ಹತ್ತೂರ ಒಡೆಯನ ನೆಲಕ್ಕೆ ಕಾಲಿಟ್ಟ MRPL ತೆಂಕಿಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಶುಭಾರಂಭ

ಸುದ್ದಿಗಳು News

Posted by vidyamaana on 2024-07-23 21:30:52 |

Share: | | | | |


ಹತ್ತೂರ ಒಡೆಯನ ನೆಲಕ್ಕೆ ಕಾಲಿಟ್ಟ MRPL ತೆಂಕಿಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಶುಭಾರಂಭ

ಪುತ್ತೂರು: ಪೆಟ್ರೋಲಿಯಂ ಉತ್ಪನ್ನಗಳ ತಯಾರಿಕಾ ಸಂಸ್ಥೆ ಒ.ಎನ್.ಜಿ.ಸಿ.ಯ ಅಂಗ ಸಂಸ್ಥೆಯಾಗಿರುವ ಎಂ.ಆರ್.ಪಿ.ಎಲ್.ನ ಹೈಕ್ಯೂ ರಿಟೇಲ್ ಔಟ್ ಲೆಟ್ ಮಹೇಶ್ವರ ಪೆಟ್ರೋಲಿಯಂ ಜು.21ರಂದು ಮಾಣಿ-ಮೈಸೂರು ರಾಷ್ಟಿಯ ಹೆದ್ದಾರಿಯ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲದಲ್ಲಿ ವಿವಿಧ ಗಣ್ಯರ ಸಮ್ಮುಖದಲ್ಲಿ ಶುಭಾರಂಭ ಗೊಂಡಿತ್ತು . ಸಭಾ ಕಾರ್ಯಕ್ರಮಕ್ಕೂ ಮೊದಲು ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಸಂಸ್ಥೆಯ ಕಚೇರಿಯನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಸವಣೂರು ವಿದ್ಯಾಸಂಸ್ಥೆಗಳ ಸಂಚಾಲಕರಾಗಿರುವ ಸವಣೂರು ಸೀತಾರಾಮ ರೈ, ಸ್ಥಳೀಯ ನಗರ ಸಭಾ ಸದಸ್ಯೆ ಯಶೋಧಾ ಪೂಜಾರಿ ಮತ್ತು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಪೆಟ್ರೋಲ್ ಹಾಕುವ ಯಂತ್ರಗಳ ರಿಬ್ಬನ್ ಕತ್ತರಿಸುವ ಮೂಲಕ ಸಾಂಕೇತಿಕವಾಗಿ ತೈಲ ತುಂಬುವ ಕಾರ್ಯಕ್ಕೆ ಚಾಲನೆಯನ್ನು ನೀಡಿದರು. ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾಗಿರುವ ವಾಮನ್ ಪೈ ಅವರು ಉಚಿತ ನೈಟ್ರೋಜನ್ ಪೂರೈಕ್ ವ್ಯವಸ್ಥೆಯನ್ನು ಉದ್ಘಾಟಿಸಿದರು.

ಬಳಿಕ, ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯ ಪ್ರಾಂಶುಪಾಲೆ ಅವರ ಪ್ರಾರ್ಥನೆಯೊಂದಿಗೆ ಸಭಾ ಕಾರ್ಯಕ್ರಮ ಪ್ರಾರಂಭ ಗೊಂಡಿತ್ತು . ಮಹೇಶ್ವರ ಪೆಟ್ರೋಲಿಯಂ ಸಂಸ್ಥೆಯ ಮಾಲಕರಾಗಿರುವ ಶಿವಪ್ರಸಾದ್ ಶೆಟ್ಟಿ ಕಿನಾರ ಅವರು ಅತಿಥಿ ಗಣ್ಯರನ್ನು ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಸ್ವಾಗತಿಸಿದರು. ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ವೇದಿಕೆಯಲ್ಲಿದ್ದ ಅತಿಥಿ ಗಣ್ಯರು ದೀಪ ಪ್ರಜ್ವಲಿಸುವ ಮೂಲಕ ಮಹೇಶ್ವರ ಪೆಟ್ರೋಲಿಯಂ ಸಂಸ್ಥೆಯ ಕಾರ್ಯಾಚರಣೆಗೆ ಅಧಿಕೃತ ಚಾಲನೆಯನ್ನು ನೀಡಿದರು.

ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಆನುವಂಶಿಕ ಅರ್ಚಕರಾಗಿರುವ ಗಣೇಶ್ ಭಟ್ ಅವರು ಮಾತನಾಡಿ, ತಲಪಾಡಿಯ ದುರ್ಗಾಪರಮೇಶ್ವರಿ ದೇವರು ಈ ಸಂಸ್ಥೆಯ ಮಾಲಕರಾಗಿರುವ ಶಿವಪ್ರಸಾದ್ ಶೆಟ್ಟಿ ಅವರಿಗೆ ಕುಲದೇವರಾಗಿರುವ ಕಾರಣ ತಲಪಾಡಿ ಕ್ಷೇತ್ರöಕ್ಕೂ ಪುತ್ತೂರಿಗೂ ವಿಶೇಷ ನಂಟಿದೆ ಎಂದು ಹೇಳಿದರು. ಶಿವಪ್ರಸಾದ್ ಶೆಟ್ಟಿ ಅವರು ದೈವಭಕ್ತರಾಗಿದ್ದು ಅವರ ಸತ್ಕರ್ಮ ಮತ್ತು ದೇವರ ಮೇಲೆ ಅವರಿಟ್ಟ ಭಕ್ತಿ ಹಾಗೂ ಗುರು-ಹಿರಿಯರ ಮೇಲಿನ ಗೌರವ ಅವರನ್ನು ಇಂದು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ದೈವ-ದೇವರ ಅನುಗ್ರಹದೊಂದಿಗೆ ಈ ನೂತನ ಸಂಸ್ಥೆಯು ಉತ್ತಮ ಸೇವೆಯ ಮೂಲಕ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿ ಇನ್ನಷ್ಟು ಹೆಸರುವಾಸಿಯಾಗಲಿ ಎಂದು ಅವರು ಶುಭಾಶೀರ್ವಾದ ನೀಡಿದರು.

Additional Image

ದ.ಕ. ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಭಗವಂತನನ್ನು ತೋರಿಸುವವ ಗುರು, ಜ್ಞಾನವನ್ನು ಕೊಡುವವ ಗುರು ಎಂಬ ಮಾತನ್ನು ನಮ್ಮ ಹಿರಿಯತು ಹೇಳಿದ್ದಾರೆ. ಅಂತಹ ಗುರುವಿನ ಪ್ರೇರಣೆ ಇರತಕ್ಕಂತಹ ವೇದವ್ಯಾಸ ಮಹರ್ಷಿಗಳ ಜನ್ಮದಿನದ ಪುಣ್ಯಸಂದರ್ಭವಾಗಿರುವ ಈ ಗುರುಪೂರ್ಣಮಿಯ ದಿನದಂದು ಈ ಪುತ್ತೂರಿನ ಪುಣ್ಯ ನೆಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಸಂಸ್ಥೆ ಉದ್ಘಾಟನೆಗೊಂಡಿರುವುದು ಈ ಸಂಸ್ಥೆಗೆ ಗುರುಹಿರಿಯರ ಆಶೀರ್ವಾದ ಇದೆ ಎಂಬುದಕ್ಕೆ ಸ್ಪಷ್ಟ ನಿದರ್ಶನ ಎಂದು ಹೇಳಿದರು. ಈ ಸಂಸ್ಥೆಯು ಎಂ.ಆರ್.ಪಿ.ಎಲ್.ನ ಒಂದಹ ಅತ್ಯುನ್ನತ ಸಂಸ್ಥೆಯಾಗಿ ಬೆಳೆಯುತ್ತದೆ, ಮಾತ್ರವಲ್ಲದೇ ಶಿವಪ್ರಸಾದ್ ಶೆಟ್ಟಿ ಅವರು ಓರ್ವ ಯಸಸ್ವಿ ಪೆಟ್ರೋಲಿಯಂ ಉದ್ಯಮಿಯಾಗಿ ಬೆಳೆಯುತ್ತಾರೆ ಎಂಬ ವಿಶ್ವಾಸವನ್ನು ಕಟೀಲ್ ಅವರು ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದರು. ಶಿವಪ್ರಸಾದ್ ಅವರು ಭೂವ್ಯವಹಾರದಲ್ಲಿ ಓರ್ವ ಯಶಸ್ವಿ ಉದ್ಯಮಿಯಾಗಿ ಪುತ್ತೂರಿನ ಮಟ್ಟಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಶ್ರೀಮಂತಿಕೆ ಬಂದಾಗ ಕೆಲವರಿಗೆ ಎಲ್ಲವೂ ಮರೀತದೆ, ಆದರೆ ಶಿವಪ್ರಸಾದ್ ಅವರು ತಮ್ಮಲ್ಲಿರುವ ಹೃದಯ ಶ್ರೀಮಂತಿಕೆಯಿAದ ತಮ್ಮ ವ್ಯವಹಾರದ ಜೊತೆಗೆ ಸಾಮಾಜಿಕ ಕಾರ್ಯದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇನ್ನು ಶಿವಪ್ರಸಾದ್ ಅವರು ಓರ್ವ ಧಾರ್ಮಿಕ ಮನೋಭಾವದ ವ್ಯಕ್ತಿ ಎಂಬುದಕ್ಕೆ ಉದಾಹರಣೆಯಾಗಿ, ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಸಂದರ್ಭದಲ್ಲಿ ಒಂದು ಗುಡಿ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ತನ್ನದು ಎಂದು ಮಾತುಕೊಟ್ಟು ಅದರಂತೆ ನಡೆದುಕೊಂಡ ವಿಚಾರವನ್ನು ಕಟೀಲ್ ಅವರು ಸಭೆಯ ಮುಂದೆ ಬಿಚ್ಚಿಟ್ಟರು. ತೈಲೋದ್ಯಮ ಕ್ಷೇತ್ರದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ದೇಶಾದ್ಯಂತ ಕ್ರಾಂತಿಕಾರಿ ಬದಲಾವಣೆಗಳಾಗಿದ್ದು ಎಂ.ಆರ್.ಪಿ.ಎಲ್, ಭಾರತ್ ಪೆಟ್ರೋಲಿಯಂ ಸಹಿತ ಎಲ್ಲಾ ಸಂಸ್ಥೆಗಳೂ ಸ್ಪರ್ಧಾತ್ಮಕ ವ್ಯವಹಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಇದು ಈ ಕ್ಷೇತ್ರದಲ್ಲಿ ಅಪರಿಮಿತ ಅವಕಾಶಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು. ಪುತ್ತೂರು ಪರಿಸರದಲ್ಲಿ ಎಂ.ಆರ್.ಪಿ.ಎಲ್.ನ ಪ್ರಥಮ ಔಟ್ ಲೆಟ್ ಪ್ರಾರಂಭಿಸುವ ಅವಕಾಶ ಶಿವಪ್ರಸಾದ್ ಅವರಿಗೆ ಸಿಕ್ಕಿರುವುದಕ್ಕೆ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುವುದಾಗಿ ಮತ್ತು ಈ ಉದ್ಯಮದಲ್ಲಿ ಶಿವಪ್ರಸಾದ್ ಅವರಿಗೆ ಯಶಸ್ಸು ಲಭಿಸಲಿ ಎಂಬ ಸದಾಶಯದ ನುಡಿಗಳನ್ನು ನಳಿನ್ ಕುಮಾರ್ ಕಟೀಲ್ ನೀಡಿದರು. 

Additional Image


Additional Image

ವ್ಯಕ್ತಿಯೊಬ್ಬರು ಉದ್ಯಮದಲ್ಲಿ ಬೆಳೆದರೂ ಕೂಡ ಹೇಗೆ ತನ್ನ ಪಾಡಿಗೆ ತನ್ನ ವ್ಯವಹಾರವನ್ನು ನಡೆಸಿಕೊಂಡು ಸಾಮಾಜಿಕವಾಗಿಯೂ, ಧಾರ್ಮಿಕವಾಗಿಯೂ ತನ್ನನ್ನು ತೊಡಗಿಸಕೊಳ್ಳುತ್ತಾರೆ ಎಂಬುದಕ್ಕೆ ಶಿವಪ್ರಸಾದ್ ಅವರು ಉತ್ತಮ ಉದಾಹರಣೆಯಾಗಿದ್ದಾರೆ ಎಂದು ಅಶೋಕ್ ಕುಮಾರ್ ರೈ ಹೇಳಿದರು. ಕಳೆದ ಸಲ ಮಹಾಲಿಂಗೇಶ್ವರ ದೇವರಿಗೆ ಒಂದಷ್ಟು ಜನರ ಸಹಕಾರದೊಂದಿಗೆ ಬಂಗಾರದ ಮಾಲೆಯನ್ನು ಒಪ್ಪಿಸುವಲ್ಲಿ ಮುಂದಾಳತ್ವವನ್ನು ಶಿವಪ್ರಸಾದ್ ಅವರು ವಹಿಸಿಕೊಂಡಿರುವುದು ಅವರಲ್ಲಿರುವ ಧಾರ್ಮಿಲ ಪ್ರಜ್ಞೆಗೆ ಸಾಕ್ಷಿ ಎಂಬ ವಿಚಾರವನ್ನು ಶಾಸಕರು ಈ ಸಂದರ್ಬದಲ್ಲಿ ವಿಶೇಷವಾಗಿ ಶ್ಲಾಘಿಸಿದರು.

 Share: | | | | |


ಈಶ್ವರಮಂಗಲದಿಂದ ಗಾಳಿಮುಖತನಕ ಅಶೋಕ್‌ರೈ ಪರ ರೋಡ್‌ಶೋ

Posted by Vidyamaana on 2023-05-05 16:44:06 |

Share: | | | | |


ಈಶ್ವರಮಂಗಲದಿಂದ ಗಾಳಿಮುಖತನಕ ಅಶೋಕ್‌ರೈ ಪರ ರೋಡ್‌ಶೋ

ಪುತ್ತೂರು:ಬಡವರ ಸೇವೆ ಮಾಡಬೇಕು, ಅನ್ಯಾಯಕ್ಕೊಳಗಾದವರಿಗೆ ನ್ಯಾಯಕೊಡಿಸಬೇಕು, ನೊಂದವರಿಗೆ ಸಾಂತ್ವನ ಹೇಳಬೇಕು, ಕಷ್ಟದಲ್ಲಿರುವವರಿಗೆ ನೆರವಾಗಬೇಕು ಮತ್ತು ಪುತ್ತೂರು ಕ್ಷೇತ್ರವನ್ನು ಅಭಿವೃದ್ದಿ ಮಾಡಬೇಕು ಎಂಬ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಕ್ಷೇತ್ರದ ಕಟ್ಟಕಡೇಯ ವ್ಯಕ್ತಿಗೂ ಖಂಡಿತವಾಗಿಯೂ ನ್ಯಾಯ ಕೊಡಿಸುವೆ ನನ್ನನ್ನು ಗೆಲ್ಲಿಸಿಕೊಡಿ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಮನವಿ ಮಾಡಿದರು.

ಪುತ್ತೂರು ಮತ್ತು ಬೆಳ್ತಂಗಡಿ ಮುಳಿಯ ದಲಿ ಕರಿಮೆಣಿ ಉತ್ಸವ - 1000 ಕ್ಕೂ ಅಧಿಕ ಕರಿಮಣಿ ಗಳ ಸಂಗ್ರಹ - 50 ಕ್ಕೂ ಅಧಿಕ ಆಕರ್ಷಕ ವಿನ್ಯಾಸ ಗಳ ಕರಿಮಣಿಗಳು

Posted by Vidyamaana on 2024-02-17 02:45:19 |

Share: | | | | |


ಪುತ್ತೂರು ಮತ್ತು ಬೆಳ್ತಂಗಡಿ ಮುಳಿಯ ದಲಿ ಕರಿಮೆಣಿ ಉತ್ಸವ - 1000 ಕ್ಕೂ ಅಧಿಕ ಕರಿಮಣಿ ಗಳ ಸಂಗ್ರಹ - 50 ಕ್ಕೂ ಅಧಿಕ ಆಕರ್ಷಕ ವಿನ್ಯಾಸ ಗಳ ಕರಿಮಣಿಗಳು

ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಕೋರ್ಟ್‌ರಸ್ತೆ ಮುಳಿಯ ಜ್ಯುವೆಲ್ಸ್‌ನಲ್ಲಿ 15 ದಿನಗಳ ಕಾಲ ನಡೆಯಲಿರುವ `ಕರಿಮಣಿ ಉತ್ಸವಕ್ಕೆ ಫೆ.15ರಂದು ಚಾಲನೆ ದೊರೆಯಿತು. ಇಲ್ಲಿನ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯವರು ಕರಿಮಣಿ ಉತ್ಸವವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, "ಮಾಂಗಲ್ಯದಲ್ಲಿ ಮಂಗಳ ಶಬ್ದವಿದೆ. ಮಂಗಳವನ್ನು ಕರುಣಿಸುವಂತ ದ್ರವ್ಯದಿಂದ ತಯಾರಿಸಲ್ಪಟ್ಟ ವಿಶೇಷವಾಗಿ ಚಿನ್ನದಿಂದ ತಯಾರಿಸಿದ ಕರಿಮಣಿ ಧಾರಣೆ ಮಾಡಿದರೆ ಸೌಭಾಗ್ಯ, ಸಮೃದ್ಧಿ ಪ್ರಾಪ್ತಿಯಾಗುತ್ತದೆ. ಮಂಗಳ ಸೂತ್ರವನ್ನು ಧರಿಸದಾಗಲೇ ಮುತ್ತೈದೆ ಭಾಗ್ಯದ ಜೊತೆಗೆ ಗೃಹಣಿಗೆ ಸಂಸ್ಕಾರ ದೊರೆಯುತ್ತದೆ. ಇಂತಹ ಕರಿಮಣಿಗಳು ಮುಳಿಯದಲ್ಲಿ 2 ಗ್ರಾಂನಿಂದ ಪ್ರಾರಂಭಿಸಿ ಅತ್ಯಧಿಕ ಚಿನ್ನದ ತನಕ ಗ್ರಾಹಕರಿಗೆ ದೊರೆಯಲಿದೆ." ಎಂದರು.


ಕನಿಷ್ಠ 2 ಗ್ರಾಂನ ಕರಿಮಣಿಯ ಮೂಲಕ ಬೆಳ್ಳಿಯ ಕರಿಮಣಿ ಧರಿಸುವ ಬಡವರಿಗೂ ಚಿನ್ನದ ಧರಿಸುವಂತ ಅವಕಾಶ ಮುಳಿಯ ಜ್ಯುವೆಲ್ಸ್ ಮೂಲಕ ದೊರೆಯಲಿದೆ. ಸಂಸ್ಥೆಯ ಶಾಖೆಗಳು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ . ಗ್ರಾಹಕರಿಗೆ ಇನ್ನಷ್ಟು ಉತ್ತಮ ಸೇವೆಗಳು ದೊರೆಯಲಿ ಎಂದರು.ಮುಳಿಯ ಜ್ಯುವೆಲ್ಸ್‌ನ, ಚೇರ್ಮೆನ್ ಮತ್ತು ಆಡಳಿತ ನಿರ್ದೇಶಕ ಕೇಶವ ಪ್ರಸಾದ್ ಮುಳಿಯ ಮಾತನಾಡಿ, " ಚಿನ್ನಾಭರಣಗಳ ಮಾರುಕಟ್ಟೆಯಲ್ಲಿ ಹಲವು ಹೊಸತನಗಳನ್ನು ಮುಳಿಯ ಜ್ಯುವೆಲ್ಸ್ ಸಂಸ್ಥೆ ಪರಿಚಯಿಸಿದೆ. 25 ವರ್ಷಗಳ ಹಿಂದೆ ಚಿನ್ನಾಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಪ್ರಥಮ ಬಾರಿಗೆ ಪುತ್ತೂರಿನಲ್ಲಿ ಆಯೋಜಿಸಿದೆ. ಆಧುನಿಕತೆಯಲ್ಲಿ ಮಹಿಳೆಯರಿಗೆ ವಿವಿಧ ಕಾರ್ಯಕ್ರಗಳಿಗೆ ತಕ್ಕಂತೆ ಅವರವರ ಮನದಿಚ್ಚೆಯ ಕರಿಮಣಿಗಳನ್ನು ಧರಿಸಲು ಅವಕಾಶವಿದೆ ಎಂದರು.ಸುಮಾರು 1000 ರಕ್ಕೂ ಅಧಿಕ ಕರಿಮಣಿ ಸರಗಳ ಸಂಗ್ರಹ ಈ ಸಂದರ್ಭದಲ್ಲಿ ಲಭ್ಯವಾಗಲಿದ್ದು 50 ಕ್ಕೂ ಅಧಿಕ ಆಕರ್ಷಣೀಯ ವಿನ್ಯಾಸಗಳ ಕರಿಮಣಿಗಳು ಲಭ್ಯವಿದೆ. ಇದಕ್ಕಾಗಿ ಕರಿಮಣಿ ಉತ್ಸವದ ಮೂಲಕ ಹೊಸ ಹೊಸ ಶೈಲಿಯ, ಆಕರ್ಷಕ ವಿನ್ಯಾಸದ ಕರಿಮಣಿ ಉತ್ಸವದಲ್ಲಿ ಲಭ್ಯವಿದ್ದು ಫೆ.15ರಿಂದ ಪ್ರಾರಂಭಗೊಂಡು ಫೆ.29ರ ತನಕ ನಡೆಯಲಿದ್ದು ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ವಿನಂತಿಸಿದರು.ಮುಳಿಯ ಜ್ಯುವೆಲ್ಸ್‌ನ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ, ಶೋರೂಂ ವ್ಯವಸ್ಥಾಪಕ ರಾಘವೇಂದ್ರ ಪಾಟೀಲ್, ಮಾರ್ಕೆಟಿಂಗ್ ಮ್ಯಾನೇಜ‌ರ್ ಸಂಜೀವ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಭವ್ಯಶ್ರೀ ಪ್ರಾರ್ಥಿಸಿದರು. ಯತೀಶ್ ಆಚಾರ್ಯ ಸ್ವಾಗತಿಸಿರು. ಆನಂದ ಕುಲಾಲ್ ವಂದಿಸಿದರು. ಪ್ರವೀಣ್‌ ಕಾರ್ಯಕ್ರಮ ನಿರೂಪಿಸಿದರು.


ಫೆ.16ರಿಂದ ಪ್ರಾರಂಭಗೊಂಡಿರುವ ಕರಿಮಣಿ ಉತ್ಸವವು ಫೆ.29ರ ತನಕ ನಡೆಯಲಿದ್ದು ಇದರಲ್ಲಿ ನವನವೀನ ಮಾದರಿಯ, ವಿವಿಧ ವಿನ್ಯಾಸ ಕರಿಮಣಿ ಸರಗಳು ಅತೀ ಕಡಿಮೆ ಸುಮಾರು 2 ಗ್ರಾಂ ನಿಂದ ಪ್ರಾರಂಭಿಸಿ ಗ್ರಾಹಕರ ಆವಶ್ಯಕತೆಗೆ ತಕ್ಕಂತೆ ಎಲ್ಲಾ ರೀತಿಯ ಕರಿಮಣಿ ಸರಗಳು ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಮಾಣಿಲ : ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

Posted by Vidyamaana on 2023-05-01 06:46:16 |

Share: | | | | |


ಮಾಣಿಲ : ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ಮಾಣಿಲ ಮತ್ತು ಎಣ್ಮಕಜೆ ನದಿಗೆ ಸೇತುವೆ ನಿರ್ಮಾಣವಾಗಬೇಕೆಂಬುದು ಮಾಣಿಲ ಗ್ರಾಮಸ್ಥರ ಕನಸಾಗಿದ್ದು ಅದನ್ನು ಶಾಸಕರಾದ ಬಳಿಕ ಅಶೋಕ್ ರೈಗಳು ನನಸು ಮಾಡಬೇಕು ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು.

ಮಾಣಿಲದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ನಾನು ಶಾಸಕಳಾಗಿದ್ದ ವೇಳೆ 12 ಕೋಟಿ ರೂ ಪ್ರಸ್ತಾವನೆ ಸಲ್ಲಿಸಿದ್ದೆ ಆದರೆ ಸರಕಾರ ಬಿಜೆಪಿ ಇದ್ದ ಕಾರಣ ಹಣ ಮಂಜೂರಾಗಿಲ್ಲ ಎಂದು ಹೇಳಿದರು. ಈ ಬಾರಿ ಕಾಂಗ್ರೆಸ್ ಗೆದ್ದರೆ ಸೇತುವೆ ನಿರ್ಮಾಣ ಮಾಡಿಸಿಯೇ ಸಿದ್ದ ಕೈ ಗೆ ಬಲ ಕೊಡೊ ಎಂದು‌ಮನವಿ ಮಾಡಿದರು. ಪುತ್ತೂರಿನಲ್ಲಿ ಬಿಜೆಪಿ ಯ ಪಾಪದ ಕೊಡ ತುಂಬಿದೆ ಈ ಕಾರಣಕ್ಕೆ ಹಿಂದುತ್ವವನ್ನು ಈ ಬಾರಿ ಹುಡುಕಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.‌ಬಿಜೆಪಿಯವರ ಹಿಂದುತ್ವವನ್ನು ಪಕ್ಷೇತರ ಅಭ್ಯರ್ಥಿ ಕೊಂಡು ಹೋಗಿದ್ದಾರಂತೆ ಎಂದು ವ್ಯಂಗ್ಯವಾಡಿದರು.ಬಿಜೆಪಿಗೆ ಮತ ನೀಡಿ ವೋಟುಹಾಳುಮಾಡಬೇಡಿಎಂದು‌ಮನವಿ‌ಮಾಡಿದರು.

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ. ರಾಜಾರಾಂ ಕೆ ಬಿ ಮಾತನಾಡಿ ಕಾಂಗ್ರೆಸ್ ಪ್ರಣಾಳಿಕೆಯನ್ನು ಮನೆಗೆ ಮನೆಗೆ ತೆರಳಿ ಪ್ರಚಾರ ಮಾಡುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದರು. ಸಮುದಾಯದ ಮಧ್ಯೆ ವಿಷ ಬೀಜ ಬಿತ್ತುವವರು ನಮಗೆ ಬೇಡ ಎಂದು ಮನವಿ ಮಾಡಿದರು.

ಪ್ರತೀ ಬೂತ್ ನಲ್ಲಿ ವೋಟ್ ಲೀಡ್ ಬರಬೇಕು: ಅಶೋಕ್ ರೈ

ಪ್ರತೀಯೊಬ್ಬ ಕಾರ್ಯಕರ್ತರು ಯಾವ ಮನೆಯನ್ನೂ ಬಿಡದೆ ಭೇಟಿ ಮಾಡಬೇಕು. ಪ್ರತೀ ಬೂತ್ ನಲ್ಲಿ‌ಲೀಡ್ ಬರುವಂತೆ ನೋಡಿಕೊಳ್ಳಬೇಕು. ಪಕ್ಷದಲ್ಲಿ ಕಾರ್ಯಕರ್ತರ ಕೊರತೆಯಿಲ್ಲ. ಎಲ್ಲಾ ಕಡೆ ಕಾರ್ಯಕರ್ತರ ಪಡೆಯೇ ಇದೆ ಎಂಬುದು ಸಂತೋಷದ ವಿಷಯ. ನಾವು ಇನ್ನು ಎಂಟು ದಿನ ಆಹೋರಾತ್ರಿ ಕೆಲಸ ಮಾಡಿದರೆ ಮುಂದಿನ 5 ವರ್ಷ ನೆಮ್ಮದಿಯ ಜೀವನ ಮಾಡಬಹುದು. ಬೂತ್ ಮಟ್ಟದ ಪ್ರತೀ ಮನೆಗೂ ಗ್ಯಾರಂಟಿ ಕಾರ್ಡು ಕಡ್ಡಾಯವಾಗಿ ಕೊಡಿ. ಬಿಜೆಪಿಯವರು ನಮ್ಮ ಜೊತೆ ಸೇರಿಕೊಳ್ಳುತ್ತಿದ್ದಾರೆ,ಕೆಲವರು ಎದುರು ಬೀಳುವುದಿಲ್ಲ ಹಿಂದಿನಿಂದ ಬೆಂಬಲ ನೀಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರನ್ನು ಪಕ್ಷಕ್ಕೆ ಸೆಳೆಯಬೇಕು. ನಮ್ಮ ಪಕ್ಷದ ಗ್ಯಾರಂಟಿ ಯೋಜನೆಯ ಬಗ್ಗೆ ಎಲ್ಲರಿಗೂ ಮಾಹಿತಿ ನೀಡಿ ಎಂದು ಮನವಿ ಮಾಡಿದರು.ಕುಚ್ಚಲಕ್ಕಿ ಕೊಡ್ತೇವೆ ನಾವು ಅಧಿಕಾರಕ್ಕೆ ಬಂದರೆ ತಲಾ 5 ಕೆ ಜಿ ಕುಚ್ಚಲಕ್ಕಿ ಮತ್ತು 5 ಕೆ ಜಿ ಬೆಳ್ತಿಗೆಯನ್ನು ಕೊಡ್ತೇವೆ. ಯಾವ ತಾಯಂದಿರೂ ಇನ್ನು‌ಮನೆಗೆ ದುಡ್ಡು ಕೊಟ್ಟು ಅಕ್ಕಿ ತರುವುದು ಬೇಡ,ಕರೆಂಟ್ ಬಿಲ್ ಕಟ್ಟುವುದು ಬೇಡ, ಉಳಿದ ಖರ್ಚಿಗೆ ತಿಂಗಳಿಗೆ ಎರಡು ಸಾವಿರ ತಾಯಂದಿರ ಖಾತೆಗೆ ಜಮೆಯಾಗ್ತದೆ. ಸಂಚಾರಕ್ಕೆ ಸರಕಾರಿ ಬಸ್ ಉಚಿತವಾಗಿ ತಾಯಂದಿರಿಗೆ ಪ್ರಯಾಣಿಸಲು ಅವಕಾಶವನ್ನು ಸರಕಾರ ಒದಗಿಸಲಿದೆ. ನೆಮ್ಮದಿಯ ಜೀವನಕ್ಕಾಗಿ ಕಾಂಗ್ರೆಸ್ ಬೆಂಬಲಿಸಿ ಎಂದು‌ಮನವಿ‌ಮಾಡಿದರು.

ಪುತ್ತೂರು : ಬೈಕ್-ಸ್ಕೂಟರ್ ನಡುವೆ ಡಿಕ್ಕಿ : ಸವಾರರಿಗೆ ಗಾಯ ; ಮಂಗಳೂರು ಆಸ್ಪತ್ರೆಗೆ ಶಿಫ್ಟ್..

Posted by Vidyamaana on 2023-10-03 15:14:10 |

Share: | | | | |


ಪುತ್ತೂರು : ಬೈಕ್-ಸ್ಕೂಟರ್ ನಡುವೆ ಡಿಕ್ಕಿ : ಸವಾರರಿಗೆ ಗಾಯ ; ಮಂಗಳೂರು ಆಸ್ಪತ್ರೆಗೆ ಶಿಫ್ಟ್..

ಪುತ್ತೂರು : ಬೈಕ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕೇಪುಳು ಸರ್ಕಲ್ ಬಳಿ ನಡೆದಿದೆ.

ಪಡೀಲ್ ಕೆಪುಳು ಬಳಿ ಬೈಕ್ ಸ್ಕೂಟರ್ ನಡುವೆ ನಡೆದ ಅಪಘಾತದ ಸಿ ಸಿ ಟಿವಿ ದೃಶ್ಯ!

ಘಟನೆಯಲ್ಲಿ ಬೈಕ್ ಸವಾರ ಚಂದ್ರ ಹಾಗೂ ಸ್ಕೂಟರ್ ಸವಾರ ಅಬ್ದುಲ್ ರಜಾಕ್ ಇಬ್ಬರೂ ಗಂಭೀರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

ಬಂಟ್ವಾಳ :ಮಂಚಿಯಲ್ಲಿ ಆ್ಯಕ್ಟೀವಾಗೆ ಹಿಟ್ ಆ್ಯಂಡ್ ರನ್ ಪುತ್ತೂರಿನ ನೆಹರುನಗರ ನಿವಾಸಿ ಚಿದಾನಂದ ಕಾಮತ್ ಸ್ಥಳದಲ್ಲೇ ಮೃತ್ಯು

Posted by Vidyamaana on 2024-05-20 15:33:02 |

Share: | | | | |


ಬಂಟ್ವಾಳ :ಮಂಚಿಯಲ್ಲಿ ಆ್ಯಕ್ಟೀವಾಗೆ ಹಿಟ್ ಆ್ಯಂಡ್ ರನ್  ಪುತ್ತೂರಿನ ನೆಹರುನಗರ ನಿವಾಸಿ ಚಿದಾನಂದ ಕಾಮತ್ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ಕಾರೊಂದು ಆ್ಯಕ್ಟೀವಾಗೆ ಡಿಕ್ಕಿ‌ ಹೊಡೆದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

ಘಟನೆಯಲ್ಲಿ ಆ್ಯಕ್ಟೀವಾ ಸವಾರ, ಪುತ್ತೂರಿನ ನೆಹರುನಗರ ರಕ್ತೇಶ್ವರಿ ಗುಡಿಯ ಹಿಂಬದಿ ನಿವಾಸಿ, ನಿವೃತ್ತ ಸೈನಿಕ ಚಿದಾನಂದ್ ಕಾಮತ್ (55) ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಹೇಳಲಾಗಿದೆ.

ಕಡಬ: ಸರಕಾರಿ ಶಾಲೆಯ ಮೇಲ್ಟಾವಣಿ ಕುಸಿತ – ನಾಲ್ವರು ವಿದ್ಯಾರ್ಥಿಗಳಿಗೆ ಗಾಯ - ತಪ್ಪಿದ ಭಾರಿ ಅನಾಹುತ

Posted by Vidyamaana on 2024-08-27 15:39:23 |

Share: | | | | |


ಕಡಬ: ಸರಕಾರಿ ಶಾಲೆಯ ಮೇಲ್ಟಾವಣಿ  ಕುಸಿತ – ನಾಲ್ವರು ವಿದ್ಯಾರ್ಥಿಗಳಿಗೆ ಗಾಯ -  ತಪ್ಪಿದ ಭಾರಿ ಅನಾಹುತ

ಕಡಬ, ಆ.27. ಶಾಲಾ ಕೊಠಡಿಯ ಗೋಡೆ ಹಾಗೂ ಮೇಲ್ಬಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಮಧ್ಯಾಹ್ನ ಕುಂತೂರಿನಲ್ಲಿ ನಡೆದಿದೆ.

Recent News


Leave a Comment: