 1:05 ಕ್ಕೆ ವಿಶೇಷ ವಿಮಾನದ ಮೂಲಕ ಕಲಬುರಗಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.ಅಂದು ಮಧ್ಯಾಹ್ನ 2:10 ಕ್ಕೆ ಬೆಂಗಳೂರು ಕೆಂಪೇಗೌಡ ಏರ್‌ಪೋರ್ಟ್ಗೆ ಆಗಮಿಸಲಿದ್ದಾರೆ.2:15 ಕ್ಕೆ ಕೆಐಎಎಲ್ ನಿಂದ ರಸ್ತೆ ಮಾರ್ಗವಾಗಿ ದೇವನಹಳ್ಳಿ ತಾಲೂಕಿನ ಭಟ್ಟರ ಮಾರನಹಳ್ಳಿಗೆ ಪ್ರಯಾಣ ಮಾಡಲಿದ್ದಾರೆ. 2:45 ಕ್ಕೆ ಭಟ್ಟರಮಾರನಹಳ್ಳಿಗೆ ತಲುಪಲಿದ್ದಾರೆ. ಬಿಐಇಟಿಸಿ ಉದ್ಘಾಟನೆ ಮತ್ತು ಬೋಯಿಂಗ್ ಸುಕನ್ಯಾ ಕಾರ್ಯಕ್ರಮ ಲೋಕಾರ್ಪಣೆ ಮಾಡಲಿದ್ದಾರೆ.


ಮಧ್ಯಾಹ್ನ 3:45 ಕ್ಕೆ ಭಟ್ಟರ ಮಾರನಹಳ್ಳಿಯಿಂದ ನಿರ್ಗಮಿಸಲಿದ್ದಾರೆ. 3:55 ಕ್ಕೆ ಕೆಐಎಎಲ್‌ಗೆ ತಲುಪಲಿದ್ದಾರೆ. ನಂತರ ಸಂಜೆ 4 ಗಂಟೆಗೆ ಕೆಐಎಎಲ್‌ನಿಂದ ಚೆನ್ನೆöÊಗೆ ನಿರ್ಗಮಿಸಲಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಈ ಬಾರಿ ಲೋಕ ಕಣದಲ್ಲಿ ಬಂಟ-ಬಿಲ್ಲವ ಅಭ್ಯರ್ಥಿಗಳ ಸೆಣೆಸಾಟ?

Posted by Vidyamaana on 2024-03-19 21:42:20 |

Share: | | | | |


ದಕ್ಷಿಣ ಕನ್ನಡದಲ್ಲಿ ಈ ಬಾರಿ ಲೋಕ ಕಣದಲ್ಲಿ ಬಂಟ-ಬಿಲ್ಲವ ಅಭ್ಯರ್ಥಿಗಳ ಸೆಣೆಸಾಟ?

ಮಂಗಳೂರು: ಒಂದೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಿದ್ದ ದಕ್ಷಿಣ ಕನ್ನಡ ಇದೀಗ ಬಿಜೆಪಿ ಭದ್ರ ಬಾಹುವಿನಲ್ಲಿ ಬಂಧಿಯಾಗಿದೆ. ಇದೀಗ ಲೋಕಸಭಾ‌ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಸಮರ್ಥ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದೀಗ ಚೌಟಾ ಅವರಿಗೆ‌ ಪ್ರತಿಸ್ಪರ್ಧಿಯಾಗಿ ಹಾಗೂ ಕಳೆದುಕೊಂಡ ಕ್ಷೇತ್ರವನ್ನು ಮರು ಸಂಪಾದಿಸಿಕೊಳ್ಳುವುದೇ ಕಾಂಗ್ರೆಸ್ ಮುಂದಿರುವ ಬಹುದೊಡ್ಡ ಸವಾಲು.

ವಿಧಾನಸಭಾ ಚುನಾವಣೆಯಂತೆ ಬಿಜೆಪಿ ಬಂಡಾಯ ಕಾಂಗ್ರೆಸಿಗೆ ವರದಾನ ಎಂಬ ಲೆಕ್ಕಾಚಾರ ಇದೀಗ ಉಲ್ಟಾ ಆಗಿದೆ. ಅರುಣ್ ಕುಮಾರ್ ಪುತ್ತಿಲ ಅವರು‌ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಹಾಗಾಗಿ ಕಾಂಗ್ರೆಸ್ ಗೆಲುವು ಅಷ್ಟು ಸುಲಭದ ಮಾತಲ್ಲ. ಹಾಗಾಗಿ ಅಭ್ಯರ್ಥಿ ಆಯ್ಕೆಯ ಬಗ್ಗೆ ಇನ್ನು ಅಧಿಕೃತ ಮಾಹಿತಿ‌ ಹೊರಹಾಕಿಲ್ಲ.

ಜಾತಿ ಲೆಕ್ಕಾಚಾರ:

ಬಂಟ ಸಮುದಾಯದ ಕ್ಯಾ. ಚೌಟ ಅವರಿಗೆ ಬಿಜೆಪಿ ಟಿಕೇಟ್ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಲ್ಲವ ಮುಖಂಡನಿಗೆ ಟಿಕೇಟ್ ನೀಡಲು ಯೋಜನೆ ಸಿದ್ಧಪಡಿಸಿಕೊಂಡಿದೆ ಎಂಬ ವಿಶ್ಲೇಷಣೆ ಕೇಳಿಬಂದಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಬಂಟ ಸಮುದಾಯದ ನಳಿನ್ ಕುಮಾರ್ ಕಟೀಲ್ ಎದುರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅದೇ ಬಂಟ ಸಮುದಾಯದ ಮಿಥುನ್ ರೈ ಕಣಕ್ಕಿಳಿದಿದ್ದರು. ಆದರೆ ಮೋದಿ ಅಲೆಯ ಮುಂದೆ ಎಲ್ಲವೂ ಕೊಚ್ಚಿಕೊಂಡು‌ಹೋಗಿತ್ತು. ಬಂಟ ಸಮುದಾಯದ ಕಾಂಗ್ರೆಸ್ ಲೆಕ್ಕಾಚಾರ ಬುಡಮೇಲಾಗಿತ್ತು.

ಕರಾವಳಿಯಲ್ಲಿ ಬಂಟ, ಬಿಲ್ಲವ ಸಮುದಾಯದ ಸಂಖ್ಯೆ ಹೆಚ್ಚಿದೆ. ಹಾಗಾಗಿ ಬಂಟ ಸಮುದಾಯದ ಪ್ರತಿಸ್ಪರ್ಧಿಯಾಗಿ ಬಿಲ್ಲವ ಸಮುದಾಯದ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂಬುದು ಸದ್ಯದ ಮಾಹಿತಿ.

ಜನಾರ್ದನ ಪೂಜಾರಿ‌ ಆಪ್ತ!

ಗುರು ಬೆಳದಿಂಗಳು ಕಾರ್ಯಕ್ರಮದ ಮೂಲಕ ಫೇಮಸ್ ಆಗಿರುವ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಆಪ್ತ ಪದ್ಮರಾಜ್ ರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಎನ್ನುವ ಮಾತು ಕೇಳಿಬರುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಪದ್ಮರಾಜ್ ಹೆಸರನ್ನೇ ಅಂತಿಮ ಮಾಡಿದೆ ಎಂದು ತಿಳಿದುಬಂದಿದೆ.



ಮಂಗಳೂರು: ನೈತಿಕ ಪೊಲೀಸ್ ಗಿರಿ ಪ್ರಕರಣ; ಮೂವರಿಗೆ ಗಡಿಪಾರು ನೋಟಿಸ್ ಪೊಲೀಸ್ ಕಮಿಷನ‌ರ್ ಕುಲದೀಪ್ ಜೈನ್

Posted by Vidyamaana on 2023-07-21 09:08:14 |

Share: | | | | |


ಮಂಗಳೂರು: ನೈತಿಕ ಪೊಲೀಸ್ ಗಿರಿ ಪ್ರಕರಣ; ಮೂವರಿಗೆ ಗಡಿಪಾರು ನೋಟಿಸ್   ಪೊಲೀಸ್ ಕಮಿಷನ‌ರ್ ಕುಲದೀಪ್ ಜೈನ್

ಮಂಗಳೂರು: ನಗರದಲ್ಲಿ ಪದೇ ಪದೇ ಕ್ರೈಂನಲ್ಲಿ ಭಾಗಿಯಾದವರ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದೆ. ಕಳೆದ ಒಂದು ವರ್ಷದಲ್ಲಿ 60 ಇಂತಹ ರೌಡಿ ಶೀಟರ್ ಗಳನ್ನು ಗಡಿಪಾರು ಮಾಡಲು ಕ್ರಮ ವಹಿಸಲಾಗಿದೆ. ಅವರು ನಮಗೆ ಆರೋಪಿಗಳಷ್ಟೇ, ಅವರು ಯಾವ ಸಂಘಟನೆ ಅನ್ನೋದು ನಮಗೆ ಬೇಡ ಎಂದು ಮಂಗಳೂರು ಪೊಲೀಸ್ ಕಮಿಷನ‌ರ್ ಕುಲದೀಪ್ ಜೈನ್ ಹೇಳಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರಂತರ ಸಮಾಜ ವಿರೋಧಿ ಚಟುವಟಿಕೆಗಳನ್ನು ನಡೆಸುವವರನ್ನು ಗುರುತಿಸಿದ್ದೇವೆ. ನೈತಿಕ ಪೊಲೀಸ್ ಗಿರಿಗೆ ಸಂಬಂಧಿಸಿ ಮೂವರ ಮೇಲೆ ಠಾಣೆಯಿಂದ ಪ್ರಸ್ತಾವನೆ ಬಂದಿದೆ. ಮೂವರು ಮಾತ್ರ ಅಲ್ಲ, ಅದಕ್ಕೂ ಹೆಚ್ಚು ಜನರಿಗೆ ನೋಟೀಸ್ ನೀಡಲಾಗಿದೆ. ಅವರನ್ನ ಗಡೀಪಾರು ಮಾಡಲು ಠಾಣಾಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದರು. ಹೀಗಾಗಿ ಅವರಿಗೆ ನೋಟೀಸ್ ಜಾರಿ ಮಾಡಿದ್ದೇವೆ. ಗಡಿಪಾರು ಪ್ರಕ್ರಿಯೆ ಆಗಲಿದೆ ಎಂದು ತಿಳಿಸಿದರು

ಸಾರ್ವಜನಿಕರೇ ಗಮನಿಸಿ : ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ನೋಂದಾಯಿಸಲು ಇಲ್ಲಿದೆ ಸುಲಭ ವಿಧಾನ

Posted by Vidyamaana on 2024-04-07 10:56:51 |

Share: | | | | |


ಸಾರ್ವಜನಿಕರೇ ಗಮನಿಸಿ : ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ನೋಂದಾಯಿಸಲು ಇಲ್ಲಿದೆ ಸುಲಭ ವಿಧಾನ

ಗಳೂರು : ಭಾರತದಂತಹ ಪ್ರಜಾಪ್ರಭುತ್ವದಲ್ಲಿ ಮತದಾನ ಕೇವಲ ಹಕ್ಕು ಮಾತ್ರವಲ್ಲ, ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಇದು ರಾಷ್ಟ್ರದ ಭವಿಷ್ಯವನ್ನು ರೂಪಿಸುವ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಅಧಿಕಾರವಾಗಿದೆ.ನೀವು ಭಾರತದಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದರೆ ಮತ್ತು ಇನ್ನೂ ನೋಂದಾಯಿಸದಿದ್ದರೆ, ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಹಾದಿಯಲ್ಲಿ ನಿಮ್ಮನ್ನು ಪ್ರಾರಂಭಿಸಲು ಸರಳ ಮಾರ್ಗದರ್ಶಿ ಇಲ್ಲಿದೆ.


ಆನ್ಲೈನ್ ಮತ್ತು ಆಫ್ಲೈನ್ ಎರಡರಲ್ಲೂ ಭಾರತದಲ್ಲಿ ಮತ ಚಲಾಯಿಸಲು ನೋಂದಾಯಿಸುವುದು ಹೇಗೆ ಎಂಬುದರ ಸರಳ ವಿವರಣೆ ಇಲ್ಲಿದೆ:


ಆನ್ ಲೈನ್ ನೋಂದಣಿ ಪ್ರಕ್ರಿಯೆ:


ರಾಷ್ಟ್ರೀಯ ಮತದಾರರ ಸೇವಾ ಪೋರ್ಟಲ್ (https://voters.eci.gov.in/) ಅಧಿಕೃತ ವೆಬ್ಸೈಟ್ಗೆ ಹೋಗಿ ಮತ್ತು ಫಾರ್ಮ್ 6 ಅನ್ನು ಡೌನ್ಲೋಡ್ ಮಾಡಿ.


ಫಾರ್ಮ್ ಅನ್ನು ಭರ್ತಿ ಮಾಡಿ ಮತ್ತು ಅದನ್ನು ನಿಮ್ಮ ಪ್ರದೇಶದ ಚುನಾವಣಾ ನೋಂದಣಿ ಅಧಿಕಾರಿಗೆ (ಇಆರ್‌ಒ) ಸಲ್ಲಿಸಿ.


ನಿಮ್ಮ ಅರ್ಜಿಯನ್ನು ಪರಿಶೀಲಿಸಲಾಗುತ್ತದೆ, ಮತ್ತು ಎಲ್ಲವೂ ಸರಿಯಾಗಿದ್ದರೆ, ನಿಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಲಾಗುತ್ತದೆ. ಮತದಾರರಲ್ಲಿ ಮೂರು ವಿಧಗಳಿವೆ: ಸಾಮಾನ್ಯ ಮತದಾರರು, ಸಾಗರೋತ್ತರ ಮತದಾರರು (ಎನ್‌ಆರ್‌ಐ) ಮತ್ತು ಸೇವಾ

ಮದ್ರಸ ಚಟುವಟಿಕೆಗೆ ಶಕ್ತಿ ತುಂಬಿದ ತಕ್ವಿಯಸದರ್ ಮುಹಲ್ಲಿಂ ಸಂಗಮ

Posted by Vidyamaana on 2023-06-12 15:19:08 |

Share: | | | | |


ಮದ್ರಸ ಚಟುವಟಿಕೆಗೆ ಶಕ್ತಿ ತುಂಬಿದ ತಕ್ವಿಯಸದರ್ ಮುಹಲ್ಲಿಂ ಸಂಗಮ

ಉಪ್ಪಿನಂಗಡಿ;ಧಾರ್ಮಿಕ ಶಿಕ್ಷಣ ಕ್ಷೇತ್ರದಲ್ಲಿ ಜಾಗತಿಕ ಮನ್ನಣೆ ಪಡೆದ ಸಮಸ್ತ ಇಸ್ಲಾಮಿಕ್ ಮತ ವಿಧ್ಯಾಬ್ಯಾಸ ಬೋರ್ಡ್ ಅಧೀನದ ಜಂಹಿಯ್ಯತ್ತುಲ್ ಮುಹಲ್ಲಿಮೀನ್ ದಕ ಜಿಲ್ಲಾ ಸಮಿತಿಯ ಆಶ್ರಯಲ್ಲಿ ಮದ್ರಸ ಕ್ಷೇತ್ರಕ್ಕೆ ಶಕ್ತಿ ತುಂಬುವ ಸಲುವಾಗಿ ಸದರ್ ಮುಹಲ್ಲಿಂ ಸಂಗಮ ಜೂನ್ ಹನ್ನೆರಡು ಸೋಮವಾರ ಉಪ್ಪಿನಂಗಡಿಯ ಎಚ್ ಎಂ ಹಾಲ್ ನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದುಹಾಶಿರ್ವಚನದ ಮೂಲಕ ಬೆಳ್ತಂಗಡಿ ಜಿಪ್ರಿ ತಂಙಲ್ ಉದ್ಘಾಟಿಸಿ ಮುಹಲ್ಲಿಮರು ಮಾದರಿ ಯೋಗ್ಯರಾಗಿ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.

ಕೇಂದ್ರೀಯ ಸಂಪನ್ನೂಲ ವ್ಯಕ್ತಿಗಳಾಗಿ ವಿಚಾರ ಮಂಡಿಸಿ ಮಾತನಾಡಿದ  ಕೊಡಗು ಅಬ್ದುರ್ಹ್ಮಾನ್ ಮುಸ್ಲಿಯಾರ್ ಮುಹಲ್ಲಿಮರ ಜವಾಬ್ದಾರಿ ಯನ್ನು ನೆನಪಿಸಿದರು.ಇನ್ನೋರ್ವ ಭಾಷಣಗಾರ ಅಸ್ಲಮ್ ಅಝ್ಹರಿ ಮಾತನಾಡಿ ತಮ್ಮ ಸ್ವಂತ ಜೀವನ ಬದಲಾದರೆ ಸಮಾಜವನ್ನು ಬದಲಾಯಿಸಲು ಸಾಧ್ಯ ಎಂದರು.ಸಮಸ್ತ ಮುಶಾವರ ಸದಸ್ಯ ಉಸ್ಮಾನುಲ್ ಪೈಝಿ ಮಾತನಾಡಿ ಉಲಮಾಗಳು ವಸ್ತ್ರ ಸಂಹಿತೆಯಲ್ಲಿ ಕೂಡಾ ಇತರರಿಗೆ ಮಾದರಿಯಾಗ ಬೇಕು  ಎಂದರು.

 ರಾಜ್ಯ ದಾರಿಮಿ ಒಕ್ಕೂಟದ ಎಸ್ ಬಿ ದಾರಿಮಿ ಯವರು ಆಗಲೇ ಆಗಮಿಸಿದ ಸ್ಪೀಕರ್ ಯುಟಿ ಖಾದರ್ ರನ್ನು ಸ್ವಾಗತಿಸಿ ಮಾತನಾಡಿ ಮುಹಲ್ಲಿಮರ ಭವಣೆ ನೀಗಿಸಲು ಸಮಾಜ ಮತ್ತು ಸರಕಾರ ಮುಂದೆ ಬರಬೇಕು.ಲಕ್ಷಾಂತರ ಮಹಿಳೆಯರಿಗೆ ಎರಡು ಸಾವಿರ ರೂಪಾಯಿ ಕೊಡುವಾಗ ಕೆಲವೊಂದಿಷ್ಟು ಮದ್ರಸ ಅಧ್ಯಾಪಕರಿಗೆ ವಕಫ್ ಬೊರ್ಡ್ ಮೂಲಕ ಅನುದಾನ ಬಿಡುಗಡೆ ಗೊಳಿಸಿದರೆ ಅದು ದೊಡ್ಡ ಹೊರೆಯಾಗದು ಎಂದರು.

ಜಿಲ್ಲೆಯ ಬಹುತೇಕ ಮದ್ರಸ ಗಳು ಸಮಸ್ತದ ಆದರ್ಶದಂತೆ ನಡೆಯುತ್ತಿದೆ.ಆದರೆ ವಕಫ್ ಹಜ್ ಮೊದಲಾದ ಧಾರ್ಮಿಕ ಮಂಡಳಿಗೆ ಆಯ್ಕೆ ಮಾಡುವಾಗ ಸಮಸ್ತದ ಪ್ರತಿನಿಧಿಗಳನ್ನು ಕಡೆಗಣಿಸುವುದು ಇನ್ನು ಮುಂದೆ ಸಹಿಸಲಾಗದು ಎಂದರಲ್ಲದೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟ ಪಕ್ಷದ ಬೆನ್ನೆಲುಬಾಗಿ ನಿಲ್ಲಲು ಸಮಸ್ತದ ಅಭಿಮಾನಿಗಳು ಸದಾ ಮುಂಚೂಣಿಯಲ್ಲಿದ್ದರು.

ಕೋಮುವಾದಿ ಪಕ್ಷದ ಜೊತೆ ಹೊಂದಾಣಿಕೆ ಮಾಡಿದ ಇತಿಹಾಸ ಸಮಸ್ತದ ಕಾರ್ಯಕರ್ತರಿಗೆ ಇಲ್ಲ ಎಂದು ನೆನಪಿಸಿದರು.

ಇದೇ ಸಂಧರ್ಭದಲ್ಲಿ ಸರಕಾರದ ನೂತನ ಸ್ಪೀಕರ್ ಯುಟಿ ಖಾದರ್ ನ್ನು ಸನ್ಮಾನಿಸಲಾಯಿತು.

ನಂತರ ಭಾಷಣ ಮಾಡಿದ ಸ್ಪೀಕರ್ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ನಾನು ಸದಾ ಬದ್ದನಾಗಿದ್ದೇನೆ.ಸಮುದಾಯದ ರಾಯಬಾರಿಗಳೆಂದರೆ ಅದು ಉಲಮಾಗಳು ಮಾತ್ರ.ಅವರ ಮಾರ್ಗದರ್ಶನ ಪಡೆದು ಮುಂದೆ ಸಾಗಿದರೆ ಇಲ್ಲಿ ಅಶಾಂತಿ ಅವ್ಯವಸ್ಥೆ ಉಂಟಾಗುವುದಿಲ್ಲ.ನನ್ನ ಇತಿಮಿತಿಯಲ್ಲಿ ಸಮಸ್ತದ ಕಾರ್ಯಕರ್ತ ರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಸಮಾರೋಪ ಭಾಷಣ ಮಾಡಿದ ಅಬ್ದುಲ್ ಖಾದಿರ್ ಅಲ್ ಖಾಸಿಮಿ ಮಾತನಾಡಿ ಕುರ್ಅನ್ ಕಲಿಕೆಯಲ್ಲಿ ಉಂಟಾಗುವ ಲೋಪದೋಷಗಳನ್ನು ಸರಿಪಡಿಸಲು ಅಧ್ಯಾಪಕರು ಶೃದ್ದೆ ವಹಿಸ ಬೇಕೆಂದು ಕರೆ ನೀಡಿದರು.ಹಾಜಿ ಕೆಂಪಿ ಮುಸ್ತಪ ಶುಭ ಹಾರೈಸಿದರು.ಜಿಲ್ಲಾ ಜಂಯಿತ್ತುಲ್ ಮುಹಲ್ಲಿಮೀನ್ ಅಧ್ಯಕ್ಷ ಹಾಜಿ ಶಂಸುದ್ದಿನ್ ದಾರಿಮಿ ಅಧ್ಯಕ್ಷತೆ ವಹಿಸಿದ್ದರು.ಕಡಬ ಇಬ್ರಾಹಿಂ ದಾರಿಮಿ ಕಿರಾಅತ್ ಪಠಿಸಿದರು.

ಸಿದ್ದೀಖ್ ಪೈಝಿ ಕರಾಯ ಸ್ವಾಗತಿಸಿ ರೆಂಜಾಡಿ ದಾರಿಮಿ ವಂದಿಸಿದರು.

ಬೆಳಗ್ಗೆ ನಡೆದ ಸರಳ ಸಮಾರಂಭದಲ್ಲಿ ಕೇಂದ್ರಿಯ ಘಟಕದ ವತಿಯಿಂದ ಪ್ರತೀ ಜಿಲ್ಲೆಗೆ ಒಂದರಂತೆ ನೀಡಲಾಗುವ ಎಂಟು ಲಕ್ಷ ವೆಚ್ಚದ ಮುಹಲ್ಲಿಂ ಮಂಝಿಲ್ ಗೆ ಸಯ್ಯಿದ್ ಅನಸ್ ತಂಙಳ್ ಶಿಲಾನ್ಯಾಸ ಗೈದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಮನವಿ ವಾಚಿಸಿದರು.

Recent News


Leave a Comment: